Author: kannadanewsnow09

ನವದೆಹಲಿ: ಲೋಕಸಭಾ ಚುನಾವಣೆಗೆ ಮುನ್ನವೇ ನಟ ಪ್ರಕಾಶ್ ರಾಜ್ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಆ ಮೂಲಕ ಬಿಜೆಪಿಯ ಜೊತೆ ಸೇರಿ ಚುನಾವಣಾ ಪ್ರಚಾರ ಕೂಡ ನಡೆಸಲಿದ್ದಾರೆ ಎಂಬುದಾಗಿ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ಬಗ್ಗೆ ನಟ ಪ್ರಕಾಶ್ ರಾಜ್ ಏನು ಹೇಳಿದ್ರು ಅಂತ ಮುಂದೆ ಓದಿ. ಎಕ್ಸ್ ನಲ್ಲಿ ದಿ ಸ್ಕಿನ್ ಡಾಕ್ಟರ್ ಎಂಬುವರು ನಟ ಪ್ರಕಾಶ್ ರಾಜ್ ಅವರು ಬಿಜೆಪಿ ಪಕ್ಷವನ್ನು ಇಂದು ಸೇರ್ಪಡೆಗೊಳ್ಳಲಿದ್ದಾರೆ ಎಂಬುದಾಗಿ ಪೋಸ್ಟ್ ಹಾಕಿದ್ದರು. ಬಿಜೆಪಿಯನ್ನು ವಿರೋಧಿಸುತ್ತಲೇ ಬಂದಿರುವಂತ ನಟ ಪ್ರಕಾಶ್ ರಾಜ್ ಬಿಜೆಪಿ ಪಕ್ಷವನ್ನು ಸೇರುತ್ತಾರೆ ಎಂಬ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿರುವಂತ ನಟ ಪ್ರಕಾಶ್ ರಾಜ್, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ನಾನು ಇದನ್ನು ಊಹಿಸಿದ್ದೆ. ಅವರು ನನ್ನನ್ನು ಸೈದಾಂತಿಕವಾಗಿ ಖರೀದಿಸುವಷ್ಟು ಶ್ರೀಮಂತರಾಗಿಲ್ಲ. ನಾನು ಬಿಜೆಪಿ ಸೇರೋದು ಇಲ್ಲ. ಸ್ನೇಹಿತರೇ ಜಸ್ಟ್ ಆಸ್ಕಿಂಗ್ ಅಂತ ಸ್ಪಷ್ಟ ಪಡಿಸಿದ್ದಾರೆ. https://twitter.com/prakashraaj/status/1775817257630720389 https://kannadanewsnow.com/kannada/good-news-for-cancer-patients-car-t-cell-therapy-treatment-to-be-available-in-india/ https://kannadanewsnow.com/kannada/do-you-use-a-bandage-for-the-wound-beware-that-this-can-lead-to-cancer-study/

Read More

ನವದೆಹಲಿ: ಕ್ಯಾನ್ಸರ್ ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಗಂಭೀರ ಕಾಯಿಲೆಯಾಗಿದ್ದು, ಇದರ ಅಪಾಯವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕ್ಯಾನ್ಸರ್ನ ಸಾವಿನ ಪ್ರಮಾಣವೂ ಹೆಚ್ಚಾಗಿದೆ, ಇದರ ಬಗ್ಗೆ ಆರೋಗ್ಯ ತಜ್ಞರು ಎಲ್ಲಾ ಜನರನ್ನು ಎಚ್ಚರಿಸುತ್ತಾರೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಹೆಚ್ಚಿನ ಕ್ಯಾನ್ಸರ್ ಸಾವುಗಳಿಗೆ ಒಂದು ಮುಖ್ಯ ಕಾರಣವೆಂದರೆ ಸಮಯಕ್ಕೆ ಸರಿಯಾಗಿ ರೋಗನಿರ್ಣಯ ಮತ್ತು ಚಿಕಿತ್ಸೆ ನೀಡದಿರುವುದು. ದೇಶದ ಹೆಚ್ಚಿನ ಜನರು ಕೊನೆಯ ಹಂತಗಳಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ, ಅಲ್ಲಿಂದ ಚಿಕಿತ್ಸೆ ನೀಡುವುದು ಮತ್ತು ರೋಗಿಯ ಜೀವವನ್ನು ಉಳಿಸುವುದು ತುಂಬಾ ಕಷ್ಟವಾಗುತ್ತದೆ. ಕ್ಯಾನ್ಸರ್ ಭಾರತದಲ್ಲಿ ಪ್ರಮುಖ ಬೆದರಿಕೆಯಾಗಿದೆ. ಪೊವಾಯಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸಿಎಆರ್ ಟಿ-ಸೆಲ್ ಥೆರಪಿಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಗುರುವಾರ ಬಿಡುಗಡೆ ಮಾಡಿದರು. ಐಐಟಿ ಬಾಂಬೆ ಮತ್ತು ಟಾಟಾ ಮೆಮೋರಿಯಲ್ ಸೆಂಟರ್ ಅಭಿವೃದ್ಧಿಪಡಿಸಿದ ಈ ಜೀನ್ ಆಧಾರಿತ ಚಿಕಿತ್ಸೆಯು ವಿವಿಧ ರೀತಿಯ ಕ್ಯಾನ್ಸರ್ ಅನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ದಿ…

Read More

ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಂತ ಅವರು, 2019ರಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಮನೆ ಬಾಗಿಲಿಗೆ ಬಂದರು. ಖರ್ಗೆ ಸೇರಿದಂತೆ ಯಾರನ್ನಾದರೂ ಸಿಎಂ ಮಾಡಿ ಅಂತ ಹೆಚ್.ಡಿ.ದೇವೇಗೌಡರು ಹೇಳಿದ್ದರು. ಡೆಲ್ಲಿ ನಾಯಕರು ನನ್ನ ಮೇಲೆ ಒತ್ತಡ ಹಾಕಿದ್ರು. ಆದ್ರೆ ಅಧಿಕಾರ ಮಾಡೋಕೆ ಬಿಡಲಿಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಸಿಎಂ ಕೇಳುತ್ತಾರೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೇನೆ ಎಂಬುದಾಗಿ ಹೇಳಿದರು. ನಮ್ಮ ನೀರು ನಮ್ಮ ಹಕ್ಕು ಅಂತ ಮೇಕೆದಾಟುವರೆಗೆ ಪಾದಯಾತ್ರೆ ಮಾಡಿದ್ರು. ಮಂಡ್ಯದ ಕಬ್ಬು ಒಣಗುತ್ತಿದೆ. ಇದಕ್ಕೆ ಯಾರು ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಎಂದರು. ಭತ್ತ ನಾಟಿ ಮಾಡಬೇಡಿ ಅಂತ ಪ್ರಥಮ ಬಾರಿಗೆ ಹೇಳಿದ ಕೃಷಿ ಸಚಿವ ಚಲುವರಾಯಸ್ವಾಮಿ. ಇದು ದೇವರ…

Read More

ಬೆಂಗಳೂರು: ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಈ ಬಾರಿ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿಸಿದ್ದಾರೆ. ಅಲ್ಲದೇ ಮೈತ್ರಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ್ದಾರೆ. ಇಂತಹ ಅವರು ನಾಳೆ ಬೆಳಗ್ಗೆ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದು, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ ಎಂದಿದ್ದಾರೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದು ತಿಳಿಸಿದ್ದಾರೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು…

Read More

ಬೆಂಗಳೂರು: ಕೊಳವೆ ಬಾವಿಗೆ ಬಿದ್ದಿದ್ದಂತ ಸಾತ್ವಿಕ್ ನನ್ನು ರಕ್ಷಣಾ ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಈ ರಕ್ಷಣಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಅಲ್ಲದೇ ರಾಜ್ಯದ ಜನತೆಗೆ ಮಹತ್ವದ ಸಲಹೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು,  ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದಿದ್ದಾರೆ. ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ…

Read More

ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ? ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ನಿಮ್ಮ ಕಾಲದಲ್ಲಿ ಆದ…

Read More

ನವದೆಹಲಿ: ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ನಿಜವಾದ ಮತದಾರರಿಗೆ ಮತದಾನದ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವ ಪ್ರಯತ್ನದಲ್ಲಿ, ಚುನಾವಣಾ ಆಯೋಗ (ಇಸಿ) ಮತದಾರರ ಗುರುತಿನ ಚೀಟಿಯ ಮೂಲಕ ವ್ಯಕ್ತಿಯ ಗುರುತನ್ನು ದೃಢೀಕರಿಸುವವರೆಗೆ ಮತದಾರರ ಗುರುತನ್ನು ಪರಿಶೀಲಿಸುವಾಗ ಸಣ್ಣ ಗುಮಾಸ್ತ ಅಥವಾ ಕಾಗುಣಿತ ದೋಷಗಳನ್ನು ಕಡೆಗಣಿಸುವಂತೆ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದಲ್ಲದೆ, ಮತ್ತೊಂದು ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ ನೀಡಿದ ಮತದಾರರ ಗುರುತಿನ ಚೀಟಿಯು ಅವರು ಹಾಜರಾಗುವ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರು ಕಾಣಿಸಿಕೊಳ್ಳುವವರೆಗೆ ಗುರುತಿನ ಉದ್ದೇಶಗಳಿಗಾಗಿ ಮಾನ್ಯವಾಗಿರುತ್ತದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಆದಾಗ್ಯೂ, ಗುರುತಿನ ಚೀಟಿಯಲ್ಲಿನ ಛಾಯಾಚಿತ್ರದಲ್ಲಿ ವ್ಯತ್ಯಾಸವಿದ್ದರೆ, ಮತದಾರನು ಚುನಾವಣಾ ಆಯೋಗವು ನಿರ್ದಿಷ್ಟಪಡಿಸಿದ ಪರ್ಯಾಯ ಫೋಟೋ ದಾಖಲೆಗಳಲ್ಲಿ ಒಂದನ್ನು ಹಾಜರುಪಡಿಸಬೇಕು. ಕಳೆದ ತಿಂಗಳು ಹೊರಡಿಸಿದ ಆದೇಶದಲ್ಲಿ, ಚುನಾವಣಾ ಆಯೋಗವು ತಮ್ಮ ಮತದಾರರ ಗುರುತಿನ ಚೀಟಿಯನ್ನು ತೋರಿಸಲು ಸಾಧ್ಯವಾಗದ ಮತದಾರರು ತಮ್ಮ ಗುರುತನ್ನು ಸ್ಥಾಪಿಸಲು ಪರ್ಯಾಯ ಫೋಟೋ ಗುರುತಿನ ದಾಖಲೆಗಳಲ್ಲಿ ಒಂದನ್ನು ಒದಗಿಸಬೇಕಾಗುತ್ತದೆ…

Read More

ಹಾವೇರಿ: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಬಂದ ಮೇಲೆ ಸಮ್ಮಿಶ್ರ ಸರ್ಕಾರದ ಕಾಲ ಮುಗಿದು ಹೋಗಿದೆ. ದೇಶದ ಅಭಿವೃದ್ಧಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಏಕ ಪಕ್ಷದ ಆಡಳಿತ ಒಳ್ಳೆಯದು ಎಂದು ದೇಶದ ಜನರು ತೀರ್ಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕುಡುಪಲಿ, ಕಡೂರು, ಬುಳ್ಳಾಪೂರ, ಹಳ್ಳೂರು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪಧಾನಿ ನರೇಂದ್ರ ಮೋದಿಯವರು ಈ ಚುನಾವಣೆಯ ಕೇಂದ್ರಬಿಂದುವಾಗಿದ್ದಾರೆ. ಸಾಮಾನ್ಯವಾಗಿ ಎರಡು ವ್ಯಕ್ತಿತ್ವದ ನಡುವೆ ಚುನಾವಣೆಯಾಗುತ್ತದೆ. ಆದರೆ, ಇಲ್ಲಿ ನರೇಂದ್ರಮೋದಿ ಪರ ಹಾಗೂ ನರೇಂದ್ರ ಮೋದಿ ವಿರುದ್ಧ ಚುನಾವಣೆ ನಡೆಯುತ್ತಿದೆ. ದೇಶದಲ್ಲಿ ನರೇಂದ್ರ ಮೋದಿಯಂತಹ ವ್ಯಕ್ತಿತ್ವ ಬೇರೆ ಯಾರೂ ಇಲ್ಲ ಎಂದು ಹೇಳಿದರು. ಲೋಕಸಭೆಯ 543 ಸ್ಥಾನದಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗದಿರುವ ಪಕ್ಷಗಳು ದೇಶ ಆಳುವ ಬಗ್ಗೆ ಮಾತನಾಡುತ್ತವೆ. ಹಿಂದೆ ಸಣ್ಣ ಸಣ್ಣ ಪಕ್ಷಗಳು ಸೇರಿ ಸರ್ಕಾರ ಆಳಿರುವುದನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಅಬ್ಬಾ ಎಷ್ಟು ಹೊತ್ತಿಗೆ ಮಳೆ ಬರುತ್ತಪ್ಪ ಅಂತ ಕಾಯ್ತಿದ್ದಾರೆ. ಹೀಗೆ ಮಳೆಗಾಗಿ ಕಾಯುತ್ತಿರೋ ಜನತೆಗೆ ಕೂಲ್ ಆಗೋ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಮುಂದಿನ 5 ದಿನ ಭಾರೀ ಮಳೆಯಾಗವಿದೆ ಅಂತ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದ್ದು, ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಐದು ದಿನ ಉತ್ತಮ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಧಾರವಾಡ, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಹಾವೇರಿ, ತುಮಕೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಧೆಯಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ. ಅಂದಹಾಗೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲ ತಾಪ ಹೆಚ್ಚಾಗಿದೆ. 35 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿ, ಬಿಸಿಲ ಶಾಕಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ…

Read More

ಮಂಗಳೂರು: ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು‌ ಸಚಿವರು ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ಪ್ರದರ್ಶಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಬಾರಿ ಕೈ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದಾರೆ. ಕರಾವಳಿಯ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳಿದ 30 ವರ್ಷಗಳಿಂದ ಜನರು ಬಿಜೆಪಿಯನ್ನ ನೋಡಿ ಆಗಿದೆ. ಈ ಬಾರಿ ಕರಾವಳಿ ಭಾಗದ ಜನರು ಬದಲಾವಣೆ ಬಯಸಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಬಿಜೆಪಿ ಯಾವ ರೀತಿ ಅಧಿಕಾರ ದುರಪಯೋಗ ಮಾಡಿಕೊಳ್ಳಿತ್ತಿದೆ ಎಂಬುದನ್ನ ಜನರು ನೋಡುತ್ತಿದ್ದಾರೆ. ಎಲೆಕ್ಟೋರಲ್ ಬಾಂಡ್ ಬಗ್ಗೆ ಬಿಜೆಪಿಯವರ ಬಳಿ ಉತ್ತರವಿಲ್ಲ. ಕೇಂದ್ರ ಬಿಜೆಪಿ…

Read More