Author: kannadanewsnow09

ವಿಜಯಪುರ: ಭೀಮಾತೀರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಇನ್ನೋವಾ ಕಾರು ಹತ್ತಿಸಿ ವಕೀಲನನ್ನು ಕಿಲೋಮೀಟರ್ ದೂರದವರೆಗೆ ಹೊತ್ತೊಯ್ದು, ಸತ್ತ ಮೇಲೆ ಕಾರು ಸಹಿತ ಪರಾರಿಯಾಗಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಜಲಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಂತ ಭೀಮಾತಿರದ ಹಂತ ಕುಖ್ಯಾತಿಯ ಭಾಗಪ್ಪ ಅವರ ಸಂಬಂಧಿ ಹಾಗೂ ವಕೀಲ ರವಿ ಮೇಲಿನಮನಿ(37)ಗೆ ಇನ್ನೋವ ಕಾರೊಂದು ಡಿಕ್ಕಿ ಹೊಡೆಯಲಾಗಿದೆ. ಆ ಬಳಿಕ ಇನ್ನೋವಕಾರು ಬಸವನಗರದಿಂದ ಜಿ.ಪ ಪ್ರವೇಶದ್ವಾರದವರೆಗೆ ಸುಮಾರು ಎರಡೂವರೆ ಕಿಲೋಮೀಟರ್ ಹೊತ್ತೊಯ್ದಿದೆ ಎನ್ನಲಾಗಿದೆ. ರವಿ ಮೇಲಿನಮಲಿ ಸಾವನ್ನಪ್ಪಿದ ನಂತ್ರ, ಇನ್ನೋವ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ. ಇದೊಂದು ವ್ಯವಸ್ಥಿತ ಕೃತ್ಯ, ಕೊಲೆ ಎಂಬುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ, ಎಎಸ್ ಪಿ, ಡಿವೈಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/muhammad-yunus-takes-oath-as-head-of-interim-bangladesh-government/ https://kannadanewsnow.com/kannada/good-day-moment-see-map-kumaraswamys-brothers-property-documents-released-dk-shivakumar/ https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/

Read More

ಢಾಕಾ: ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಮೈಕ್ರೋಲೆಂಡಿಂಗ್ನಲ್ಲಿ ಪ್ರವರ್ತಕ ಕೆಲಸಕ್ಕಾಗಿ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದ 84 ವರ್ಷದ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ ನಂತರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಿಸಲಾಯಿತು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಿಂದಾಗಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಅವರು ಪ್ರಸ್ತುತ ಭಾರತದಲ್ಲಿದ್ದಾರೆ. ಗುರುವಾರ, ಯೂನುಸ್ ತನ್ನ ನಾಗರಿಕರಿಗೆ ಸುರಕ್ಷತೆಯ ಭರವಸೆ ನೀಡುವ ಸರ್ಕಾರವನ್ನು ತಲುಪಿಸುವುದಾಗಿ ಭರವಸೆ ನೀಡಿದರು. ನೊಬೆಲ್ ಪ್ರಶಸ್ತಿ ವಿಜೇತರು ಈ ಹಿಂದೆ ಪ್ರಮಾಣ ವಚನ ಸ್ವೀಕರಿಸಲು ಪ್ಯಾರಿಸ್ ನಿಂದ ಪ್ರತಿಭಟನಾ ಪೀಡಿತ ಬಾಂಗ್ಲಾದೇಶಕ್ಕೆ ಮರಳಿದರು. ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್, ಹಿರಿಯ ಅಧಿಕಾರಿಗಳು, ವಿದ್ಯಾರ್ಥಿ ಮುಖಂಡರು ಮತ್ತು ನಾಗರಿಕ ಸಮಾಜದ ಸದಸ್ಯರು ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ…

Read More

ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-9-2024 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಬಿಬಿಎಂಪಿ ಕೃತಜ್ಞತೆ ಸಲ್ಲಿಸುತ್ತದೆ ಮತ್ತು ನಾಗರೀಕರ ಮನವಿಗಳ ಮೇರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ದಿನಾಂಕ:30-9-2024ರವರೆಗೆ ವಿಸ್ತರಿಸಲಾಗಿದೆ ಎಂದಿದೆ. ಒಂದು ಬಾರಿ ಪರಿಹಾರ ಯೋಜನೆ & ಅದರ ಪ್ರಮುಖಾಂಶಗಳು: * ಸಂಪೂರ್ಣ ಬಡ್ಡಿ ಮನ್ನಾ * ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. * ವಸತಿ ಮತ್ತು ಮಿಶ್ರ ಬಳಕೆಯ ಆಸ್ತಿಗಳ ಆಸ್ತಿ ತೆರಿಗೆ ಬಾಕಿ ವಸೂಲಾತಿ ಪರಿಷ್ಕರಣೆ ಮತ್ತು ಮೌಲ್ಯಮಾಪನ ಮಾಡದ ಆಸ್ತಿಗಳಿಗೆ 5-ವರ್ಷಗಳಿಗೆ ಸೀಮಿತವಾಗಿರುತ್ತದೆ. ಎಲ್ಲಾ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವ ಮೂಲಕ ಮುಖ್ಯಧಾರೆಗೆ ಸೇರಲು ಈ ಐತಿಹಾಸಿಕ ಕೊನೆಯ ಅವಕಾಶದ ಪ್ರಯೋಜನವನ್ನು…

Read More

ಚಿಕ್ಕಬಳ್ಳಾಪುರ : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ. 1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಕ್ರಮಗಳಿಂದಾಗಿ ಪ್ರಸ್ತುತ ರಾಜ್ಯಕ್ಕೆ ಬೇಕಾದ ವಿದ್ಯುತ್ ಉತ್ಪಾದಿಸುವುದರ ಜತೆಗೆ ವಿದ್ಯುತ್ತನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಿದ್ದೇವೆ,”ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು, “ವಿದ್ಯುತ್ ಉತ್ಪಾದನೆ ಒತ್ತು ನೀಡಿ, ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಲು ಕಾರಣರಾದ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್‌ ಮಾರಾಟವಾಗಿದೆ,”ಎಂದಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಸಬ್ ಸ್ಟೇಷನ್ ಗಳ ನಿರ್ಮಾಣ “ವಿದ್ಯುತ್‌ ಉತ್ಪಾದನೆ ಜತೆಗೆ ಸಮರ್ಪಕ ವಿದ್ಯುತ್…

Read More

ಬೆಂಗಳೂರು: ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸುವ ಸಂಬಂಧ ದಿನಾಂಕವನ್ನು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ಹೇಳಿದರು. ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ ಸರ್ಕಾರವು ಮುಂದುವರೆಯದೇ ಇದ್ದರೇ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಅದರಂತೆ ಈಗಾಗಲೇ ಕೋರ್ಟ್ ನಲ್ಲಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆದು, 2 ಕೇಸ್ ವಿಚಾರಣೆ ಮಾತ್ರ ಬಾಕಿ ಇದೆ. ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಘೋಷಿಸುವುದಾಗಿ ತಿಳಿಸಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/important-decision-from-rbi-now-your-cheque-will-be-cleared-from-the-bank-soon/ https://kannadanewsnow.com/kannada/sc-leaders-support-bjps-fight-mlc-chalavadi-narayanasamy/…

Read More

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲೇ ಪ್ರಯಾಣಿಕರೊಬ್ಬರ ಜೊತೆಗೆ ನಿರ್ವಾಹಕರೊಬ್ಬರು ಅನುಚಿತವಾಗಿ ವರ್ತಿಸಿದ್ದ ಬಗ್ಗೆ ವರದಿಯಾಗಿತ್ತು. ಈ ಸುದ್ದಿ ಪ್ರಸಾದ ಬೆನ್ನಲ್ಲೇ ಬಿಎಂಟಿಸಿ ನಿರ್ವಾಹಕನನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ನೀಡಿದ್ದು, ದಿನಾಂಕ 06-08-2024 ರಂದು ಬೆಂಮಸಾಸಂಸ್ಥೆಯ ಘಟಕ – 32 (ಸೂರ್ಯ ಸಿಟಿ) ರ ನಿರ್ವಾಹಕರು ಮಾರ್ಗ ಸಂಖ್ಯೆ ಇವಿ 500 ಡಿಸಿ/7 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಸಮಯ ಸುಮಾರು ರಾತ್ರಿ 09:40 ಗಂಟೆಗೆ, ಸದರಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಭಿನವ್ ರಾಜ್ ಎಂಬುವರು ಬಾಕಿ ರೂ.5 ಚಿಲ್ಲರೆ ವಾಪಸ್ಸು ನೀಡುವಂತೆ ಕೋರಿದಾಗ, ಸದರಿ ನಿರ್ವಾಹಕರು ಸಾರ್ವಜನಿಕ ಪ್ರಯಾಣಿಕರ ಎದುರು ಅನುಚಿತವಾಗಿ ವರ್ತಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಸದರಿ ನಿರ್ವಾಹಕರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡಲಾಗಿದೆ ಎಂದು ತಿಳಿಸಿದೆ. ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವುದಲ್ಲದೇ, ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುವುದು ಸುರಕ್ಷಿತ ಎನ್ನುವ ಭಾವನೆ ಉಂಟಾಗಲು ಅಗತ್ಯವಿರುವ ಕ್ರಮಗಳನ್ನು ಸಹ ಕೈಗೊಳ್ಳಲಾಗಿರುತ್ತದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿಯನ್ನು ಘೋಷಣೆ ಮಾಡಿ, ಚುನಾವಣೆಯ ಮುನ್ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯದ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಕಳೆದ ನಾಲ್ಕು ವರ್ಷಗಳಿಂದ ಅವಧಿ ಮುಗಿದರೂ ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಿಲ್ಲ. ಈ ಸಂಬಂಧ ಸರ್ಕಾರದ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ ಎಂದರು. ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ತಿಳಿಸಿದರು. ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ…

Read More

ಬೆಂಗಳೂರು: ಆಗಸ್ಟ್.25ರಂದು ನಡೆಯಬೇಕಿದ್ದಂತ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಅಂದೇ ಇತರೆ ಪರೀಕ್ಷೆಗಳು ಇದ್ದ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಈಗ ಕೆಪಿಎಸ್ಸಿಯಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.27ಕ್ಕೆ ಮರುನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ( Karnataka Public Service Commission-KPSC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ( Gazetted Probationer ) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ( KAS Recruitment ) ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ. ಈ ದಿನದಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಲಾಗಿ ಸದರಿ ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪರೀಕ್ಷಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾಲಾವಕಾಶ ನೀಡದೆ. ಬೇರೆ ಪರೀಕ್ಷೆಗಳೊಂದಿಗೆ Overlap ಆಗದಂತೆ ಅಲ್ಪಕಾಲ ಮುಂದೂಡಲು ನಿರ್ಧರಿಸಲಾಗಿರುತ್ತದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಗುಡ್ಡ ಕುಸಿತದಿಂದ ಸ್ಥಗಿತಗೊಂಡಿದ್ದಂತ ಬೆಂಗಳೂರು ಟು ಮಂಗಳೂರು ನಡುವಿನ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ.  ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿರಂತರ ಮತ್ತು ಭಾರಿ ಮಳೆಯ ಹೊರತಾಗಿಯೂ, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಮತ್ತು ಯಡಕುಮರಿ ನಿಲ್ದಾಣಗಳ ನಡುವಿನ ಹಳಿಯ ಪುನಃಸ್ಥಾಪನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹವಾಮಾನವು ಗಮನಾರ್ಹ ಸವಾಲುಗಳನ್ನು ಪ್ರಸ್ತುತಪಡಿಸಿತು. ಮಳೆ ಆಗಾಗ್ಗೆ ಪ್ರಗತಿಗೆ ಅಡ್ಡಿಪಡಿಸುತ್ತದೆ ಮತ್ತು ಕಷ್ಟಕರ ಕೆಲಸದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿದೆ ಎಂದಿದೆ. ಟ್ರ್ಯಾಕ್ ಅನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳಲು ಸಮರ್ಪಿತ ತಂಡಗಳು ದಣಿವರಿಯದೆ ಕೆಲಸ ಮಾಡಿದವು. 04.08.2024 ರಂದು, 08:58 ಗಂಟೆಗೆ, ಟ್ರ್ಯಾಕ್ ಅಂತಿಮವಾಗಿ ಸರಕು ರೈಲಿಗೆ ಮಾತ್ರ ‘ಸೂಕ್ತ’ ಎಂದು ಪ್ರಮಾಣೀಕರಿಸಲಾಯಿತು. ಈ ಸವಾಲಿನ ಪರಿಸ್ಥಿತಿಗಳಲ್ಲಿ ಟ್ರ್ಯಾಕ್ ನ ಸುರಕ್ಷತೆಯನ್ನು ನಿರ್ಣಯಿಸಲು ಮತ್ತು ದೃಢೀಕರಿಸಲು ಎಂಜಿನ್ ರೋಲಿಂಗ್ ಪರೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಿದೆ. 06.08.2024 ರಂದು, ಸಂಪೂರ್ಣವಾಗಿ ಲೋಡ್ ಮಾಡಿದ ಸರಕು ರೇಕ್ ಪುನಃಸ್ಥಾಪಿಸಲಾದ…

Read More

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷೆ 2024 ರ ಅಧಿಕೃತ ಪರೀಕ್ಷಾ ದಿನಾಂಕಗಳನ್ನು sc.gov.in ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಅಧಿಸೂಚನೆಯ ಪ್ರಕಾರ, ಎಸ್ಎಸ್ಸಿ ರಾಷ್ಟ್ರವ್ಯಾಪಿ ನೇಮಕಾತಿ ಪರೀಕ್ಷೆಯನ್ನು 17 ದಿನಗಳ ಅವಧಿಯಲ್ಲಿ ನಡೆಸಲಿದೆ, ಇದು ಸೆಪ್ಟೆಂಬರ್ 9, 2024 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 26, 2024 ರಂದು ಕೊನೆಗೊಳ್ಳುತ್ತದೆ. “ಸಂಯೋಜಿತ ಪದವೀಧರ ಮಟ್ಟದ ಪರೀಕ್ಷೆ, 2024 (ಶ್ರೇಣಿ -1) ಅನ್ನು 09-ಸೆಪ್ಟೆಂಬರ್-2024 ರಿಂದ 26-ಸೆಪ್ಟೆಂಬರ್-2024 ರವರೆಗೆ ನಡೆಸಲು ಆಯೋಗ ನಿರ್ಧರಿಸಿದೆ” ಎಂದು ಅಧಿಕೃತ ನೋಟಿಸ್ನಲ್ಲಿ ತಿಳಿಸಲಾಗಿದೆ. ಎಸ್ಎಸ್ಸಿ ಸಿಜಿಎಲ್ 2024 ಶ್ರೇಣಿ 1 ಪರೀಕ್ಷೆಗೆ ಕನಿಷ್ಠ ಅರ್ಹತಾ ಅಂಕಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ತನ್ನ ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಿದಂತೆ ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 ಪರೀಕ್ಷೆಗೆ ಕನಿಷ್ಠ ಅರ್ಹತಾ ಅಂಕಗಳನ್ನು ಸ್ಥಾಪಿಸಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಹತೆ ಪಡೆಯಲು ಕನಿಷ್ಠ 30% ಅಂಕಗಳನ್ನು ಗಳಿಸಬೇಕು. ಒಬಿಸಿ (ಇತರ ಹಿಂದುಳಿದ ವರ್ಗಗಳು)…

Read More