Author: kannadanewsnow09

ಬೆಂಗಳೂರು: ನಟ ದರ್ಶನ್ ಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಇದೀಗ ಮಹಿಳೆಯೊಬ್ಬರು ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಮೂಲಕ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತೆ ಆಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಮ್ಮ ಎಂಬುವರು ನಟ ದರ್ಶನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(ಎ), 509, 504 ಅಡಿಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಇಂದು ಈ ಖಾಸಗಿ ದೂರಿನ ವಿಚಾರಣೆಯನ್ನು ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಸಲಾಯಿತು. ದೂರುದಾರೆ ರೇಣುಕಮ್ಮ ಪರವಾಗಿ ವಕೀಲ ರಂಗನಾಥ್ ವಾದ ಮಂಡಿಸಿದರು. ವಾದವನ್ನು ಆಲಿಸಿದಂತ ನ್ಯಾಯಾಲಯವು ಅರ್ಜಿಯ ಮುಂದಿನ ವಿಚಾರಣೆಯನ್ನು ಮಾರ್ಚ್.1ಕ್ಕೆ ಮುಂದೂಡಲಾಗಿದೆ. ಅಂದಹಾಗೇ ನಟ ದರ್ಶನ್ ವಿರುದ್ಧ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡುವುದು. 509ರಡಿ ಮಹಿಳೆಯರನ್ನು ಅವಮಾನಿಸುವ ಉದಗ್ದೇಶ. 298 ಧಾರ್ಮಿಕ ಭಾನೆಗಳಿಗೆ ಧಕ್ಕೆ ತುರುವುದು. 504 ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವುದು ಆಗಿದೆ. https://kannadanewsnow.com/kannada/actor-dali-dhananjay-appointed-as-ambassador-of-bangalore-international-film-festival/

Read More

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 7ನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತ್ರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗಬೇಕು ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಆಯೋಜಿಸುತ್ತಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯನ್ನಾಗಿ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಅದರಂತೆ ಪುಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದೆ. ದಿನಾಂಕ:03/01/2024ರಂದು ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದನ್ವಯ ಈ ಚಲನಚಿತ್ರೋತ್ಸವವನ್ನು 2024ರ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದ್ದು, ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ದಿ.29/02/2024 ರಂದು…

Read More

ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಂಬಂಧ ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳಿಗೆ ಅನುಮೋದನೆ ದೊರೆಯೋ ಸಾಧ್ಯತೆ ಇದೆ. https://kannadanewsnow.com/kannada/icici-bank-clarifies-allegations-of-fraud-by-manager-to-customers/ https://kannadanewsnow.com/kannada/pm-modi-attacks-dmk-govt-over-chinese-flag-in-indian-rocket-ad/

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿಂದತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651 ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ ಎಂದು ಪಾಟೀಲ್ ಮಾಹಿತಿ ನೀಡಿದರು. 16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ.…

Read More

ಬೆಂಗಳೂರು: ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗೆ ಪರ್ಯಾಯವಾಗಿ ಬಿಡಬ್ಲ್ಯುಎಸ್‌ಎಸ್‌ಬಿ ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್ ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ ಎಂದರು. ಕಾವೇರಿ ನೀರು ಬೆಂಗಳೂರಿನ ಎಲ್ಲಾ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲಾ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ…

Read More

ಬೆಂಗಳೂರು: ಬೇಸಿಗೆಯ ಹೊತ್ತಿನಲ್ಲೇ ನೀರಿನ ಅಭಾವವನ್ನೇ ಬಂಡವಾಳ ಮಾಡಿಕೊಂಡು ಬೆಂಗಳೂರಲ್ಲಿ ಟ್ಯಾಂಕರ್ ನೀರಿನ ದರ ಹೆಚ್ಚಳ ಸೇರಿದಂತೆ ಜನರಿಗೆ ಬರೆಯನ್ನು ಎಳೆಯಲಾಗಿತ್ತು. ಈಗ ಬೆಂಗಳೂರಲ್ಲಿ ವಾಟರ್ ಟ್ಯಾಂಕರ್ ಮಾಫಿಯಾಗೆ ಬಿಬಿಎಂಪಿ ಕಡಿವಾಣ ಹಾಕುವಂತ ನಿರ್ಧಾರ ಕೈಗೊಂಡಿದೆ. ಅಲ್ಲದೇ ಮಾರ್ಚ್.7ರೊಳಗೆ ವಾಟರ್ ಟ್ಯಾಂಕರ್ ನೋಂದಣಿ ಮಾಡಿಸಿಕೊಳ್ಳುವಂತೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು, ವಾಟರ್ ಟ್ಯಾಂಕ್ ಮಾಲೀಕರು ಮಾರ್ಚ್.7ರ ಒಳಗಾಗಿ ನೀರು ಸರಬರಾಜು ಮಾಡುವುದಕ್ಕೆ ನೋಂದಣಿ ಮಾಡಿಕೊಳ್ಳಬೇಕು. ಒಂದು ವೇಳೆ ನೋಂದಣಿ ಮಾಡಿಕೊಳ್ಳದೇ ಇದ್ದರೇ ಅಂತಹ ವಾಟರ್ ಟ್ಯಾಂಕರ್ ಗಳನ್ನು ವಶಕ್ಕೆ ಪಡೆಯೋದಾಗಿ ಎಚ್ಚರಿಕೆ ನೀಡಿದರು. ವಾಟರ್ ಟ್ಯಾಂಕರ್ ಗಳು ಟ್ರೇಡ್ ಲೈಸೆನ್ಸ್ ಪಡೆಯಬೇಕು. ಸಾರಿಗೆ ಇಲಾಖೆ ಪ್ರಕಾರ 3,500 ವಾಟರ್ ಟ್ಯಾಂಕರ್ ಗಳು ಇದ್ದಾವೆ. ಇವುಗಳೆಲ್ಲ ಮಾರ್ಚ್.1ರಿಂದ ಮಾರ್ಚ್.7ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ಟ್ರೇಡ್ ಲೈಸೆನ್ಸ್ ಪಡೆಯದೇ ನೀರು ಸರಬರಾಜು ಮಾಡುವಂತಿಲ್ಲ. ನೋಂದಣಿ ಮಾಡಿಕೊಳ್ಳದಂತ ಟ್ಯಾಂಕರ್ ಗಳನ್ನು…

Read More

ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ನಾಳೇಯ ದಿನ ಆಂಜನೇಯ ಸ್ವಾಮಿಯ ಹನುಮಾನ್ ಚಾಲೀಸ ಪಾರಾಯಣ ಮಾಡಿರಿ ಇದರಿಂದ ನಿಮಗೆ ಸಾಕಷ್ಟು ಒಳಿತು ಆಗುತ್ತದೆ ಕುಟುಂಬ ಜನಕ್ಕೂಸಹ ಸಾಕಷ್ಟು ಒಳ್ಳೆಯದು ಆಗಲಿದೆ. ಓಂ ಶ್ರೀ ಆಂಜನೇಯಾಯ ನಮಃ ಓಂ ಮಹಾವೀರಾಯ ನಮಃ ಓಂ ಹನುಮತೇ ನಮಃ ಓಂ ಸೀತಾದೇವಿ ಮುದ್ರಾಪ್ರದಾಯಕಾಯ ನಮಃ ಓಂ ಮಾರುತಾತ್ಮಜಾಯ ನಮಃ ಓಂ ತತ್ತ್ವ ಜ್ಞಾನ ಪ್ರದಾನ…

Read More

ನವದೆಹಲಿ : 2016ರಲ್ಲಿ ಯುಎಸ್ನಿಂದ ಭಾರತಕ್ಕೆ ಮರಳಿದ ಭಾರತೀಯ ಮೂಲದ ಮಹಿಳೆ ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕರು ಮೋಸದ ಚಟುವಟಿಕೆಗಳಲ್ಲಿ ತೊಡಗುವ ಮೂಲಕ 13.5 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಕೂಡ ಸುದ್ದಿ ಮಾಡಿತ್ತು. ಈ ಬೆನ್ನಲ್ಲೇ ಐಸಿಐಸಿಐ ಬ್ಯಾಂಕ್ ನಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಐಸಿಐಸಿಐ ಬ್ಯಾಂಕ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಗ್ರಾಹಕರು ನಮ್ಮ ಅತ್ಯಂತ ಆದ್ಯತೆ. ಅವರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಸಂಪೂರ್ಣವಾಗಿ ಸಮರ್ಪಿತರಾಗಿದ್ದೇವೆ. ಈ ಸಂದರ್ಭದಲ್ಲಿಯೂ, ಗ್ರಾಹಕರ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ನಾವು ಖಚಿತಪಡಿಸುತ್ತೇವೆ ಎಂದಿದೆ. ವಾಸ್ತವವಾಗಿ, ತನಿಖೆಯ ಫಲಿತಾಂಶ ಬರುವವರೆಗೆ ವಿವಾದಿತ ಮೊತ್ತವಾದ 9.27 ಕೋಟಿ ರೂ.ಗಳನ್ನು (ಅವರು ಈಗಾಗಲೇ 2 ಕೋಟಿ ರೂ.ಗಳ ಸ್ಥಿರ ಠೇವಣಿಯನ್ನು ನಗದೀಕರಿಸಿದ್ದಾರೆ) ಅವರ ಖಾತೆಗೆ ವರ್ಗಾಯಿಸಲು ನಾವು ಸಿದ್ಧರಿದ್ದೇವೆ ಎಂದು ನಾವು ಗ್ರಾಹಕರಿಗೆ ತಿಳಿಸಿದ್ದೇವೆ…

Read More

ಬೆಂಗಳೂರು: ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಓದಿದವರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೇ ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ಯುವನಿಧಿ ಸೌಲಭ್ಯದಿಂದ ಅನರ್ಹ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಯುವನಿಧಿʼ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ ಎಂದು ತಿಳಿಸಿದೆ. ಫೆಬ್ರವರಿ 2024ರಲ್ಲಿ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 29.02.2024ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ಮಾಡಬೇಕು. ಸೂಚಿತ ಸಮಯದೊಳಗೆ ಮಾಸಿಕ ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ʼಯುವನಿಧಿʼ ನೇರ ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹಗೊಳಿಸಲಾಗುವುದು ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. https://kannadanewsnow.com/kannada/bitcoin-case-court-sends-accused-to-7-day-sit-custody/ https://kannadanewsnow.com/kannada/bengaluru-miscreants-set-ablaze-jcb-during-encroachment-complaint-lodged-against-two-accused/

Read More