Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆ ಎಸ್ ಆರ್ ಟಿಸಿಯ ಹುಮ್ನಾಬಾದ್ ನಲ್ಲಿ ದಿನಾಂಕ 18-09-2024ರಿಂ ಚಾಲನಾ ವೃತ್ತಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಕೆಲ ಅಭ್ಯರ್ಥಿಗಳು ಹಾಜರಾಗಿರಲಿಲ್ಲ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಮತ್ತೊಂದು ಅವಕಾಶವನ್ನು ಕಲ್ಪಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 18-09-2024 ರಿಂದ ನಡೆಸಲಾಗುತ್ತಿದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್. ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು ಎಂದಿದೆ. ಈ ಪರೀಕ್ಷೆಗೆ ಕೆಲವೊಂದು ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಂತಿಮವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು…
ಶಿವಮೊಗ್ಗ: ವ್ಯಕ್ತಿತ್ವನ್ನು ರೂಪಿಸುವಲ್ಲಿ ಪುಸ್ತಕಗಳು ಬಹುದೊಡ್ಡ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಪತ್ರಕರ್ತ, ಚಿಂತಕ, ಬರಹಗಾರ ಎನ್. ರವಿಕುಮಾರ್ ಟೆಲೆಕ್ಸ್ ಹೇಳಿದರು. ಇಂದು ನಗರದ ಪ್ರಜ್ಞಾ ಬುಕ್ ಗ್ಯಾಲರಿಯ ವತಿಯಿಂದ ಆಯೋಜಿಸಿದ್ದ ಪುಸ್ತಕ ಸುಗ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನುಭವ ಲೋಕದಿಂದ ಗಳಿಸಿದ ಅರಿವು ಓದಿನಿಂದ ವಿಸ್ತಾರಗೊಳ್ಳುತ್ತದೆ. ಸಮಾಜವನ್ನು ಮಾನವೀಯಗೊಳಿಸುವಲ್ಲಿ ಪುಸ್ತಕಗಳ ಪಾತ್ರ ದೊಡ್ಡದ್ದಾಗಿದ್ದು, ಇಂದಿನ ಡಿಜಿಟಲ್ ಯುಗದಲ್ಲೂ ಜನರು ಓದುಗ ಸಂಸ್ಕೃತಿಗೆ ಮರುಳುತ್ತಿರುವುದು ಆಶಾದಾಯಕ ಸಂಗತಿಯಾಗಿದೆ ಎಂದರು. ಯಾವುದೇ ಪುಸ್ತಕಗಳು ನಮ್ಮ ಬೌದ್ಧಿಕ ಆಯುಧಗಳೇ ಆಗಿರುತ್ತವೆ. ಜರ್ಮನ್ ನ ಹಿಟ್ಲರ್ ಮೊದಲು ಪುಸ್ತಕಗಳನ್ನು, ಗ್ರಂಥಾಲಯಗಳನ್ನು ಸುಡುವ ಮೂಲಕ ಜನರನ್ನು ಅರಿವಿನಿಂದ ದೂರವಿಟ್ಟು ತನ್ನ ಸರ್ವಾಧಿಕಾರವನ್ನು ಜಾರಿಗೊಳಿಸಲು ಮುಂದಾಗಿದ್ದನು. ಸಂವಿಧಾನವನ್ನು ಓದದೆ ಇರುವವರು ಸಂವಿಧಾನವನ್ನು ತಿರಸ್ಕರಿಸುವ ನಡವಳಿಕೆಗಳನ್ನುತೋರುತ್ತಿದ್ದಾರೆ. ಆದರೆ ಸಂವಿಧಾನವನ್ನು ಓದುವುದರಿಂದ ಭಾರತ ಅರಿವಾಗಲಿದೆ. ಇದು ಓದಿನ ಮಹತ್ವವನ್ನು ತಿಳಿಸುತ್ತದೆ ಎಂದು ವಿಶ್ಲೇಷಿಸಿದರು. ಪುಸ್ತಕಗಳು ಹಿಮ್ಮುಖ ಮತ್ತು ಮುನ್ನಡೆಯ ಎರಡೂ ಬಗೆಯ ದರ್ಶನವನ್ನು ಕೊಡಬಲ್ಲವು. ಪುಸ್ತಕಗಳನ್ನು ಓದುವುದರಿಂದ ನಮ್ಮ ವರ್ತಮಾನ…
ಬಳ್ಳಾರಿ : 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ. ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ.ರ್ರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. https://kannadanewsnow.com/kannada/kannada-language-to-be-taught-in-all-schools-in-the-state-minister-madhu-bangarappa/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜ್ಯೋತ್ಸವ ಸಂದೇಶ ನೀಡಿದರು. ನಮ್ಮ ಕರ್ನಾಟಕವು ಭಾಷೆ, ಶಿಲ್ಪಕಲೆ, ಸಾಹಿತ್ಯ, ಸಂಸ್ಕøತಿ, ನೆಲ, ಜಲ, ಸಂಪತ್ತುಗಳಿಂದ ಸಮೃದ್ಧವಾಗಿದ್ದು, ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಲು ಎಲ್ಲಾ ಅವಕಾಶಗಳನ್ನು ಒದಗಿಸಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಅದಕ್ಕಾಗಿ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಾಲಾ ಶಿಕ್ಷಣವನ್ನು ನೀಡಲು ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಬಾಷೆಯನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಭೋದಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 1 ಕೋಟಿ 4 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಹಲವು ನೂತನ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ನಮ್ಮ…
ಸಾಲವನ್ನು ಮರುಪಾವತಿಸಲು ಗ್ರೇಸ್ ಅವಧಿಗಾಗಿ ಕಾಯುತ್ತಿರುವವರಿಗೆ ಇಂದು ಶುಭ ದಿನವಾಗಿದೆ. ಶುಕ್ರವಾರದ ಜೊತೆಗೆ ದೀಪಾವಳಿ ಅಮಾವಾಸ್ಯೆ ಬಂದಿದೆ. ಸಾಮಾನ್ಯ ದಿನಗಳಿಗಿಂತ ಅಮಾವಾಸ್ಯೆ ದಿನಗಳು ಹೆಚ್ಚು ಶಕ್ತಿ ಹೊಂದಿವೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಬ್ರಹ್ಮಾಂಡದ ಧನಾತ್ಮಕ ಶಕ್ತಿಯು ಭೂಮಿಗೆ ಹೆಚ್ಚು ಆಕರ್ಷಿತವಾದ ಈ ದಿನದಲ್ಲಿ, ನಾವು ಮಾಡಬಹುದಾದ ಪರಿಹಾರಗಳು ದುಪ್ಪಟ್ಟು ಪ್ರಯೋಜನಕಾರಿಯಾಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಸಾಲದ ಹೊರೆ ನಿಮ್ಮಿಂದ ದೂರವಾಗಬೇಕು ಎಂದು ಹೇಳಿ ಈ 2 ವಸ್ತುಗಳನ್ನು ನಿಮ್ಮ ತಲೆಯ ಸುತ್ತ ಬೆಂಕಿಯಲ್ಲಿ ಇರಿಸಿ. ಸಹಜವಾಗಿ ಸಾಲ ಕರಗುತ್ತದೆ ಮತ್ತು ಆದಾಯವು ಗೋಚರವಾಗಿ ಹೆಚ್ಚಾಗುತ್ತದೆ. ಆ ಎರಡು ಅರ್ಥವೇನು? ಆ ವಸ್ತುಗಳನ್ನು ಬೆಂಕಿಯಲ್ಲಿ ಹಾಕುವುದು ಹೇಗೆ ಎಂದು ತಿಳಿಯಲು ಈ ಆಧ್ಯಾತ್ಮಿಕ ಪೋಸ್ಟ್ ಅನ್ನು ಓದುತ್ತಲೇ ಇರೋಣ. ದೀಪಾವಳಿ ಅಮಾವಾಸ್ಯೆ ಪರಿಕ್ರಮ ಹರಳೆಣ್ಣೆ ಮತ್ತು ಲವಂಗಗಳು ಆ 2 ಪದಾರ್ಥಗಳಾಗಿವೆ. ಮಣ್ಣಿನ ದೀಪವನ್ನು ತೆಗೆದುಕೊಂಡು ಇರಿಸಿ. ಅದರಲ್ಲಿ…
ಬೆಂಗಳೂರು: ನಗರದಲ್ಲಿ ಮಾಲಿನ್ಯ ನಿಯಂತ್ರಣ ತಡೆಯುವ ಸಂಬಂಧ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ದೀಪಾವಳಿ ಹಬ್ಬದಂದು ಮಾರ್ಗಸೂಚಿ ಅನುಸರಿಸಿ ಪಟಾಕಿ ಹಚ್ಚುವಂತೆ ತಿಳಿಸಲಾಗಿತ್ತು. ಈ ನಿಯಮವನ್ನು ಉಲ್ಲಂಘಿಸಿ ಪಟಾಕಿ ಹಚ್ಚಿದವರಿಗೆ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇಂದು ಬರೋಬ್ಬರಿ 56 ಪ್ರಕರಣ ದಾಖಲಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31-10-2024ರಿಂದ ದಿನಾಂಕ 01-11-2024ರವರೆಗೆ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ 56 ಕೇಸ್ ದಾಖಲಿಸಿರುವುದಾಗಿ ತಿಳಿಸಿದೆ. ಬೆಂಗಳೂರು ಉತ್ತರ ವಲಯದಲ್ಲಿ 09, ದಕ್ಷಿಣ ವಲಯದಲ್ಲಿ 04, ಪೂರ್ವ ವಲಯದಲ್ಲಿ 06, ಈಶಾನ್ಯ 19, ಆಗ್ನೇಯ 09, ವೈಟ್ ಫೀಲ್ಡ್ 09 ಸೇರಿದಂತೆ 56 ಪ್ರಕರಣವನ್ನು ದಾಖಲಿಸಿರುವುದಾಗಿ ತಿಳಿಸಿದೆ. https://kannadanewsnow.com/kannada/minister-ramalinga-reddy-hoists-kannada-flag-in-ramanagara-here-are-the-highlights-of-his-speech/ https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/
ರಾಮನಗರ: ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಮಾತನಾಡಿದರು. ಆ ಭಾಷಣದ ಹೈಲೈಟ್ಸ್ ಮುಂದೆ ಓದಿ. ಇಂದು ಅಖಂಡ ಕರ್ನಾಟಕ ಅಸ್ತಿತ್ವಕ್ಕೆ ಬಂದ ದಿನ. 1956ಕ್ಕೂ ಮೊದಲು ಕರ್ನಾಟಕ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ದಕ್ಷಿಣದ ಕೆಲವು ಜಿಲ್ಲೆಗಳು ಮೈಸೂರು ಸಂಸ್ಥಾನದಲ್ಲಿದ್ದರೆ, ಕಲಬುರಗಿ, ಬೀದರ, ರಾಯಚೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದವು. ರಾಜ್ಯದ ವಾಯುವ್ಯ ಭಾಗ ಮುಂಬೈ ಪ್ರಾಂತ್ಯಕ್ಕೆ ಸೇರಿದ್ದರೆ, ದಕ್ಷಿಣ ಕನ್ನಡ, ಕೊಳ್ಳೇಗಾಲ, ಬಳ್ಳಾರಿ ಮುಂತಾದ ಪ್ರದೇಶಗಳು ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದವು. ಕೊಡಗು ಜಿಲ್ಲೆ ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿದಿತ್ತು ಎಂದರು. ಮೈಸೂರು ರಾಜ್ಯವನ್ನು ನವೆಂಬರ್ 1 1973 ರಂದು ಅಂದಿನ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸರವರು ವಿಶಾಲಾರ್ಥದಲ್ಲಿ ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿ ಇಂದಿಗೆ 51 ವರ್ಷ ಪೂರ್ಣಗೊಂಡಿರುತ್ತದೆ ಎಂದು ಹೇಳಿದರು. ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಸ್ಮರಣೀಯರ ಸಂಖ್ಯೆ…
ದಾವಣಗೆರೆ: ಅಲ್ಪಸಂಖ್ಯಾತ ಹಾಗೂ ವಕ್ಪ್ ಖಾತೆಯ ಸಚಿವ ಜಮೀರ್ ಆಹಮ್ಮದ್ ಖಾನ್ ಓರ್ವ ಮತಾಂಧ.ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಪಾಕಿಸ್ತಾನಕ್ಕೆ ಓಡಿಸಬೇಕು ಎಂದು ಮಾಜಿ ಸಚಿವ ಎ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಜಮೀರ್ ಆಹಮ್ಮದ್ ಖಾನ್ ಅಂತಹವರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಬಾರದು. ಇಲ್ಲದಿದ್ದರೆ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಿಂದ ಜಾಗ ಖಾಲಿ ಮಾಡಿಸುತ್ತಾರೆ ಎಂದು ಎಚ್ಚರಿಕೆ ಕೊಟ್ಟರು. ಅಧಿಕಾರಿಗಳ ಮೂಲಕ ನೋಟೀಸ್ ಕೊಡಲು ಜಮೀರ್ ಅವರಿಗೆ ಅಧಿಕಾರ ಕೊಟ್ಡಿದ್ದು ಯಾರು? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ ಎಂದು ಕಿಡಿಕಾರಿದರು. ಜಮೀರ್ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಚಿವರಲ್ಲ. ಅವರು ಇದನ್ನು ಮೊದಲು ಅರ್ಧಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಅವರನ್ನು…
ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ. ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್ ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ ವಿಡಿಯೋಗಳು ಸ್ಥಗಿತಗೊಳಿಸುವುದು, ಸಾಮಾಜಿಕ ಜಾಲತಾಣಗಳು, ಒಳಗೊಂಡಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ. https://kannadanewsnow.com/kannada/neet-pg-2024-counselling-schedule-announced/ https://kannadanewsnow.com/kannada/big-news-isro-launched-indias-first-analog-space-mission/
ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (Medical Counselling Committee – MCC) ದೀರ್ಘ ಕಾಯುವಿಕೆಯ ನಂತರ ನೀಟ್ ಪಿಜಿ 2024 ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ( NEET PG 2024 counselling schedule ) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ವೈದ್ಯಕೀಯ ವಿದ್ಯಾರ್ಥಿಗಳು mcc.nic.in ರ ಅಧಿಕೃತ ಎಂಸಿಸಿ ವೆಬ್ಸೈಟ್ನಿಂದ ವಿವರವಾದ ವೇಳಾಪಟ್ಟಿಯನ್ನು ಪರಿಶೀಲಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಮೊದಲ ಸುತ್ತಿನ ಪಿಜಿ ಕೌನ್ಸೆಲಿಂಗ್ ಗೆ ನೋಂದಣಿ ವಿಂಡೋ ಸೆಪ್ಟೆಂಬರ್.20ರಂದು ಪ್ರಾರಂಭವಾಯಿತು. ನೀಟ್ ಪಿಜಿ 2024 ಕೌನ್ಸೆಲಿಂಗ್ ವೇಳಾಪಟ್ಟಿ ಏನು? ನೀಟ್ ಪಿಜಿ ಕೌನ್ಸೆಲಿಂಗ್ ವೇಳಾಪಟ್ಟಿಯ ಪ್ರಕಾರ, ಸಮಿತಿಯು ನವೆಂಬರ್ 20 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಿದೆ. ಸೀಟುಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳು ನವೆಂಬರ್ 21 ರಿಂದ ನವೆಂಬರ್ 27 ರೊಳಗೆ ಆಯಾ ಕಾಲೇಜುಗಳಿಗೆ ವರದಿ ಮಾಡಬೇಕು. ಕೌನ್ಸೆಲಿಂಗ್ ಗಾಗಿ ಎರಡನೇ ಸುತ್ತಿನ ನೋಂದಣಿ ಪ್ರಕ್ರಿಯೆ ಡಿಸೆಂಬರ್ 4 ರಿಂದ 9 ರವರೆಗೆ…













