Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಬೆಂಕಿ ಹಚ್ಚಿ, ಕೊಲ್ಲೋದಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ದಲಿತ ದುಂಡಪ್ಪ(70) ಹಾಗೂ ಗ್ರಾಮದ ಕೆಲವರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ದುಂಡಪ್ಪನನ್ನು ಕಬ್ಬಿನ ಬಣವೆಯ ಮೇಲೆ ಎತ್ತಿಹಾಕಿ, ಅದಕ್ಕೆ ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಹಾಕೋದಕ್ಕೆ ಪ್ರಯತ್ನಿಸಲಾಗಿದೆ. ಆದ್ರೇ ಈ ವೇಳೆಯಲ್ಲಿ ಜೀವ ಉಳಿಸಿಕೊಳ್ಳೋದಕ್ಕಾಗಿ ಅಲ್ಲಿಂದ ದುಂಡಪ್ಪ ತಪ್ಪಿಸಿಕೊಂಡು ಬಂದಿದ್ದಾರೆ. ಕಬ್ಬಿನ ಬಣವೆಗೆ ಬೆಂಕಿ ಹಚ್ಚಿದ್ದರಿಂದ ದುಂಡಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಂಡಪ್ಪ ನೀಡಿದಂತ ದೂರಿನ ಆಧಾರದ ಮೇಲೆ ಪೊಲೀಸರು ದಸ್ತಗಿರಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರನ್ನು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/arvind-kejriwals-family-under-house-arrest-alleges-aap/ https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಒಂದು ದಿನದ ನಂತರ, ಅವರ ಕುಟುಂಬಕ್ಕೆ ಯಾರನ್ನೂ ಭೇಟಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಆರೋಪಿಸಿದೆ. ಇದು ಚುನಾಯಿತ ಮುಖ್ಯಮಂತ್ರಿಯ ವಯಸ್ಸಾದ ಪೋಷಕರೊಂದಿಗೆ ಕೇಂದ್ರ ಸರ್ಕಾರ ಆಡುತ್ತಿರುವ ಮಾನಸಿಕ ಆಟವಾಗಿದೆ. ಬ್ರಿಟಿಷರು ಸಹ ಇಂತಹ ನಾಚಿಕೆಗೇಡಿನ ನಡವಳಿಕೆಯನ್ನು ಆಶ್ರಯಿಸುತ್ತಿರಲಿಲ್ಲ” ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದರು. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸ್ಥೆ ನೀಡಿದ ಒಂಬತ್ತನೇ ಸಮನ್ಸ್ ಅನ್ನು ತಪ್ಪಿಸಿಕೊಂಡ ನಂತರ ಕೇಜ್ರಿವಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಯಿತು. “ನೀವು ಅರವಿಂದ್ ಜಿ ಅವರನ್ನು ಬಂಧಿಸಿದ್ದೀರಿ, ಅವರ ಕುಟುಂಬ ಮನೆಯಲ್ಲಿದೆ. ಮೂಲಭೂತ ಮಾನವೀಯತೆ ಎಂದರೆ ಪಕ್ಷದ ಜನರು, ಅವರ ಸಂಬಂಧಿಕರು… ಅವರ ಕುಟುಂಬವನ್ನು ಭೇಟಿ ಮಾಡಲು ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ನಿನ್ನೆಯಿಂದ ಅವರ ಕುಟುಂಬವನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡಿಲ್ಲ” ಎಂದು ಭಾರದ್ವಾಜ್ ಶುಕ್ರವಾರ…
ಬೆಂಗಳೂರು: ಬಿಟ್ ಕಾಯಿನ್ ಅಕ್ರಮದಲ್ಲಿ ಬಾಗಿಯಾಗಿದ್ದಂತ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಧರ್ ಪೂಜಾರಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ಬಿಟ್ ಕಾಯಿನ್ ಪ್ರಕರಣ ತನಿಖೆಯ ವೇಳೆ ಶ್ರೀಧರ್ ಪೂಜಾರಿ ಅಕ್ರಮವೆಸಗಿರೋ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈಗ ಅದನ್ನು ವಜಾಗೊಳಿಸಿದೆ. https://kannadanewsnow.com/kannada/isro-launches-pushpak-vimaan-indias-futuristic-reusable-launch-vehicle/ https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/
ನವದೆಹಲಿ: ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ನಿಂದ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಿಮಾಂಡ್ನೊಂದಿಗೆ ಘರ್ಷಣೆಯಾಗುತ್ತಿರುವುದರಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದರು. https://twitter.com/ANI/status/1771067391335682401 ಅಂದಹಾಗೆ ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ನಿನ್ನ ಬೆಂದಿಸಿದ್ದರು. ಈ ಬಂಧನದ ಬಳಿಕ ಇಂದು ಎಎಪಿಯಿಂದ ದೇಶಾಧ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. https://kannadanewsnow.com/kannada/isro-launches-pushpak-vimaan-indias-futuristic-reusable-launch-vehicle/ https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಸ್ನಾತಕ ಬಿ.ಕಾಂ ಪದವಿಯ 5ನೇ ಸೆಮಿಸ್ಟರ್ ಫೈನಾಸ್ಸ್ ಮ್ಯಾನೇಜ್ಮೆಂಟ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೌಲ್ಯಮಾಪನದ ಕುಲಸಚಿವ ಪ್ರೊ.ರವೀಂದ್ರನಾಥ ಅವರು, ಸ್ನಾತಕ ಮಹಾವಿದ್ಯಾಲಯದ ಪ್ರಾಂಶುಪಾಲರು, ಮುಖ್ಯ ಅಧೀಕ್ಷಕರ ಗಮನಕ್ಕೆ ತರಬಯಸುವುದೇನೆಂದರೇ, ಬಿಕಾಂ ಪದವಿಯ 5ನೇ ಸೆಮಿಸ್ಟರ್ ರೆಗ್ಯೂಲರ್ ವಿದ್ಯಾರ್ಥಿಗಳ ಫೈನಾಸ್ಸ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವುದರಿಂದ, ಸದರಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ. 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಇನ್ನುಳಿದ ಪರೀಕ್ಷೆಗಳು ಎಂದಿಂತೆ ನಡೆಯುತ್ತವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/hc-orders-continuation-of-class-5-8-9-11-board-exams/ https://kannadanewsnow.com/kannada/isro-launches-pushpak-vimaan-indias-futuristic-reusable-launch-vehicle/
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.…
ಮಂಡ್ಯ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಜನಪ್ರತಿನಿಧಿಗಳ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸದ ಕಾರಣ, ಲೋಕಸಭಾ ಚುನಾವಣೆಯ ಮತದಾನವನ್ನೇ ಮದ್ದೂರಿನ ಬಸವನಪುರ ಗ್ರಾಮಸ್ಥರು ಬಹಿಷ್ಕರಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬಸವನಪುರ ಗ್ರಾಮಕ್ಕೆ ಸಂಪರ್ಕ ರಸ್ತೆ ಇರಲಿಲ್ಲ. ಈ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಂಡ್ಯದ ಗೆಜ್ಜಲಗೆರೆಯ ಮನ್ ಮುಲ್ ಡೈರಿ ಅದುರಿಗಿದ್ದರೂ, ತಮ್ಮ ಗ್ರಾಮಕ್ಕೆ 40 ವರ್ಷಗಳಿಂದ ಸಂಪರ್ಕ ರಸ್ತೆ ಕಲ್ಪಿಸದೇ ಇರೋದು ಬಸವನಪುರ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ 700 ಮತಗಳಿರುವಂತ ಬಸವನಪುರ ಗ್ರಾಮದ ಗ್ರಾಮಸ್ಥರು ಲೋಕಸಭಾ ಚುನಾವಣೆ ವೇಳೆಯಲ್ಲಿ ಮತದಾನ ಮಾಡೋದಕ್ಕೆ ನಿರಾಕರಿಸಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/isro-launches-pushpak-vimaan-indias-futuristic-reusable-launch-vehicle/ https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಮತ್ತು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರನ್ನು ಈ ಪ್ರಕರಣದಲ್ಲಿ ಮಾರ್ಚ್ 23 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ಒಪ್ಪಿಸಲಾಗಿದೆ. ಹೈದರಾಬಾದ್ನ ಬಂಜಾರಾ ಹಿಲ್ಸ್ ನಿವಾಸದಿಂದ ಫೆಡರಲ್ ಮನಿ ಲಾಂಡರಿಂಗ್ ವಿರೋಧಿ ಸಂಸ್ಥೆ 46 ವರ್ಷದ ಮಹಿಳೆಯನ್ನು ಬಂಧಿಸಿದೆ. ಹೊಸ ಮನವಿಯಲ್ಲಿ, ಕವಿತಾ ಅವರು, “ಅರ್ಜಿದಾರರ ಬಂಧನಕ್ಕೆ ಕಾರಣವಾದ ಪ್ರತಿವಾದಿ (ಇಡಿ) ತೆಗೆದುಕೊಂಡ ಸಂಪೂರ್ಣ ಕ್ರಮವನ್ನು ರದ್ದುಗೊಳಿಸೋದಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದ ಮೂಲಕ ಜಾಮೀನು ಅರ್ಜಿಯನ್ನು ಮುಂದುವರಿಸುವಂತೆ ಅಥವಾ ತನಗೆ ಲಭ್ಯವಿರುವ ಇತರ ಯಾವುದೇ ಕಾನೂನು ಮಾರ್ಗವನ್ನು ಅನ್ವೇಷಿಸುವಂತೆ ನ್ಯಾಯಾಲಯವು ಕವಿತಾಗೆ ನಿರ್ದೇಶನ ನೀಡಿತು. ಜಾಮೀನು ಅರ್ಜಿ ಸಲ್ಲಿಸಿದರೆ, ಅದನ್ನು ತ್ವರಿತವಾಗಿ…
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಕೊಂಡೋತ್ಸವದ ವೇಳೆಯಲ್ಲಿ ಪೂಜಾರಿಯೊಬ್ಬರು ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಕೊಂಡಕ್ಕೆ ಬಿದ್ದ ಕಾರಣ, ತೀವ್ರಗಾಯವಾಗಿರೋ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಲುಗನಹಳ್ಳಿಯಲ್ಲಿ ಕೊಂಡೋತ್ಸವವನ್ನು ಆಯೋಜಿಸಲಾಗಿತ್ತು. ಬಸವೇಶ್ವರ ಕೊಂಡೋತ್ಸವದ ವೇಳೆಯಲ್ಲಿ ವೀರಗಾಸೆಯ ಪೂಜಾರಿ ಕೊಂಡವನ್ನು ಹಾಯೋದಕ್ಕೆ ಓಡಿ ಹೋಗುತ್ತಿದ್ದರು. ಕೊಂಡದಲ್ಲಿ ಓಡಿ ಹೋಗುತ್ತಾ ಹಾದು ಹೋಗುತ್ತಿದ್ದಾಗ ಆಯತಪ್ಪಿ ವೀರಗಾಸೆ ಪೂಜಾರಿ ಬಿದ್ದಿದ್ದರು. ಕೂಡಲೇ ಅವರನ್ನು ಅಲ್ಲಿದಂತ ಜನರು ಎತ್ತಿ, ಸಂತೈಸಿದ್ದರು. ಆದ್ರೇ ಬೆಂಕಿಯ ಕೆಂಡದಿಂದ ಅವರಿಗೆ ತೀವ್ರವಾದಂತ ಸುಟ್ಟಗಾಯವಾಗಿತ್ತು. ಅವರನ್ನು ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ವೀರಗಾಸೆ ಪೂಜಾರಿ ಕೊಂಡ ಹಾಯುವಾಗ ಬಿದ್ದ ನಂತ್ರ, ಅವರ ಹಿಂದೆಯೇ ಹಾದು ಹೋಗಬೇಕಿದ್ದಂತ ಮತ್ತೊಬ್ಬ ಪೂಜಾರಿ ಸ್ವಲ್ಪ ಕಾಲ ತಡಮಾಡಿ ಹಾಯೋದಕ್ಕೆ ಪ್ರಾರಂಭಿಸಿದ ಕಾರಣ, ಮುಂದಾಗಲಿದ್ದಂತ ಮತ್ತೊಂದು ಘೋರ ಘಟನೆ ತಪ್ಪಿದಂತೆ ಆಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/good-news-for-the-people-of-the-state-who-are-reeling-under-the-scorching-heat-3-days-from-today-in-these-districts/ https://kannadanewsnow.com/kannada/isro-launches-pushpak-vimaan-indias-futuristic-reusable-launch-vehicle/
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದೆ ರಾಜ್ಯದ ಎಲ್ಲಾ ಸಹಕಾರ ಸಂಘ, ಬ್ಯಾಂಕ್ ಗಳ ಚುನಾವಣೆಯನ್ನು ಮುಂದೂಡಿಕೆ ಮಾಡಿ ಆದೇಶಿಸಿತ್ತು. ಆ ನಂತ್ರ ಮತ್ತೆ ಆ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ ಮತ್ತೆ ಸಹಕಾರ ಸಂಘ, ಬ್ಯಾಂಕ್ ಚುನಾವಣೆ ಮುಂದೂಡಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸಹಕಾರ ಸಂಘ, ಸಹಕಾರ ಬ್ಯಾಂಕ್ ಗಳ ಚುನಾವಣೆ ಮುಂದೂಡಿಕೆ ಮಾಡಿ ಆದೇಶಿಸಿದೆ. ಮಾರ್ಚ್.13ರಂದು ಮುಕ್ತಾಯಗೊಳ್ಳಲಿರುವ ಸಹಕಾರಿ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿ ಮುಂದುವರಿಸಿ ಸರ್ಕಾರ ಆದೇಶಿಸಿತ್ತು. ಬಳಿಕ ಕೋರ್ಟ್ ನಿರ್ದೇಶನದ ಅನ್ವಯ ಆದೇಶ ಹಿಂಪಡೆದಿತ್ತು. ಮಾರ್ಚ್ ನಿಂದ ಜೂನ್.6ರ ಅವಧಿಯಲ್ಲಿ ಆಡಳಿತ ಮಂಡಳಿ ಪದಾವಧಿ ಮುಕ್ತಾಯಗೊಳ್ಳಲಿದ್ದು, ಜೂನ್.6ರವರೆಗೆ ಚುನಾವಣೆ ಮುಂದೂಡಿ ಅವಧಿ ಮುಂದುವರಿಸಲಾಗಿತ್ತು. ಈಗಾಗಲೇ ಆಡಳಿತ ಮಂಡಳಿ ಚುನಾವಣೆ ನಡೆದು, ಪದಾಧಿಕಾರಿಗಳ ಚುನಾವಣೆ ಬಾಕಿ ಇದ್ದಲ್ಲಿ ಅಂತಹ ಪ್ರಕರಣಗಳಿಗೆ ಈ ಆದೇಶ ಅನ್ವಯ ಆಗುವುದಿಲ್ಲ. ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಲ್ಲಿ, ಅಂತಹ ಸಹಕಾರ…