Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಆಲ್ಕೋಳ ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಾಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ಸೆ. 29ರಂದು ಬೆಳಗ್ಗೆ 9.00 ರಿಂದ ಸಂಜೆ 6 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಅಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ. ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು ಕರೆಂಟ್ ಇರೋದಿಲ್ಲ. ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ. ದೇವಕಾತಿಕೊಪ್ಪ, ಶ್ರೀರಾಮ್ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ,…
ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಅವರು ಈ ಪ್ರಕರಣದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.30ಕ್ಕೆ ಕೋರ್ಟ್ ಮುಂದೂಡಿಕೆ. ಹೀಗಾಗಿ ನಟ ದರ್ಶನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯವು ನಡೆಸಿತು. ಹಿರಿಯ ವಕೀಲರು ಬರಬೇಕಿರುವುದರಿಂದ ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. ಅಲ್ಲದೇ ದರ್ಶನ್ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ಕೋರಿದ್ದರು. ಹೀಗಾಗಿ ಸೆಪ್ಟೆಂಬರ್.30ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ. ಅಂದಹಾಗೇ ನಟ ದರ್ಶನ್ ಅಂಡ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧನಕ್ಕೆ ಒಳಗಾಗಿ ಬಳ್ಳಾರಿ ಜೈಲು ಪಾಲಾಗಿದ್ದಾರೆ. ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಗೆ ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಲಾಗಿದೆ. ಹಿರಿಯ ವಕೀಲರು ವಾದ ಮಂಡನೆಗೆ…
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ. ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್ನಲ್ಲಿಯೇ ಉಚಿತ ಬಸ್ ಪಾಸ್ ೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್ನಲ್ಲಿಯೂ ೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ. ಉಚಿತ ಬಸ್ ಪಾಸ್ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು ಇಲಾಖೆಯಲ್ಲಿ ನಿರಂತರವಾಗಿ ಕೆಯುಡಬ್ಲೂಜೆ ಮಾಡಿದ ಹೋರಾಟದ ಲವಾಗಿ…
ಬೆಂಗಳೂರು: ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವರದಿಯು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ಹೈಕೋರ್ಟ್ಗೆ ತಿಳಿಸಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತೀರ್ಪನ್ನು ಕಾಯ್ದಿರಿಸಿದರು. ಈ ಪ್ರಕರಣದಲ್ಲಿ ಎಸ್ಐಟಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಇದು ಒಮ್ಮತದ ಕೃತ್ಯ ಎಂದು ವಿಚಾರಣಾ ನ್ಯಾಯಾಲಯದ ಮುಂದೆ ಪ್ರಜ್ವಲ್ ನೀಡಿದ ಹೇಳಿಕೆಗೆ ವಿರುದ್ಧವಾಗಿ, ಎಫ್ಎಸ್ಎಲ್ ದೃಢಪಡಿಸಿದ ಆಡಿಯೊದಲ್ಲಿ ಸಂತ್ರಸ್ತೆಯ ಪ್ರತಿಭಟನೆ, ತಿರಸ್ಕಾರ, ಕೂಗು, ಅಳುವಿಕೆ ಮತ್ತು ಯಾತನೆಯನ್ನು ತೋರಿಸಲಾಗಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ, ಮೊದಲ ಬಾರಿಗೆ, ಅವರು ವೀಡಿಯೊದಲ್ಲಿ ಸಿಕ್ಕಿಬಿದ್ದಿದ್ದಾರೆ. ಇತರ ಪ್ರಕರಣಗಳಲ್ಲಿದ್ದಂತೆ ಅವನಿಗೆ ಉತ್ತಮ ಭದ್ರತೆ ಇರಲಿಲ್ಲ. ಅವರ ಧ್ವನಿಯನ್ನು ರೆಕಾರ್ಡ್…
ಬೆಂಗಳೂರು: ನೈಸ್ ಕೇಸ್ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದಂತ ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲ ಕೆ.ಸುಮನ್ (64) ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ.ಸುಮನ್ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ ಮಠದ ಪರವಾಗಿ ವೃಂದಾವನ ಆಧಾರನೆ ಪ್ರಕರಣ, ನೈಸ್ ಕೇಸ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದರು. ಇಂತಹ ಹಿರಿಯ ವಕೀಲ ಕೆ.ಸುಮನ್ ಅವರು ಇನ್ನಿಲ್ಲವಾಗಿದ್ದಾರೆ. ಮೃತ ಕೆ.ಸುಮನ್ ಅವರ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 2 ಗಂಟೆಗೆ ಹೆಬ್ಬಾಳದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. https://kannadanewsnow.com/kannada/kadalur-will-be-the-prelude-to-maddurs-model-constituency-mla-k-m-uday/ https://kannadanewsnow.com/kannada/good-news-for-rural-journalists-state-govt-orders-distribution-of-free-bus-passes/
ನವದೆಹಲಿ: ವೇರಿಯಬಲ್ ತುಟ್ಟಿಭತ್ಯೆ (ವಿಡಿಎ) ಪರಿಷ್ಕರಿಸುವ ಮೂಲಕ ಕಾರ್ಮಿಕರಿಗೆ, ವಿಶೇಷವಾಗಿ ಅಸಂಘಟಿತ ವಲಯದಲ್ಲಿ ಕನಿಷ್ಠ ವೇತನವನ್ನು ಹೆಚ್ಚಿಸುವುದಾಗಿ ಮೋದಿ ಸರ್ಕಾರ ಗುರುವಾರ ಘೋಷಿಸಿದೆ. ಈ ಹೊಂದಾಣಿಕೆಯು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಕಾರ್ಮಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರವು ಹೇಳಿಕೆಯಲ್ಲಿ ತಿಳಿಸಿದೆ. ಅಕ್ಟೋಬರ್ 1 ರಿಂದ ಜಾರಿಗೆ ಬರಲಿರುವ ಹೊಸ ಪರಿಷ್ಕೃತ ಕನಿಷ್ಠ ವೇತನವು ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್ಲೋಡಿಂಗ್, ವಾಚ್ ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛಗೊಳಿಸುವುದು, ಹೌಸ್ ಕೀಪಿಂಗ್, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ. ಕೊನೆಯ ಪರಿಷ್ಕರಣೆಯನ್ನು ಏಪ್ರಿಲ್ 2024 ರಲ್ಲಿ ಮಾಡಲಾಯಿತು. ಪರಿಷ್ಕರಣೆಯ ನಂತರ, ಕಟ್ಟಡ ನಿರ್ಮಾಣ, ಗುಡಿಸುವಿಕೆ, ಶುಚಿಗೊಳಿಸುವಿಕೆ, ಲೋಡಿಂಗ್ ಮತ್ತು ಅನ್ಲೋಡಿಂಗ್ ಮಾಡುವ ಕಾರ್ಮಿಕರಿಗೆ ‘ಎ’ ಪ್ರದೇಶದಲ್ಲಿ ಕನಿಷ್ಠ ವೇತನ ದರಗಳು ದಿನಕ್ಕೆ 783 ರೂ (ತಿಂಗಳಿಗೆ 20,358 ರೂ.), ಅರೆ ಕೌಶಲ್ಯ ಹೊಂದಿರುವವರಿಗೆ ದಿನಕ್ಕೆ 868 ರೂ (ತಿಂಗಳಿಗೆ 22,568…
ಮಂಡ್ಯ: ನನ್ನ ಶಾಸಕ ಸ್ಥಾನದ ಆಡಳಿತಾವಧಿಯಲ್ಲಿ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಬಯಕೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕದಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ತುಮಕೂರು – ಮದ್ದೂರು ರಾಜ್ಯ ಹೆದ್ದಾರಿಯಿಂದ ಕದಲೂರು ಮಾರ್ಗವಾಗಿ ನಿಡಘಟ್ಟ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆವರೆಗೆ ಅಂದಾಜು 20 ಕೋಟಿ ವೆಚ್ಚದಲ್ಲಿ ಹೈಟೆಕ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಹಿಂದೆ ನಾನು ವಾಗ್ದಾನ ನೀಡಿದಂತೆ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಬೇಕೆಂಬ ಇರಾದೆ ನನ್ನದಾಗಿದೆ ಎಂದು ಹೇಳಿದ್ದೆ ಅದಕ್ಕೆಲ್ಲ ಈಗ ಕಾಲ ಕೂಡಿಬಂದಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು. ಮುಂದಿನ ಒಂದು ವರ್ಷದಲ್ಲಿ ನನ್ನ ಹುಟ್ಟೂರು ಕದಲೂರು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಅಲ್ಲದೇ ಹಂತಹಂತವಾಗಿ ಕ್ಷೇತ್ರದ ಎಲ್ಲಾ…
ಶಿವಮೊಗ್ಗ: ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಡಿಕೆ ಕದಿಯುತ್ತಿದ್ದಂತ ಇಬ್ಬರು ಕಳ್ಳರನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಒಂದು ಅಡಿಕೆ ಕಳವು ಹಾಗೂ 2024ರಲ್ಲಿ ಎರಡು ಅಡಿಕೆ ಕದ್ದ ಪ್ರಕರಣಗಳು ದಾಖಲಾಗಿದ್ದವು. ಈ ಕೇಸ್ ಗಳನ್ನು ಗಂಭೀರವಾಗಿ ತೆಗೆದುಕೊಂಡಂತ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೂಚನೆಯಂತೆ, ಡಿವೈಎಸ್ಪಿ ಗೋಪಾಕೃಷ್ಣ ನಾಯಕ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡದಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ ಎಸ್.ಎನ್, ಪಿಎಸ್ಐ ಸಿದ್ಧರಾಮಪ್ಪ, ಸಿಬ್ಬಂದಿಗಳಾದಂತ ಸಿಹೆಚ್ ಸಿ ಷೇಖ್ ಫೈರೋಜ್ ಅಹಮ್ಮದ್, ಪಿಸಿ ನಂದೀಶ್, ಸಿಪಿಸಿ ರವಿಕುಮಾರ್, ಸಿಪಿಸಿ ಪ್ರವೀಣ್ ಕುಮಾರ್, ಜೀಪ್ ಚಾಲಕ ಎಹೆಚ್ ಸಿ ಗಿರೀಶ್ ಬಾಬು ಹಾಗೂ ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ಸಿಬ್ಬಂದಿ ಗುರುರಾಜ್, ಇಂದ್ರೇಶ್, ವಿಜಯ್ ಕುಮಾರ್ ತನಿಖೆಗೆ ಇಳಿದರು. ಈ ಹಿಂದಿನ ಅಡಿಕೆ ಕದ್ದ ಆರೋಪಿಗಳು ಸೇರಿದಂತೆ ಹಲವರನ್ನು ತನಿಖೆಗೆ…
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ದಸರಾ ಗೋಲ್ಟ್ ಪಾಸ್ ಸೇರಿದಂತೆ ವಿವಿಧ ಪಾಸ್ ಗಳ ದರವನ್ನು ಪ್ರಕಟಿಸಲಾಗಿತ್ತು. ಈಗ ಯುವ ದಸರಾ ವೀಕ್ಷಣೆಗೂ ಟಿಕೆಟ್ ನಿಗದಿ ಗೊಳಿಸಲಾಗಿದೆ. ಇಂದಿನಿಂದ ಆನ್ ಲೈನ್ ನಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.6ರಿಂದ 10ರವರೆಗೆ ನಿತ್ಯ ಸಂಜೆ 6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಅ.6ರಂದು ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಉದ್ಘಾಟಿಸಲಿದ್ದಾರೆ. ‘ಟಿಕೆಟ್ಗಳನ್ನು ಸೆ.27ರಿಂದ ಆನ್ಲೈನ್ನಲ್ಲಿ ದಸರಾದ ಅಧಿಕೃತ ಜಾಲತಾಣವಾದ https://mysoredasara.gov.in ಹಾಗೂ Book My Show ಮೂಲಕ ಖರೀದಿಸಬಹುದು. ವೀಕ್ಷಕರ ಗ್ಯಾಲರಿ–1 (ವೇದಿಕೆ ಸಮೀಪ) ಟಿಕೆಟ್ ಮುಖಬೆಲೆ ₹8 ಸಾವಿರ ಹಾಗೂ ವೀಕ್ಷಕರ ಗ್ಯಾಲರಿ–2ರ ಟಿಕೆಟ್ಗಳ ಮುಖಬೆಲೆ ₹5 ಸಾವಿರ ನಿಗದಿಪಡಿಸಲಾಗಿದೆ.…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅದೃಷ್ಟದ ಹಠಾತ್ ಹೊಡೆತ. ತಕ್ಷಣ ನಮ್ಮ ಸಾಮಾನ್ಯ ಜೀವನ ರಾಜ ಜೀವನವಾಗಬೇಕು. ಇಷ್ಟೊಂದು ಐಷಾರಾಮಿ ಜೀವನ ನಮಗೆ ಹೇಗೆ ಸಿಕ್ಕಿತು ಎಂಬುದು ಯಾರಿಗೂ ತಿಳಿಯಬಾರದು. ಇದು ಅಂತಹ ರಹಸ್ಯ ಪರಿಹಾರವಾಗಿದೆ. ನಾಳೆ ಶುಕ್ರವಾರ, ಶುಕ್ರವಾರ ಶುಕ್ರದೇವನ ದಿನ. ನಾಳೆ ಶುಕ್ರ ಜಯಂತಿಯೂ ಇದೆ. ನಾಳೆ ಶುಕ್ರದೇವನ ಜನ್ಮದಿನ. ಈ ದಿನದಂದು ಮಹಾಲಕ್ಷ್ಮಿ ಪೂಜೆಯು ಉತ್ತಮ ಫಲಿತಾಂಶವನ್ನು ನೀಡುತ್ತದೆ. ಅಷ್ಟೇ ಅಲ್ಲ ಪುರಟಾಸಿ ಮಾಸ ಬಂದ ಎರಡನೇ ಶುಕ್ರವಾರವೂ ಹೌದು. ಈ ದಿನ ನಾವು ಮಾಡಬೇಕಾದ ಶುಕ್ರವಾರದ ಪೂಜೆಯ…













