Author: kannadanewsnow09

ವಿಜಯಪುರ : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸೋ ನಿರ್ಧಾರವನ್ನು 2024ರಲ್ಲಿ ಮಾಡೋದಾಗಿ ಘೋಷಿಸಿದೆ. ಅಲ್ಲದೇ 2024 ಅನ್ನು ಪ್ರಯಾಮಿಕ ಸ್ನೇಹಿ ವರ್ಷವಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಕೆ ಎಸ್ ಆರ್ ಟಿಸಿಯಿಂದ ಮಾಹಿತಿ ನೀಡಲಾಗಿದ್ದು, ಕೆ ಎಸ್ ಆರ್ ಟಿ ಸಿಯು ತನ್ನ ಗತವೈಭವದ ಪಯಣಕ್ಕೆ ಮರುಕಳಿಸಿದ್ದು, ಈ ಪ್ರಯಾಣದ ಅವಿಭಾಜ್ಯ ಅಂಗವಾದ ನಿಗಮದ ಸಮಸ್ತ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಾರ್ವಜನಿಕ ಪುಯಾಣಿಕರಿಗೆ ಹೊಸ ವರುಷ 2024ರ ಹಾರ್ದಿಕ ಶುಭಾಶಯಗಳು. ಕೆ ಎಸ್ ಆರ್ ಟಿ ಸಿ ಯು 2024 ನೇ ವರ್ಷವನ್ನು “ಪಯಾಣಿಕ ಸ್ನೇಹಿ ವರ್ಷ” ವೆಂದು ಘೋಷಣೆ ಮಾಡಿದೆ. ನಿಗಮವು 2023 ನೇ ವರ್ಷವನ್ನು ಕಾರ್ಮಿಕ ಕಲ್ಯಾಣ ವರ್ಷ” ವೆಂದು ಘೋಷಿಸಿ, ಈ ಕೆಳಕಂಡ ಕಾರ್ಮಿಕಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿತ್ತು ಎಂದಿದೆ. • ರೂ.1 ಕೋಟಿಗಳ On Road/ Off Road ಅಪಘಾತ ವಿಮಾ ಯೋಜನೆ. ಈ ಯೋಜನೆಯಡಿಯಲ್ಲಿ ಈಗಾಗಲೇ 12…

Read More

ಟೋಕಿಯೊ: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್ ವೇಯಲ್ಲಿ ಮಂಗಳವಾರ ಜಪಾನ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೂರದರ್ಶನ ಚಿತ್ರಗಳು ತೋರಿಸಿವೆ. ಆದ್ರೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಮಿಕರು ತುರ್ತು ನಿರ್ಗಮನ ದ್ವಾರದಿಂದ ಹೊರ ಓಡಿ ಬಂದ ಪರಿಣಾಮ, 367 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಮಂಗಳವಾರ ಜಪಾನ್ ಏರ್ಲೈನ್ಸ್ ವಿಮಾನವು ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. ಸಾರ್ವಜನಿಕ ಪ್ರಸಾರಕ ಎನ್ಎಚ್ಕೆಯಲ್ಲಿನ ಲೈವ್ ತುಣುಕುಗಳು ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುತ್ತಿರುವುದನ್ನು ತೋರಿಸಿದೆ. ವಿಮಾನದಲ್ಲಿದ್ದ ಸುಮಾರು 400 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಅನ್ನು ಉಲ್ಲೇಖಿಸಿ ಎನ್ಎಚ್ಕೆ ಹೇಳಿದೆ. ಎನ್ಎಚ್ಕೆ ಪ್ರಸಾರದ ಚಿತ್ರಗಳು ವಿಮಾನದ ಕೆಳಗಡೆಯಿಂದ ಜ್ವಾಲೆಗಳು ಬರುತ್ತಿರುವುದನ್ನು ತೋರಿಸಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. https://kannadanewsnow.com/kannada/bitcoin-jumps-above-45000-for-first-time-since-april-2022/ https://kannadanewsnow.com/kannada/supreme-court-seeks-details-on-safety-measures-to-prevent-train-accidents/

Read More

ಟೋಕಿಯೊ: ಜಪಾನ್ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಮಂಗಳವಾರ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ದೇಶದ ಸಾರ್ವಜನಿಕ ಪ್ರಸಾರಕ ಎನ್ಎಚ್ಕೆ ಪ್ರಸಾರ ಮಾಡಿದ ದೃಶ್ಯಾವಳಿಗಳು ತಿಳಿಸಿವೆ. ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುತ್ತಿರುವುದು ಕಂಡುಬಂದಿದೆ. ಕೋಸ್ಟ್ ಗಾರ್ಡ್ ವಿಮಾನದೊಂದಿಗಿನ ಸಂಭಾವ್ಯ ಡಿಕ್ಕಿಯು ವಿಮಾನದಲ್ಲಿ ಬೆಂಕಿಗೆ ಕಾರಣವಾಗಿದೆ ಎಂದು ನಿಪ್ಪಾನ್ ಟಿವಿ ವರದಿ ಮಾಡಿದೆ. https://twitter.com/worldwalker_now/status/1742113493682405844 ಜಪಾನ್ ಏರ್ಲೈನ್ಸ್ ವಕ್ತಾರರು ಹೇಳಿದ್ದೇನು? ಹೊಕ್ಕೈಡೊದ ಶಿನ್-ಚಿಟೋಸ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನವು 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಜಪಾನ್ ಏರ್ಲೈನ್ಸ್ ವಕ್ತಾರರು ತಿಳಿಸಿದ್ದಾರೆ. ಇಲ್ಲಿಯವರೆಗೆ ವರದಿಗಳು ಏನು ಹೇಳಿಕೊಂಡಿವೆ ರನ್ವೇಗೂ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ. ವಿಮಾನವು ಜಪಾನ್ ಏರ್ಲೈನ್ಸ್ಗೆ ಸೇರಿದ್ದು ಎಂದು ಹೇಳಲಾಗಿದೆ. ಹನೆಡಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಇಳಿಯುವಾಗ ಈ ಘಟನೆ ನಡೆದಿದೆ ಎಂದು ಬಿಬಿಸಿ ವರದಿ ಮಾಡಿದೆ. ಜೆಎಎಲ್ 516 ವಿಮಾನವು ಹೊಕ್ಕೈಡೋದಿಂದ ಹೊರಟಿದೆ ಎಂದು ವರದಿಯಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡುತ್ತಿರುವುದನ್ನು ಎನ್ಎಚ್ಕೆ…

Read More

ಬೆಂಗಳೂರು : ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆರೋಗ್ಯ ಇಲಾಖೆಯು, ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಪಡೆದೇ ಇರುವ ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದ್ದು ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಸೂಚಿಸಿದೆ. ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ(ಹೆಟೆರೊಲಾಗಸ್)ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿರುತ್ತದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ…

Read More

ಶಿವಮೊಗ್ಗ : ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು. ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ…

Read More