Author: kannadanewsnow09

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಕಗ್ಗಂಟು ಮುಂದುವರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇಂದು ಸಂಜೆಯೊಳಗೆ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಹೆಸರು ಘೋಷಣೆ ಮಾಡೋದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದರು. ಆದ್ರೇ ಅದು ಸಾಧ್ಯವಾಗದ ಕಾರಣ, ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ಬೆಳಿಗ್ಗೆ 11 ಗಂಟೆಗೆ ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿದೆ ಎಂದಿದ್ದಾರೆ. ಕೋರ್ ಕಮಿಟಿ ಸಭೆಯು ಅಧ್ಯಕ್ಷರಾದಂತ ಜಿ.ಟಿ ದೇವೇಗೌಡರ ನೇತೃತ್ವದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದೆ. ನಾಳೆ ಜೆಡಿಎಸ್ ಪಕ್ಷದಿಂದ ನಡೆಯುತ್ತಿರುವಂತ ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ…

Read More

ಯಾದಗಿರಿ: ಮೊದಲ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲೇ ವಿದ್ಯಾರ್ಥಿಗಳ ಸಾಮೂಹಿಕ ನಕಲು ಯಾದಗಿರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಶುಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ವೇಳೆಯಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಸಿಇಓ ಸಿಸಿಟಿವಿ ದೃಶ್ಯಾವಳಿಯಿಂದ ಗಮನಿಸಿದ್ದಾರೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಮಾಹಿತಿ ನೀಡದೇ ಕರ್ತವ್ಯ ಲೋಪ ಎಸಗಿದಂತ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಸಾಹೇಬ್ ಗೌಡ ಹಾಗೂ ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಹನುಮಂತರಾಯ ಎಂಬುವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಕಾರಣರಾದಂತ ವಿದ್ಯಾರ್ಥಿಗಳಿಗೆ ಅಮಾನತು ಶಿಕ್ಷೆ ನೀಡಿ ಶಾಕ್ ನೀಡಲಾಗಿದೆ. ಒಟ್ಟಾರೆಯಾಗಿ ಸರ್ಕಾರಿ ಪ್ರೌಢಶಾಲೆ, ಏವೂರ ತಾ. ಯಾದಗಿರಿ ಜಿಲ್ಲೆ ಹಾಗೂ…

Read More

ಬೆಂಗಳೂರು: ನಗರದಲ್ಲಿ ಇಂದು ಲೋಕಸಭಾ ಚುನಾವಣೆ ಅಕ್ರಮ ಸಂಬಂಧ ಅಕ್ರಮವಾಗಿ ಸಾಗಿಸುತ್ತಿದ್ದಂತ 216.505 ಲೀಟರ್ ಮದ್ಯವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಮಾಹಿತಿ ನೀಡಿದ್ದು, ಇಂದು 1,51,621 ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. 216.505 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ. ಇದಷ್ಟೇ ಅಲ್ಲದೇ ಬರೋಬ್ಬರಿ 17 ಕೆಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಅದರ ಮೌಲ್ಯ 1,87,800 ಆಗಿರುತ್ತದೆ. ಒಟ್ಟಾರೆ ಇಂದು ರೂ.3,69,421 ಮೌಲ್ಯದ ಮದ್ಯ, ಮಾದಕ ವಸ್ತು ಜಪ್ತಿ ಮಾಡಲಾಗಿದೆ. 29 ಎಫ್ಐಆರ್ ದಾಖಲಿಸಲಾಗಿದೆ. 30,000 ಮೌಲ್ಯ ಒಂದು ವಾಹನ ಕೂಡ ಸೀಜ್ ಮಾಡಿರೋದಾಗಿ ತಿಳಿಸಿದ್ದಾರೆ. ಅಂದಹಾಗೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 67,00,500 ಹಣ, 30,908.595 ಲೀಟರ್ ನಷ್ಟು ರೂ.1,54,65,719 ಮೌಲ್ಯದ ಮದ್ಯವನ್ನು ಸೀಜ್ ಮಾಡಲಾಗಿದೆ. ಇದಲ್ಲದೇ 21.99 ಕೆಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದ್ದು, ಅದರ ಮೌಲ್ಯ ರೂ.3,96,300 ಆಗಿದೆ. ಗಿಫ್ಟ್, ಆಮಿಷಗಳನ್ನು ಒಟ್ಟಿದ ಸಂಬಂಧ 6,05,600 ಮೌಲ್ಯದ ವಸ್ತು ಜಪ್ತಿ…

Read More

ಬೆಂಗಳೂರು: ಮೋದಿ ಮೋದಿ ಎನ್ನುವಂತ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಹೇಳಿಕೆ ನೀಡಿದಂತ ಸಚಿವ ಶಿವರಾಜ ತಂಡರಗಿ ವಿರುದ್ಧ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಕುರಿತಂತೆ ಇಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ದೂರು ನೀಡಿದ್ದಾರೆ. ಸಚಿವ ಶಿವರಾಜ ತಂಡರಗಿ ವಿರುದ್ಧ ನೀಡಿರುವಂತ ದೂರಿನಲ್ಲಿ, ದಿನಾಂಕ 25.03.2024ರ ವಿಜಯವಾಣಿ ಪತ್ರಿಕೆಯ ಪುಟ ಸಂಖ್ಯೆ 7ಸಿ ರಲ್ಲಿ ವರದಿಯಾಗಿರುವಂತೆ ಭಾನುವಾರ ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ “10 ವರ್ಷಗಳಲ್ಲಿ 20 ಕೋಟಿ ಉದ್ಯೋಗ ದೊರೆಯಬೇಕಿತ್ತು ಯುವಕರು ಉದ್ಯೋಗ ನೀಡಿ ಎಂದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ ಎಂದು ಹೇಳಿದೆ. ಇದರಿಗೆ ಚುನವಣೆಯಲ್ಲಿ ಮತ ಕೇಳಲು ನಾಚಿಕೆಯಾಗಬೇಕು “ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಿರಿ” ಎಂದು ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕ…

Read More

ಬೆಂಗಳೂರು: ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಕಪಾಳಕ್ಕೆ ಜನತೆ ಲೋಕಸಭಾ ಚುನಾವಣೆಯಲ್ಲಿ ಬಾರಿಸುವುದು ಶತಸಿದ್ಧ ಎಂಬುದಾಗಿ ಬಿಜೆಪಿ ಕರ್ನಾಟಕ ಹೇಳಿದೆ. ಈ ಕುರಿತು ಎಕ್ಸ್ ಮಾಡಿದ್ದು, ಅಯೋಗ್ಯ ಕರ್ನಾಟಕ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಹಿಡಿದು ನಾಲಾಯಕ್ ಕೈ ಶಾಸಕರು ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಕಿಡಿಕಾರಿದೆ. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕೊಪ್ಪಳದಲ್ಲಿ ಸಚಿವ ಶಿವರಾಜ್‌ ತಂಗಡಗಿ ಅವರು ಹತಾಶೆಗೊಂಡು ತಮ್ಮ ವ್ಯಕ್ತಿತ್ವವನ್ನು ಬೆತ್ತಲಾಗಿಸಿಕೊಂಡಿದ್ದಾರೆ. ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಕಪಾಳಕ್ಕೆ ಜನತೆ ಲೋಕಸಭಾ ಚುನಾವಣೆಯಲ್ಲಿ ಬಾರಿಸುವುದು ಶತಸಿದ್ಧ ಎಂದು ಹೇಳಿದೆ. ಅಧಿಕಾರಕ್ಕೆ ಬಂದು ಹತ್ತು ತಿಂಗಳಾದರೂ ಬರ ಪರಿಹಾರ ಕೊಡದೆ, ಅಭಿವೃದ್ಧಿಯೂ ಮಾಡದೆ, ಕುಡಿಯುವುದಕ್ಕೆ ನೀರು ಕೊಡಲಾಗದೆ ಇರುವ ಅಯೋಗ್ಯರು, ಜನರಿಂದ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ವಾಗ್ಧಾಳಿ ನಡೆಸಿದೆ. https://twitter.com/BJP4Karnataka/status/1772225243207156039 https://kannadanewsnow.com/kannada/shivamogga-if-you-have-election-related-complaints-call-this-number/ https://kannadanewsnow.com/kannada/one-teacher-suspended-for-allowing-mass-copying-in-sslc-exam-in-yadgir/

Read More

ಮಹಾಲಕ್ಷ್ಮಿ ಒಂದೇ ಸ್ಥಳದಲ್ಲಿ ಶಾಶ್ವತವಾಗಿ ಉಳಿಯುವುದಿಲ್ಲ. ಇಂದು ನಮ್ಮ ಕೈಯಲ್ಲಿರುವ ಮಹಾಲಕ್ಷ್ಮಿ ನಾಳೆ ಒಂದಲ್ಲ ಒಂದು ಕಾರಣಕ್ಕೆ ಪರರ ಕೈ ಹೋಗಬೇಕು. ನಮಗೆ ಬಂದ ಹಣವನ್ನು ಪೆಟ್ಟಿಗೆಯಲ್ಲಿಟ್ಟು ಬೀಗ ಹಾಕಿದರೆ ಪ್ರಯೋಜನವಿಲ್ಲ. ಆ ಹಣವು ಕೇವಲ ಕಾಗದದ ಸಮಾನವಾಗಿದೆ. ಅದನ್ನು ತೆಗೆದುಕೊಂಡು ಖರ್ಚು ಮಾಡಿದರೆ ಅಥವಾ ಇತರರಿಗೆ ಲಭ್ಯವಾಗುವಂತೆ ಮಾಡಿದರೆ ಮಾತ್ರ ಹಣಕ್ಕೆ ಮೌಲ್ಯವಿದೆ. ಅಂದಹಾಗೆ, ಯಾವುದೋ ಕಾರಣದಿಂದ ನಿಮ್ಮ ಕೈಯಲ್ಲಿದ್ದ ಹಣವೆಲ್ಲಾ ನಿನ್ನನ್ನು ಬಿಟ್ಟು ಹೋಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ…

Read More

ಶಿವಮೊಗ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವಿಚಾರಗಳ ಕುರಿತು ಯಾವುದೇ ದೂರುಗಳನ್ನು ಸಲ್ಲಿಸಲು ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರಲ್ಲಿ ಯಾವುದೇ ರೀತಿಯ ಚುನಾವಣಾ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ದೂ.ಸಂ: 08182-220016 ನ್ನು ಸಂಪರ್ಕಿಸಿ ಸಲ್ಲಿಸಬಹುದೆಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ ಪಿ ಮುದ್ದಜ್ಜಿ ತಿಳಿಸಿದ್ದಾರೆ. ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ: ಶಿವಮೊಗ್ಗ ರಂಗಾಯಣವು 2024ರ ಏಪ್ರಿಲ್ 12 ರಿಂದ ಮೇ 01 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ-2024’ ಹೆಸರಿನಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ 08 ರಿಂದ 14 ವರ್ಷ ವಯೋಮಾನದ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ಕಥೆ ಹೇಳುವುದು, ಪವಾಡ ರಹಸ್ಯ ಬಯಲು, ಕುದುರೆ, ಎತ್ತಿನಗಾಡಿ ಸವಾರಿ, ಹೋಳಿ, ನಾಟಕ, ಮೈಮ್, ರಂಗಾಟ,…

Read More

ನವದೆಹಲಿ: 2025ರ ವೇಳೆಗೆ ಭಾರತವು ಕನಿಷ್ಠ ವೇತನವನ್ನು ಜೀವನ ವೇತನದೊಂದಿಗೆ ಬದಲಾಯಿಸೋ ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಇತ್ತೀಚೆಗೆ, ಕಾರ್ಮಿಕ ಹಕ್ಕುಗಳ ಸುಧಾರಣೆಯ ಒಂದು ಹೆಜ್ಜೆಯಾಗಿ, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ‘ಜೀವನ ವೇತನ’ ಕಡೆಗೆ ಅಗತ್ಯವಾದ ಹೆಜ್ಜೆ ಇಡಲು ಒಪ್ಪಂದದತ್ತ ಸಾಗಿತು. ಜಾಗತಿಕ ಸಂಸ್ಥೆಯ ದಾಖಲೆಯು ಪರಿಕಲ್ಪನೆಯ ಮಹತ್ವವನ್ನು ಒತ್ತಿಹೇಳಿತು, ಹೆಚ್ಚಿನ ಸ್ಪಷ್ಟತೆಯನ್ನು ತಂದಿತು. ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, 2025 ರ ವೇಳೆಗೆ ಭಾರತವು ಕನಿಷ್ಠ ವೇತನ ವ್ಯವಸ್ಥೆಯಿಂದ ಜೀವಂತ ವೇತನ ವ್ಯವಸ್ಥೆಗೆ ಬದಲಾಗಲಿದೆ ಎಂದು ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕನಿಷ್ಠ ವೇತನ ಈಗ ಸರಳವಾಗಿ ಹೇಳುವುದಾದರೆ, ಉದ್ಯೋಗದಾತನು ಉದ್ಯೋಗಿಗೆ ಪಾವತಿಸಬೇಕಾದ ಪರಿಹಾರದ ನಿಗದಿತ ಕಡಿಮೆ ಆಧಾರವೆಂದರೆ ಕನಿಷ್ಠ ವೇತನ. ಇಲ್ಲಿ ಪ್ರಾಥಮಿಕ ಘಟಕವೆಂದರೆ ಒಂದು ಗಂಟೆಯಲ್ಲಿ ಗಳಿಸಿದ ಮೊತ್ತ. ಉದ್ಯೋಗದಾತರು ಆ ಅಂಕಕ್ಕಿಂತ ಕಡಿಮೆ ಪಾವತಿ ಮಾಡಲು ಸಾಧ್ಯವಿಲ್ಲ. ಭಾರತದಲ್ಲಿ, ಸರಾಸರಿ ವೇತನವು ರಾಜ್ಯದಿಂದ ರಾಜ್ಯಕ್ಕೆ ಮತ್ತು ನಗರದಿಂದ ನಗರಕ್ಕೆ ಬದಲಾಗುತ್ತದೆ. ಗಂಟೆಗೆ 22 ರೂ.ಗಳಿಂದ 50 ರೂ.ಗೆ.…

Read More

ಯಾದಗಿರಿ: ಜಿಲ್ಲೆಯಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಂತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಓರ್ವ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 25-03-2024ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು(ಬಾಲಕರ) ಹುಣಸಗಿ ತಾಲೂಕು, ಸುರಪುರದಲ್ಲಿ ನಡೆಯುತ್ತಿದ್ದಂತ ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಪರೀಕ್ಷೆಯ ವೇಳೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯ್ತಿ ಯಾದಗಿರಿ ವೆಬ್ ಕಾಸ್ಟಿಂಗ್ ಸಿಸಿ ಕ್ಯಾಮರಾ ವೀಕ್ಷಣೆ ಮಾಡಿದಾಗ, ಕೊಠಡಿ ಸಂಖ್ಯೆ-2ರ ಕೋಣೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ. ಈ ಕೊಠಡಿಯ ಮೇಲ್ವಿಚಾರಕರಾಗಿದ್ದಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಏವೂರದ ಸಹ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರು ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅಲ್ಲದೇ ಮುಖ್ಯ ಅಧೀಕ್ಷಕರ ಗಮನಕ್ಕೂ ತಂದಿರುವುದಿಲ್ಲ. ಈ…

Read More

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು 2024ರ ಏಪ್ರಿಲ್ 12 ರಿಂದ ಮೇ 01 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ-2024’ ಹೆಸರಿನಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ 08 ರಿಂದ 14 ವರ್ಷ ವಯೋಮಾನದ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ಕಥೆ ಹೇಳುವುದು, ಪವಾಡ ರಹಸ್ಯ ಬಯಲು, ಕುದುರೆ, ಎತ್ತಿನಗಾಡಿ ಸವಾರಿ, ಹೋಳಿ, ನಾಟಕ, ಮೈಮ್, ರಂಗಾಟ, ಜನಪದ ಗೀತೆ, ಹುಲಿನೃತ್ಯ, ಸಿಂಹನೃತ್ಯ, ಮಕ್ಕಳ ಸಂತೆ, ರಂಗ ಜಾಥಾ, ಮುಖವಾಡ ತಯಾರಿ, ಚಿತ್ರಕಲೆ, ಮಕ್ಕಳ ಸಿನಿಮಾ, ನಾಟಕ ವೀಕ್ಷಣೆ, ಹೊರಸಂಚಾರ, ಮಡಿಕೆ ತಯಾರಿ, ತಮಟೆ ವಾದನ ಹೀಗೆ ಹಲವು ಮಜಲುಗಳನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿಸುತ್ತ ನಾಟಕಕ್ಕೆ ಸಂಬಂಧಿಸಿದ ಪೂರಕ ಕಲೆಗಳನ್ನು ಶಿಬಿರದಲ್ಲಿ ಕಲಿಸಲಾಗುವುದು. ಮೇ 02 ಮತ್ತು 03 ರಂದು ಶಿಬಿರದಲ್ಲಿ ಕಲಿಸಿದ ನಾಟಕಗಳನ್ನು/ ಕಲೆಗಳನ್ನು ‘ರಂಗಾಯಣದ ಚಿಣ್ಣರ ರಂಗೋತ್ಸವ’ದಲ್ಲಿ ಪ್ರದರ್ಶಿಸಲಾಗುವುದು ಎಂದು ರಂಗಾಯಣದ ನಿರ್ದೇಶಕರು ತಿಳಿಸಿರುತ್ತಾರೆ. ತರಗತಿಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ…

Read More