Author: kannadanewsnow09

ಬೆಂಗಳೂರು: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಸಿಡಿದೆದ್ದಿದ್ದಾರೆ. ತಮ್ಮ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರು ಹಾಕಿದ್ದಂತ ಕಾಮೆಂಟ್ ಗೆ ಕಣ್ಣೀರಿಡುತ್ತಲೇ, ತಂದೆಯ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದೇನು ಅಂತ ಮುಂದೆ ಓದಿ. ಸೋಷಿಯಲ್ ಮೀಡಿಯಾದಲ್ಲಿ ನಿಶಾಗೆ ನೀವು ಯಾಕೆ ನಿಮ್ಮ ತಂದೆಯ ಹೆಸರು ತೆಗೆದು ಕೆಲಸ ಮಾಡಬಾರದು ಅಂತ ಕಾಮೆಂಟ್ ಹಾಕಿದ್ದರು. ಇದಕ್ಕೆ ಲೈವ್ ವೀಡಿಯೋ ಮಾಡಿದಂತ ಅವರು, ನಾನು 10 ವರ್ಷ ಇದ್ದಾಗಲೇ ನನ್ನ ತಂದೆ ನನ್ನಿಂದ ದೂರು ಹೋಗಿದ್ರು, ಚುನಾವಣೆ ವೇಳೆಯಲ್ಲಿ ನನ್ನನ್ನು ಕರೆಯುತ್ತಾ ಇದ್ರು. ಆಗ ನಮ್ಮ ತಂದೆ ಪರ ಪ್ರಚಾರಕ್ಕೆ ಹೋಗ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ನಾನು ನನ್ನ ತಂದೆ ದೂರವಾದ 24 ವರ್ಷಗಳ ಬಳಿಕ ಅವರನ್ನ ನೋಡುತ್ತಿದ್ದೇನೆ. ಚುನಾವಣೆ ಟೈಮ್ ನಲ್ಲಿ ಮನೆ ಮನೆಗೆ ತೆರಳಿ ತಂದೆ ಗೆಲುವಿಗೆ ಮತಯಾಚನೆ ಮಾಡಿದ್ದೆ. ಆಗ ನಾನು ಸಿಪಿ ಯೋಗೇಶ್ವರ್ ಅವರಿಗೆ ಆದರ್ಶ ಮಗಳಾಗಿದ್ದೆ ಅಂತ ಹೇಳಿದ್ದಾರೆ. ನನ್ನ ಹೆಸರಿನ ಜೊತೆಗೆ…

Read More

ಯುಕೆ: ವಿಸ್ಮಯ ಮತ್ತು ವಿವಾದ ಎರಡನ್ನೂ ಹುಟ್ಟುಹಾಕಿದ ಅದ್ಭುತ ಬಹಿರಂಗಪಡಿಸುವಿಕೆಯಲ್ಲಿ, ಯುನೈಟೆಡ್ ಸ್ಟೇಟ್ಸ್ ಮೂಲದ ಪ್ರವರ್ತಕ ನರವಿಜ್ಞಾನ ಮತ್ತು ಬಯೋಮೆಡಿಕಲ್ ಎಂಜಿನಿಯರಿಂಗ್ ಸ್ಟಾರ್ಟ್ಅಪ್ ಬ್ರೈನ್ಬ್ರಿಡ್ಜ್ ವಿಶ್ವದ ಮೊದಲ ತಲೆ ಕಸಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ತನ್ನ ಧೈರ್ಯಶಾಲಿ ಧ್ಯೇಯವನ್ನು ಅನಾವರಣಗೊಳಿಸಿದೆ. ಈ ಆಘಾತಕಾರಿ ಪ್ರಕಟಣೆಯು ಸಿಮ್ಯುಲೇಟೆಡ್ ಕಾರ್ಯವಿಧಾನವನ್ನು ಚಿತ್ರಿಸುವ ಬೆನ್ನುಮೂಳೆಯನ್ನು ನಡುಗಿಸುವ ವೀಡಿಯೊದೊಂದಿಗೆ ಬರುತ್ತದೆ. ಇದರಲ್ಲಿ ಎರಡು ಸ್ವಾಯತ್ತ ಶಸ್ತ್ರಚಿಕಿತ್ಸಾ ರೋಬೋಟ್ಗಳು ಮಾನವ ತಲೆಯನ್ನು ಒಂದು ರೊಬೊಟಿಕ್ ದೇಹದಿಂದ ಇನ್ನೊಂದಕ್ಕೆ ತಡೆರಹಿತವಾಗಿ ವರ್ಗಾಯಿಸುತ್ತವೆ. ಸೈ-ಫಿಕ್ಷನ್ ಥ್ರಿಲ್ಲರ್ನ ದೃಶ್ಯಗಳನ್ನು ನೆನಪಿಸುವಾಗ, ಬ್ರೈನ್ಬ್ರಿಡ್ಜ್ ತನ್ನ ಪ್ರಯತ್ನವು ವೈಜ್ಞಾನಿಕ ಅನ್ವೇಷಣೆಯಲ್ಲಿ ದೃಢವಾಗಿ ನೆಲೆಗೊಂಡಿದೆ ಎಂದು ಪ್ರತಿಪಾದಿಸುತ್ತದೆ. ಇದು ಹಂತ -4 ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಅಲ್ಝೈಮರ್ ಮತ್ತು ಪಾರ್ಕಿನ್ಸನ್ನಂತಹ ದುರ್ಬಲಗೊಳಿಸುವ ನ್ಯೂರೋಡಿಜೆನರೇಟಿವ್ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಭರವಸೆಯ ಕಿರಣವನ್ನು ನೀಡುವ ಗುರಿಯನ್ನು ಹೊಂದಿದೆ. https://twitter.com/TansuYegen/status/1793045981954523464 ಪ್ರಜ್ಞೆ, ನೆನಪುಗಳು ಮತ್ತು ಅರಿವಿನ ಸಾಮರ್ಥ್ಯಗಳನ್ನು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ, ರೋಗಿಯ ತಲೆಯನ್ನು ಆರೋಗ್ಯಕರ, ಮೆದುಳು-ಸತ್ತ ದಾನಿ ದೇಹಕ್ಕೆ ಕಸಿ ಮಾಡುವ…

Read More

ಬೆಂಗಳೂರು: ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ ಸಿದ್ಧರಾಮಯ್ಯ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬನಶಂಕರಿ 2nd stage 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದರು. ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು. https://kannadanewsnow.com/kannada/give-top-priority-to-bengalurus-beauty-cm-siddaramaiah-during-city-rounds/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಬೆಂಗಳೂರು: ಸಿಟಿ ರೌಂಡ್ಸ್ ಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಗಳೂರು ನಗರವಾಸಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿ ಬಗ್ಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದರು. ಸಮಸ್ಯೆಗಳನ್ನು ಆಲಿಸುತ್ತ ಸಿಎಂ ಗೆ ಸಾರ್ವಜನಿಕರು ಮುಗಿಬಿದ್ದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬಗಳಿಗೆ ಆಗಿರುವ ಅನುಕೂಲಗಳನ್ನು ವಿವರಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಿಲ್ಕ್ ಬೋರ್ಟ್ ನಲ್ಲಿ ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ ಎನ್ನುವ ಸಾರ್ವಜನಿಕರ ಬಗ್ಗೆ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ…

Read More

ಬೆಂಗಳೂರು: ನಿನಗೆ ಅಗತ್ಯವಿದ್ದಂತ ಅನುದಾನವನ್ನು ಕಾಮಗಾರಿಗಾಗಿ ಬಿಡುಗಡೆ ಮಾಡಲಾಗಿದೆ. ಹೀಗಿದ್ದರೂ ಶೇ.4ರಷ್ಟು ಕಾಮಗಾರಿ ಮಾತ್ರವೇ ಮಾಡಿದ್ದೀಯಲ್ಲ. ನಿನಗೆ ಸಾರ್ವಜನಿಕರಿಗೆ ಆಗ್ತಿರೋ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವ? ನಿನ್ನ ಕೈಯಲ್ಲಿ ಆಗದಿದ್ದರೇ ಜಾಗ ಖಾಲಿ ಮಾಡು ಎಂಬುದಾಗಿ ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿದ್ದಂತ ಕಂಪನಿಗೆ ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು. ಇಂದು ಬೆಂಗಳೂರಿನ ಶಾಂತಿನಗರ ವಿಧಾನಸಭಾ ವ್ಯಾಪ್ತಿಯ ಈಜಿಪುರಕ್ಕೆ ಸಿಟಿ ರೌಂಡ್ಸ್ ವೇಳೆಯಲ್ಲಿ, 2.95 ಕಿಲೋಮೀಟರ್ ಉದ್ದದ ಈಜಿಪುರ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್‌ ಕಾಮಗಾರಿ ನಡೆಸುತ್ತಿರೋ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದಂತ ಅವರು, ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್‌ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ದಿನಕ್ಕೊಂದು ಹೇಳಿಕೆ ನೀಡುತ್ತಿರುವಂತ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಪಕ್ಷದಿಂದ ಡಿಜಿ ಐಜಿಪಿಗೆ ದೂರು ನೀಡಲಾಗಿದೆ. ಇಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ತೆರಳಿ ಜೆಡಿಎಸ್ ಪಕ್ಷದ ನಾಯಕರು ದೂರು ನೀಡಿದರು. ದೂರಿನಲ್ಲಿ ಇನ್ನೇನು ಇದೆ? ಹೆಚ್.ಎಂ.ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ, ಗುರುತರ ಆರೋಪಗಳನ್ನು ಮಾಡಲಾಗಿದೆ. ಕಾಂಗ್ರೆಸ್ ನಾಯಕ, ವೈನಾಡು ಲೋಕಸಭೆ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ…

Read More

ಬೆಂಗಳೂರು : “ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರ ಅಧಿಕಾರ ಅವಧಿಯಲ್ಲಿ ಯಾವ ರೀತಿ ಈ ಪ್ರಕರಣ ನಡೆದಿತ್ತು ಎಂದು ಎಲ್ಲರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಫೋನ್ ಕದ್ದಾಲಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅಶೋಕ್ ಅವರು ಕೂಡ ಗೃಹ ಸಚಿವರಾಗಿದ್ದವರು. ಈ ಆರೋಪ ಮಾಡುತ್ತಿರುವ ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿಗಳಾಗಿದ್ದವರು. ಈ ವಿಚಾರವಾಗಿ ಅವರು ಪತ್ರದ ಮೂಲಕ ದೂರು ನೀಡಲಿ. ಅವರ ಕಾಲದಲ್ಲಿ ಏನೆಲ್ಲಾ ಆಗಿತ್ತು ಎಂದು ಅವರಿಗೆ ಗೊತ್ತಿದೆ” ಎಂದು ತಿರುಗೇಟು ನೀಡಿದರು. ಇಂದಿನ ಸಚಿವರ ಸಭೆ ಬಗ್ಗೆ ಕೇಳಿದಾಗ, “ಇಂದು ರಾತ್ರಿ ಸಚಿವರುಗಳಿಗೆ ಭೋಜನಕೂಟ ಏರ್ಪಡಿಸಿದ್ದೇವೆ, ಲೋಕಸಭೆ ಚುನಾವಣೆ ನಿರ್ವಹಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದರು. ಲೋಕಸಭೆಯಲ್ಲಿ ಜವಾಬ್ದಾರಿ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ, ವಿದೇಶಕ್ಕೆ ಪರಾರಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ತಾತ ದೇವೇಗೌಡರಿಗೆ ತಕ್ಕ ಮಗ ಆಗಲಿಲ್ಲ. ತಂದೆಗೆ ತಕ್ಕ ಮಗ ಆಗಿದ್ದಾನೆ. ಎಷ್ಟೇ ಆದ್ರೂ ನೂಲಿನಂತೆ ಸೀರೆ ಅಲ್ವ ಅಂತ ಶಾಸಕ ಹೆಚ್.ಸಿ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ವಿಡಿಯೋ ಮಾಡು ಅಂತ ಪ್ರಜ್ವಲ್ ರೇವಣ್ಣಂಗೆ ಡಿ.ಕೆ. ಶಿವಕುಮಾರ್ ಫೋನ್ ಮಾಡಿ ಹೇಳಿದ್ರಾ..? ಇಲ್ಲ, ನಾವು ಅವನ ರೂಮಲ್ಲಿ ನಿಂತು ವಿಡಿಯೋ ಮಾಡಿದ್ವಾ? ಎಂದು ಕೇಳಿದರು. ಪ್ರಜ್ವಲ್ ತಾತನಿಗೆ (ದೇವೇಗೌಡ) ತಕ್ಕ ಮೊಮ್ಮಗ ಆಗಲಿಲ್ಲ. ತಂದೆಗೆ ತಕ್ಕ ಮಗ ಆದ. ಎಷ್ಟೇ ಆಗಲಿ ನೂಲಿನಂತೆ ಸೀರೆಯಲ್ಲವೇ..?  ಕುಮಾರಸ್ವಾಮಿ ತಲೆ ಕೆಟ್ಟವರಂತೆ ಮಾತಾಡುತ್ತಿದ್ದಾರೆ. ಅವರು ಯಾವಾಗ ತಾನೇ ಸತ್ಯ ಮಾತಾಡಿದ್ದಾರೆ? ಒಂದೇ ಒಂದು ಉದಾಹರಣೆ ಕೊಡಿ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ವಿರುದ್ಧ ಮಾತಾಡುವುದೇ ಅವರ ಕೆಲಸ ಎಂಬುದಾಗಿ ವಾಗ್ಧಾಳಿ ನಡೆಸಿದರು. ವಿರೋಧ ಪಕ್ಷದವರು ಏನು ಹೇಳಬೇಕೋ ಹೇಳ್ತಾ ಇದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡ ಜೆಡಿಎಸ್ ಪಕ್ಷದ ಕತೆ ಮುಗಿದ ಮುಗಿದ ಅಧ್ಯಾಯ. ಆದರೆ ಜೆಡಿಎಸ್ ಪಕ್ಷದ ಐಟಿ ಸೆಲ್ ಅಸ್ತಿತ್ವ ತೋರಿಸಿಕೊಳ್ಳಲು ಹೆಣಗಾಡುತ್ತಿದೆ ಎಂದಿದೆ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದಾಗಿ ರಾಜಕಾಲುವೆಗಳ ಒತ್ತುವರಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ತನ್ನ ಕಮಿಷನ್ ಕಳ್ಳಾಟವನ್ನು ಮುಂದುವರೆಸಿತ್ತು, ನಮ್ಮ ಸರ್ಕಾರ ರಾಜಕಾಲುವೆಗಳ ಒತ್ತುವರಿಯನ್ನು ಮುಲಾಜಿಲ್ಲದೆ ತೆರವು ಮಾಡಲಿದೆ ಎಂದು ಹೇಳಿದೆ. ಚರಂಡಿ, ಕಾಲುವೆ ಸೇರಿದಂತೆ ನೀರು ಹರಿದು ಹೋಗುವ ಎಲ್ಲಾ ಮಾರ್ಗಗಳನ್ನು ಸ್ವಚ್ಛಗೊಳಿಸಿ ಮಳೆಗಾಲ ಎದುರಿಸಲು ಸಿದ್ದವಾಗಿದೆ ಎಂದು ತಿಳಿಸಿದೆ. ಜೆಡಿಎಸ್ ನಾಯಕರೇ, ಅಂದಹಾಗೆ ನಿಮ್ಮ ಪ್ರಜ್ವಲ್ ರೇವಣ್ಣ ಎಲ್ಲಿ? ಬ್ರದರ್ ಸ್ವಾಮಿಗಳ ಜೇಬಲ್ಲಿದ್ದ ಪೆನ್ ಡ್ರೈವ್ ಎಲ್ಲಿ ಹೋಯ್ತು? ನಿಮ್ಮ ನಾಯಕರು ಸಂತ್ರಸ್ತ ಮಹಿಳೆಯರನ್ನು ಸಂತೈಸುವುದು ಯಾವಾಗ? ಎಂದು ಕೇಳಿದೆ. https://twitter.com/INCKarnataka/status/1793178932277051759 https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/farmers-have-you-not-received-the-crop-compensation-money-in-your-account/

Read More

ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಪ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ರಾಜ್ಯದ ಸಹಕಾರ ಸಂಘದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಪ್ರಾರಂಭಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ,2ನೇ ಹಂತ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್- 15 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 / 7022429440 ಅಥವಾ ಆನ್ ಲೈನ್ ಪ್ರವೇಶಾತಿಯ ಲಿಂಕ್ www.kscfdcm.co.in ನ್ನು ಸಂಪರ್ಕಿಸುವುದು. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/farmers-have-you-not-received-the-crop-compensation-money-in-your-account/

Read More