Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನೆಟ್ಫ್ಲಿಕ್ಸ್ ನಂತರ, ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಡಿಸ್ನಿ + ಬಳಕೆದಾರರನ್ನು ಪಾಸ್ವರ್ಡ್ ಹಂಚಿಕೆಯಿಂದ ನಿರ್ಬಂಧಿಸಲು ಹೊಸ ನೀತಿಗಳನ್ನು ತರುವ ಮೂಲಕ ಸುದ್ದಿಯಲ್ಲಿದೆ. ಈ ನೀತಿಯು ಬಳಕೆದಾರರು ತಮ್ಮ ಪಾಸ್ವರ್ಡ್ಗಳನ್ನು ತಮ್ಮ ಮನೆಯ ಹೊರಗೆ ಹಂಚಿಕೊಳ್ಳುವುದನ್ನು ನಿರ್ಬಂಧಿಸುತ್ತದೆ ಎಂದು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ದೃಢಪಡಿಸಿದ್ದರೂ, ದಮನ ಯಾವಾಗ ಪ್ರಾರಂಭವಾಗುತ್ತದೆ ಎಂಬುದಕ್ಕೆ ಸ್ಪಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ. ಆದಾಗ್ಯೂ, ಈಗ ನಮಗೆ ತಿಳಿದಿದೆ. ಸಿಎನ್ಬಿಸಿಗೆ ನೀಡಿದ ಸಂದರ್ಶನದಲ್ಲಿ, ಡಿಸ್ನಿ ಸಿಇಒ ಬಾಬ್ ಐಗರ್ ಕಂಪನಿಯು ಜೂನ್ 2024 ರಲ್ಲಿ “ಪಾಸ್ವರ್ಡ್ ಹಂಚಿಕೆಗೆ ನಮ್ಮ ಮೊದಲ ನಿಜವಾದ ಪ್ರವೇಶವನ್ನು ಪ್ರಾರಂಭಿಸಲು” ಯೋಜಿಸುತ್ತಿದೆ ಎಂದು ಬಹಿರಂಗಪಡಿಸಿದರು. ಸಿಇಒ ಬಾಬ್ ಐಗರ್ ಘೋಷಿಸಿದ ಈ ಕ್ರಮವು ಡಿಸ್ನಿಯ ಸ್ಟ್ರೀಮಿಂಗ್ ಆದಾಯವನ್ನು ಹೆಚ್ಚಿಸಲು ಮತ್ತು ಲಾಭದಾಯಕತೆಯನ್ನು ಸಾಧಿಸುವ ಕಂಪನಿಯ ಪ್ರಯತ್ನಗಳಿಗೆ ಅನುಗುಣವಾಗಿದೆ. ಡಿಸ್ನಿಯ ಲಾಭದ ಗುರಿಗಳಲ್ಲಿ ಸ್ಟ್ರೀಮಿಂಗ್ ವಹಿಸುವ ಮಹತ್ವದ ಪಾತ್ರವನ್ನು ಐಗರ್ ಒತ್ತಿ ಹೇಳಿದರು. ಇದನ್ನು ಸಾಧಿಸಲು, ಪಾಸ್ ವರ್ಡ್ ಹಂಚಿಕೆಯನ್ನು ತೆಗೆದುಹಾಕುವುದು ನಿರ್ಣಾಯಕ ತಂತ್ರವೆಂದು ಪರಿಗಣಿಸಲಾಗಿದೆ. ಕಂಪನಿಯು ತನ್ನ ಆರಂಭಿಕ…
ಮಂಡ್ಯ : ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡಿ ನೂರಾರು ಎಕರೆ ಆಸ್ತಿ ಪಾಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಮದ್ದೂರು ಶಾಸಕ ಕೆಂಡಾಮಂಡಲವಾದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆಯಷ್ಟೇ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಎಲ್ಲೋ ಲೂಟಿ ಮಾಡ್ಕೋಂಡು ಬಂದು ಇಲ್ಲಿ ಜನಸೇವೆ ನಾಟಕ ಮಾಡ್ತಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದರು. ಈ ವಿಚಾರವಾಗಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ದೊಡ್ಡರಸಿನಕೆರೆ ಗ್ರಾಮದಲ್ಲಿ ಯಾರಾದ್ರೂ ರಾಜ ವಂಶಸ್ಥರು ಇದ್ರ, ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡಿ ಬೆಂಗಳೂರು, ಬಿಡದಿ, ಮೈಸೂರು,…
ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮಾಲೀಕ ಮುಖೇಶ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಜಾಲೀಸಾ ಹಾಕಿದ ಕಾರಣ, ಕಿಡಿಗೇಡಿಗಳು ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಲಾಗಿತ್ತು. ಈ ಬಳಿಕ ಕೋರ್ಟ್ ನಿರ್ದೇಶನದ ಮೇರೆಗೆ ಬಂಧನಕ್ಕೆ ಒಳಗಾದ ಸುಲೇಮಾನ್ ತಾಯಿ ಮುಖೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಮುಖೇಶ್ ವಿರುದ್ಧ ಐಪಿಸಿ ಸೆಕ್ಷನ್ 506, 504ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/rameswaram-cafe-bomb-blast-case-nia-arrests-bjp-activist/ https://kannadanewsnow.com/kannada/the-first-phase-of-lok-sabha-elections-will-begin-today-with-house-to-house-voting/
ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಗುರುವಾರ ರಾತ್ರಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಹಿಮಾಚಲ ಪ್ರದೇಶದ ಚಂಬಾದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. https://twitter.com/ANI/status/1775923539272757626
ಬೆಂಗಳೂರು: ಬರದ ವಿಚಾರದಲ್ಲಿ ಕರ್ನಾಟಕಕ್ಕೆ ಒಂದು ರೂಪಾಯಿಯನ್ನು ಕೊಡದ ಕೇಂದ್ರ ಸರ್ಕಾರ ಇಂದು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿದ ಸಚಿವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರಪರಿಹಾರದ ವಿಚಾರದಲ್ಲಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿವಾರ್ಯವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಮಿತ್ ಶಾ ಅವರು ತಾವು ಆಡಿದ ಮಾತುಗಳನ್ನೇ ಸುಪ್ರೀಂ ಕೋರ್ಟ್ ಮುಂದೆ ಅಫಿಡೆವಿಟ್ ರೂಪದಲ್ಲಿ ಸಲ್ಲಿಸಲಿ ಎಂದು ಸವಾಲು ಹಾಕಿದರು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಸ್ಪಷ್ಟ. ಸತ್ಯಾಂಶ ಜನರಿಗೆ ಗೊತ್ತಿದೆ. ಒಂದು ರೂಪಾಯಿ ಕೊಡದೇ ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರು ಕರ್ನಾಟಕದ ಜನರ ಮುಂದೆ ಸುಳ್ಳು ನೆಪಗಳನ್ನ ಹೇಳಿತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಕೇಂದ್ರದ ತೆರಿಗೆ ಪಾಲಿನಲ್ಲಿ…
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (Reserve Bank of India -RBI) ಹಣಕಾಸು ನೀತಿ ಸಮಿತಿ (Monetary Policy Committee -MPC) ತನ್ನ ಬಹುನಿರೀಕ್ಷಿತ ನೀತಿ ಹೇಳಿಕೆಯನ್ನು ನಾಳೆ (ಏಪ್ರಿಲ್ 5) ಬಿಡುಗಡೆ ಮಾಡಲಿದೆ. ಇದು ಪ್ರಸಕ್ತ ಹಣಕಾಸು ವರ್ಷದ ಮೊದಲ ಘೋಷಣೆಯಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಸಮಿತಿಯು ಏಪ್ರಿಲ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೇಳಿಕೆಯನ್ನು ಪ್ರಕಟಿಸಲಿದೆ. ಸಮಿತಿಯು ರಾಷ್ಟ್ರದ ವಿತ್ತೀಯ ನೀತಿ ಮತ್ತು ಸಾಲದ ದರಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಇದು ಸಮಿತಿಯ ಮೊದಲ ದ್ವೈಮಾಸಿಕ ಪರಿಶೀಲನೆಯಾಗಿದ್ದು, ಇದರ ಪ್ರಕಾರ ಬಡ್ಡಿದರಗಳಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಆರ್ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ ಏಪ್ರಿಲ್ 3 ರಂದು ಮೂರು ದಿನಗಳ ಚರ್ಚೆಯನ್ನು ಪ್ರಾರಂಭಿಸಿತು. ಸಮಿತಿ ಸಭೆ ಸೇರಿದ ನಂತರ ಏನಾಗುತ್ತದೆ? ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿಕೆಯನ್ನು ಪ್ರಕಟಿಸಲಿದ್ದಾರೆ. ನೀತಿ ವಿವರಗಳ ಬಗ್ಗೆ ಮಾತನಾಡಲು…
ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಚುನಾನಣಾ ಪ್ರಚಾರದ ನಡುವೆಯೇ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲವಾಗಿ ಎಸ್ಟಿ ಮೀಸಲಾತಿ ಹೆಚ್ಚಳವಾಗಿದೆ ಎಂದು ಹೇಳಿದರು. ಬೆಳಿಗ್ಗೆ ಟೆಂಪಲ್ ರನ್ ಆರಂಭಿಸಿದ ಅವರು ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸ್ ಕ್ರಾಸ್ ಬಳಿ ಇರುವ ಗಾಯತ್ರಿ ತಪೋ ಭೂಮಿಗೆ ಭೇಟಿ ನೀಡಿದರು. ಅಲ್ಲಿಂದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಿ, ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…
ಮಂಡ್ಯ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ 2500 ರೂ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಕಂದಾಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ವೃತ್ತದ ವಿಎ ಸಿದ್ಧರಾಯ ಮಾಳಿ ಅವರು, ವಡ್ಡರಹಳ್ಳಿಯ ಶಿವಕುಮಾರ್ ಎಂಬುವರಿಗೆ ಆರ್ ಟಿಸಿಯಲ್ಲಿನ ಸಾಲದ ವಿವರಗಳನ್ನು ತೆಗೆದು ಹಾಕಲು 3000 ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಹೀಗಾಗಿ ವಿಎ ಸಿದ್ದರಾಯ ಮಾಳಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ ರೂ.2,500 ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ಸಂಬಂಧ ಸಿಆರ್ ಸಂಖ್ಯೆ 7/2024ಯು / ಎಸ್ 7 (ಎ) ಪಿಸಿ ಕಾಯ್ದೆ (ತಿದ್ದುಪಡಿ) 2018 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ. https://kannadanewsnow.com/kannada/note-time-till-april-9-for-inclusion-of-names-in-electoral-rolls/ https://kannadanewsnow.com/kannada/state-govt-should-show-manhood-by-providing-drought-relief-from-its-treasury-bommai/
ಮನುಷ್ಯನು ಹುಟ್ಟಿದ ನಂತರ ಶ್ರೀಮಂತನಾಗಲು ಮಹಾಲಕ್ಷ್ಮಿ ಅನುಗ್ರಹ ಖಂಡಿತವಾಗಿ ಬೇಕು. ತಾಯಿ ಲಕ್ಷ್ಮೀದೇವಿಗೆ ಶುಭ್ರತೆ ಎಂದರೆ ಬಹಳ ಇಷ್ಟ , ಆದ್ದರಿಂದ ಸದಾಕಾಲದಲ್ಲೂ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಕ್ಷ್ಮಿ ದೇವಿಗೆ ಸಂಬಂಧಪಟ್ಟ ವಸ್ತುಗಳನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಉದಾಹರಣೆಗೆ ಕಸಗುಡಿಸುವ ಪೊರಕೆ, ರುಬ್ಬುವ ಕಲ್ಲು, ಮನೆಯ ಮುಖ್ಯದ್ವಾರದ ಹೊಸ್ತಿಲು. ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ.…
ಹಾವೇರಿ: ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ಬಿಡುಗಡೆ ಮಾಡಿ ತನ್ನ ಗಂಡಸ್ತನ ತೋರಿಸಲಿ, ನಾವು ಅಧಿಕಾರದಲ್ಲಿದ್ದಾಗ ಪ್ರವಾಹಕ್ಕೆ ಎರಡು ಪಟ್ಟು ಪರಿಹಾರ ನೀಡಿ ನಮ್ಮ ಗಂಡಸ್ತನ ತೋರಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ನೋಡಿ, ಈಗ ಸದ್ಯ ಗಂಡಸ್ಥನ ಟೆಸ್ಟ್ ಆಗೋದು ಯಾರು ಅಧಿಕಾರದಲ್ಲಿದ್ದಾರೆ ಅವರದ್ದು, ಸಿದ್ದರಾಮಯ್ಯರನ್ನು ಜನ ಅಧಿಕಾರಕ್ಕೆ ತಂದಿದ್ದಾರೆ. ಅಧಿಕಾರಕ್ಕೆ ತಂದ ಮಾಲೀಕರು ಕಷ್ಟದಲ್ಲಿದ್ದಾರೆ. ಅವರ ಕಷ್ಟಕ್ಕೆ ಧಾವಿಸುವುದು ಅವರ ಕೆಲಸ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಯಾರಿಗೂ ಕಾಯದೇ ಪ್ರವಾಹ ಪರಿಹಾರ ಎರಡು ಪಟ್ಟು ಬಿಡುಗಡೆ ಮಾಡಿದ್ದೇವೆ 17 ಲಕ್ಷ ಜನರಿಗೆ ಪರಿಹಾರ…