Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರದ ಜನರಿಗೆ ಕುಮಾರಣ್ಣ ಏನೂ ಮಾಡಲಿಲ್ಲ. ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಇದು ಕ್ಷೇತ್ರದ ಜನರಿಗೂ ಚನ್ನಾಗಿ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ, “ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. “ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ” ಎಂದರು. “ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ…
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಸರ್ಕಾರಿ ನೌಕರರು ನವೆಂಬರ್.1ರೊಳಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಅಲ್ಲದೇ ನಿಯಮ ಪಾಲಿಸದೇ ಇದ್ದರೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಂಖ್ಯೆ: ಸಿಆಸುಇ 4 ರಾಸ 2024, ದಿನಾಂಕ:16,08,2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು ಎಂದಿದ್ದಾರೆ. ಆದರೆ, ಹಲವು ಇಲಾಖೆಗಳು, ನಿಗಮ ಮಂಡಳಿ ನಿರ್ದೇಶನಾಲಯ ಹಾಗೂ ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಮೇಲ್ಕಂಡ ಸುತ್ತೋಲೆಯಲ್ಲಿನ ಸೂಚನೆಯನ್ನು ಪಾಲಿಸುತ್ತಿಲ್ಲವೆಂದು ಕಂಡುಬಂದಿರುತ್ತದೆ, ಆದ್ಯರಿಂದ, ನವೆಂಬರ್ 1, 2024 ರಂದು ಆಚರಿಸುವ ಕನ್ನಡ ರಾಜ್ಯೋತ್ಸವ ದಿನದೊಳಗಾಗಿ…
ಬೆಂಗಳೂರು : ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್ನ ಸದಸ್ಯರು ಉಪಸ್ಥಿತರಿದ್ದರು. https://kannadanewsnow.com/kannada/bjp-creating-controversy-for-elections-siddaramaiah/ https://kannadanewsnow.com/kannada/good-news-for-ksrtc-passengers-cm-siddaramaiah-launches-airavata-club-class-2-0-buses/
ಬೆಂಗಳೂರು : ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ ಪ್ರತಿಕ್ರಿಯೆ ನೀಡಿದರು ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿಎತ್ತುತ್ತಿರುವ ಬಗ್ಗೆ ಉತ್ತರಿಸಿ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು. https://kannadanewsnow.com/kannada/at-least-51-killed-in-spains-valencia-floods/ https://kannadanewsnow.com/kannada/good-news-for-ksrtc-passengers-cm-siddaramaiah-launches-airavata-club-class-2-0-buses/
ಮ್ಯಾಡ್ರಿಡ್: ಪೂರ್ವ ಸ್ಪ್ಯಾನಿಷ್ ಪ್ರದೇಶವಾದ ವೆಲೆನ್ಸಿಯಾದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಮತ್ತು ಪಟ್ಟಣಗಳು ನೀರಿನಲ್ಲಿ ಮುಳುಗಿದ್ದು, ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಾತ್ರಿಯಿಡೀ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಡಜನ್ಗಟ್ಟಲೆ ವೀಡಿಯೊಗಳು ಜನರು ಪ್ರವಾಹದಲ್ಲಿ ಸಿಲುಕಿರುವುದನ್ನು ತೋರಿಸುತ್ತವೆ, ಕೆಲವರು ಕೊಚ್ಚಿಹೋಗುವುದನ್ನು ತಪ್ಪಿಸಲು ಮರಗಳಿಗೆ ಹತ್ತುತ್ತಾರೆ. ವೆಲೆನ್ಸಿಯಾದ ಪ್ರಾದೇಶಿಕ ನಾಯಕ ಕಾರ್ಲೋಸ್ ಮಜೋನ್ ಪತ್ರಿಕಾಗೋಷ್ಠಿಯಲ್ಲಿ ಕೆಲವು ಜನರು ಪ್ರವೇಶಿಸಲಾಗದ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಉಳಿದಿದ್ದಾರೆ ಎಂದು ಹೇಳಿದರು. ತುರ್ತು ಸೇವೆಗಳು ನಾಗರಿಕರನ್ನು ಯಾವುದೇ ರೀತಿಯ ರಸ್ತೆ ಪ್ರಯಾಣದಿಂದ ದೂರವಿರಲು ಮತ್ತು ಅಧಿಕೃತ ಮೂಲಗಳಿಂದ ಹೆಚ್ಚಿನ ನವೀಕರಣಗಳನ್ನು ಅನುಸರಿಸಲು ಒತ್ತಾಯಿಸಿದವು. ಸ್ಪೇನ್ ನ ರಾಜ್ಯ ಹವಾಮಾನ ಸಂಸ್ಥೆ ಎಇಎಂಇಟಿ ವೆಲೆನ್ಸಿಯಾದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಟುರಿಸ್ ಮತ್ತು ಯುಟಿಯೆಲ್ ನಂತಹ ಕೆಲವು ಪ್ರದೇಶಗಳಲ್ಲಿ 200 ಮಿಮೀ (7.9 ಇಂಚು) ಮಳೆಯಾಗಿದೆ. https://kannadanewsnow.com/kannada/good-news-for-apple-phone-users-call-recording-feature-for-iphones-launched/ https://kannadanewsnow.com/kannada/breaking-actor-darshan-to-be-released-to-ballari-jail-likely-to-be-released-this-evening/
ನವದೆಹಲಿ: ಆಪಲ್ ಅಂತಿಮವಾಗಿ ಬಹುನಿರೀಕ್ಷಿತ ಐಒಎಸ್ 18.1 ಅನ್ನು ಹೊರತಂದಿದ್ದು, ಬಳಕೆದಾರರ ಅನುಭವವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ಆಕರ್ಷಕ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಹೆಚ್ಚು ನಿರೀಕ್ಷಿತವೆಂದರೆ ಆಪಲ್ ಇಂಟೆಲಿಜೆನ್ಸ್ ( Apple Intelligence ), ಜೊತೆಗೆ ಈಗ ಐಫೋನ್ಗಳಲ್ಲಿ ಲಭ್ಯವಿರುವ ಮತ್ತೊಂದು ಹೆಚ್ಚು ವಿನಂತಿಸಿದ ವೈಶಿಷ್ಟ್ಯವೆಂದರೆ ಕರೆ ರೆಕಾರ್ಡಿಂಗ್. ಈ ಇತ್ತೀಚಿನ ನವೀಕರಣದೊಂದಿಗೆ, ಐಫೋನ್ ಬಳಕೆದಾರರು ಈಗ ಫೋನ್ ಕರೆಗಳನ್ನು ಸುಲಭವಾಗಿ ರೆಕಾರ್ಡ್ ಮಾಡಬಹುದು. ಈ ರೆಕಾರ್ಡ್ ಮಾಡಿದ ಕರೆಗಳ ನೈಜ-ಸಮಯದ ಪ್ರತಿಲೇಖನವನ್ನು ಒದಗಿಸುವ ಆಪಲ್ ಇಂಟೆಲಿಜೆನ್ಸ್ ವೈಶಿಷ್ಟ್ಯಗಳಿಂದ ಪ್ರಯೋಜನ ಪಡೆಯಬಹುದು. ನಿಮ್ಮ ಐಫೋನ್ ನಲ್ಲಿ ( iPhone ) ಕರೆಗಳನ್ನು ರೆಕಾರ್ಡ್ ಮಾಡಲು, ಮೊದಲು ನಿಮ್ಮ ಸಾಧನದಲ್ಲಿ ಸೆಟ್ಟಿಂಗ್ ಗಳು > ಸಾಫ್ಟ್ ವೇರ್ ನವೀಕರಣದಿಂದ ಇತ್ತೀಚಿನ ಐಒಎಸ್ 18.1 ನವೀಕರಣವನ್ನು ಡೌನ್ ಲೋಡ್ ಮಾಡಿ. ನಿಮ್ಮ ಐಫೋನ್ ಅನ್ನು ನವೀಕರಿಸಿದ ನಂತರ, ಈ ಹಂತಗಳನ್ನು ಅನುಸರಿಸಿ: ಕರೆಯನ್ನು ಪ್ರಾರಂಭಿಸಿ ಅಥವಾ ಒಳಬರುವ ಕರೆಗೆ ಉತ್ತರಿಸಿ. ಒಮ್ಮೆ ನೀವು ಸಕ್ರಿಯ ಕರೆಯಲ್ಲಿದ್ದಾಗ,…
ಬೆಂಗಳೂರು: ನವೆಂಬರ್.1ರಂದು ಕೊಡ ಮಾಡುವಂತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರದಿಂದ ಇಂದು ಸಂಜೆ 4 ಗಂಟೆಗೆ ಪ್ರಕಟಿಸಲಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಇಂದು ಮಧ್ಯಾಹ್ನ 4.00 ಗಂಟೆಗೆ ವಿಕಾಸಸೌಧದ, ಒಂದನೇ ಮಹಡಿ, ಕೊಠಡಿ ಸಂಖ್ಯೆ: 123ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ಸಮಾರಂಭ ಪ್ರಶಸ್ತಿ ಪಟ್ಟಿ ಪ್ರಕಟಿಸುವ ಸಂಬಂಧ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಶಿವರಾಜ್ ಎಸ್ ತಂಡರಗಿ ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಿದ್ದು, ಆ ಬಳಿಕ ನವೆಂಬರ್.1ರಂದು ನಡೆಯುವಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಗುತ್ತದೆ. https://kannadanewsnow.com/kannada/breaking-actor-darshan-to-be-released-to-ballari-jail-likely-to-be-released-this-evening/ https://kannadanewsnow.com/kannada/good-news-for-ksrtc-passengers-cm-siddaramaiah-launches-airavata-club-class-2-0-buses/
ಬೆಂಗಳೂರು : ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ. ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು. ನೋoದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾoಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸoಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು. ಸಾರಿಗೆ ಇಲಾಖೆ ರಾಜಸ್ವ ಪರಿಶೀಲನಾ ಸಭೆಯ ಮುಖ್ಯಾಂಶಗಳು 2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸoಗ್ರಹ ಗುರಿ ರೂ. 13000 ಕೋಟಿ ಆಗಿದ್ದು,…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಹೊಳೆಬಸಪ್ಪ ಅವರು ವೈರಲ್ ಸುದ್ದಿಯ ಬಗ್ಗೆ ಪತ್ರಕರ್ತರು ಕೇಳಿದಂತ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ದರ್ಪ ತೋರಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೆವ್ವ ಅಡ್ಡಬಂದು, ಬೈಕ್ ಸವಾರರಿಬ್ಬರು ತೀವ್ರವಾಗಿ ಅಪಘಾತಗೊಂಡು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಈ ಬಗ್ಗೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟನೆ ಕೂಡ ನೀಡಲಾಗಿತ್ತು. ಹೀಗಿತ್ತು ಕಾರ್ಗಲ್ ಪೊಲೀಸ್ ಠಾಣೆಯ ಪತ್ರಿಕಾ ಪ್ರಕಟಣೆ ದಿನಾಂಕ:-27-10-2024 ರಂದು ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಿಕೈ ರಸ್ತೆಯಲ್ಲಿ 2 ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರು ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿ ಫೋಟೋ ಹಾಗೂ ವೀಡಿಯೋ ಹರಿಬಿಟ್ಟಿದ್ದು, ಇದು ಸುಳ್ಳು ಸುದ್ದಿಯಾಗಿದ್ದು ಈ ತರಹದ ಯಾವುದೇ ಪ್ರಕರಣ ಬೆಳಕಿಗೆ…













