Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಇದೀಗ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ, ಗುಡುಗು ಸಹಿತ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಮೆಟ್ರೋ ರೈಲ್ವೆ ಹಳಿಯ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದಿದೆ. ಈ ಹಿನ್ನಲೆಯಲ್ಲಿ ಇಂದ್ರನಗರದಿಂದ ವೈಟ್ ಫೀಲ್ಡ್ ಹಾಗೂ ಎಂಜಿ ರಸ್ತೆ ನಡುವಿನ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಟ್ರಿನಿಟಿ ನಿಲ್ದಾಣದ ನಂತರ ಎಂಜಿ ರಸ್ತೆಯ ಕಡೆಗೆ ಮೆಟ್ರೋ ಹಳಿಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಈ ಕಾರಣದಿಂದಾಗಿ ಇಂದ್ರನಗರದಿಂದ ವೈಟ್ಫೀಲ್ಡ್ ಮತ್ತು ಎಂಜಿ ರಸ್ತೆಯಿಂದ ಚಲ್ಲಘಟ್ಟದವರೆಗೆ ರಾತ್ರಿ 7.26ರಿಂದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ ಎಂದಿದೆ. ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಬಿದ್ದಿರುವಂತ ಮರದ ಕೊಂಬೆಯನ್ನು ತೆರವುಗೊಳಿಸೋ ಕಾರ್ಯ ನಡೆಯುತ್ತಿದೆ. ಈ ತೆರವು ಕಾರ್ಯಾಚರಣೆ ನಡೆದ ಬಳಿಕ, ಸಾಮಾನ್ಯ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಪ್ರಯತ್ನಿಸಲಾಗುತ್ತದೆ ಅಂತ ತಿಳಿಸಿದೆ. https://twitter.com/OfficialBMRCL/status/1797270565172179155 https://kannadanewsnow.com/kannada/rohit-sharmas-fake-pics-with-big-belly-go-viral/ https://kannadanewsnow.com/kannada/modi-will-become-pm-again-kaala-bhairaveshwars-dog-predicts/
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದಪ್ಪ ಮೈಕಟ್ಟುಗಾಗಿ ಆನ್ಲೈನ್ನಲ್ಲಿ ಆಗಾಗ್ಗೆ ಟ್ರೋಲ್ಗೆ ಒಳಗಾಗುತ್ತಾರೆ. ಅವರ ನಕಲಿ ಚಿತ್ರ ವೈರಲ್ ಆದ ನಂತರ ಅವರು ಮತ್ತೊಮ್ಮೆ ಫ್ಯಾಟ್ ಶೇಮಿಂಗ್ಗೆ ಒಳಗಾಗುತ್ತಾರೆ. ನ್ಯೂಯಾರ್ಕ್ನಲ್ಲಿ ಶನಿವಾರ ನಡೆದ ಬಾಂಗ್ಲಾದೇಶ ವಿರುದ್ಧದ ಟಿ 20 ವಿಶ್ವಕಪ್ 2024 ರ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಭಾರತವನ್ನು ಮುನ್ನಡೆಸಿದ್ದರು. ರೋಹಿತ್ ತಮ್ಮ ಬೌಲರ್ಗಾಗಿ ಮೈದಾನವನ್ನು ಸಜ್ಜುಗೊಳಿಸುತ್ತಿರುವುದನ್ನು ಕ್ಯಾಮೆರಾಗಳು ತೋರಿಸಿವೆ. ಅದರ ಸ್ಟಿಲ್ ಚಿತ್ರವು ಈಗ ಸಾಮಾಜಿಕ ಮಾಧ್ಯಮದಲ್ಲಿ ಸುತ್ತುತ್ತಿದೆ. ಆದರೆ ಚಿತ್ರದಲ್ಲಿ ರೋಹಿತ್ ದೊಡ್ಡ ಬೊಜ್ಜಿನ ಹೊಟ್ಟೆಯನ್ನು ಹೊಂದಿರುವುದನ್ನು ತೋರಿಸುತ್ತದೆ. ಇದನ್ನು ಕೆಲವು ಬಳಕೆದಾರರು ಸ್ಪಷ್ಟವಾಗಿ ಮಾರ್ಫಿಂಗ್ ಮಾಡಿ ನಂತರ ಅದನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/XaviVision/status/1796965760863981687 ನೆಟ್ಟಿಗರು ತಕ್ಷಣ ಅದರ ಬಗ್ಗೆ ಕಾಮೆಂಟ್ ಮಾಡಲು ಪ್ರಾರಂಭಿಸಿದರು. ಕೆಲವರು ಎಂಎಸ್ ಧೋನಿ ಅವರ ತಲೆಯನ್ನು ಹೊಂದಿರುವ ಮಗುವಿನ ಚಿತ್ರವನ್ನು ಸಹ ಸೇರಿಸಿದ್ದಾರೆ. “ಅಕಾಯ್ ಶೀಘ್ರದಲ್ಲೇ ಸ್ನೇಹಿತನನ್ನು ಪಡೆಯುತ್ತಿದ್ದಾನೆ” ಎಂದು ಬಳಕೆದಾರರು ಚಿತ್ರಕ್ಕೆ…
ಹೈದರಾಬಾದ್: ಆಂಧ್ರಪ್ರದೇಶ ಮರುಸಂಘಟನೆ ಕಾಯ್ದೆ, 2014 ರ ಪ್ರಕಾರ ದೇಶದ ಗದ್ದಲದ ಮೆಟ್ರೋಪಾಲಿಟನ್ ನಗರಗಳಲ್ಲಿ ಒಂದಾದ ಹೈದರಾಬಾದ್, ಭಾನುವಾರದಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಾಮಾನ್ಯ ರಾಜಧಾನಿಯಾಗುವುದನ್ನು ನಿಲ್ಲಿಸಿದೆ. ಹೈದರಾಬಾದ್ ಇನ್ಮೇಲೆ ತೆಲಂಗಾಣಕ್ಕೆ ಮಾತ್ರವೇ ಸೀಮಿತವಾಗಿದೆ. ಜೂನ್ 2 ರಿಂದ ಹೈದರಾಬಾದ್ ತೆಲಂಗಾಣದ ರಾಜಧಾನಿಯಾಗಲಿದೆ. 2014 ರಲ್ಲಿ ಅವಿಭಜಿತ ಆಂಧ್ರಪ್ರದೇಶದ ವಿಭಜನೆಯಾದಾಗ ಹೈದರಾಬಾದ್ ಅನ್ನು 10 ವರ್ಷಗಳ ಕಾಲ ಎರಡು ರಾಜ್ಯಗಳ ರಾಜಧಾನಿಯನ್ನಾಗಿ ಮಾಡಲಾಯಿತು. ತೆಲಂಗಾಣ ರಾಜ್ಯ 2014ರ ಜೂನ್ 2ರಂದು ಅಸ್ತಿತ್ವಕ್ಕೆ ಬಂದಿತು. ನಿಗದಿತ ದಿನದಂದು (ಜೂನ್ 2) ಅಸ್ತಿತ್ವದಲ್ಲಿರುವ ಆಂಧ್ರಪ್ರದೇಶದ ಹೈದರಾಬಾದ್, ಹತ್ತು ವರ್ಷಗಳನ್ನು ಮೀರದ ಅವಧಿಗೆ ತೆಲಂಗಾಣ ರಾಜ್ಯ ಮತ್ತು ಆಂಧ್ರಪ್ರದೇಶ ರಾಜ್ಯದ ಸಾಮಾನ್ಯ ರಾಜಧಾನಿಯಾಗಲಿದೆ” ಎಂದು ಆಂಧ್ರಪ್ರದೇಶ ಮರುಸಂಘಟನೆ ಕಾಯ್ದೆ ತಿಳಿಸಿದೆ. “ಉಪ-ವಿಭಾಗ (1) ರಲ್ಲಿ ಉಲ್ಲೇಖಿಸಲಾದ ಅವಧಿ ಮುಗಿದ ನಂತರ, ಹೈದರಾಬಾದ್ ತೆಲಂಗಾಣ ರಾಜ್ಯದ ರಾಜಧಾನಿಯಾಗಲಿದೆ ಮತ್ತು ರಾಜ್ಯಕ್ಕೆ ಹೊಸ ರಾಜಧಾನಿ ಇರುತ್ತದೆ. ಆಂಧ್ರಪ್ರದೇಶ” ಎಂದು ಅದು ಹೇಳಿದೆ. ಫೆಬ್ರವರಿ 2014 ರಲ್ಲಿ ಸಂಸತ್ತಿನಲ್ಲಿ ಆಂಧ್ರಪ್ರದೇಶ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ವಿಶ್ರಾಂತಿಗೆಂದು ಇಂಧನ ಸಚಿವ ಕೆಜೆ ಜಾರ್ಜ್ ಅವರ ತೋಟದ ಮನೆಗೆ ತೆರಳಿದ್ದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯಗೂ ಪವರ್ ಕಟ್ ಬಿಸಿ ತಟ್ಟಿದೆ. ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ನಿನ್ನೆ ರಾತ್ರಿ ಸಿಎಂ ಸಿದ್ಧರಾಮಯ್ಯ ಅವರಿಗೂ ವಿಶ್ರಾಂತಿಯ ವೇಳೆಯಲ್ಲಿ ಪವರ್ ಕಟ್ ಬಿಸಿ ತಟ್ಟಿದೆ. ಸಚಿವ ಕೆ.ಜೆ ಜಾರ್ಜ್ ಅವರ ತೋಟದ ಮನೆಗೆ ಸಿಎಂ ಸಿದ್ಧರಾಮಯ್ಯ ವಿಶ್ರಾಂತಿಗೆ ತೆರಳಿದ್ದರು. ಈ ವೇಳೆಯಲ್ಲಿ ವಿದ್ಯುತ್ ಕೈಕೊಟ್ಟ ಪ್ರಸಂಗ ನಡೆದಿದೆ. ನಿನ್ನೆ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ನಿನ್ನೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಪವರ್ ಕಟ್ ಆಗಿದೆ. ಕೆಜೆ ಜಾರ್ಜ್ ಅವರ ತೋಟದ ಮನೆಯಲ್ಲಿ ಮಳೆಯಿಂದಾಗಿ ಪವರ್ ಕಟ್ ಆದ ಕಾರಣ, ಜನರೇಟರ್ ಬಳಸಿ ವಿದ್ಯುತ್ ಪೂರೈಕೆ ಮಾಡಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಬೆಸ್ಕಾಂ ಲೈನ್ ಮ್ಯಾನ್ ಗಳು ಬಂದು, ವಿದ್ಯುತ್ ದುರಸ್ಥಿ ಕಾರ್ಯ ನಡೆಸಿದ ನಂತ್ರ ಮರಳಿ…
ಬೆಂಗಳೂರು: ‘ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ಸಚಿವರು ವಿವರಗಳನ್ನು ಹಂಚಿಕೊಂಡಿದ್ದಾರೆ. ʼದೇಶದಲ್ಲಿ ಎಫ್ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು’ ಎಂದು ಅವರು ತಿಳಿಸಿದರು. ಕುಸಿತದ ವಿವರಗಳು ʼಹಣಕಾಸು ವರ್ಷ 2023ರಲ್ಲಿ 71 ಶತಕೋಟಿ ಡಾಲರ್ಗಳಷ್ಟಿದ್ದ ದೇಶಿ ಎಫ್ಡಿಐ, ಹಣಕಾಸು ವರ್ಷ 2024 ರಲ್ಲಿ 70 ಶತಕೋಟಿ ಡಾಲರ್ಗೆ ಕುಸಿದಿದೆ. ʼಹಣಕಾಸು ವರ್ಷ 2020-21ರಲ್ಲಿ ₹ 4.42 ಲಕ್ಷ ಕೋಟಿ, 2021-22ರಲ್ಲಿ ₹ 4.37…
ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜೂನ್.5 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಮೂಲಕ ಶರಣಾಗತಿಯ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮೇ 10 ರಂದು ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣೆಯ ಮತದಾನ ಶನಿವಾರ ಮುಕ್ತಾಯಗೊಂಡ ಒಂದು ದಿನದ ನಂತರ ಶರಣಾಗಿದ್ದಾರೆ. ಈಗ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ಬಗ್ಗೆ ನಡೆಯುತ್ತಿರುವ ಕಾನೂನು ಹೋರಾಟಗಳ ಮಧ್ಯೆ ಎಎಪಿ ಮುಖ್ಯಸ್ಥರಿಗೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಅವಕಾಶ ನೀಡಲು ಜಾಮೀನು ನೀಡಲಾಯಿತು. ಸುಮಾರು ಒಂದು ದಶಕದಿಂದ ದೆಹಲಿಯ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್ ಅವರು ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಮುಖಂಡರು ಆಗ್ರಹಿಸುತ್ತಿದ್ದಾರೆ. ಈ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಗಂಭೀರ ಆರೋಪ ಮಾಡಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿಯು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಲ್ಲಿ ತೆಲಂಗಾಣದ ರಾಜಕೀಯ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದರೆ ಅದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತರೇ ಇರಬೇಕು ಎಂದಿದೆ. ಕನ್ನಡಿಗರ ತೆರಿಗೆ ದುಡ್ಡನ್ನು ಲೂಟಿ ಮಾಡಿ ತೆಲಂಗಾಣದಲ್ಲಿ ಸುರಿದು ತೆಲಂಗಾಣ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು ಇದೇ ಕಾಂಗ್ರೆಸ್ ಸರ್ಕಾರ. ಇದೀಗ ಎರಡು ರಾಜ್ಯದಲ್ಲೂ ಅಧಿಕಾರದಲ್ಲಿರುವುದರಿಂದ ಹಗರಣ ನಡೆಸುವುದು ಸುಲಭವೆಂದುಕೊಂಡು #ATMSarkara ಸಿಕ್ಕಿ ಬಿದ್ದಿದೆ ಎಂಬುದಾಗಿ ಗುಡುಗಿದೆ. ಮಾನಗೇಡಿ ಕಾಂಗ್ರೆಸ್ ಇನ್ನೂ ಭ್ರಷ್ಟ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯದೆ ಇರುವುದು ದೊಡ್ಡ ಕುಳಗಳನ್ನೇ ರಕ್ಷಣೆ ಮಾಡುವ ಸಂಚು ಹಾಕಿಕೊಂಡಿದೆ. ಕೂಡಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಈ ಮೂಲಕ…
ಮೈಸೂರು: ಎಕ್ಸಿಟ್ ಪೋಲ್ ನಲ್ಲಿ ಎನ್ ಡಿಎ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ. ಮ್ಯಾಜಿಕ್ ಸಂಖ್ಯೆಯನ್ನು ದಾಟಲಿದೆ ಅಂತ ನಿನ್ನೆಯಷ್ಟೇ ತಿಳಿದು ಬಂದಿತ್ತು. ಈ ಬೆನ್ನಲ್ಲೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂಬುದಾಗಿ ಕಾಲ ಭರವೇಶ್ವರನ ಶ್ವಾನ ಭವಿಷ್ಯ ನುಡಿದಿದೆ. ಮೈಸೂರಿನ ಕಾಲಭೈರವೇಶ್ವರ ದೇವಸ್ಥಾನದಲ್ಲಿರುವಂತ ಶ್ವಾನದ ಭವಿಷ್ಯ ಅನೇಕ ಬಾರಿ ನಿಜವಾಗಿದೆ. ಇದೇ ಕಾರಣಕ್ಕಾಗಿ ಅನೇಕ ಭಕ್ತರು ಭವಿಷ್ಯ ನುಡಿಯನ್ನು ಕೇಳೋದಕ್ಕೂ ಇಲ್ಲಿಗೆ ಆಗಮಿಸಿ, ತಮ್ಮ ಕಷ್ಟ ಸುಖಗಳಿಗೆ ಹೇಳಿಕೆ ಪಡೆಯೋದು ಇದೆ. ಇಂತಹ ಮೈಸೂರಿನ ಕಾಲಭೈರವೇಶ್ವರ ದೇವಾಲಯದಲ್ಲಿ ಅರ್ಚಕರು ಈ ದೇಶದ ಪ್ರಧಾನಿ ಯಾರು ಆಗಲಿದ್ದಾರೆ ಅಂತ ರಾಹುಲ್ ಗಾಂಧಿ ಹಾಗೂ ಮೋದಿ ಪೋಟೋಗಳನ್ನು ಶ್ವಾನದ ಎದುರು ಇಟ್ಟು ಕೇಳಿದ್ದಾರೆ. ಭೈರವನ ಶ್ವಾನ ಪೂಜೆಯ ಬಳಿಕ ಮೋದಿ ಪೋಟೋವನ್ನು ಬಾಯಿಯಿಂದ ಕಚ್ಚಿಕೊಂಡು ಭವಿಷ್ಯ ನುಡಿದಿದೆ. ಇದಲ್ಲದೇ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆ ಎಂಬುದಾಗಿಯೂ ಭವಿಷ್ಯ ನುಡಿದಿರೋದಾಗಿ ತಿಳಿದು ಬಂದಿದೆ. ಈಗ ಭೈರವೇಶ್ವರನ ಶ್ವಾನ ಭವಿಷ್ಯ ನುಡಿದಿರುವಂತ ವೀಡಿಯೋ,…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕೆಂದು ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನಾಗೇಂದ್ರರ ರಾಜೀನಾಮೆ ಪಡೆಯುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು. ಸಮಗ್ರ ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಿ; ಎಸ್ಐಟಿ ತನಿಖೆ ಬೇಡ ಎಂದೂ ಅವರು ತಿಳಿಸಿದರು. ಈ ರೀತಿಯ ಹಗರಣ ರಾಜ್ಯದಲ್ಲಿ ಮೊದಲನೆಯದು ಇದ್ದಂತಿದೆ. ನಕಲಿ ಖಾತೆ ಸೃಷ್ಟಿಸಿ ಹಣವನ್ನು ಹೈದರಾಬಾದ್ಗೆ ಕಳಿಸಿದ್ದಾರೆ. ಸರಕಾರದ ಹಣ ಈ ರೀತಿ ದುರುಪಯೋಗ ಆಗಿರುವ ಪ್ರಥಮ ಪ್ರಕರಣದಂತಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು. ಇದು ಎಸ್ಸಿ, ಎಸ್ಟಿ ಜನಾಂಗದ ಹಣ. ಈ ಸಚಿವರು ಮೀಸಲು ಕ್ಷೇತ್ರದಿಂದ ಗೆದ್ದವರು. ಎಸ್ಸಿ ಸಮುದಾಯದ ಸಚಿವರಾಗಿ ಅವರ ಜವಾಬ್ದಾರಿ ಏನು? ಅವರು ಪ್ರಮಾಣವಚನಕ್ಕೆ ಬದ್ಧತೆ ಇರುವ ವ್ಯಕ್ತಿ ಆಗಿದ್ದರೆ ಸ್ವಾರ್ಥದ ಸಲುವಾಗಿ ಈ ರೀತಿ…
ಬೆಂಗಳೂರು: “ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು ಎಂದರು. ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ ಎಂದು ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು ಎಂದರು. ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ…












