Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಈ ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಏಳು ಪ್ರಮುಖ ನಗರಗಳಲ್ಲಿ ವಸತಿ ಮಾರಾಟವು ಶೇಕಡಾ 14 ರಷ್ಟು ಏರಿಕೆಯಾಗಿದೆ. ಅನರಾಕ್ ಪ್ರಕಾರ, ಬೇಡಿಕೆ ಬಲವಾಗಿ ಮುಂದುವರೆದಿದೆ. ಮುಂಬೈ ಮೆಟ್ರೋಪಾಲಿಟನ್ ಪ್ರದೇಶ (ಎಂಎಂಆರ್), ಪುಣೆ, ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ವಸತಿ ಆಸ್ತಿಗಳ ಮಾರಾಟ ಹೆಚ್ಚಾಗಿದೆ, ಆದರೆ ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್), ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಇದು ಕುಸಿದಿದೆ. ರಿಯಲ್ ಎಸ್ಟೇಟ್ ಸಲಹೆಗಾರ ಅನರಾಕ್ ಬುಧವಾರ ದೇಶದ ಅಗ್ರ ಏಳು ವಸತಿ ಮಾರುಕಟ್ಟೆಗಳಲ್ಲಿ ಮಾರಾಟ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಅಂಕಿಅಂಶಗಳ ಪ್ರಕಾರ, ಈ ವರ್ಷದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅಗ್ರ ಏಳು ನಗರಗಳಲ್ಲಿನ ವಸತಿ ಮಾರಾಟವು ಶೇಕಡಾ 14 ರಷ್ಟು ಏರಿಕೆಯಾಗಿ 1,30,170 ಕ್ಕೆ ತಲುಪಿದೆ. 1.5 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯ ಐಷಾರಾಮಿ ಮನೆಗಳ ಬೇಡಿಕೆಯಲ್ಲಿ ಗಮನಾರ್ಹ ಹೆಚ್ಚಳದ ಮಧ್ಯೆ ಈ ತ್ರೈಮಾಸಿಕವು ಕಳೆದ ದಶಕದಲ್ಲಿ ಅತಿ ಹೆಚ್ಚು ಮಾರಾಟವನ್ನು ದಾಖಲಿಸಿದೆ ಎಂದು ಅನಾರಾಕ್ ಅಧ್ಯಕ್ಷ ಅನುಜ್ ಪುರಿ ಹೇಳಿದ್ದಾರೆ. ಎಂಎಂಆರ್…
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಆದ್ರೇ ಇಂದು ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವರ್ಗಾವಣೆಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಇಂದು ಡಿ ಕೆ ಶಿವಕುಮಾರ್…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್ ಗಾಂಧಿ ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ ಚಾಳಿ ಮನೆಮಂದಿಗೆ ಎನ್ನುವಂತೆ ಆ ಚಾಳಿ ಎಲ್ಲ ಕಾಂಗ್ರೆಸ್ ನಾಯಕರಿಗೆ ಬಂದಿದೆ. ಚಾಯ್ವಾಲ, ಚೌಕಿದಾರ್ ಚೋರ್, ಮೋದಿಗೆ ಪರಿವಾರ ಇಲ್ಲ ಹೀಗೆ ಅನೇಕ ಟೀಕೆಗಳನ್ನು ಮಾಡಿದಾಗ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಸಚಿವ ಶಿವರಾಜ ತಂಗಡಗಿ ಹಾಗೂ ಇತರೆ ಮುಖಂಡರು ಸೋಲಿನ ಹತಾಶೆಯಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದರು. ಸಚಿವ ಶಿವರಾಜ ತಂಗಡಗಿ ಬಿಜೆಪಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ ಹೊಡೆಯಿರಿ ಎನ್ನುತ್ತಿದ್ದು, ಈಗ ಮೋದಿಗೆ ಹೇಳುತ್ತಿದ್ದಾರೆ.…
ಬೆಂಗಳೂರು: ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಚೇರಿಯಲ್ಲಿ ಇಂದು ಕಾಂಗ್ರೆಸ್ ಇಬ್ಬರು ಎಂಎಲ್ಸಿಗಳಿಂದ ಹೈಡ್ರಾಮಾವೇ ನಡೆಯಿತು. ಸಭಾಪತಿಗಳ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಎಂಎಲ್ಸಿಗಳಿಬ್ಬರು ರಾಜೀನಾಮೆ ಪತ್ರ ತೋರಿಸಿ, ಕೊಡದೆ ಪ್ರಹಸನವನ್ನೇ ನಡೆಸಿದ್ದಾರೆ. ಇಂದು ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಪರಿಷತ್ ಸದಸ್ಯರಾದಂತ ನಜೀರ್ ಅಹ್ಮದ್ ಹಾಗೂ ನಂಜೇಗೌಡ ಅವರು, ರಾಜೀನಾಮೆ ಪತ್ರವನ್ನು ಸಲ್ಲಿಸೋದಕ್ಕೆ ಮುಂದಾದರು. ಈ ವೇಳೆ ಮದ್ಯಪ್ರವೇಶಿಸಿದಂತ ಸಚಿವ ಬೈರತಿ ಸುರೇಶ್ ಅವರು, ಇಬ್ಬರು ಕಾಂಗ್ರೆಸ್ ಎಂಎಲ್ಸಿಗಳನ್ನು ಮನವೊಲಿಸಿದರು. ರಾತ್ರಿ ಮುಖ್ಯಮಂತ್ರಿ, ಡಿಸಿಎಂ ಮಂಗಳೂರಿನಿಂದ ವಾಪಾಸ್ ಆಗುತ್ತಿದ್ದಾರೆ. ಅವರು ಬಂದ ನಂತ್ರ ಮೂವರು ಶಾಸಕರೊಂದಿಗೆ ಮಾತನಾಡುತ್ತಾರೆ ಎಂದರು. ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ನನ್ನ ಭೇಟಿಯಾಗೋದಾಗಿ ಸಮಯ ಪಡೆದಿದ್ದರು. ಬಂದು ಭೇಟಿಯಾದ್ರು. ಆದ್ರೇ ಸಚಿವ ಬೈರತಿ ಸುರೇಶ್ ಕೂಡ ಬಂದು ಅವರನ್ನು ಮನವೊಲಿಕೆ ಮಾಡಿದ್ರು. ನಾನು ನಿಮ್ಮ ಲೆಟರ್ ಹೆಡ್ ನಲ್ಲಿ ಕೈಯಲ್ಲಿ ಬರೆದು ರಾಜೀನಾಮೆ ಪತ್ರ ಕೊಡಿ ಅಂತ ಹೇಳಿದೆ. ಅವರು…
ಬೆಂಗಳೂರು: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿಧಾನಸಭಾ ಉಚ ಚುನಾವಣೆಯನ್ನು ಚುನಾವಣಾ ಆಯೋಗವು ಘೋಷಣೆ ಮಾಡಿತ್ತು. ಹೀಗೆ ಘೋಷಣೆ ಮಾಡಲಾಗಿದ್ದಂತ ಸುರಪುರ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ರಾಜುಗೌಡ ನಾಯಕ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಶಾಸಕ ರಾಜಾವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದಂತ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗದಿಂದ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಮೇ.7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ಅಂದೇ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಕೂಡ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರನಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಇಂದು ಬಿಜೆಪಿಯಿಂದ ರಾಜುಗೌಡ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಮೇ ನಲ್ಲಿ ನಡೆದಿದ್ದಂತ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಗೆಲುವು ಸಾಧಿಸಿದ್ದರು. ಆದ್ರೇ ಅವರು ಅಕಾಲಿಕ ನಿಧನಹೊಂದಿದ್ದರು. ಅವರ ನಿಧನದಿಂದ ತೆರವಾದಂತ…
ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ” ಲೋಕಸಭೆ ಚುನಾವಣೆ ತಯಾರಿ ಹೇಗಿದೆ ಎಂದು ಕೇಳಿದಾಗ, “ನಾನೀಗ ಮಂಜುನಾಥನ ಸನ್ನಿಧಿಯಲ್ಲಿ ಇದ್ದೇನೆ. ಧರ್ಮಸ್ಥಳ ಹಾಗೂ ಮಂಜುನಾಥನ ಶಕ್ತಿಯನ್ನು “ಮಾತು ಬಿಡದ ಮಂಜುನಾಥ” ಎಂದೇ ಬಣ್ಣಿಸುತ್ತಾರೆ. ಅದೇ ರೀತಿ ನಾವು ಕೂಡ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಬಿಡದೆ ಪಾಲಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ, ಜನರ ಮಧ್ಯೆ ಹೋಗಿ ನಮಗೆ ಮತ್ತಷ್ಟು ಹೆಚ್ಚಿನ ಶಕ್ತಿ ಕೊಡಿ ಎಂದು ಮತ…
ಮಂಡ್ಯ: ‘ಕಾಂಗ್ರೆಸ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಸಪೋರ್ಟ್.’!? NDA ಒಕ್ಕೂಟವನ್ನು ಸೋಲಿಸಲು ರೈತ ಸಂಘ ನಿರ್ಧಾರ ಕೈಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ರೈತ ಸಂಘ ಪ್ಲಾನ್ ಮಾಡಲಾಗಿದೆ. ‘ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸೋಲಿಸಿ ರೈತ ಸಮುದಾಯ ಉಳಿಸಿ ಎಂಬ ಘೋಷಣೆ ಪ್ರಚಾರ ನಡೆಸಲು ತೀರ್ಮಾನ ಕೈಗೊಂಡಿದೆ. ರಾಜ್ಯಾದ್ಯಂತ ಶೀಘ್ರದಲ್ಲೇ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರಚಾರ ಆಂದೋಲನ ಆರಂಭ ಮಾಡಲಿದೆ. ಘೋಷವಾಕ್ಯದೊಂದಿಗೆ ಆಂದೋಲನ ನಡೆಸಲು ರೈತರ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕಳೆದ 10 ವರ್ಷದಿಂದ ನರೇಂದ್ರ ಮೋದಿ ರೈತರಿಗೆ ಅನ್ಯಾಯ ಮಾಡಿದ್ದಾರೆ. NDA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತ ಕುಲ ಸಂಪೂರ್ಣ ನಾಶವಾಗುತ್ತದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡಿದ್ದರು ಎಂದರು. ದೆಹಲಿಯಲ್ಲಿ ನಡೆದ ರೈತರ ಸಭೆಯಲ್ಲಿ ಸರ್ವಾನುಮತದಿಂದ NDA ಕಿತ್ತೊಗೆಯಲು ತೀರ್ಮಾನ ಮಾಡಲಾಗಿದೆ. ಬಿಜೆಪಿ…
ಅಮೇರಿಕಾ: ಇಂದು ಮುಂಜಾನೆ, ಯುನೈಟೆಡ್ ಸ್ಟೇಟ್ಸ್ನ ಮೇರಿಲ್ಯಾಂಡ್ನ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ದೊಡ್ಡ ಹಡಗು ಡಿಕ್ಕಿ ಹೊಡೆದಿದ್ದರಿಂದ ಗೊಂದಲ ಉಂಟಾಯಿತು. ಇದರ ಪರಿಣಾಮವಾಗಿ ಸೇತುವೆಯ ಒಂದು ಭಾಗ ಕುಸಿದಿದೆ ಮತ್ತು ಅನೇಕ ವಾಹನಗಳು ಕೆಳಗೆ ನೀರಿಗೆ ಮುಳುಗಿವೆ. ಮುಂಜಾನೆ 1:30 ರ ಸುಮಾರಿಗೆ ಸಂಭವಿಸಿದ ಈ ಘಟನೆಯು ನಗರದಾದ್ಯಂತ ಆಘಾತಗಳನ್ನು ಉಂಟುಮಾಡಿತು. ಈ ಕುಸಿತದ ವೀಡಿಯೊಗಳು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವೈರಲ್ ಆಗುತ್ತಿದ್ದಂತೆ ತ್ವರಿತವಾಗಿ ಗಮನ ಸೆಳೆಯಿತು. https://twitter.com/SarahisCensored/status/1772518343506874504 ಈ ಪ್ರದೇಶದ ಪ್ರಯಾಣಿಕರಿಗೆ ಪ್ರಮುಖ ಅಪಧಮನಿಯಾಗಿದ್ದ ಸೇತುವೆಯು ಪ್ರಭಾವದ ಬಲಕ್ಕೆ ಬಲಿಯಾದ ಭಯಾನಕ ಕ್ಷಣವನ್ನು ತುಣುಕು ಸೆರೆಹಿಡಿದಿದೆ. ಡಿಕ್ಕಿಯು ಭಾರಿ ಬೆಂಕಿಯನ್ನು ಹುಟ್ಟುಹಾಕಿತು, ಹಡಗನ್ನು ಆವರಿಸಿತು ಮತ್ತು ಅದು ವೇಗವಾಗಿ ಮುಳುಗಲು ಕಾರಣವಾಯಿತು. ಬೆಂಕಿಯ ಜ್ವಾಲೆಗಳು ಉಲ್ಬಣಗೊಳ್ಳುತ್ತಿದ್ದಂತೆ, ಸೇತುವೆಯ ಕೆಲವು ಭಾಗಗಳು ಕುಸಿದವು, ಅವಶೇಷಗಳು ನೀರಿಗೆ ಅಪ್ಪಳಿಸಿದವು ಮತ್ತು ವಾಹನಗಳು ಅವಶೇಷಗಳಲ್ಲಿ ಸಿಲುಕಿಕೊಂಡವು. https://twitter.com/CLOCKru/status/1772518154473766945 ಘಟನೆಯ ನಂತರ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಯನ್ನು ಸಂಚಾರಕ್ಕೆ ಮುಚ್ಚುವುದಾಗಿ ಮೇರಿಲ್ಯಾಂಡ್ ಸಾರಿಗೆ…
ಅಮೇರಿಕಾ: ಅಮೆರಿಕದ ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ದೊಡ್ಡ ಕಂಟೈನರ್ ಹಡಗು ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮಂಗಳವಾರ ಕುಸಿದಿದೆ. ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ, ಅಮೇರಿಕಾದ ಬಾಲ್ಟಿಮೋರ್ನ ಫ್ರಾನ್ಸಿನ್ ಸ್ಕಾಟ್ ಕೀ ಸೇತುವೆ ಕುಸಿತಗೊಂಡಿರೋದಾಗಿ ತಿಳಿದು ಬಂದಿದೆ. ಈ ದುರಂತದಲ್ಲಿ ಹಲವರು ಸಿಲುಕಿದ್ದಾರೆ. ಕೆಲವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/sentdefender/status/1772514015790477667 https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/ https://kannadanewsnow.com/kannada/big-relief-for-mla-rizwan-arshad-court-dismisses-plea-seeking-invalidation-of-election-as-mla/
ಆಂಧ್ರಪ್ರದೇಶದ: ಇಲ್ಲಿನ ವಿಜಯವಾಡದಲ್ಲಿ ಇಂದು ತೈಲ ಟ್ಯಾಂಕರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಗೋದಾಮು ಬೆಂಕಿಯಿಂದ ಆವೃತವಾಗಿದೆ. ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಹೊರಬರುತ್ತಿದೆ. ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ. ಹಾನಿಯ ಪ್ರಮಾಣ ಮತ್ತು ಯಾವುದೇ ಸಂಭಾವ್ಯ ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1772507197915726021 https://kannadanewsnow.com/kannada/farmers-loans-to-be-waived-off-if-india-alliance-comes-to-power-rs-1-lakh-for-youth-women/ https://kannadanewsnow.com/kannada/good-news-for-annadatas-in-the-state-rs-10000-will-be-given-under-the-rythu-siri-scheme-incentives/