Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 09 ರಿಂದ ಮೇ- 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಮೊ.ಸಂ.: 9482762350 ನ್ನು ಸಂಪರ್ಕಿಸುವುದು. https://kannadanewsnow.com/kannada/elections-to-6-seats-of-legislative-council-to-be-held-on-june-3-results-to-be-declared-on-june-9/ https://kannadanewsnow.com/kannada/breaking-sc-orders-implementation-of-one-third-womens-quota-in-bar-associations/
ಹಾವೇರಿ: ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು ರಾಜ್ಯ ಸರ್ಕಾರದ ಖಜಾನೆಯಿಂದ ಎಷ್ಟು ರೂಪಾಯಿ ಬರ ಪರಿಹಾರ ಕೊಟ್ಟಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಅವರು ಇಂದು ಹಾವೇರಿ ತಾಲೂಕಿನ ಯಲಗಚ್ಚ, ಕೋಣನತಂಬಿಗಿ, ಹಂದಿಗನೂರು, ಹೊಸ ಕಿತ್ತೂರ, ಹಲಗಿ, ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಿದ್ದಿದ್ದು ಈ ಸರ್ಕಾರ ರೈತರಿಗೆ ತನ್ನ ಖಜಾನೆಯಿಂದ ನಯಾಪೈಸೆ ನೀಡದೆ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಇದೊಂದು ಕೂಳು ನೀರಿಲ್ಲದ ದರಿದ್ರ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಕಳೆದ ಹತ್ತು ತಿಂಗಳಿಂದ ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ದಿ ಕೆಲಸ ನಡೆದಿಲ್ಲ. ಅಭಿವೃದ್ದಿ ಮಾಡುವ ಉದ್ದೇಶ ಇವರಿಗಿಲ್ಲ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ ಕೊಡುತ್ತಿದ್ದ 4 ಸಾವಿರ ರೂ ಸ್ಥಗಿತಗೊಳಿಸಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಮಾಡಿದೆ. ಅದನ್ನು…
ಬೆಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೇ ಕರ್ನಾಟಕ 6 ವಿಧಾನಪರಿಷತ್ತಿನ ಸ್ಥಾನಗಳ ಭರ್ತಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆದ್ರೆ, ಜೂನ್.6ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಮೇ.16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ರೇ, ಮೇ.20 ನಾಮಪತ್ರವನ್ನು ಹಿಂಪಡೆಯಲು ಕೊನೆಯ ದಿನವಾಗಿದೆ ಎಂದಿದೆ. ದಿನಾಂಕ 21-06-2024ರಂದು ಕರ್ನಾಟಕ ನಾರ್ಥ್ ಈಸ್ಟ್ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ ಬಿ ಪಾಟೀಲ್, ಸೌಥ್ ವೆಸ್ಟ್ ಪದವೀಧರರ ಕ್ಷೇತ್ರ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರದ ಎ ದೇವೇಗೌಡ ಅಭ್ಯರ್ಥಿಗಳ ಸ್ಥಾನಗಳು ಖಾಲಿಯಾಗಲಿವೆ. ಅಲ್ಲದೇ ಕರ್ನಾಟಕ ಸೌಥ್ ಈಸ್ಟ್ ಶಿಕ್ಷಕರ ಕ್ಷೇತ್ರದ ಡಾ.ವೈಎ ನಾರಾಯಣಸ್ವಾಮಿ, ಕರ್ನಾಟಕ ಸೌತ್ ವೆಸ್ಟ್ ಶಿಕ್ಷಕರ ಕ್ಷೇತ್ರದ ಎಸ್ ಎಲ್ ಬೋಜೇಗೌಡ ಹಾಗೂ ಸೌಥ್ ಶಿಕ್ಷಕರ ಕ್ಷೇತ್ರ ಮರಿತಿಬ್ಬೇಗೌಡ ಅವರು ನಿವೃತ್ತರಾಗಲಿದ್ದಾರೆ. ಈ 6 ವಿಧಾನಪರಿಷತ್ತಿನ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೇ.9ರಂದು…
ಶಿವಮೊಗ್ಗ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಪ್ರಕರಣ ಕೇವಲ ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ ಪ್ರಕರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸಾಮೂಹಿಕ ಅತ್ಯಾಚಾರಿಯೊಬ್ಬರಿಗೆ ಮತ ಕೇಳುತ್ತಿದ್ದಾರೆ ಎಂದು ಟೀಕಿಸಿದರು. “ಪ್ರಧಾನಿ ನರೇಂದ್ರ ಮೋದಿ ಅವರು ಸಾಮೂಹಿಕ ಅತ್ಯಾಚಾರಿಗಳಿಗೆ ಮತ ಕೇಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಅವರ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ” ಎಂದು ರಾಹುಲ್ ಗಾಂಧಿ ಕರ್ನಾಟಕದ ಶಿವಮೊಗ್ಗದಲ್ಲಿ ಚುನಾವಣಾ ರ್ಯಾಲಿಯಲ್ಲಿ ಹೇಳಿದರು. https://twitter.com/INCIndia/status/1785953198806589491 ನರೇಂದ್ರ ಮೋದಿ, ಕಿಕ್ಕಿರಿದ ವೇದಿಕೆಯಿಂದ, ಆ ಅತ್ಯಾಚಾರಿಯನ್ನು ಬೆಂಬಲಿಸುತ್ತಾರೆ ಮತ್ತು ‘ನೀವು ಈ ಅತ್ಯಾಚಾರಿಗೆ ಮತ ಹಾಕಿದರೆ, ಅದು ನನಗೆ ಸಹಾಯ ಮಾಡುತ್ತದೆ’ ಎಂದು ಹೇಳುತ್ತಾರೆ ಎಂದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ರೇವಣ್ಣ ಭಾರತದಿಂದ ಪಲಾಯನ ಮಾಡಲು ಪ್ರಧಾನಿ ಮೋದಿ ಸಹಾಯ ಮಾಡಿದ್ದಾರೆ…
ಬೆಂಗಳೂರು : “ನಾನು ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ” ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು. ಸದಾಶಿವನಗರದ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಟಿ ನಡೆಸಿದ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಅವರ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ. ಆದರೆ ನನಗೆ ಈ ರಾಜ್ಯದ ಹೆಣ್ಣು ಮಕ್ಕಳ ಮಾನವನ್ನು ಕಾಪಾಡುವ ಕೆಲಸ ಮೊದಲು ಆಗಬೇಕಿದೆ ಎಂದರು. ಮಾಜಿ ಪ್ರಧಾನಿಗಳು ಸಣ್ಣ, ಸಣ್ಣ ವಿಚಾರಕ್ಕೂ ಮಾಧ್ಯಮಗೋಷ್ಠಿ ನಡೆಸಿ ಹೇಳಿಕೆ ನೀಡಿ, ಪಿಟಿಷನ್ ಬರೆಯುತ್ತಾರಲ್ಲವೇ? ಅದೇ ರೀತಿ ಈ ವಿಚಾರವಾಗಿಯೂ ಹೇಳಿಕೆ ನೀಡಲಿ ಹಾಗು ನೂಲಿನಂತೆ ಸೀರೆ ಎನ್ನುವ ಮಾತನ್ನು ಅರ್ಥೈಸಲಿ.” ಪೆನ್ ಡ್ರೈವ್…
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪ್ರಜಾಧ್ವನಿ 2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಕರ್ನಾಟಕದ 28 ಸ್ಥಾನಗಳಲ್ಲಿ 20 ಕ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವಿಶ್ವಾಸ ನನಗಿದೆ ಎಂದರು. ಶಿವಮೊಗ್ಗ ಕುವೆಂಪು ಅವರ ನಾಡು, ಬಂಗಾರಪ್ಪ ಅವರಿಗೆ ಆಶೀರ್ವಾದ ಮಾಡಿದ ನಾಡು. ಈ ಬಾರಿ ಶಿವಮೊಗ್ಗ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಕುವೆಂಪು ಅವರು ಈ ನೆಲವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಈ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು. ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಆತ್ಮೀಯತೆಯನ್ನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ. ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಕೊಟ್ಟಂತೆ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿಯಿಂದ ತನಿಖೆಯನ್ನು ತೀವ್ರಗೊಳಿಸಿರೋ ಬೆನ್ನಲ್ಲೇ, ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಪೋಸ್ಟ್ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇದೊಂದು ಲೈಂಗಿಕ ದೌರ್ಜನ್ಯವಲ್ಲ. ಇದು ಸಾಮೂಹಿಕ ಅತ್ಯಾಚಾರವಾಗಿದೆ. ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರೋದಾಗಿ ಗುಡುಗಿದ್ದರು. ಅಲ್ಲದೇ ಇಂತವರಿಗೆ ಮತ ನೀಡಿ ಅಂತ ಪ್ರಧಾನಿ ಮೋದಿ ಹೇಳಿರೋ ಬಗ್ಗೆ ಕಿಡಿಕಾರಿದ್ದರು. ಈ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಫೇಸ್ ಬುಕ್ ನಲ್ಲಿ ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಪೋಸ್ಟ್ ಮಾಡಿದ್ದರ ಬಗ್ಗೆ ಮಾಹಿತಿ ದೊರೆತಿದೆ. ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಯಾಗಿ, ಈ ಸಂಬಂಧ ಸಂತ್ರಸ್ತೆಯರಿಂದ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲಾದ…
ತೆಲಂಗಾಣ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೇಕ್ ವೀಡಿಯೋ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಫೇಕ್ ವೀಡಿಯೋ ಶೇರ್ ಮಾಡಿದ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಐಟಿ ಸೆಲ್ ಐವರನ್ನು ಬಂಧಿಸಿರುವಂತ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಅಮಿತ್ ಶಾ ಅವರು ಮಾತನಾಡಿದ್ದಂತ ಓರಿಜಿನಲ್ ವೀಡಿಯೋ ತಿರುಚಿ ಫೇಕ್ ವೀಡಿಯೋ ಕ್ರಿಯೇಟ್ ಮಾಡಿ ಮೀಸಲಾತಿ ತೆಗೆದು ಹಾಕುವ ಬಗ್ಗೆ ವೀಡಿಯೋ ತಿರುಚಿ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಲಾಗಿತ್ತು. ಅಮಿತ್ ಶಾ ಹೇಳಿಕೆ ಚಿರುಚಿದಂತ ವೀಡಿಯೋವನ್ನು ತೆಲಂಗಾಣದ ಕೆಲ ನಾಯಕರು ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದರು. ಆ ನಂತ್ರ ಫೇಕ್ ವೀಡಿಯೋ ಸಂಬಂಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ತೆಲಂಗಾಣ ಕಾಂಗ್ರೆಸ್ ಐಟಿ ಸೆಲ್ ನ ಐವರನ್ನು ಬಂಧಿಸಲಾಗಿದೆ. https://kannadanewsnow.com/kannada/johnson-johnson-to-pay-rs-648-crore-compensation-for-cancer-cases/ https://kannadanewsnow.com/kannada/breaking-sc-orders-implementation-of-one-third-womens-quota-in-bar-associations/
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂಬುದಾಗಿ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರಿ ಎಂಬುದಾಗಿ ಹೇಳಲಾಗಿತ್ತು. ಅಲ್ಲದೇ ಕೋರ್ಟ್ ಕೂಡ ಘೋಷಿತ ಆರೋಪಿ ಎಂಬುದಾಗಿ ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಬಿಗ್ ರಿಲೀಫ್ ನೀಡಿದೆ. ಬಿಟ್ ಕಾಯಿನ್ ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ತಲೆ ಮರೆಸಿಕೊಂಡಿದ್ದರು. ಹೀಗಾಗಿ ವಿಚಾರಣಾ ನ್ಯಾಯಾಲಯವು ಅವರನ್ನು ಘೋಷಿತ ಆರೋಪಿ ಎಂಬುದಾಗಿ ಘೋಷಿಸಿ, ವಾರೆಂಟ್ ಜಾರಿಗೊಳಿಸತ್ತು. ಈ ವಾರೆಂಟ್ ಪ್ರಶ್ನಿಸಿ ಶ್ರೀಧರ್ ಪೂಜಾರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮೇ.8ರಂದು ಬೆಳಿಗ್ಗೆ 9 ಗಂಟೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9 ರಿದಂ ಸಂಜೆ6ರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತ್ರ 2 ಲಕ್ಷ ರೂ ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೇ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದಂತ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಳಿಕ, ಇಂದಿನವರೆಗೆ ಸಾರಿಗೆ ಬಸ್ಸುಗಳಲ್ಲಿ 200 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ದಿನಾಂಕ 11-06-202 ರಿಂದ 30-06-2023ರವರೆಗೆ ನಾಲ್ಕು ಸಾರಿಗೆ ನಿಗಮಗಳಲ್ಲಿ 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯ 248,30,13,266 ಆಗಿದೆ. ದಿನಾಂಕ 01-07-2023 ರಿಂದ 31-07-2023ರವರೆಗೆ 19,63,00,625 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ದಿನಾಂಕ 01-08-2023 ರಿಂದ 31-08-2023ರವರೆಗೆ 20,03,60,680 ಮಹಿಳೆಯರು, ದಿನಾಂಕ 01-09-2023 ರಿಂದ 30-09-2023ರವರೆಗೆ 18,95,49,754 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ದಿನಾಂಕ 01-10-2023ರಿಂದ 31-10-2023ರವರೆಗೆ 18,26,17,460 ಮಹಿಳೆಯರು, 01-11-2023 ರಿಂದ 30-11-2023ರವರೆಗೆ 18,25,74,439 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ದಿನಾಂಕ 01-12-2023ರಿಂದ 31-12-2023ರವರೆಗೆ 19,55,52,662 ಮಹಿಳೆಯರು, ದಿನಾಂಕ 01-01-2024ರಿಂದ 31-01-2024ರವರೆಗೆ 19,26,34,708 ಮಹಿಳೆಯರು ಉಚಿತವಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣಿಸಿದ್ದಾರೆ. ಒಟ್ಟಾರೆಯಾಗಿ ದಿನಾಂಕ 11-06-2023ರಿಂದ 01-05-2023ರವರೆಗೆ ಕೆ ಎಸ್…