Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ( SSLC Preparatory Exam 2024 ) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ -ದಿನಾಂಕ 26-02-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT), ಸಂಸ್ಕೃತ -ದಿನಾಂಕ 27-02-2024 – ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ -ದಿನಾಂಕ 28-02-2024 – ಬುಧವಾರ – ತೃತೀಯ ಭಾಷೆ – ಹಿಂದಿ (…
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದಂತ ಡಾ.ಸಿಎನ್ ಮಂಜುನಾಥ್ ಅವರು ಇಂದು ನಿವೃತ್ತರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರ ನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮುಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿದ್ದವರು ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದಂತ ಅವರು, 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಡಾ.ಸಿಎನ್ ಮಂಜುನಾಥ್ ಅವರು ನಿವೃತ್ತರಾದ ನಂತ್ರ, ಜಯದೇವ ಹೃದ್ರೋಗ ಸಂಸ್ಥೆಗೆ ಪ್ರಭಾರ ನಿರ್ದೇಶಕರನ್ನಾಗಿ 69 ವರ್ಷದ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/congress-party-to-organise-massive-workers-convention-in-mangaluru-on-feb-17/ https://kannadanewsnow.com/kannada/breaking-cuet-pg-2024-registration-deadline-extended-applications-can-be-submitted-till-february-7/
ಬೆಂಗಳೂರು: ದಿನಾಂಕ 17-02-2024ರಂದು ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ಬೃಹತ್ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 17-02-2024ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು ಸೇರಿದಂತೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ತಪ್ಪದೇ ಭಾಗವಹಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/state-government-constitutes-committee-to-select-annual-film-awards/ https://kannadanewsnow.com/kannada/state-level-mega-job-fair-to-be-organised-on-feb-19-20/
ಬೆಂಗಳೂರು: 2019, 2020 ಮತ್ತು 2021ನೇ ಕ್ಯಾಲೆಂಡರ್ ವರ್ಷದ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಲನಚಿತ್ರಗಳನ್ನು ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕ ಚಲನಚಿತ್ರ ನೀತ-2011ರ ಅನ್ವಯ ಪ್ರತಿ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿಗಾಗಿ ಚಲನಚಿತ್ರಗಳನ್ನು ಆಯ್ಕೆ ಮಾಡುವ ಸಲುವಾಗಿ ಅಧ್ಯಕ್ಷರು, ಸದಸ್ಯರು ಹಾಗೂ 9 ಜನರ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ನಿರ್ದೇಶಷಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದಿದೆ. ಇನ್ನುಳಿದಂತೆ 8 ಜನರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಹಾಗೂ ಇನ್ನುಳಿದ 7 ಜನ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕಾಗಿರುತ್ತದೆ. ಆದ್ದರಿಂದ 2019, 20 ಮತ್ತು 21ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಲು ಸಂಭವನೀಯ ಗಣ್ಯರ ಪಟ್ಟಿಯನ್ನು ಸಲ್ಲಿಸುತ್ತಾ, ಆಯ್ಕೆ ಸಮಿತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ…
ಬೆಂಗಳೂರು: ರಾಜ್ಯದ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಇನ್ಮುಂದೆ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್ ಪಾವತಿಸುವಂತ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಈ ಕುರಿತಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾಹಿತಿ ಹಂಚಿಕೊಂಡಿದ್ದು, ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾನವಾಗಿ ಪರಿಷಅಕರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಒಟ್ಟಾರೆಯಾಗಿ ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ಸಹಕಾರಿ ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-cuet-pg-2024-registration-deadline-extended-applications-can-be-submitted-till-february-7/
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. ಒಂದು ಇಂಚು ಸರ್ಕಾರಿ ಭೂಮಿಯನ್ನು ಒತ್ತುವರಿಯಾಗದಂತೆ ತಡೆಯೋದಕ್ಕೆ ಬೀಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು ರಾಜ್ಯಾಧ್ಯಂತ ಸರ್ಕಾರಿ ಜಮೀನುಗಳ ಸ್ಥಳ, ವಿಸ್ತೀರ್ಣ ಮತ್ತು ನಕ್ಷೆಯನ್ನು ಮೊಬೈಲ್ ಆಪ್ ನಲ್ಲಿ ದಾಖಲಿಸುವ ಕಾರ್ಯ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣವಾಗಲಿದೆ ಎಂದಿದ್ದಾರೆ. ಈ ಪ್ರಕ್ರಿಯೆ ಪೂರ್ಣವಾದರೇ ಪ್ರತಿ ಮೂರು ತಿಂಗಳಿಗೊಮ್ಮ ವಾಸ್ತವ ಸ್ಥಿತಿಗತಿ ಅರಿಯಲು ನಿರಂತರ ಬೀಟ್ ವ್ಯವಸ್ಥೆ ಇರಲಿದ್ದು, ಒಂದಿಂಚೂ ಸರ್ಕಾರಿ ಭೂಮಿ ಕಬಳಿಕೆಯಾಗದಂತೆ ತಡೆಯುವ ಪರಿಣಾಮಕಾರಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರ್ಕಾರ, ಎಲ್ಲ ಸರ್ಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್ ಬಂದ್ ಸಿದ್ಧಪಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್ ಬಳಸಿ…
ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ. ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ. ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದ ಕಾರಣ, ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ಸಿನ ಗ್ಲಾಸ್ ಪುಡಿ ಪುಡಿಯಾಗಿದೆ. ಘಟನೆಯ ಬಳಿಕ ಶಾಲಾ ವಾಹನದ ಚಾಲಕ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದಂತ ಕಲಬುರ್ಗಿ ಸಂಚಾರ-2 ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-rbi-bans-new-customer-addition-to-paytm-bank/
ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋ ಸಲುವಾಗಿ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯ ಜೆಇ ಪ್ರಕಾಶ್ ಎಂಬುವರು ಗುತ್ತಿಗೆದಾರ ಮಂಜೇಶ್ ಎಂಬುವರಿಗೆ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋದಕ್ಕೆ 2.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಎಲೆಕ್ಟ್ರಿಕ್ ಗುತ್ತಿಗೆದಾರ ಮಂಜೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ 1.5 ಲಕ್ಷ ಲಂಚದ ಹಣವನ್ನು ಬೆಸ್ಕಾಂ ಜೆಇ ಪ್ರಕಾಶ್ ಅವರಿಗೆ ನೀಡೋದಕ್ಕೆ ನಿಗದಿ ಪಡಿಸಲಾಗಿತ್ತು. ಅದರಂತೆ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಬೆಸ್ಕಾಂ ಜೆಇ ಪ್ರಕಾಶ್ ಅವರನ್ನು ಹಿಡಿದಿದ್ದಾರೆ. ಇದೀಗ ಬೆಸ್ಕಾಂ ಜೆಇ ಪ್ರಕಾಶ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಂಡು, ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಪ್ಲೋಮಾ, ಪದವೀಧರರಿಗೆ ಯುವನಿಧಿ ಜಾರಿಗೊಳಿಸಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ರಾಜ್ಯ ಮಟ್ಟದ ಬೃಹತ್ ಉದ್ಯೋ ಮೇಳವನ್ನು ಫೆಬ್ರವರಿ.19, 20ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ-2024ಅನ್ನು ದಿನಾಂಕ 19-02-2024 ಮತ್ತು 20-02-2024ರಂದು ಆಯೋಜಿಸಲಾಗುತ್ತಿದೆ ಎಂದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಫೆ.19, 20 ರಂದು ಆಯೋಜಿಸಲಾಗುತ್ತಿದ್ದು, ಅಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ https://udyogamela.skillconnect.kaushalkar.com/candidateRegistration ಲಿಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಬಹುದು. ಫೆ.19, 20 ರಂದು ನಡೆಯುವಂತ ಬೃಹತ್ ಉದ್ಯೋಗ ಮೇಳದಲ್ಲಿ ಭಾಗಿಯಾಗಿ, ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 18005999918 ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ. https://kannadanewsnow.com/kannada/bengaluru-three-injured-as-lord-rams-cutout-breaks-down/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡದ ಬೆನ್ನಲ್ಲೇ, ಮತ್ತೊಂದು ಭೀಕರ ಅವಘಡ ನಡೆದಿದೆ. ಅದೇ ಶ್ರೀರಾಮನ ಕಟೌಟ್ ಕಟ್ಟೋ ಸಂದರ್ಭದಲ್ಲಿ, ಅದು ಮುರಿದು ಬಿದ್ದು ಮೂವರು ಗಾಯಗೊಂಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಪಕ್ಕದಲ್ಲಿ ಶ್ರೀರಾಮನ ಕಟೌಟ್ ನಿರ್ಮಿಸೋ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಮುರಿದು ಬಿದ್ದ ಕಾರಣ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶ್ರೀರಾಮನ ಕಟೌಟ್ ದಿಢೀರ್ ಮುರಿದು ಬಿದ್ದ ಹಿನ್ನಲೆಯಲ್ಲಿ ಅದನ್ನು ಕಟ್ಟುತ್ತಿದ್ದಂತ ಮೂವರು ಅದರಡಿ ಸಿಲುಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ, ರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯ ಬಳಿಕ, ಶ್ರೀರಾಮನ ಕಟೌಟ್ ಕಟ್ಟೋ ಪ್ರಕ್ರಿಯೆ ಹಲವೆಡೆ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಇಂದು ಹೆಚ್ ಎಎಲ್ ಏರ್ಪೋರ್ಟ್ ಬಳಿಯಲ್ಲಿ ನಿರ್ಮಾಣ ಮಾಡುತ್ತಿದ್ದಂತ ವೇಳೆಯಲ್ಲಿ ಇಂತಹ ಅವಘಡ ನಡೆದಿದೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/