Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ. ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿಂಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ. ಅ.15 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸುವ ಸಂಬಂಧ ಅ.15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಸಭೆಯ ಅಧ್ಯಕ್ಷತೆ ವಹಿಸುವರು. ಸಮಾಜದ ಮುಖಂಡರು, ಸಾರ್ವಜನಿಕರು, ಜಿಲ್ಲಾ ಮಟ್ಟದ…
ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು. ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ಪೂರೈಕೆಯಾಗಲಿದ್ದು, ಮೂಲೆಮೂಲೆಗೂ ಕಾವೇರಿ ನೀರು ಸರಬರಾಜಾಗಲಿದೆ. ಇದರಿಂದ ಹೆಚ್ಚುವರಿಯಾಗಿ 50ಲಕ್ಷ ಜನರು ಇದರ ಸದುಪಯೋಗಪಡೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು,ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರಿಂದ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಇಂದು ಬೆಳಗ್ಗೆ…
ಬೆಂಗಳೂರು: ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರು ಐದು ವರ್ಷ ಇರ್ತಾರೋ ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿರುವಂತ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಸೃಷ್ಠಿಸಿದೆ. ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹಲವು ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ನಿವಾಸ ಈಗ ಕೇಂದ್ರ ಬಿಂದುವಾಗಿದೆ. ಅವರನ್ನು ಕಾಂಗ್ರೆಸ್ ನ ಪ್ರಮುಖ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿ ಶಂಕರ್ ಸೇರಿದಂತೆ ಹಲವರು ಭೇಟಿ ಮಾಡಿದ್ದು, ತೀವ್ರ ಕುತೂಹಲವನ್ನೇ ಉಂಟು ಮಾಡಿದೆ. ಸಚಿವ ಜಾರಕಿಹೊಳಿ ಸಿದ್ಧರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಲೇ, ಅವರು ಐದು ವರ್ಷ ಇರ್ತಾರೋ, ಮೂರು ವರ್ಷ ಇರ್ತಾರೋ ಗೊತ್ತಿಲ್ಲ ಎಂಬುದಾಗಿ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಠಿಸಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದಾರಾ ಎಂಬ…
ಮಡಿಕೇರಿ :-ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುಲಾ ಸಂಕ್ರಮಣ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ತ್ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/farmers-note-applications-invited-for-availing-various-benefits-under-krishi-bhagya-scheme/ https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/
ಧಾರವಾಡ ; 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bbmp-to-release-draft-selection-list-for-12692-pourakarmika-posts-tomorrow/ https://kannadanewsnow.com/kannada/dont-invite-such-illiterates-again-pakistanis-slam-govt-for-honouring-zakir-naik/
BREAKING: ನಾಳೆ BBMPಯಿಂದ ‘12,692 ಪೌರಕಾರ್ಮಿಕರ ಹುದ್ದೆ’ಗಳ ಕರಡು ಆಯ್ಕೆ ಪಟ್ಟಿ ಪ್ರಕಟ | BBMP Recruitment 2024
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪ್ರಕಟಗೊಳಿಸಲಾಗುತ್ತಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿರುತ್ತಾರೆ. ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3673 ಹಾಗೂ ಎರಡನೇ ಹಂತದಲ್ಲಿ 11307 ಹುದ್ದೆಗಳು ಸೇರಿದಂತೆ ಒಟ್ಟು 14980 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾಗಿದ್ದು, ಇದರಲ್ಲಿ ನಿಯಮಾನುಸಾರ 12692 ಅರ್ಹ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ವಿಭಾಗದಲ್ಲಿ ನೇರ ಪಾವತಿಯಡಿ(ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಒಟ್ಟು 15,000ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು, ದೀರ್ಘಾವಧಿ ಸೇವೆ, ರೋಸ್ಟರ್ ಪದ್ದತಿ ಹಾಗೂ ವಿವಿಧ ಮಾನದಂಡಗಳ ಆಧಾರದ ಮೇಲೆ…
ಬೆಂಗಳೂರು: ಗ್ರೂಪ್ ʼಸಿʼ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಮತ್ತು ಸ್ಥಳೀಯ ವೃತ್ತ ಪತ್ರಿಕೆಗಳಲ್ಲಿ ಪ್ರಕಟಣೆ ಮಾಡುವುದರ ಮೂಲಕ ತುಂಬಲಾಗುತ್ತಿದೆ ಎನ್ನುವ ಲಿಖಿತ ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಎಚ್.ಎ.ಎಲ್.ನ ಹಿರಿಯ ಅಧಿಕಾರಿಗಳು ಈಗ ಸಂಸ್ಥೆಯ ನೇಮಕಾತಿಯಲ್ಲಿ ಈ ಎಲ್ಲ ಭರವಸೆಗಳನ್ನು ಗಾಳಿಗೆ ತೂರಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ನಿರಾಕರಿಸಿದ್ದಾರೆ. ಇದು ಸರ್ಕಾರವನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಇಂದು ಎಚ್.ಎ.ಎಲ್.ನ ಕೇಂದ್ರೀಯ ಕನ್ನಡ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಡಾ.ಬಿಳಿಮಲೆ, ಸಂಸ್ಥೆಯ ಆಡಳಿತದಲ್ಲಿ ಕನ್ನಡಕ್ಕೆ ಪ್ರಾತಿನಿಧ್ಯವನ್ನು ಕಲ್ಪಿಸುವ ಕುರಿತಂತೆ ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನೀಡಿರುವ ಸೂಚನೆಗೆ ಪ್ರತಿಕ್ರಿಯಿಸಿರುವ ಎಚ್.ಎ.ಎಲ್.ನ ಸಂಸ್ಥೆಯ ಅಪರ ಪ್ರಧಾನ ವ್ಯವಸ್ಥಾಪಕರು ಸಂಸ್ಥೆಯ ಗ್ರೂಪ್ ʼಸಿʼ ಮತ್ತು ʼಡಿʼ ವೃಂದದ ಹುದ್ದೆಗಳಲ್ಲಿ ಶೇ.90ಕ್ಕೂ ಹೆಚ್ಚಿನ ಉದ್ಯೋಗಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದು, ಈ ವೃಂದಗಳ ನೇಮಕಾತಿಗಳಲ್ಲಿ ಸ್ಥಳೀಯರಿಗೆ ಸಂಪೂರ್ಣ ಅವಕಾಶವನ್ನು…
ಕಲಬುರಗಿ : ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುವತ್ತ ದಾಪುಗಾಲು ಹಾಕುತ್ತಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹರಿಯಾಣದಲ್ಲಿ ಬಿಜೆಪಿ ದೂಳೀಪಟ ಆಗುವುದಾಗಿ ವಿಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಕಾಂಗ್ರೆಸ್ ಪಕ್ಷ ಅಧಿಕಾರ ಗಳಿಸುವ ಭ್ರಮೆಯಲ್ಲಿತ್ತು. ಎಲ್ಲ ಪಿತೂರಿಗಳ ನಡುವೆ ಅದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮತ್ತೆ ಜಯಭೇರಿ ಸಂತಸದ ಸಂಗತಿ ಎಂದು ತಿಳಿಸಿದರು. ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ, ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದ ಬಳಿಕ ಚುನಾವಣೆ ನಡೆದಿದೆ. ಅಭಿವೃದ್ಧಿ ಕೆಲಸಗಳೂ ಆಗುತ್ತಿದ್ದು, ಬಿಜೆಪಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದೆ ಎಂದರು. ಕಾಂಗ್ರೆಸ್ ಮುಖಂಡರ ವಿರೋಧದ ನಡುವೆ ಜಾತಿಗಣತಿ ಮಂಡನೆ ರಾಜ್ಯ ಸರಕಾರಕ್ಕೆ ಜಾತಿ ಗಣತಿ ಮಾಡಲು ಅವಕಾಶ ಇದೆಯೇ? ಎಂಬುದು ಮೊದಲ ಯಕ್ಷ ಪ್ರಶ್ನೆ. 5 ವರ್ಷಗಳ ಕಾಲ ತಾವು ಮುಖ್ಯಮಂತ್ರಿ ಆಗಿ ಇದ್ದಿರಿ. ನಿಮ್ಮ ಅವಧಿಯಲ್ಲಿ 165 ಕೋಟಿ ಖರ್ಚು…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…












