Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಹೊಸಕೋಟೆ ನಗರದ (1) ಎಸ್.ಪಿ.ಜಿ. ಆಸ್ಪತ್ರೆ, (2) ಓವಮ್ ಆಸ್ಪತ್ರೆ, ಹೊಸಕೋಟೆ (3) ನೆಲಮಂಗಲದ ಅಸರಾ ಆಸ್ಪತ್ರೆ, ಈ ಖಾಸಗಿ ಆಸ್ಪತ್ರೆಗಳು ಪಿಸಿ & ಪಿಎನ್ಡಿಟಿ ಮತ್ತು ಎಂ.ಟಿ.ಪಿ. ಕಾಯ್ದೆ ಉಲ್ಲಂಘಿಸಿ, ಪರವಾನಗಿ ಪಡೆಯದೇ ಗರ್ಭಪಾತಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತಾದ ತಪಾಸಣೆ ಮಾಡಲು ಜಿಲ್ಲಾ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿತ ಅಧಿಕಾರ ಪಡೆದು ಹಾಗೂ ಈ ಖಾಸಗಿ ಆಸ್ಪತ್ರೆಗಳ ಅನಧಿಕೃತ ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಿರುತ್ತೇನೆಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯು ವರದಿ ಸಲ್ಲಿಸುತ್ತಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ತಮ್ಮ ಕರ್ತವ್ಯಕ್ಕೆ ಅಡಚಣೆ ಯುಂಟಾಗುತ್ತಿರುವುದರಿಂದ ತಮಗೆ ರಜೆ ಮೇಲೆ ತೆರಳಲು ಅನುಮತಿ ನೀಡುವಂತೆ ಹಾಗೂ ಜಿಲ್ಲಾ ಆಕುಕ ಅಧಿಕಾರಿಗಳ ಒತ್ತಡ ತಾಳದೆ ತಾವು…
ಬೆಂಗಳೂರು: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನುಗೌಡ ಅವರಿಗೆ ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 4 ದಿನ ಪೊಲೀಸ್ ಕಷ್ಟಡಿಗೆ ಕೋರ್ಟ್ ನೀಡಿ ಆದೇಶಿಸಿದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆ್ಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಲಾಗಿತ್ತು. ಈ ಬಳಿಕ ಅವರನ್ನು ನ್ಯಾಯಾಲಯದ…
ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿನ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿದಂತ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರು ಹನುಮಾನ್ ಜಾಲೀಸ್ ಹಾಕಿದ್ದಕ್ಕೆ ಅವರ ಮೇಲೆ ನಡೆದಿದ್ದ ಹಲ್ಲೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಸೇರಿ 41 ಮಂದಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ಇಂದು ಮಧ್ಯಂತರ ತಡೆಯನ್ನು ನೀಡಿ ಆದೇಶಿಸಿದೆ. ಇನ್ನೂ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಬಾಂಬರ್ ತಮಿಳುನಾಡಿನ ವ್ಯಕ್ತಿಯ ಬಗ್ಗೆ…
ಬೆಂಗಳೂರು: ನಗರದಲ್ಲಿ ಬಿಡದಿ ಹಾಫ್ ಮ್ಯಾರಥಾನ್, ಐಪಿಎಲ್ ಪಂದ್ಯಾವಳಿಯ ಕಾರಣದಿಂದಾಗಿ ಮೆಟ್ರೋ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ದಿನಾಂಕ 24ನೇ ಮಾರ್ಚ್ 2024 (ಭಾನುವಾರ) ದಂದು ನಿಗದಿಯಾಗಿರುವ ಬಿಡದಿ ಹಾಫ್ ಮ್ಯಾರಥಾನ್ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ, BMRCL ತನ್ನ ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ ಮತ್ತು ಇಂಟರ್ಚಿಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್-ಮೆಜೆಸ್ಟಿಕ್ನಿಂದ ಬೆಳಿಗ್ಗೆ 07:00 ಗಂಟೆ ಬದಲಾಗಿ 04:30 ಗಂಟೆಯಿಂದ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸುತ್ತದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, BMRCL ದಿನಾಂಕ 25,29 ಮಾರ್ಚ್ ಮತ್ತು 02 ಏಪ್ರಿಲ್ 2024 ರಂದು ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30 ಕ್ಕೆ ವಿಸ್ತರಿಸಲಾಗಿದೆ ಎಂದು ಹೇಳಿದೆ. ಈ ಪಂದ್ಯದ ದಿನಗಳಲ್ಲಿ ಎಲ್ಲಾ…
ಕಲಬುರ್ಗಿ: ಜಿಲ್ಲೆಯಲ್ಲಿ ಬಡ್ಡಿ ಹಣ ಕೊಡದ ಕಾರಣ, ವ್ಯಕ್ತಿಯೊಬ್ಬರ ಮೇಲೆ ಆಸಿಡ್ ಎರಚಿ ಅಮಾನವೀಯ ಕೃತ್ಯ ವೆಸಗಿರೋ ಘಟನೆ ನಡೆದಿದೆ. ಕಲಬುರ್ಗಿಯ ಖರ್ಗೆ ಪೆಟ್ರೋಲ್ ಬಂಕ್ ಬಳಿಯಲ್ಲಿ ಮೀನು ವ್ಯಾಪಾರಿಯಾಗಿದ್ದಂತ ಜುಬೇರ್ ಅಹ್ಮದ್ ಎಂಬುವರು ಅರ್ಷದ್, ಪರ್ವೇಜ್ ಎಂಬುವರಿದೆ 35 ಲಕ್ ಸಾಲವನ್ನು ಪಡೆದಿದ್ದರು. ಈ ಹಣಕ್ಕೆ ಬಡ್ಡಿ, ಚಕ್ರಹಡ್ಡಿ ಅಂತ 90 ಲಕ್ಷ ಕೊಡುವಂತೆ ಅರ್ಷದ್ ಗ್ಯಾಂಗ್ ಜುಬೇರ್ ಅಹ್ಮದ್ ಪೀಡಿಸುತ್ತಿತ್ತು. ಇತ್ತೀಚೆಗೆ ಜುಬೇರ್ ನನ್ನು ಕರೆಸಿಕೊಂಡಂತ ಇಮ್ರಾನ್ ಖಾನ್ ಎಂಬ ವ್ಯಕ್ತಿ, ಆತನನ್ನು ಕೂಡಿ ಹಾಕಿ ಹಲ್ಲೆ ಕೂಡ ನಡೆಸಲಾಗಿದೆ. ಅಲ್ಲದೇ ಕಲಬುರ್ಗಿಯ ಖರ್ಗೆ ಪೆಟ್ರೋಲ್ ಬಂಕ್ ಬಳಿಯಲ್ಲಿ ಆಸಿಡ್ ದಾಳಿ ಕೂಡ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಕಲಬುರ್ಗಿಯ ಎಂ.ಬಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/bjp-offered-rs-50-crore-to-one-mla-siddaramaiah/ https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/
ಬೆಂಗಳೂರು: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲೇ ಆಮಿಷದ ಆಫರ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು. ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು. https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/ https://kannadanewsnow.com/kannada/breaking-delhi-cm-arvind-kejriwal-unwell-bp-low-officials-brought-out-of-court/
ಬೆಂಗಳೂರು: ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದಂತ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಈ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು, ಹೈಕೋರ್ಟ್ ಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ಇಡೀ ಊರಲ್ಲಿ ಪ್ರತಿಭಟನೆ ನಡೆಸಿದ್ರೇ ಜನ ಓಡಾಡಬೇಡವೇ ಎಂದು ಪ್ರಶ್ನಿಸಿದರು. ಆಗ ನ್ಯಾಯಪೀಠಕ್ಕೆ ಸಂಸದ ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರು ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೃತ್ಯವನ್ನು ನಡೆಸಿಲ್ಲ ಎಂಬುದಾಗಿ ವಾದಿಸಿದರು. ಸಿಎಂ ಸಿದ್ಧರಾಮಯ್ಯ ವಿರುದ್ಧದ ಇಂತದ್ದೇ ಕೇಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೀಗಾಗಿ ಆ ತೀರ್ಪು ಈ ಪ್ರಕರಣಕ್ಕೂ…
ಬೆಂಗಳೂರು: ಪೊಲೀಸ್ ಠಾಣೆಯಲ್ಲೇ ಪಿಸ್ತೂಲ್ ಪರಿಶೀಲನೆ ವೇಳೆಯಲ್ಲಿ ಮಿಸ್ ಫೈರಿಂಗ್ ಉಂಟಾಗಿ, ಠಾಣೆಯ ರೈಟರ್ ಕಾಲಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಇಂದು ಎಸ್ ಬಿ ಕಾನ್ಸ್ ಟೇಬಲ್ ವೆಂಕಣ್ಣ ಎಂಬುವರು ಪಿಸ್ತೂಲ್ ಪರಿಶೀಲನೆ ವೇಳೆಯಲ್ಲಿ ಟ್ರಿಗರ್ ಪ್ರೆಸ್ ಮಾಡಿದ್ದರಿಂದ ಮಿಸ್ ಫೈರಿಂಗ್ ಉಂಟಾಗಿದೆ. ಪಿಸ್ತೂಲ್ ನಿಂದ ಹಾರಿದಂತ ಗುಂಡು, ಬೇಗೂರು ಪೊಲೀಸ್ ಠಾಣೆಯ ರೈಟರ್ ಅಂಬುದಾಸ್ ಎಂಬುವರ ಎಡಗಾಲಿಗೆ ಬಿದ್ದಿದ್ದು, ಅವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಮಿಸ್ ಫೈರಿಂಗ್ ನಿಂದ ಗಾಯಗೊಂಡಿರುವಂತ ರೈಟರ್ ಅಂಬುದಾಸ್ ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bjp-has-strangled-democracy-siddaramaiah/ https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/
ಬೆಂಗಳೂರು: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದರು. ಮನುಸ್ಮೃತಿಯ ಮಾರಕ ಮನಸ್ಥಿತಿ ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ.…
ತುಮಕೂರು: ಜಿಲ್ಲೆಯಲ್ಲಿ ಕುಚ್ಚಂಗಿ ಕೆರೆಯ ಬಳಿಯಲ್ಲಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ತುಮಕೂರು ತಾಲೂಕಿನ ಕುಚ್ಚಂಗಿಯ ಕೆರೆಯ ಬಳಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ನಿನ್ನೆ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರ ಬೇಕೋ ಅಥವಾ ಬೇರೆಯವರು ಹತ್ಯೆ ಮಾಡಿರಬೇಕೋ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋರಾ ಠಾಣೆಯ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/ https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/