Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬರೋಬ್ಬರಿ 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶಿಸಿದ್ದಾರೆ. ಈ ಕುರಿತಂತೆ ಇಂದು ಆದೇಶ ಹೊರಡಿಸಿದ್ದು, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಪರಿಷ್ಕೃತ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಕರ್ನಾಟಕ ಪ್ರದೇಶದ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿರೋದಾಗಿ ಹೇಳಿದ್ದಾರೆ. ಅಂದಹಾಗೇ ಉಪಾಧ್ಯಕ್ಷರಾಗಿ ಡಾ.ಬಿಎಲ್ ಶಂಕರ್, ಅಜಯ್ ಕುಮಾರ್ ಶರನಾಯ್ಕ್, ಮೆಹಬೂಬ್ ಸುಡ್ಗರ್, ಆನಂದ್ ನ್ಯಾಮಗೌಡ, ವಿಎಸ್ ಉಗ್ರಪ್ಪ, ಒಬೆದುಲ್ಲ ಶರೀಫ್ ಸೇರಿದಂತೆ 44 ಮಂದಿಯನ್ನು ನೇಮಕ ಮಾಡಲಾಗಿದೆ. ಇನ್ನೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ದಯಾನಂದ್ ಎಸ್ ಪಾಟೀಲ್, ಕೊಡಿಹಳ್ಳಿ ಎನ್ ಐ, ಮುರುಳಿ ಕೃಷ್ಣ.ಬಿ, ಹುಮಾಯೂನ್ ಖಾನ್, ಡಾ.ಉಮೇಶ್ ಬಾಬು, ಜಿಎ ಭಾವ, ಜೆ ಹುಚ್ಚಪ್ಪ, ಪ್ರಭಾಕರ ರೆಡ್ಡಿ, ಎ…
ಮೈಸೂರು : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು. ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. BJP-RSS ಕಡೆ ತಲೆ ಹಾಕಬೇಡಿ. ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ RSS ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು ಈಗ ಮೋದಿಗೂ ತಮಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದರು. BJP ಮತ್ತು RSS ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟ ಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದರು ಸ್ವಾತಂತ್ರ್ಯ ಪೂರ್ವದಲ್ಲಿ ,…
ಮೈಸೂರು : ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ. ನಾವು ಜನರ ಭಾವನೆಗಳನ್ನು ಕೆರಳಿಸುವಿದಿಲ್ಲ. ಬದಲಿಗೆ ಭಾವನೆಗಳನ್ನು ಗೌರವಿಸುತ್ತಲೇ ಜನರ ಬದುಕನ್ನು ಸುಧಾರಿಸಲು ಕಾರ್ಯಕ್ರಮ ರೂಪಿಸುತ್ತೇವೆ ಎಂದರು. ಜನರಿಗೆ ಬದುಕು ಮುಖ್ಯ. ಬೆಲೆ ಏರಿಕೆ ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳ ಕಾರ್ಯಕ್ರಮ ಜಾರಿ ಮಾಡಿದೆವು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ಫಲಾನುಭವಿ ಕುಟುಂಬಗಳಿಗೆ ತಿಂಗಳಿಗೆ 4-5 ಸಾವಿರ ಉಳಿತಾಯ ಆಗುತ್ತಿದೆ. ಇದರಿಂದ ಜನರ ಬದುಕಿನ ಸಂಕಷ್ಟ ಕಡಿಮೆಯಾಗುತ್ತಿದೆ ಎಂದರು. ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್…
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹಗಳ ಚಲನೆಯು 12 ರಾಶಿಚಕ್ರ ಚಿಹ್ನೆಗಳಿಗೆ ವಿವಿಧ ಪ್ರಯೋಜನಗಳನ್ನು ನೀಡುತ್ತದೆ. ಇದು ಕೆಲವೊಮ್ಮೆ ಶುಭ ಮತ್ತು ಕೆಲವೊಮ್ಮೆ ಅಶುಭ. ಹಾಗೆಯೇ ಒಂದು ರಾಶಿಯಲ್ಲಿ ಎರಡು ಗ್ರಹಗಳು ಸೇರಿಕೊಂಡಾಗ ಕೆಲವು ಯೋಗಗಳು ಉಂಟಾಗುತ್ತವೆ. ಜ್ಯೋತಿಷ್ಯದ ಈ ಲೇಖನದಲ್ಲಿ, ರೂಪುಗೊಂಡ ಎರಡು ಯೋಗಗಳು ಮತ್ತು ಅದೃಷ್ಟವನ್ನು ತರುವ ರಾಶಿಚಕ್ರ ಚಿಹ್ನೆಗಳ ಬಗ್ಗೆ ನೀವು ತಿಳಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಎಂ.ಕೆ.ಭಾಸ್ಕರರಾವ್ ಅವರು ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು. ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಅಂದಹಾಗೇ, ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ್ ರಾವ್ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಎಂ ಕೆ ಭಾಸ್ಕರ್ ರಾವ್ ಅವರ ವರದಿಗಾರಿಕಾ ಶೈಲಿ ವಿಶೇಷ ಹಾಗೂ ವಿಭಿನ್ನವಾಗಿತ್ತು. ರಾಯಚೂರು ಜಿಲ್ಲೆಯ ಪ್ರಜಾವಾಣಿ ವರದಿಗಾರರಾಗಿದ್ದ ಸಂದರ್ಭದಲ್ಲಿ ನಕ್ಸಲ್ ನಾಯಕ ಗದ್ದರ್,…
ನವದೆಹಲಿ: ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಕೇಂದ್ರದ ಭದ್ರತಾ ಸಲಹೆಯು ಆಪಲ್ನ ಐಫೋನ್ಗಳು, ಮ್ಯಾಕ್ಬುಕ್ಗಳು, ಐಪ್ಯಾಡ್ಗಳು ಮತ್ತು ವಿಷನ್ ಪ್ರೊ ಹೆಡ್ಸೆಟ್ಗಳ ಬಳಕೆದಾರರಿಗೆ “ಹೆಚ್ಚಿನ ಅಪಾಯದ” ಎಚ್ಚರಿಕೆಯನ್ನು ನೀಡಿದೆ. ವಿವಿಧ ಆಪಲ್ ಉತ್ಪನ್ನಗಳಲ್ಲಿ “ರಿಮೋಟ್ ಕೋಡ್ ಕಾರ್ಯಗತಗೊಳಿಸುವಿಕೆ” ಗೆ ಸಂಬಂಧಿಸಿದಂತೆ ಗುರುತಿಸಲಾದ ನಿರ್ಣಾಯಕ ದುರ್ಬಲತೆಯನ್ನು ಸಲಹೆಯು ಎತ್ತಿ ತೋರಿಸುತ್ತದೆ. ಈ ದುರ್ಬಲತೆಯು ಆಪಲ್ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಶ್ರೇಣಿಯ ಮೇಲೆ ಪರಿಣಾಮ ಬೀರುತ್ತದೆ. ಇದರಲ್ಲಿ 17.4.1 ಕ್ಕಿಂತ ಮೊದಲು ಆಪಲ್ ಸಫಾರಿ ಆವೃತ್ತಿಗಳು, 13.6.6 ಕ್ಕಿಂತ ಮೊದಲು ಆಪಲ್ ಮ್ಯಾಕ್ ಒಎಸ್ ವೆಂಚುರಾ ಆವೃತ್ತಿಗಳು, 14.4.1 ಕ್ಕಿಂತ ಮೊದಲು ಆಪಲ್ ಮ್ಯಾಕ್ ಒಎಸ್ ಸೊನೊಮಾ ಆವೃತ್ತಿಗಳು, 1.1.1 ಕ್ಕಿಂತ ಮೊದಲು ಆಪಲ್ ವಿಷನ್ ಒಎಸ್ ಆವೃತ್ತಿಗಳು, 17.4.1 ಕ್ಕಿಂತ ಮೊದಲು ಆಪಲ್ ಐಒಎಸ್ ಮತ್ತು ಐಪ್ಯಾಡ್ಒಎಸ್ ಆವೃತ್ತಿಗಳು ಸೇರಿವೆ. ಈ ದುರ್ಬಲತೆಯು ಗಮನಾರ್ಹ ಬೆದರಿಕೆಯನ್ನುಂಟುಮಾಡುತ್ತದೆ. ಏಕೆಂದರೆ ಇದು ದೂರದ ದಾಳಿಕೋರರಿಗೆ ಉದ್ದೇಶಿತ ವ್ಯವಸ್ಥೆಗಳಲ್ಲಿ ಅನಿಯಂತ್ರಿತ ಕೋಡ್…
ಮೈಸೂರು: ದೇಶದಲ್ಲಿ ಬಿಜೆಪಿಯವರು 200 ಸ್ಥಾನಗಳ ಮೇಲೆ ಗೆಲ್ಲುವುದಿಲ್ಲ. ಕರ್ನಾಟಕದಲ್ಲಿ ಇಂಡಿಯಾ ಮಿತ್ರ ಪಕ್ಷಗಳ ಸದಸ್ಯರು ಕಾಂಗ್ರೆಸ್ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಎಲ್ಲಾ ಮಿತ್ರ ಪಕ್ಷಗಳ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮೈಸೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ನಂತ್ರ ಮಾತನಾಡಿದಂತ ಅವರು, ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲಿಗರು, ನೆಂಟರು ಬಂದು ʼನಮಗೆ ಬಿಜೆಪಿಯಲ್ಲಿ ಇರಲು ಆಗುವುದಿಲ್ಲʼ ಎಂದು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜನತಾದಳ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳುತ್ತೇನೆ. ಮುಂದಿನ 10 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ ಎಂದರು. ಅಮಿತ್ ಷಾ ಅವರೇ ನಿಮ್ಮಲ್ಲಿ ಇರುವಷ್ಟು ಭಿನ್ನಾಬಿಪ್ರಾಯ, ಕಿತ್ತಾಟ ನಮ್ಮಲ್ಲಿ ಇಲ್ಲ ನಾನು ಮತ್ತು ಸಿದ್ದರಾಮಯ್ಯ ಅವರು ಹಾಗು ಸಂಪುಟದ ಸಹೋದ್ಯೋಗಿಗಳು ಒಗ್ಗಟ್ಟಾಗಿ ಈ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತೇವೆ.…
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಇಂದು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.,ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದರು. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ ನಾಮಪತ್ರ ಸಲ್ಲಿಸಲು ಹಾದಿ ಸುಗಮಗೊಳಿಸಿದ್ದರು. ಈ ಹಿನ್ನಲೆಯಲ್ಲಿ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನಾ ಹಿರಿಯ ಚೇತನರಿಗೆ ನಮನವನ್ನು ಸಲ್ಲಿಸಲಿದ್ದಾರೆ. ಆ ಬಳಿಕ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. https://kannadanewsnow.com/kannada/will-resign-if-amit-shahs-statement-on-drought-relief-proves-to-be-true-siddaramaiah/ https://kannadanewsnow.com/kannada/will-not-contest-elections-wont-leave-mandya-sumalatha-ambareesh-to-join-bjp-on-saturday/
ಬೆಂಗಳೂರು: ಏಪ್ರಿಲ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗೋ ಸಾಧ್ಯತೆ ಇದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಇಬಿ) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಮಾಧ್ಯಮ ವರದಿಗಳ ಪ್ರಕಾರ, ಏಪ್ರಿಲ್ ಮೂರನೇ ವಾರದಲ್ಲಿ ಇದನ್ನು ಘೋಷಿಸಲಾಗುವುದು. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ karnataka.gov.in, pue.kar.nic.in, karresults.nic.in ಮತ್ತು kseeb.kar.nic.in ಅಧಿಕೃತ ವೆಬ್ಸೈಟ್ಗಳಲ್ಲಿ ಲಭ್ಯವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಶೇಕಡಾ 33 ರಷ್ಟು ಅಂಕಗಳನ್ನು ಗಳಿಸಬೇಕು. ಕಡಿಮೆ ಅಂತರದಿಂದ ಕನಿಷ್ಠ ಅಂಕಗಳ ಅಗತ್ಯವನ್ನು ಕಳೆದುಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಮೂಲಕ ಬಡ್ತಿ ನೀಡಲಾಗುವುದು. ಶಿಕ್ಷಕರು ಶೇಕಡಾ 5 ರವರೆಗೆ ಮಾತ್ರ ಗ್ರೇಸ್ ಅಂಕಗಳನ್ನು ನೀಡಬಹುದು. ಕಡಿಮೆ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳು ಕಂಪಾರ್ಟ್ಮೆಂಟ್ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದಾಗ್ಯೂ, ಎಲ್ಲಾ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತರಗತಿಯನ್ನು ಪುನರಾವರ್ತಿಸಬೇಕಾಗುತ್ತದೆ. ಕರ್ನಾಟಕ ದ್ವಿತೀಯ…
ಬೆಂಗಳೂರು : ಕನ್ನಡ ಮಾಧ್ಯಮ ಲೋಕದ ಫೈರ್ ಬ್ರಾಂಡ್, ಬೆಂಕಿ ಚೆಂಡು, ನೇರ ನುಡಿ, ಖಡಕ್ ಮಾತಿಗೆ ಹೆಸರಾದವರು ಹಿರಿಯ ಪತ್ರಕರ್ತೆ, ನಿರೂಪಕಿ ರಾಧ ಹಿರೇಗೌಡರ್. ಟಿಆರ್ಪಿ ಮಾಸ್ಟರ್, ಕಂಟೆAಟ್ ಕಿಂಗ್, ಟೀಮ್ ಕಟ್ಟೋದ್ರಲ್ಲಿ ಅವರಿಗೆ ಅವರೇ ಸಾಟಿ.. ಅವರೇ ಶಿವಸ್ವಾಮಿ ಟಿ.ಎಂ. ಸಣ್ಣ ವಯಸ್ಸಿನಲ್ಲೇ ಟಿವಿ೫ ಚಾನಲ್ ಕಟ್ಟಿ ಬೆಳೆಸಿದ ಟೀಮ್ ಲೀಡರ್, ತೆರೆ ಹಿಂದಿನ ಸೂತ್ರಧಾರ, ತೆರೆ ಮೇಲೂ ಅಬ್ಬರಿಸೋ ಚತುರ.. ಸತೀಶ್ ಆಂಜಿನಪ್ಪ.. ಈ ಮೂವರು ಈಗ ಮತ್ತೆ ಒಟ್ಟಾಗಿ ಸೇರಿ ಚಾನಲ್ ಶುರು ಮಾಡ್ತಿದ್ದಾರೆ ಅನ್ನೋ ಚರ್ಚೆ ಸದ್ಯ ಕನ್ನಡ ಮಾಧ್ಯಮ ರಂಗದಲ್ಲಿ ಜೋರಾಗ್ತಿದೆ. ರಾಧ ಹಿರೇಗೌಡರ್, ಶಿವಸ್ವಾಮಿ, ಸತೀಶ್ ಆಂಜಿನಪ್ಪ.. ಮೂವರು ಈ ಹಿಂದೆ ಸುವರ್ಣ ನ್ಯೂಸ್, ಪಬ್ಲಿಕ್ ಟಿವಿಯಲ್ಲಿ ಆರಂಭದಿAದಲೂ ಜೊತೆಯಾಗಿಯೇ ಕೆಲಸ ಮಾಡಿದ್ದಾರೆ. ಅದರಲ್ಲೂ ಪಬ್ಲಿಕ್ ಟಿವಿ ಕಟ್ಟಿ ಬೆಳೆಸಿದ ಟೀಮ್ ಇವರದ್ದು ಅನ್ನೋ ಮಾತಿದೆ. ವಿವಿಧ ಕ್ಷೇತ್ರಗಳಲ್ಲಿ ಪಂಟರ್ ಗಳು ಅನ್ನೋ ಖ್ಯಾತಿ ಇವರಿಗೆ ಇದೆ. ಹೀಗಾಗಿ ಸಾಕಷ್ಟು ನಿರೀಕ್ಷೆ…