Author: kannadanewsnow09

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಘಟಕ–08, ಯಶವಂತಪುರದಲ್ಲಿ ದಿನಾಂಕ 24-01-2026 ರಂದು ರಾಷ್ಟ್ರೀಯ ಚಾಲಕರ ದಿನಾಚರಣೆಯನ್ನು ಸಂಸ್ಥೆಯ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಸಾರ್ವಜನಿಕ ಸಾರಿಗೆಯ ಪ್ರಮುಖ ಅಂಗವಾಗಿರುವ ಚಾಲಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾದ ವಿ.ಎಸ್. ಆರಾಧ್ಯ, ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಕೆ.ಬಿ., ಭಾ.ಆ.ಸೇ., ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ. ಪ್ರಭಾಕರ ರೆಡ್ಡಿ, ಹಾಗೂ ಉತ್ತರ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಎಸ್.ಆರ್. ರವರು ಉಪಸ್ಥಿತರಿದ್ದರು. ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್. ಆರಾಧ್ಯ ಅವರು, ಎಲ್ಲಾ ಚಾಲಕ ಮಿತ್ರರಿಗೆ ರಾಷ್ಟ್ರೀಯ ಚಾಲಕರ ದಿನಾಚರಣೆಯ ಶುಭಾಶಯಗಳನ್ನು ಸಲ್ಲಿಸಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಭಾರತದ ಇತಿಹಾಸದಲ್ಲಿಯೇ ಒಂದು ಮಾದರಿ ಮಹಾನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಿಕೊಂಡಿರುವುದು ಚಾಲಕರು ಹಾಗೂ ನಿರ್ವಾಹಕರ ಶಿಸ್ತು, ನಿಷ್ಠೆ ಮತ್ತು ಪ್ರಾಮಾಣಿಕ…

Read More

ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಗೆ ಮತ್ತೊಂಬು ಬಲಿಯಾಗಿದೆ. ಬೆಂಗಳೂರಿನ ಕೆ ಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿಯಲ್ಲಿ ನಡೆದಂತ ಭೀಕರ ಅಪಘಾತದಲ್ಲಿ ಸ್ವಿಗ್ಗಿ ಡಿಲವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತನನ್ನ ನೇಪಾಳ ಮೂಲದ ಸುರೇಂದರ್ ಬಹದ್ದೂರ್(38) ಎಂಬುದಾಗಿ ತಿಳಿದು ಬಂದಿದೆ. ಸ್ವಿಗ್ಗಿಯಲ್ಲಿ ಸುರೇಂದರ್ ಬಹದ್ದೂರ್ ಕೆಲಸ ಮಾಡುತ್ತಿದ್ದರು. ಡೆಲಿವರಿ ಕೊಡಲು ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಈ ಅಫಘಾತ ಸಂಭವಿಸಿದೆ. ಸ್ವಿಗ್ಗಿ ಆರ್ಡರ್ ತೆಗೆದುಕೊಂಡು ಕೊಡೋದಕ್ಕೆ ತೆರುವಾಗ ಕಾರೊಂದು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸುರೇಂದರ್ ಬಹದ್ದೂರ್ ಸಾವನ್ನಪ್ಪಿದರೂ ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆ ಆರ್ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/there-are-10365-transgenders-in-the-state-gender-minority-survey-report/ https://kannadanewsnow.com/kannada/karnataka-sslc-preparatory-exam-2-schedule-announced/

Read More

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸರು ಉತ್ತಮ ನಡೆಯನ್ನು ಸಾರ್ವಜನಿಕ ಜೀವನದಲ್ಲಿ ತೋರಬೇಕು. ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರಬಾರದು ಎಂಬುದಾಗಿ ಖಡಕ್ ಎಚ್ಚರಿಕೆಯ ಆದೇಶವನ್ನೇ ಮಾಡಿದೆ. ಹೀಗಿದ್ದರೂ ಇಲ್ಲೊಬ್ಬ ಪೊಲೀಸ್ ಪೇದೆ ಮಾತ್ರ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಗಲಾಕೊಂಡಿದ್ದಾನೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯ ಯಮನಾ ನಾಯಕ್ ಎಂಬಾತನೇ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತನಾಗಿರುವಂತ ಕಾನ್ ಸ್ಟೇಬಲ್ ಆಗಿದ್ದಾರೆ. ಇವರು ಕರ್ತವ್ಯದ ವೇಳೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಂದಹಾಗೇ ಆರ್.ಟಿ ನಗರ ಪೊಲೀಸ್ ಠಾಣೆಯ ಕಾನ್ಸ್ ಸ್ಟೇಬಲ್ ಯಮನಾ ನಾಯಕ್ ಅವರನ್ನು ಫ್ರೀಡಂ ಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೇದೆ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಬಂಧಿಸಲಾಗಿದೆ. https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/

Read More

ತುಮಕೂರು: ರಾಜ್ಯದಲ್ಲೂ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡೋದಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದರು. ಹೀಗಾಗಿ ತಮಿಳುನಾಡು ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸರ್ ಸರ್ಕಾರದ ಸಂಘರ್ಷ ಆರಂಭಗೊಂಡಿತ್ತು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಲಿದ್ದಾರೆ ಎಂಬುದಾಗಿ ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಸಂವಿಧಾನಿಕವನ್ನು ನನ್ನ ಕೈನಲ್ಲಿ ಓದಿಸಬೇಡಿ ಎಂಬುದಾಗಿ ರಾಜ್ಯಪಾಲರು ಈಗಾಗಲೇ ತೋರಿಸಿದ್ದಾರೆ. ಹೀಗಾಗಿ ಇನ್ನಾದರೂ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಗೌರವಯುತವಾಗಿ ಕಾಣಬೇಕು. ಇಲ್ಲದೇ ಹೋದರೇ ರಾಜ್ಯಪಾಲರು ರಾಷ್ಟ್ರಪತಿ ಆಡಳಿತವನ್ನು ಕರ್ನಾಟಕದಲ್ಲಿ ಹೇರುತ್ತಾರೆ ಎಂಬುದಾಗಿ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ರಾಜ್ಯಪಾಲರಿಗೆ ಧಮ್ಕಿ ಹಾಕಿದ್ದಾರೆ. ಇವರ ಗೂಂಡಾ ವರ್ತನೆಯಿಂದಲೇ ರಾಜ್ಯಪಾಲರು ಸದನದಲ್ಲಿ ಭಾಷಣ ಮಾಡದೇ ಗಡಿಬಿಡಿಯಿಂದಲೇ ಹೋಗಿದ್ದಾರೆ. ಇವರು ಬೆದರಿಕೆ ಹಾಕಿದ್ದಕ್ಕೇ ಸದನದಿಂದ ಅವರು ಭಯದಿಂದ ಹೋಗಿದ್ದು ಎಂಬುದಾಗಿ ಕಿಡಿಕಾರಿದರು. https://kannadanewsnow.com/kannada/father-kills-4-year-old-daughter-for-not-doing-homework/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/

Read More

ಚಂಡೀಗಢ: ತನ್ನ ಮಗಳು ಶಾಲೆಯಲ್ಲಿ ಕೊಟ್ಟಂತ ಹೋಂ ವರ್ಕ್ ಮಾಡಿಲ್ಲ ಎನ್ನುವಕ ಕಾರಣಕ್ಕಾಗಿ, ತಂದೆಯೊಬ್ಬ ಹೊಡೆದು ಕೊಂದಿರುವಂತ ಶಾಕಿಂಗ್ ಘಟನೆ ಚಂಡೀಗಢದ ಫರೀದಾಬಾದ್ ನಲ್ಲಿ ನಡೆದಿದೆ. ಚಂಡೀಗಢದ ಸೋನ್ ಭದ್ರಾ ಜಿಲ್ಲೆಯ ಖೇರತಿಯಾ ಮೂಲದ ಗ್ರಾಮದ ಕೃಷ್ಣ ಜೈಸ್ವಾಲ್ ಹಾಗೂ ಪತ್ನಿ ಇಬ್ಬರೂ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬದೊಂದಿಗೆ ಫರೀದಾಬಾದ್ ನಲ್ಲಿ ವಾಸಿಸುತ್ತಿದ್ದರು. ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಆತನ ಪತ್ನಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಉತ್ತರ ಪ್ರದೇಶದ ಸೋನ್ಭದ್ರಾದಿಂದ ಇತ್ತೀಚೆಗೆ ಸ್ಥಳಾಂತರಗೊಂಡಿದ್ದ ಝಡ್ಸೆಂಟ್ಲಿ ಪ್ರದೇಶದಲ್ಲಿರುವ ಕುಟುಂಬದ ಬಾಡಿಗೆ ಮನೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಜೈಸ್ವಾಲ್ ಪದೇ ಪದೇ ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿದ್ದನು ಮತ್ತು ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದನು, ಆಟವಾಡುವಾಗ ಅವಳು ಮೆಟ್ಟಿಲುಗಳಿಂದ ಕೆಳಗೆ ಬಿದ್ದಿದ್ದಾಳೆ ಎಂದು ಹೇಳಿಕೊಂಡಿದ್ದಾಳೆ. ಅಲ್ಲಿಗೆ ಬಂದ ಕೂಡಲೇ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದರು. ಆರೋಪಿ ಆರಂಭದಲ್ಲಿ ಇದೇ ಹೇಳಿಕೆಯನ್ನು ತನ್ನ ಪತ್ನಿ…

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ‌ ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ಇರುವ ಕಾರ್ಯಕ್ರಮಗಳು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಗಾಗಿ ಮಾಡಬೇಕಿರುವ ಕೆಲಸಗಳ ಕುರಿತು ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ. ವಸತಿ ನಿಲಯಗಳಲ್ಲಿ ಆದ್ಯತೆಯ ಮೇರೆಗೆ ಲಿಂಗತ್ವ‌ ಅಲ್ಪಸಂಖ್ಯಾತರನ್ನು ದಾಖಲಾತಿ ಮಾಡಿಕೊಳ್ಳಲು ಕ್ರಮವಹಿಸುವುದು, ಲಿಂಗತ್ವ‌ ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಯೋಜನೆ ರೂಪಿಸುವುದು, ಲಿಂಗತ್ವ‌ ಅಲ್ಪಸಂಖ್ಯಾತರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಕೋಚಿಂಗ್‌ ನೀಡುವುದು, ಆರೋಗ್ಯ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ, ವಸತಿ ಮತ್ತು ಮೂಲಭೂತ ಸೌಕರ್ಯ, ಲಿಂಗತ್ವ ಅಲ್ಪಸಂಖ್ಯೆತರ ಕ್ಷೇಮಾಭಿವೃದ್ದಿ ಬೋರ್ಡ್ ಸ್ಥಾಪಿಸುವುದು, ಸಾಮಾಜಿಕ ವಿಷಯಗಳಿಗೆ ಹಾಗೂ ಹಾಲಿ ಇರುವ ಸರ್ಕಾರಿ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ (ಟ್ರಾನ್ಸ್ ಜೆಂಡರ್)‌…

Read More

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೂಡಿ ರಾಜ್ಯದಲ್ಲಿನ ಬಡವರಿಗೆ ದಾಖಲೆಯ 1000 ಮನೆಗಳ ಹಸ್ತಾಂತರಕ್ಕೆ ಚಾಲನೆ ನೀಡಿದರು. ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದರು. ಇಂದು ಹುಬ್ಬಳ್ಳಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಕಾರ್ಯಕ್ರಮ ನಡೆಯಿತು. ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂಗ 1000 ಮನೆ ಹಸ್ತಾಂತರಕ್ಕೆ ಲೋಕಾರ್ಪಣೆಗೊಳಿಸಿದರು. 1000ಕ್ಕೂ ಹೆಚ್ಚು ಮನೆಗಳನ್ನು ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಿರ್ಮಿಸಲಾಗಿರುವಂತ ಮನೆಗಳು ಇವಾಗಿದ್ದಾವೆ. ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗಿರುವ ಮನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹುಬ್ಬಳ್ಳಿಯಲ್ಲಿ ವಸತಿ ಇಲಾಖೆ ಆಯೋಜಿಸಿರುವ ಐತಿಹಾಸಿಕ 46 ಸಾವಿರ ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ AICC ಅಧ್ಯಕ್ಷರೂ, ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹುಬ್ಬಳ್ಳಿ ಹೋಟೆಲಿನಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಸಚಿವರಾದ…

Read More

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ…

Read More

ತುಮಕೂರು: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಸಾರಿಗೆ ಬಸ್ಸಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿಯಲ್ಲಿ ಚಲಿಸುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ತಲೆಕೊಟ್ಟು ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಿನ್ನೆಯ ಶುಕ್ರವಾರ ರಾತ್ರಿ 12.40ರ ಸುಮಾರಿಗೆ ಈ ಘಟನೆ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ಚಲಿಸುತ್ತಿದ್ದಂತ ವೇಳೆ ಯುವಕ ಏಕಾಏಕಿ ನುಗ್ಗಿ ಬಸ್ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಹೀಗಾಗಿ ಬಸ್ಸಿನ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡ ವೀಡಿಯೋ ಸಮೀಪದ ಅಂಗಡಿಯೊಂದರಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/do-you-know-which-place-is-the-most-booked-this-long-weekend-read-the-interesting-make-my-trip-report-here/ https://kannadanewsnow.com/kannada/friend-kills-siblings-over-financial-issues-three-arrested-by-honnavar-police/

Read More

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಸಿಕ್ಕಿರುವ ಲಾಂಗ್‌ ವೀಕೆಂಡ್‌ನಲ್ಲಿ ಜನರು ಯಾವೆಲ್ಲಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂಬ ಕುತೂಹಲವೇ? ಮೇಕ್‌ ಮೈ ಟ್ರೀ ಈ ಬಗ್ಗೆ ವರದಿ ಬಹಿರಂಗ ಪಡಿಸಿದೆ. ಹೌದು, ಈ ಮೂರು ದಿನಗಳ ಲಾಂಗ್‌ ವೀಕೆಂಡ್‌ಗಾಗಿ ಜನರು ದೇಶೀಯವಾಗಿ ಗೋವಾ ಆಯ್ದುಕೊಂಡರೆ, ಅಂತರಾಷ್ಟ್ರೀಯ ಟ್ರಿಪ್‌ನಲ್ಲಿ ಥೈಲ್ಯಾಂಡ್‌ಗೆ ಹೆಚ್ಚು ಬುಕ್ಕಿಂಗ್‌ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಲಾಂಗ್‌ ವೀಕೆಂಡ್‌ ದೊರೆತರೆ ವಿಶ್ರಾಂತಿಗಾಗಿ ಜನ ಪ್ರಯಾಣ ಬೆಳೆಸುವುದು ಸಾಮಾನ್ಯ. ಆದರೆ, ಎಲ್ಲಿ ತೆರಳಬೇಕು? ಯಾವ ಪ್ರದೇಶ ಉತ್ತಮ ಎಂದು ಹುಡುಕುವುದೇ ಕಷ್ಟ. ಜನರ ಎಲ್ಲಿಗೆ ಹೆಚ್ಚಾಗಿ ಭೇಟಿ ನೀಡುತ್ತಾರೆ ಎಂಬುದನ್ನು ಸಹ ಇತರರು ಆಸಕ್ತಿ ವಹಿಸುತ್ತಾರೆ. ಇದಕ್ಕಾಗಿಯೇ, ಹೆಚ್ಚಾಗಿ ಎಲ್ಲೆಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ ಎಂಬುದರ ಬಗ್ಗೆ ಮೇಕ್‌ ಮೈ ಟ್ರಿಪ್‌ ಆಸಕ್ತಿದಾಯಕ ಮಾಹಿತಿ ಹಂಚಿಕೊಂಡಿದೆ. ಜನವರಿ 24 ರಿಂದ ೨೬ರವರೆಗೆ, ಲಾಂಗ್‌ ವೀಕೆಂಡ್‌ ದೊರೆತಿರುವ ಹಿನ್ನೆಲೆಯಲ್ಲಿ, ಜನರು ಹೆಚ್ಚಾಗಿ ಗೋವಾ ಬುಕ್ಕಿಂಗ್‌ ಮಾಡಿದ್ದಾರೆ. ಇದಲ್ಲದೆ, ಇತರ ಜನಪ್ರಿಯ ದೇಶೀಯ ತಾಣಗಳಾದ ಜೈಪುರ, ಉದಯಪುರ, ಮನಾಲಿ, ಪಾಂಡಿಚೇರಿ…

Read More