Author: kannadanewsnow09

ಎಡುಲಪುರಂ: ಗುಸ್ಸಾಡಿ ನೃತ್ಯಗಾರ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕನಕರಾಜು ಸೋಮವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದ ನಂತರ ಅವರು ಕುಮುರಂಭೀಮ್ ಜಿಲ್ಲೆಯ ಜೈನೂರ್ ಮಂಡಲದ ಮಾರ್ಲವಾಯಿಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಗುಸ್ಸಾಡಿ ನೃತ್ಯಕ್ಕೆ ರಾಷ್ಟ್ರೀಯ ಮಾನ್ಯತೆ ತಂದುಕೊಟ್ಟಿದ್ದಕ್ಕಾಗಿ 2021 ರಲ್ಲಿ ಕೇಂದ್ರ ಸರ್ಕಾರವು ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿತು. ಕನಕರಾಜು ಅವರ ಅಂತ್ಯಕ್ರಿಯೆ ಶನಿವಾರ ಮಾರ್ಲವಾಯಿಯಲ್ಲಿ ಆದಿವಾಸಿ ಸಂಪ್ರದಾಯದಂತೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿನ ಪತಂಜಲಿ ಸೇರಿದಂತೆ ಬರೋಬ್ಬರಿ 230 ತುಪ್ಪದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವುಗಳಲ್ಲಿ ಯಾವುದರಲ್ಲೂ ದನದ ಕೊಬ್ಬಿನ ಅಂಶ ಪತ್ತೆಯಾಗಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಆಹಾರ ಗುಣಮಟ್ಟದ ವಿಚಾರದಲ್ಲಿ ಇತ್ತಿಚೆಗೆ ಹಲವು ಬಿಗಿ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಆಹಾರ ತಯಾರಕರಿಗೆ ತೊಂದರೆ ಕೊಡುವ ಉದ್ದೇಶದಿಂದಲ್ಲ. ಬದಲಿಗೆ ನಮ್ಮ ಜನರಲ್ಲಿ ಅರಿವು ಮೂಡಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.‌ ಶುದ್ಧವಾದ ಆಹಾರ ಸೇವನೆಯಿಂದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಹೀಗಾಗಿ ಆಹಾರ ಕಲಬೆರಕೆಯ ನಿರ್ಮೂಲನೆಗಾಗಿ ಕೈ ಜೋಡಿಸುವಂತೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಿರುಪತಿ ಲಡ್ಡುವಿನ ಪ್ರಕರಣದ ಹಿನ್ನೆಲೆಯಲ್ಲಿ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನಗಳು ತಲೆದೂರಿದ್ದವು. ದನ ಮಾಂಸದ ಕೊಬ್ನಿನಾಂಶ ಬಳಸುತ್ತಿದ್ದಾರೆ ಎಂಬುದು ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಪತಂಜಲಿ ಸೇರಿದಂತೆ 230 ಬಗೆಯ ತುಪ್ಪಗಳನ್ನ ಪರೀಕ್ಷಿಸಲಾಗಿದ್ದು, ಯಾವುದೇ ತುಪ್ಪವು ಅನ್ ಸೇಫ್ ಎಂದು…

Read More

ಕಿತ್ತೂರು : ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯಲ್ಲಿ ಉದ್ಘಾಟಿಸಿದರು. ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ‌ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲಾಗದು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿದರು. ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಸ್ಎಂವಿಟಿ ಬೆಂಗಳೂರಿನಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆ ಅಕ್ಟೋಬರ್ 26 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ದಿಂದ ಹೌರಾಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ 06288) ಓಡಿಸಲಿದೆ. ಈ ರೈಲು ಅಕ್ಟೋಬರ್ 26 ರಂದು ಎಸ್ಎಂವಿಟಿ ಬೆಂಗಳೂರಿನಿಂದ 21:15 ಗಂಟೆಗೆ ಹೊರಟು, ಹೌರಾ ನಿಲ್ದಾಣವನ್ನು ಅಕ್ಟೋಬರ್ 28 ರಂದು 07:30 ಗಂಟೆಗೆ ತಲುಪಲಿದೆ. ಇದು ಧರ್ಮಾವರಂ ಜಂ, ಡೋನ್ ಜಂ, ನಂದ್ಯಾಲ್ ಜಂ, ದಿಗುವಮೆಟ್ಟ, ಗುಂಟೂರು ಜಂ, ವಿಜಯವಾಡ ಜಂ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ ಜಂ, ಖುರ್ದಾ ರೋಡ್ ಜಂ, ಭುವನೇಶ್ವರ, ಕಟಕ್, ಭದ್ರಾಕ್ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು 22 ಬೋಗಿಗಳನ್ನು ಹೊಂದಿರುತ್ತದೆ. ಡಾನಾ ಚಂಡಮಾರುತದ ಎಫೆಕ್ಟ್: ಡುರೊಂಟೊ ಎಕ್ಸ್‌ಪ್ರೆಸ್ ರೈಲು…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ಇಲಾಖೆಯ ಅಧಿಕಾರಿ, ನೌಕರರು ಮತ ನೀಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರಂದು ನಡೆಯುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ. ದಯವಿಟ್ಟು ತಮಗೆ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಸದುದ್ದೇಶಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧೆ NPS, TO, OPS ಹೋರಾಟಗಳಲ್ಲಿ ಇಲಾಖೆ ನೌಕರರ…

Read More

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಸಾಲು ಸಾಲು ರಜೆಯ ಕಾರಣದಿಂದಾಗಿ ಖಾಸಗಿ ಬಸ್ ಗಳು ದುಬಾರಿ ದರವನ್ನು ಏರಿಕೆ ಮಾಡಿ, ಪ್ರಯಾಣಿಕರಿಗೆ ಬರೆ ಎಳೆಯೋದು ಸರ್ವೇ ಸಾಮಾನ್ಯ. ಇದಕ್ಕೂ ಮುಚ್ಚೆಯೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ಇಲಾಖೆಯು, ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ಗಳು ದರ ಹೆಚ್ಚಿಸುವಂತಿಲ್ಲ. ನಿಯಮ ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಬಂಧ ಪತ್ರಿಕಾ ಸಾರಿಗೆ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ಪ್ರಯಾಣದ ದರವನ್ನು ಹೆಚ್ಚಿಸುವಂತಿಲ್ಲ. ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಗಳ ಬುಕ್ಕಿಂಗ್ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ. ಖಾಸಗಿ ಬಸ್ ನಿಲ್ದಾಣಗಳಲ್ಲೂ ಸಾರಿಗೆ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗಲಿದ್ದಾವೆ ಎಂಬುದಾಗಿ ತಿಳಿಸಿದೆ. ಖಾಸಗಿ ಬಸ್ ಮಾಲೀಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದರೇ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಖಾಸಗಿ ಬಸ್ ರಹದಾರಿ ಸೇರಿದಂತೆ ಲೈಸೆನ್ಸ್…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯ ನಂತ್ರ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸೇಫ್ ಆಗಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ-ಹೊಸೂರು ಮುಖ್ಯ ರಸ್ತೆಯಲ್ಲಿ ಇಂದು ಈ ಅಗ್ನಿ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೇ, ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಪ್ರಯಾಣಿಕರು ಬಸ್ ಇಳಿದು ಓಡಿ ಹೋಗುತ್ತಿದ್ದಂತೆ ನಡು ರಸ್ತೆಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೊಮ್ಮನಹಳ್ಳಿ – ಹೊಸೂರು ಹೆದ್ದಾರಿಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದ್ದರಿಂದ ಟ್ರಾಫಿಕ್ ಜಾಮ್ ಆಗಿದೆ. ಕಿಲೋಮೀಟರ್ ಗಟ್ಟಲೇ ವಾಹನಗಳು ಟಾರ್ಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/ https://kannadanewsnow.com/kannada/71388-applications-received-for-registration-of-births-and-deaths-at-bapuji-seva-kendras/

Read More

ಬೆಂಗಳೂರು: ದೀಪಾವಳಿ ಮತ್ತು ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರ್ಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07373/07374 ಎಸ್ಎಸ್ಎಸ್ ಹುಬ್ಬಳ್ಳಿ-ಮುಜಾಫರಪುರ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್) ಅಕ್ಟೋಬರ್ 27 ರಂದು ರೈಲು ಸಂಖ್ಯೆ 07373 ಹುಬ್ಬಳ್ಳಿಯಿಂದ ಸಂಜೆ 5:20 ಗಂಟೆಗೆ ಹೊರಟು, ಮುಜಫರ್‌ಪುರ ನಿಲ್ದಾಣವನ್ನು ಅಕ್ಟೋಬರ್ 29 ರಂದು ಸಂಜೆ 4 ಗಂಟೆಗೆ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಅಕ್ಟೋಬರ್ 30 ರಂದು ರೈಲು ಸಂಖ್ಯೆ 07374 ಮುಜಫರ್‌ಪುರದಿಂದ ಮಧ್ಯಾಹ್ನ 1:15 ಗಂಟೆಗೆ ಹೊರಟು, ಹುಬ್ಬಳ್ಳಿ ನಿಲ್ದಾಣಕ್ಕೆ ನವೆಂಬರ್ 1 ರಂದು ಬೆಳಿಗ್ಗೆ 10:30 ಗಂಟೆಗೆ ಆಗಮಿಸಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ ಪುಣೆ,…

Read More

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೇಟ್ ಗಳಲ್ಲೂ ಗುಣಮಟ್ಟ ಪರೀಕ್ಷೆಗೆ ರ‌್ಯಾಪಿಡ್ ಟೆಸ್ಟಿಂಗ್ ಕಿಟ್ ಅಳವಡಿಕೆ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರ‌್ಯಾಪಿಟ್ ಟೆಸ್ಟಿಂಗ್ ಕಿಟ್ಸ್ ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಪರೀಕ್ಷಾ ವಿಧಾನವನ್ನ ಪರಿಶೀಲಿಸಿದ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್ ಗೆ ಮುಂದಾಗುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬ ಸಾಮಾಜಿಕ ಬಳಕೆದಾರರು‌ ಮಾಡಿರುವ ಟ್ಟೀಟ್ ಈಗ ಎಲ್ಲರ ಗಮನ ಸೆಳೆದಿದೆ. ಕೋರಮಂಗಲ ಹೇಗೆ ಮಳೆಯ ಅನಾಹುತದಿಂದ ಪರಿಹಾರ ಕಂಡುಕೊಂಡಿದೆ ಎಂಬುದಾಗಿ ಟ್ವಿಟ್ ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಸವಿವರವಾಗಿ ವಿವರಿಸಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕೋರಮಂಗಲ, ST BED, ಈಜಿಪುರ, ರಾಜೇಂದ್ರ ನಗರ, National Games Village ಮತ್ತು ವೆಂಕಟೇಶ್ವರ ಬಡಾವಣೆ ಮಡಿವಾಳ, ಪ್ರದೇಶಗಳಲ್ಲಿ ಮಳೆ ಬಂತೆಂದರೆ ಅಕ್ಷರಶಃ ನರಕ ಸದೃಶ ದೃಶ್ಯ ಕಾಣಸಿಗುತ್ತಿತ್ತು. ಕಳೆದ 20 ವರ್ಷಗಳ ಹಿಂದೆಯೇ ಸಮಸ್ಯೆಗೆ ಪರಿಹಾರ ಕಂಡುಕೊಂಡ ರೀತಿ ಇತರರಿಗೆ ಮಾದರಿಯಾಗಿದೆ. ಒಬ್ಬ ಜನಪ್ರತಿನಿಧಿ ಯಾವ ರೀತಿ ತನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಜಲ್ವಂತ ಉದಾಹರಣೆ ರಾಮಲಿಂಗಾ ರೆಡ್ಡಿ ಅವರ ವಿಧಾನಸಭಾ ಕ್ಷೇತ್ರ. ಜನರಿಗೆ ಬಹುಮುಖ್ಯವಾಗಿ ಬೇಕಾಗಿರುವುದು ವಸತಿ ಸೌಲಭ್ಯ, ಸುಸಜ್ಜಿತ ರಸ್ತೆ, ಗುಣಮಟ್ಟದ ಶಿಕ್ಷಣ ಇವೆಲ್ಲವುಗಳು ಒಂದೇ ಕ್ಷೇತ್ರದಲ್ಲಿ ವ್ಯವಸ್ಥಿತವಾಗಿ ಜನರಿಗೆ ಸಿಗುವಂತೆ ಮಾಡಿರುವ ಹೆಗ್ಗಳಿಕೆ ರಾಮಲಿಂಗಾರೆಡ್ಡಿ ಅವರದ್ದು.…

Read More