Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಬಾಬು ಅವರು “ಮೇಕೆದಾಟು ಯೋಜನೆ ಜಾರಿಗೆ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ. ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಈ ಯೋಜನೆ ಪರವಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ಬೆಂಬಲಕ್ಕೆ ಧನ್ಯವಾದಗಳು, ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ ಎಂದರು. ಕುಮಾರಸ್ವಾಮಿ ಅವರು ಸಹ ಶೀಘ್ರ ಗುಣಮುಖರಾಗಲಿ. ಸುಮಲತಾ ಅವರನ್ನು ಅಕ್ಕ ಎಂದು ಕುಮಾರಸ್ವಾಮಿ ಕರೆದಿದ್ದಾರೆ. ಅವರ ಪರವಾಗಿ…
ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ನಂತ್ರ ಭೀಕರ ಬರಗಾಲ ಆವರಿಸಿದೆ. ಬರಗಾಲದಿಂದಾಗಿ ಬೆಳೆ ನಾಶಗೊಂಡ ಪರಿಣಾಮ ರೈತನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಶಿವಪುರ ಗ್ರಾಮದಲ್ಲಿ ರೈತ ಭೀಮಾನಾಯ್ಕ್ (38) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ರೈತರಾಗಿದ್ದಾರೆ. ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ನೇಣಮುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕ್ ಸೇರಿದಂತೆ ವಿವಿಧ ಕಡೆಯಿಂದ ರೈತ ಭೀಮಾ ನಾಯ್ಕ್ 12 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸೋದಕ್ಕೆ ಇದ್ದಂತ ಮಾರ್ಗ ಮೆಕ್ಕೆಜೋಳದ ಬೆಳೆಯೇ ಕೈಕೊಟ್ಟ ಕಾರಣ, ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bengaluru-rain-dance-to-be-organised-at-private-resort-people-call-it-dont-care-for-water-boards-order/ https://kannadanewsnow.com/kannada/breaking-one-worker-killed-in-explosion-while-loading-firecrackers-in-mandya/
ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಎರಡೂ ಚಿನ್ಹೆಯನ್ನು ಸಮತಲವಾಗಿ ಬಳಸುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ದಿನಾಂಕ: 26-04-2024 ಮತ್ತು 07-05-2024 ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕೂಟದ (NDA)-ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದು ತಮಗೆಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದಿದ್ದಾರೆ. ಈ ಚುನಾವಣೆಯನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸಬೇಕಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ನರೇಂದ್ರ ಮೋದಿಯವರ ನೇತೃತ್ವದ NDA ಮೈತ್ರಿಕೂಟವನ್ನು ಬೆಂಬಲಿಸಿ ಎರಡು ಪಕ್ಷಗಳು ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಗಾಗಿ ಬೆಂಬಲಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿನ 28 ಲೋಕಸಭಾ ಕ್ಷೇತ್ರಗಳ ಪೈಕಿ, ಮಂಡ್ಯ, ಹಾಸನ ಮತ್ತು ಕೋಲಾರ (ಮೀಸಲು) ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಉಳಿದ 25 ಲೋಕಸಭಾ…
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1 ರಾಜ್ಯಾಧ್ಯಂತ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು 8.32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-1ಕ್ಕೆ ಹಾಜರಾಗಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಲಾಂಗ್ವೇಜ್-1ರ ಪರೀಕ್ಷೆ ನಡೆಯಿತು. ಈ ಪರೀಕ್ಷೆಯನ್ನು ಬೆಂಗಳೂರು ನಾರ್ಥ್ ವಿಭಾಗದಿಂದ 46,313 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬೆಂಗಳೂರು ಸೌತ್ 58,789 ವಿದ್ಯಾರ್ಥಿಗಳು, ರಾಮನಗರ 12,842, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14,099 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದಿದೆ. ಇಂದಿನ ಲಾಂಗ್ವೆಜ್-1ರ ಪರೀಕ್ಷೆಗೆ 8,45,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,32,343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ವಿಜಯಪುರದಲ್ಲಿ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. 13,468 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಶೇ.98.41ರಷ್ಟು ವಿದ್ಯಾರ್ಥಿಗಳು ಇಂದಿನ ಎಸ್ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗಿರೋದಾಗಿ ತಿಳಿಸಿದೆ. https://kannadanewsnow.com/kannada/modis-10-year-old-achievements-will-be-a-record-victory-from-brahmastra-by-vijayendra/ https://kannadanewsnow.com/kannada/bigg-boss-kannada-fame-sonu-srinivasa-gowda-sent-to-14-day-judicial-custody/
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ನುಡಿದರು. ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ; ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ತಿಳಿಸಿದರು. ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ ಎಂದು ಅವರು…
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ 700 ಕೆಜಿ ಬೆಳ್ಳಿಯ ಉಡುಗೋರೆಗಳನ್ನು ನೀಡಲಾಗಿತ್ತು. ಈ ಉಡುಗೋರೆಗಳನ್ನು ಮಲೆಮಹದೇಶ್ವರ ಸ್ವಾಮಿಗೆ ಅರ್ಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಸಭೆ, ಸಮಾರಂಭಗಳಲ್ಲಿ ಉಡುಗೋರೆಯಾಗಿ ಬಂದಿದ್ದ ಬೆಳ್ಳಿಯ ಗದೆ, ಕತ್ತಿ ಮುಂತಾದ ವಸ್ತುಗಳನ್ನು ಸೇರಿದಂತೆ 700 ಕೆಜಿಯಷ್ಟು ಬೆಳ್ಳಿಯನ್ನು ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಆದ್ರೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದು ಯಾವುದನ್ನು ಹೇಳಿಕೊಳ್ಳಲಿಲ್ಲ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷವು ಶನಿವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಭಕ್ತಿಯನ್ನು ಬೀದಿಯಲ್ಲಿ ತೋರಿಸುವುದಲ್ಲ. ಆತ್ಮದಲ್ಲಿ ತೋರಿಸಬೇಕು. ನಾವು ಕೂಡ ರಾಮೆ ರಾಮ ಎನ್ನುವ ಮಂತ್ರವನ್ನು ಪಠಿಸುತ್ತಾ ಸೀತಾರಾಮನಿಗೆ ಕೈ ಮುಗಿಯುತ್ತೇವೆ ಎಂದರು. ಜೈ ಶ್ರೀರಾಮ್ ಎಂದು ಆಕ್ರೋಶದಿಂದ ಕೂಗುವುದಿಲ್ಲ. ನಮ್ಮದು ತಾರತಮ್ಯ ಇಲ್ಲದ ಆಡಳಿತವಾಗಿದೆ. ಟಿಕೆಟ್ ಹಂಚಿಕೆಯಲ್ಲೂ ಎಲ್ಲಾ ವರ್ಗಕ್ಕೂ ಸಮಾನತೆ ನೀಡಲಾಗಿದೆ ಎಂದು ತಿಳಿಸಿದರು. https://kannadanewsnow.com/kannada/indias-richest-people-cross-1300-for-the-first-time-by-more-than-75/ https://kannadanewsnow.com/kannada/bigg-boss-kannada-fame-sonu-srinivasa-gowda-sent-to-14-day-judicial-custody/
ಬೆಂಗಳೂರು: ನಗರದ ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿವಾಸದ ಮುಂದೆ ಜೆಡಿಎಸ್ ಮುಖಂಡರ ಹೈಡ್ರಾಮಾವೇ ನಡೆದಿದೆ. ಚನ್ನಪಟ್ಟಣ ಬಿಟ್ಟು ಹೋಗದಂತೆ ಜೆಡಿಎಸ್ ಮುಖಂಡರು ಕೈ ಕೊಯ್ದುಕೊಂಡು ಹೈಡ್ರಾಮಾವನ್ನೇ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆಯೊಳಗೆ ಅಧಿಕೃತವಾಗಿ ಆ ಬಗ್ಗೆ ಕುಮಾರಸ್ವಾಮಿ ಘೋಷಣೆ ಕೂಡ ಮಾಡಲಿದ್ದಾರೆ. ಈ ವಿಷಯವನ್ನು ಅರಿತಂತ ರಾಮನಗರ, ಚನ್ನಪಟ್ಟಣದ ಜೆಡಿಎಸ್ ಮುಖಂಡರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ಆಗಮಿಸಿ, ಚನ್ನಪಟ್ಟಣ ಬಿಟ್ಟು ಹೋಗದಂತೆ ಆಗ್ರಹಿಸಿ ಒತ್ತಾಯಿಸಿದರು. ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಟ್ಟು ಹೋಗದಂತೆ ಆಗ್ರಹಿಸಿದಂತ ಜೆಡಿಎಸ್ ಮುಖಂಡರೊಬ್ಬರು ಕೈಯನ್ನು ಕೊಯ್ದುಕೊಂಡು ಪ್ರತಿಭಟನೆ ನಡೆಸಿ ಆಗ್ರಹಿಸಿದರು. ಈ ಮೂಲಕ ಹೆಚ್.ಡಿಕೆ ನಿವಾಸದ ಮುಂದೆ ಇಂದು ಹೈಡ್ರಾಮಾವೇ ನಡೆಯಿತು. https://kannadanewsnow.com/kannada/indias-richest-people-cross-1300-for-the-first-time-by-more-than-75/ https://kannadanewsnow.com/kannada/bigg-boss-kannada-fame-sonu-srinivasa-gowda-sent-to-14-day-judicial-custody/
ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳೋ ವೀಕ್ಷಕರಿಗೆ ಕೆಲ ವಸ್ತುಗಳನ್ನು ಕ್ರೀಡಾಂಗಣದೊಳಗೆ ಕೊಂಡೊಯ್ಯೋದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ಬಗ್ಗೆ ಮುಂದೆ ಓದಿ. ಬಹುನಿರೀಕ್ಷಿತ ಐಪಿಎಲ್ ಪಂದ್ಯಾವಳಿಯೊಂದಿಗೆ ಕ್ರಿಕೆಟ್ ಜ್ವರವು ಬೆಂಗಳೂರನ್ನು ಆವರಿಸಿರುವುದರಿಂದ, ಪಂದ್ಯಗಳಿಗೆ ಬರುವ ಪ್ರೇಕ್ಷಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಯಾವುದೇ ಪ್ರಯತ್ನವನ್ನು ಮಾಡಿಲ್ಲ. ಭಾಗವಹಿಸುವ ಎಲ್ಲರಿಗೂ ಸುಗಮ ಮತ್ತು ಸುರಕ್ಷಿತ ಅನುಭವವನ್ನು ಖಾತರಿಪಡಿಸಲು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ನಿಖರವಾಗಿ ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ. ಒಂದು ಸಾವಿರ ಪೊಲೀಸರ ಬೃಹತ್ ನಿಯೋಜನೆಯೊಂದಿಗೆ, ಭದ್ರತಾ ಕ್ರಮಗಳು ಕ್ರೀಡಾಂಗಣದ ಆವರಣಕ್ಕೆ ಮಾತ್ರವಲ್ಲದೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತಹ ಜನಪ್ರಿಯ ಪ್ರದೇಶಗಳನ್ನು ಸಹ ಒಳಗೊಂಡಿವೆ. ಕಾನೂನು ಜಾರಿಯ ಜಾಗರೂಕ ಉಪಸ್ಥಿತಿಯು ಯಾವುದೇ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುತ್ತದೆ. ಭದ್ರತೆಯನ್ನು ಮತ್ತಷ್ಟು ಕಾಪಾಡಿಕೊಳ್ಳಲು, ಕಠಿಣ ಸ್ಕ್ರೀನಿಂಗ್ ಪ್ರೋಟೋಕಾಲ್ಗಳನ್ನು ಜಾರಿಗೆ ತರಲಾಗಿದೆ, 300 ವ್ಯಕ್ತಿಗಳು ಸಮರ್ಪಿತ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚೂನರ್ ಕಾರು ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಕಳ್ಳತನವಾಗಿತ್ತು. ಮಲ್ಲಿಕಾ ನಡ್ಡಾ ಅವರ ಕಾರನ್ನು ಗೋವಿಂದಪುರಿಯ ಸೇವಾ ಕೇಂದ್ರಕ್ಕೆ ಕರೆದೊಯ್ದು ನಂತರ ಅದನ್ನು ಕಳವು ಮಾಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಾರಿನ ಚಾಲಕ ಜೋಗಿಂದರ್ ಸಿಂಗ್ ಮಾರ್ಚ್ 19ರಂದು ದೂರು ದಾಖಲಿಸಿದ್ದರು. ಸರ್ವಿಸ್ ಗಾಗಿ ಕಾರನ್ನು ಬಿಟ್ಟ ನಂತರ, ಅವರು ಊಟಕ್ಕಾಗಿ ಮನೆಗೆ ಹೋದರು, ಆದರೆ ಹಿಂದಿರುಗಿದಾಗ ಕಾರು ಕಾಣೆಯಾಗಿದೆ ಎಂದು ಅವರು ವರದಿ ಮಾಡಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಪೊಲೀಸರಿಗೆ ದೊರೆತ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಟೊಯೊಟಾ ಫಾರ್ಚೂನರ್ ಕೊನೆಯ ಬಾರಿಗೆ ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ ಎಂದು ಸುದ್ದಿ ವರದಿಗಳು ತಿಳಿಸಿವೆ. ಈ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆಯನ್ನು ಹೊಂದಿದೆ ಎಂದು ವಿಯಾನ್ ಹೇಳಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರು ಕಳ್ಳತನ 2.5 ಪಟ್ಟು ಹೆಚ್ಚಳ…
ಮಾಸ್ಕೋ: ಮಾಸ್ಕೋದಲ್ಲಿ ಭಾನುವಾರ ನಡೆದ ಸಂಗೀತ ಕಚೇರಿ ಮೇಲೆ ದಾಳಿ ನಡೆಸಿದ ಆರೋಪ ಹೊತ್ತಿರುವ ನಾಲ್ವರು ಶಂಕಿತರಲ್ಲಿ ಮೂವರು ರಷ್ಯಾದ ನ್ಯಾಯಾಲಯದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ಎಲ್ಲದರ ನಡುವೆ, ರಷ್ಯಾದ ಭದ್ರತಾ ಸಿಬ್ಬಂದಿ ದಾಳಿಗೆ ಸಂಬಂಧಿಸಿದಂತೆ ಬಂಧಿಸಿದ ಪುರುಷರಿಗೆ ಚಿತ್ರಹಿಂಸೆ ನೀಡುತ್ತಿರುವ ಚಿತ್ರಗಳು ಮತ್ತು ವೀಡಿಯೊಗಳು ಆನ್ ಲೈನ್ ನಲ್ಲಿ ಕಾಣಿಸಿಕೊಂಡಿವೆ. ಒಬ್ಬ ವ್ಯಕ್ತಿಯ ಜನನಾಂಗಗಳಿಗೆ ವಿದ್ಯುತ್ ಆಘಾತಗಳನ್ನು ನೀಡುತ್ತಿರುವುದನ್ನು ಒಂದು ಚಿತ್ರ ತೋರಿಸಿದೆ. ಎರಡನೇ ಫೋಟೋದಲ್ಲಿ ರಷ್ಯಾದ ಭದ್ರತಾ ಪಡೆಗಳು ವ್ಯಕ್ತಿಯೊಬ್ಬನ ಕಿವಿಯನ್ನು ತಿನ್ನುವಂತೆ ಒತ್ತಾಯಿಸುತ್ತಿರುವುದನ್ನು ತೋರಿಸಿದೆ. ಘಟನೆ ಬೆಳಕಿಗೆ ಬಂದ ನಂತರ ಶಂಕಿತರಿಗೆ ಕ್ರೂರ ಚಿತ್ರಹಿಂಸೆ ನೀಡಲಾಯಿತು. ರಷ್ಯಾದ ಭದ್ರತಾ ಸಿಬ್ಬಂದಿ 80 ವೋಲ್ಟ್ ಬ್ಯಾಟರಿಯಿಂದ ಚಾಲಿತ ಮಿಲಿಟರಿ ರೇಡಿಯೋಗೆ ಜೋಡಿಸಲಾದ ತಂತಿಗಳಿಗೆ ಶಂಸುದ್ದೀನ್ ಫರಿದುದ್ದೀನ್ ಎಂಬ ಶಂಕಿತನ ಜನನಾಂಗವನ್ನು ಜೋಡಿಸುತ್ತಿದ್ದಂತೆ ಚಿತ್ರಹಿಂಸೆ ನೀಡುತ್ತಿರುವ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. https://twitter.com/TWMCLtd/status/1771932814428012651 ಏತನ್ಮಧ್ಯೆ, ಸೈದಕ್ರಮಿ ಮುರೋದಲಿ ರಾಚಬಲಿಜೋಡಾ ಎಂಬ ಇನ್ನೊಬ್ಬ ಶಂಕಿತನನ್ನು ಭದ್ರತಾ ಪಡೆಗಳು ಅವನ ಕಿವಿಗಳನ್ನು…