Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಆಯ-ವ್ಯಯ, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೇಶದ ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು, ರೈತರ ಆದಾಯ ಹೆಚ್ಚಿಸುವಂಥ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ ಎಂದಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರು, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿನ ಮಹಾನಗರಗಳ ಸುರಕ್ಷತೆಗೆ ಮತ್ತು ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ನೀಡುವ ನಿರೀಕ್ಷೆಯು ಹುಸಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಜನತೆಗೆ ಬಜೆಟ್ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ…
ನವದೆಹಲಿ: ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಹೆಚ್ಚಿನ ವೈದ್ಯಕೀಯ ಸೀಟುಗಳು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಸೀತಾರಾಮನ್ ಹೇಳಿದರು. ಈ ಹಿಂದೆ ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಲಾದ ಆದಾಯ ತೆರಿಗೆ ಸರಳೀಕರಣ ಪೂರ್ಣಗೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು, ಇದಕ್ಕೆ ಸಂಬಂಧಿಸಿದ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ತರಲಾಗುವುದು ಎಂದು ಹೇಳಿದರು. ಇಂಧನ ಸುರಕ್ಷತೆಯನ್ನು ಸಾಧಿಸುವ ಉದ್ದೇಶದಿಂದ ಪರಮಾಣು ಶಕ್ತಿ ಕಾಯ್ದೆ ಮತ್ತು ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಗೆ ಎರಡು ತಿದ್ದುಪಡಿಗಳನ್ನು ಮಾಡಲಾಗುವುದು ಎಂದು ಹೇಳಿದರು. ಇಂದು ಮಂಡಿಸಲಾದ ಕೇಂದ್ರ ಬಜೆಟ್ ‘ವಿಕ್ಷಿತ್ ಭಾರತ್’ ಬಗ್ಗೆ ಹಲವಾರು ವಿಷಯಗಳನ್ನು ಹೇಳುತ್ತದೆ, ಆದರೆ ಇದು ಗ್ರಾಮೀಣ ಸಮೃದ್ಧಿ ಮತ್ತು…
ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡಿಸಿದಂತ ನಿರ್ಮಲಾ ಸೀತಾರಾಮನ್ ಅವರು, ಹೊಸ ದಾಖಲೆ ಬರೆದಿದ್ದಾರೆ. ಅದೇ ಸುದೀರ್ಘ 77 ನಿಮಿಷಗಳ ಕಾಲ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2025 ರ ಬಜೆಟ್ ಅನ್ನು ಮಂಡಿಸಿದರು. ಸೀತಾರಾಮನ್ ಸತತ 8 ನೇ ಬಾರಿಗೆ ದೇಶದ ಬಜೆಟ್ ಮಂಡಿಸಿದ್ದಾರೆ. ರೈತರಿಂದ ಮಧ್ಯಮ ವರ್ಗದವರೆಗೆ, ತೆರಿಗೆಗಳು, ಔಷಧಿಗಳು, ಯಾವುದನ್ನು ಅಗ್ಗಗೊಳಿಸಲಾಗುತ್ತದೆ. ಯಾವುದನ್ನು ದುಬಾರಿಯಾಗಿಸಲಾಗುತ್ತದೆ ಎಂಬುದರ ಕುರಿತು ಹಣಕಾಸು ಸಚಿವರು ಮಾಹಿತಿಯನ್ನು ನೀಡಿದರು. ಇದನ್ನು ಗಮನದಲ್ಲಿಟ್ಟುಕೊಂಡು, ನಿರ್ಮಲಾ ಸೀತಾರಾಮನ್ ಅವರು ಇಲ್ಲಿಯವರೆಗೆ ಬಜೆಟ್ ಮಂಡಿಸುವಾಗ ಸಂಸತ್ತಿನಲ್ಲಿ ಎಷ್ಟು ಸಮಯದವರೆಗೆ ಭಾಷಣ ಮಾಡಿದ್ದಾರೆ ಎಂದು ನಮಗೆ ತಿಳಿಸೋಣ. 2025 ರ ಬಜೆಟ್ ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 1 ಗಂಟೆ 17 ನಿಮಿಷಗಳ ಭಾಷಣ ಮಾಡಿದರು, ಅಂದರೆ, ಅವರು 77 ನಿಮಿಷಗಳ ಕಾಲ ಭಾಷಣ ಮಾಡಿದರು. ಹಣಕಾಸು ಸಚಿವರು 2025 ರ ದೇಶದ…
ಮಂಡ್ಯ : ಸಿಎಂ ಸಿದ್ಧರಾಮಯ್ಯ ಅವರ ವಾರ್ನಿಂಗ್ ನಡುವೆಯೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಈಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಾಯಿಯ ಸಾವಿನ ಸುದ್ದಿಯನ್ನು ಕೇಳಿದಂತ ಪುತ್ರ ರಂಜಿತ್ ಎಂಬುವರು ಹಲಗೂರು ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದಹಾಗೇ ಪ್ರೇಮಾ ಅವರು ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲದ ಕಂತು ಕಟ್ಟದ ಕಾರಣಕ್ಕೆ ಬ್ಯಾಂಕ್ ಸಿಬ್ಬಂದಿ ಪ್ರೇಮಾ ಅವರ ಮನೆ ಸೀಜ್ ಮಾಡಿದ್ದರಂತೆ. ಈ ಕಾರಣಕ್ಕೆ ಮನನೊಂದು ಪ್ರೇಮಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಪುತ್ರನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಂಡ್ಯದಲ್ಲಿ ತಾಯಿ-ಮಗ…
ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು. https://kannadanewsnow.com/kannada/the-government-has-taken-this-important-decision-to-curb-the-harassment-of-microfinance-in-the-state/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. 1. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. 2. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. 3. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು. 4. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. 5. ಯಾವುದೇ…
ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟ್ 2025 ಅನ್ನು “ಗುಂಡು ಗಾಯಗಳಿಗೆ ಬ್ಯಾಂಡ್-ಏಡ್” ಎಂದು ಕರೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಬಜೆಟ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ” ಎಂದು ಅವರು ಹೇಳಿದರು. https://twitter.com/RahulGandhi/status/1885625128450658337 fಇಂದಿನ ಕೇಂದ್ರ ಬಜೆಟ್ ಗುಂಡು ಗಾಯಗಳಿಗೆ ಬ್ಯಾಂಡ್-ಏಡ್! ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/this-is-a-very-disappointing-short-sighted-budget-siddaramaiah/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ಮೈಸೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಆದರೇ ಇಂದು ಬಹಳ ನಿರಾಶಾದಾಯಕ, ದೂರದೃಷ್ಠಿಯಿಲ್ಲದ ಬಜೆಟ್ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನೀರಾವರಿ ಯೋಜನಗೆಳಇಗೆ ಅನುದಾನ ನೀಡಿಲ್ಲ. ರಾಜ್ಯದ ನೀರಾವರಿ ಯೋಜನಗೆಳ ಬಗ್ಗೆ ಪ್ರಸ್ತಾಪಿಸಿಲ್ಲ. ರಾಯಚೂರು ಏಮ್ಸ್ ಘೋಷಿಸೋ ನಿರೀಕ್ಷೆ ಇತ್ತು. ಕೇಂದ್ರ ಸಚಿವ ನಡ್ಡಾ ಕೂಡ ಭರವಸೆ ನೀಡಿದ್ದರು. ಬಜೆಟ್ ನಲ್ಲಿ ಏಮ್ಸ್ ಬಗ್ಗೆ ಯಾವ ಪ್ರಸ್ತಾಪವಿಲ್ಲ ಎಂದರು. ಬೆಂಗಳಊರು ರಾಜಕಾಲುವೆ ನಿರ್ವಹಣೆಗೆ ಬ್ಯುಸಿನೆಸ್ ಕಾರಿಡಾರ್ ಗೆ ನಾವು ಹಣ ಕೇಳಿದ್ದವು. ನಮಗೆ ಕೇಂದ್ರ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ. ಇಂದಿನ ಕೇಂದ್ರ ಬಜೆಟ್ ದೂರದೃಷ್ಠಿಯಿಲ್ಲದ, ನಿರಾಶಾದಾಯಕ ಬಜೆಟ್ ಆಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. https://kannadanewsnow.com/kannada/increase-honorarium-for-anganwadi-workers-as-mentioned-in-manifesto-r-ashoka/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್.ಅಶೋಕ ಭೇಟಿ ನೀಡಿದರು. ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ…












