Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಷ್ಟೆಲ್ಲಾ ದಾಖಲೆ ಸಮೇತ ಮಾಡಿರುವ ದಿನಪತ್ರಿಕೆಯಲ್ಲಿನ ವರದಿಯನ್ನು ನೋಡಿ ಹಾಗೂ ಬಿ.ಜೆ.ಪಿಯು ತಮ್ಮ ದ್ವಂದ್ವ, ದಾರಿ ತಪ್ಪಿಸುವ ಹೇಳಿಕೆಗಳಿಗೆ, ಧರಣಿ ಹೆಸರಲ್ಲಿ ನಡೆಸುವ ಮೆಲೊ ಡ್ರಾಮಾಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯವರನ್ನು ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿಯಿಂದ ಹೆಚ್ಚು ನೋಟಿಸ್ ಎಂಬ ಪ್ತಜಾವಾಣಿಯಲ್ಲಿನ ಲೇಖನ ನೋಡಿದರೆ ಬಿ.ಜೆ.ಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗಲಿದೆ. 2,865 ಎಕರೆ ವಿಸ್ತೀರ್ಣದ ಜಮೀನನ್ನು ‘ವಕ್ಫ್ ಆಸ್ತಿ’ ಎಂದು ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಅವುಗಳ ಒತ್ತುವರಿ ತೆರವಿಗೆ ನೋಟಿಸ್ ನೀಡಲಾಗಿತ್ತು. ಬಿಎಸ್ ಯಡಿಯೂರಪ್ಪ 2000ರಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಧಿಸೂಚನೆ ಮಾಡಲಾಗಿದ್ದ ‘ವಕ್ಫ್ ಆಸ್ತಿ’ಗಳಿಗೂ ಈ ಅವಧಿಯಲ್ಲಿ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ. ಬಿಜೆಪಿ ಸರ್ಕಾರವು 1,735 ರೈತರು ಮತ್ತು ಭೂಮಾಲೀಕರಿಗೆ ನೋಟಿಸ್ ನೀಡಿತ್ತು. ಇದರ ವಿರುದ್ಧ ಕೆಲ ರೈತರು ನ್ಯಾಯಾಲಯದ ಮೊರೆಹೋಗಿ ತಡೆಯಾಜ್ಞೆ ತಂದಿದ್ದರು. ಉಳಿದ ಪ್ರಕರಣಗಳಲ್ಲಿ ಪಹಣಿಯಲ್ಲಿ ‘ವಕ್ಫ್…
ಢಾಕಾ: ಬಾಂಗ್ಲಾದೇಶದ ಹಿಂದೂ ಧಾರ್ಮಿಕ ಮುಖಂಡ, ಇಸ್ಕಾನ್ ಅರ್ಚಕ ಕೃಷ್ಣ ದಾಸ್ ಪ್ರಭು ಅವರನ್ನು ಸೋಮವಾರ ಢಾಕಾ ವಿಮಾನ ನಿಲ್ದಾಣದಲ್ಲಿ ರಾಷ್ಟ್ರದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ದೇಶವನ್ನು ತೊರೆಯದಂತೆ ನಿರ್ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲ ಇಸ್ಕಾನ್ ಪಾದ್ರಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಲಾಗಿದೆ. ರಾಜಧಾನಿಯಲ್ಲಿ ನಡೆದ ಬೃಹತ್ ಹಿಂದೂ ರ್ಯಾಲಿಯ ನಂತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂಬ ವರದಿಗಳ ಮಧ್ಯೆ ಈ ಬಂಧನ ನಡೆದಿದೆ. https://twitter.com/RadharamnDas/status/1860996238230925673 ಈ ಬಗ್ಗೆ ಟ್ವೀಟ್ ಮಾಡಿರುವ ರಾಧಾರಾಮನ್ ದಾಸ್, “ಈ ಕಷ್ಟದ ಸಮಯದಲ್ಲಿ ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ ಮತ್ತು ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂಬ ಆಘಾತಕಾರಿ ಸುದ್ದಿ ನನಗೆ ಸಿಕ್ಕಿದೆ. ದಾಸ್ ಅವರನ್ನು ಢಾಕಾ ವಿಮಾನ ನಿಲ್ದಾಣದಿಂದ ಕರೆದೊಯ್ಯಲಾಗಿದೆ ಎಂದು ಢಾಕಾ…
ಬೆಂಗಳೂರು: ರಾಜ್ಯಾಧ್ಯಂತ ರದ್ದುಗೊಂಡಿದ್ದಂತ ಅರ್ಹರ ಬಿಪಿಎಲ್ ರೇಷನ್ ಕಾರ್ಡ್ ಸಮಸ್ಯೆ ಸರಿಪಡಿಸಲಾಗಿದೆ. ಇನ್ನೂ ಕೆಲವರದ್ದು ಸರಿ ಪಡಿಸಲಾಗುತ್ತಿದೆ. ಇದೀಗ ರಾಜ್ಯಾಧ್ಯಂತ ಮತ್ತೆ ಅರ್ಹರ ಬಿಪಿಎಲ್ ಕಾರ್ಡ್ ಆ್ಯಕ್ಟೀವ್ ಮಾಡಲಾಗಿದೆ. ಹೀಗಾಗಿ ಹಿಂದಿನ ತಿಂಗಳಂತೆಯೇ ಪರಿಡತ ಧಾನ್ಯ ವಿತರಣೆಯಾಗಲಿದೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕೂಲಿ ಮಾಡುವವರು, ಬಡವರಿಗೆ ತೊಂದರೆ ಆಗಬಾರದು ಅಂತ ಅರ್ಹರ ಬಿಪಿಎಲ್ ಕಾರ್ಡ್ ಮತ್ತೆ ಆ್ಯಕ್ಟೀವ್ ಮಾಡಲಾಗಿದೆ. ಯಾರಿಗೂ ತೊಂದರೆ ಆಗೋದಿಲ್ಲ ಅಂತ ತಿಳಿಸಿದರು. ಅರ್ಹರ ಬಿಪಿಎಲ್ ಕಾರ್ಡ್ ಆ್ಯಕ್ಟೀವ್ ಆಗಿದ್ದು, ಹಿಂದಿನ ತಿಂಗಳು ಹೇಗೆ ಅಕ್ಕಿ ಸಿಗುತ್ತಿತ್ತೋ ಅದೇ ರೀತಿ ಈ ತಿಂಗಳು ಸಿಗಲಿದೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಅವರನ್ನು ಭೇಟಿ ಮಾಡುತ್ತೇನೆ. ಅಕ್ಕಿ ವಿತರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಅಂದಹಾಗೇ ರಾಜ್ಯಾಧ್ಯಂತ ಅರ್ಹರ ಬಿಪಿಎಲ್ ರೇಷನ್ ಕಾರ್ಡ್ ಸರಿ ಪಡಿಸುವಂತ ಪ್ರಕ್ರಿಯೆಯನ್ನು ಆಹಾರ ಇಲಾಖೆ ಚಾಲು ಮಾಡಿದೆ. ಸರ್ಕಾರದ ಸೂಚನೆಯಂತೆ ಅರ್ಹರ ಬಿಪಿಎಲ್…
ಮೈಸೂರು: ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದಂತ ಜಾನಪದ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಂತ ಕಂಸಾಳೆ ಮೂಲಕ ತಮ್ಮ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿ, ಗುರ್ತಿಸಿಕೊಂಡಿದ್ದಂತ ಮೈಸೂರಿನ ಕುಮಾರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಮೈಸೂರಿನ ಕಂಸಾಳೆ ಮಹಾದೇವಯ್ಯ ಅವರ ಪುತ್ರರಾಗಿ, ಅಪ್ಪನಂತೆ ಮಗನೂ ಕಂಸಾಳೆ ಕಲೆಗಾರಿಕೆಯಲ್ಲಿ ಗುರ್ತಿಸಿಕೊಂಡಿದ್ದವರು ಕಂಸಾಳೆ ಕಲಾವಿದ ಕುಮಾರಸ್ವಾಮಿ ಅವರು. ಬಾಲ್ಯದಿಂದಲೂ ತಂದೆಯ ಜೊತೆಗೆ ಜಾನಪದ ಕಲೆಯಾಗಿದ್ದಂತ ಕಂಸಾಳೆಯನ್ನು ತಾನು ಕಲಿತು, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಂಡ ಕಟ್ಟಿ ಪ್ರದರ್ಶನ ನೀಡಿದದ್ರು. 1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ್ದಂತ ಕುಮಾರಸ್ವಾಮಿ ಅವರು, ನಟ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಚಿತ್ರದ ಕೋಲು ಮಂಡೆ ಹಾಡಿನಲ್ಲಿ ಕಂಸಾಳೆ ಸಂಗೀತದ ನೃತ್ಯ ಸಂಯೋಜನೆ ಮಾಡಿದ್ದರು. ಈ ಕಾರಣಕ್ಕೆ ಡಾ.ರಾಜ್ ಕುಮಾರ್ ಹಾಗೂ ಶಇವರಾಜ್ ಕುಮಾರ್ ಅವರಿಂದ ಸೈ ಎನಿಸಿಕೊಂಡಿದ್ದರು. ರಾಜ್ಯದ ಪ್ರತಿಷ್ಠಿತ ಜಾನಪದ ಶ್ರೀ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಯನ್ನು ಪುರಸ್ಕೃತರಾಗಿದ್ದಂತ ಕುಮಾರಸ್ವಾಮಿ ಅವರು, ಇಂದು ವಿಧಿವಶರಾಗಿದ್ದಾರೆ. ಈ ಮೂಲಕ…
ಬೆಂಗಳೂರು: ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲು ನವೆಂಬರ್.28ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ: 28.11.2024 ರಂದು ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.28ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ, ಹಣಕಾಸು ಮಂಜೂರು ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದವರಿಗೆ ಬೆಂಗಳೂರು ಪೊಲೀಸರ ಶಾಕ್: 177 ಕೇಸ್ ದಾಖಲು – Kannada News | India News | Breaking news | Live news | Kannada | Kannada News | Karnataka News | Karnataka News ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ…
ಬೆಂಗಳೂರು: ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದಂತ 177 ಮಂದಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪೂರ್ವ ವಿಭಾಗದ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 21-11-2024ರಿಂದ 24-11-2024ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವ ಚಾಲಕ, ಸವಾರರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದಿದ್ದಾರೆ. ಸುಮಾರು 19,400 ವಾಹನಗಳನ್ನು ತಪಾಸಣೆ ಮಾಡಿ 177 ಪ್ರಕರಣಗಳನ್ನು ದಾಖಲು ಮಾಡವ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಜಪ್ತಿ ಪಡಿಸಿಕೊಂಡು, ಸಂಬಂಧ ಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ವಾಹನ ಸವಾವರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವ ತಿಳಿಯುವಂತೆ ಮನವಿ ಮಾಡಲಾಗಿದೆ. ಇನ್ನೂ ಸಂಚಾರ ನಿಯಮ ಮೀರುವವರ ವಿರುದ್ಧ…
ಬೆಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ಕಾಂಗ್ರೆಸ್ಸಿಗರೆಲ್ಲರೂ ಈ ಸಾರಿ ಬಿಜೆಪಿಯನ್ನು ಬೆಂಬಲಿಸಿದ್ದು, ಅದರಿಂದ ನಾವು ಗೆದ್ದೆವು ಎಂದರೆ ಡಿ.ಕೆ.ಶಿವಕುಮಾರರು ಒಪ್ಪುತ್ತಾರಾ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ಪಕ್ಷ 3 ಲೋಕ-3 ರಾಜ್ಯಗಳನ್ನು ಗೆದ್ದಂತೆ ವಿಜೃಂಭಿಸುತ್ತಿದೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಜೆಡಿಎಸ್- ಬಿಜೆಪಿ ನಾಯಕರು ತಮ್ಮನ್ನು ಬೆಂಬಲಿಸಿದ್ದಾಗಿ ಹೇಳಿದ್ದು, ಇದೊಂದು ಶುದ್ಧ ಸುಳ್ಳು ಮತ್ತು ದಾರಿ ತಪ್ಪಿಸುವ ಕೆಲಸ ಎಂದು ಖಂಡಿಸಿದರು. 3 ಕ್ಷೇತ್ರಗಳ ಗೆಲುವು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಕ್ಕೆ ಜನರು ಕೊಟ್ಟ ಲೈಸನ್ಸ್ ಅಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರರು ತಿಳಿದುಕೊಳ್ಳಲಿ ಎಂದು ತಿಳಿಸಿದರು. ಸೋತಲ್ಲೆಲ್ಲ ಇವಿಎಂ ತಿರುಚಿದ್ದಾರೆ ಎನ್ನುವ ಕಾಂಗ್ರೆಸ್ಸಿಗರಿಗೆ ಇಲ್ಲಿ 3 ಸ್ಥಾನ ಗೆದ್ದ ಮೇಲೆ ಇವಿಎಂ ತಿರುಚಿಲ್ಲ ಎಂಬ ನಂಬಿಕೆ ಬಂದಿರಬಹುದು ಎಂದು ವ್ಯಂಗ್ಯವಾಡಿದರು. ಮಹಾರಾಷ್ಟ್ರದಲ್ಲಿ…
ಬೆಂಗಳೂರು: ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟೀಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ ಎಂದಿದ್ದಾರೆ. ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದ್ದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ. ಮೇಲಾಗಿ ಸಚಿವ ಜಮರ್ ಅಹ್ಮದ್ ಖಾನ್ ಅವರು ಇದೆಲ್ಲಾ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ…
ಬೆಂಗಳೂರು: ಭಾರತ ಸಂವಿಧಾನದ 75ನೆ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಂವಿಧಾನ ದಿನವಾದ ನವೆಂಬರ್ 26ರಿಂದ ಆರಂಭವಾಗಲಿರುವ ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲಾಗುವದಲ್ಲದೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದ ತತ್ವಗಳನ್ನು ಎತ್ತಿ ತೋರಿಸಲಾಗುತ್ತದೆ, ಜೊತೆಗೆ ಸಾರ್ವಜನಿಕ ಆಸ್ತಿ, ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಸಕ್ರಿಯ ಪೌರತ್ವಕ್ಕಾಗಿ ಸಾರ್ವಜನಕರಿಗೆ ಕರೆ ನೀಡುತ್ತದೆ.ಸಂವಿಧಾನ ದಿನವನ್ನು ಆಚರಿಸಲು ಮತ್ತು ಸಾಂವಿಧಾನಿಕ ಮೌಲ್ಯಗಳ ಜಾಗೃತಿಯನ್ನು ಉತ್ತೇಜಿಸಲು, ಕರ್ನಾಟಕದಾದ್ಯಂತ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಸಂವಿಧಾನ ಸಾಕ್ಷರತಾ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಸಂವಿಧಾನದ ಮೂಲ ಮೌಲ್ಯಗಳೊಂದಿಗೆ ಸಂಪರ್ಕ ಸಾಧಿಸಲು ನಾಗರಿಕರನ್ನು ಪ್ರೇರೇಪಿಸುವಂತೆ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದ್ದು ಸಂವಿಧಾನದ ಸುಸ್ಥಿರತೆ, ಸಾಂಸ್ಕೃತಿಕ…
ನವದೆಹಲಿ: ಮೆಟಾ ಒಡೆತನದ ವೆಬ್ ಆಧಾರಿತ ಮೆಸೇಜಿಂಗ್ ಸೇವೆಯಾದ ವಾಟ್ಸಾಪ್ ವೆಬ್ ಹಲವಾರು ಬಳಕೆದಾರರ ಮೇಲೆ ಪರಿಣಾಮ ಬೀರುವ ಸ್ಥಗಿತವನ್ನು ಅನುಭವಿಸುತ್ತಿದೆ. ಸಂದೇಶಗಳನ್ನು ಕಳುಹಿಸಲು ಅಥವಾ ವಾಟ್ಸಾಪ್ ವೆಬ್ ಸರ್ವರ್ಗಳಿಗೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಅಡೆತಡೆಗಳನ್ನು ವರದಿ ಮಾಡಲು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ತೆಗೆದುಕೊಂಡಿದ್ದಾರೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಪ್ರಾರಂಭವಾದ ಸಮಸ್ಯೆ ಒಂದು ಗಂಟೆಗೂ ಹೆಚ್ಚು ಸಮಯದ ನಂತರ ಸಮಸ್ಯೆ ಆಗಿದೆ. ಆನ್ಲೈನ್ ಸೇವಾ ಅಡೆತಡೆಗಳನ್ನು ಪತ್ತೆಹಚ್ಚುವ ವೆಬ್ಸೈಟ್ ಡೌನ್ಡೆಟೆಕ್ಟರ್ ಪ್ರಕಾರ, ಭಾರತದ ಬಳಕೆದಾರರು ಸೋಮವಾರ ಬೆಳಿಗ್ಗೆ ವಾಟ್ಸಾಪ್ ವೆಬ್ನಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಇದು ವಿವಿಧ ಬ್ರೌಸರ್ಗಳಲ್ಲಿ ಚಾಟ್ ಅಪ್ಲಿಕೇಶನ್ನ ವೆಬ್ ಆವೃತ್ತಿಯನ್ನು ಪ್ರವೇಶಿಸಲು ತೊಂದರೆಗಳನ್ನು ಸೂಚಿಸುತ್ತದೆ. ಬರೆಯುವ ಸಮಯದಲ್ಲಿ, 57 ಪ್ರತಿಶತದಷ್ಟು ಬಳಕೆದಾರರು ವಾಟ್ಸಾಪ್ ವೆಬ್ ಅನ್ನು ಪ್ರವೇಶಿಸುವ ಸಮಸ್ಯೆಗಳನ್ನು ವರದಿ ಮಾಡಿದರೆ, 34 ಪ್ರತಿಶತದಷ್ಟು ಬಳಕೆದಾರರು ಮೊಬೈಲ್ ಅಪ್ಲಿಕೇಶನ್ನಲ್ಲಿ ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಈ ಸ್ಥಗಿತವು ಅಪ್ಲಿಕೇಶನ್ನ ಆಂಡ್ರಾಯ್ಡ್ ಅಥವಾ ಐಒಎಸ್ ಆವೃತ್ತಿಗಳ ಮೇಲೆ…














