Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ಇಂದಿನಿಂದ ಅಕ್ಟೋಬರ್.18ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರು ಸನ್ಮಾನ್ಯ ಮುಖ್ಯ ಮಂತ್ರಿಗಳವರಿಗೆ ನೀಡಿದ ಮನವಿ ಪತ್ರ ದಿ: 06-10-2025 ರಲ್ಲಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಇವರು ನಮೂದಿಸಿದ ಟಿಪ್ಪಣಿಯಲ್ಲಿ ಸದರಿ ಮನವಿ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700 ಸಮೀಕ್ಷೆಯನ್ನು ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಮನೆಗಳ ಗುರಿ:1,43,77,978 ಮಾಡಲಾಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 1,16,08,503 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 3,57,197 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 1,19,65,700 ಆಗಿದೆ. ಶೇಕಡಾವಾರು ಪ್ರಗತಿ: 83.2% ಆಗಿದೆ. ಒಟ್ಟು ಜನಸಂಖ್ಯೆ: 4,47,34,261 ಆಗಿದೆ ಎಂದಿದೆ. ಇನ್ನೂ GBA (ಗ್ರೇಟರ್ ಬೆಂಗಳೂರು) ಪ್ರಗತಿಯು ಒಟ್ಟು ಮನೆಗಳ ಗುರಿ:39,82,335 ಆಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 2,74,290 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 1,37,714 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 4,12,004 ಎಂದಿದೆ. https://kannadanewsnow.com/kannada/government-is-telling-lies-after-lies-about-the-census-critic-narayanaswamy-condemns/ https://kannadanewsnow.com/kannada/no-title-deeds-no-basic-amenities-for-over-30-years-peoples-cries-before-maddur-mla-uday/
ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟಿನ ಆವರಣದಲ್ಲೇ ಶೂ ಎಸೆಯುವ ಕೃತ್ಯ ಖಂಡನೀಯ ಎಂದು ತಿಳಿಸಿದ್ದಾರೆ. ಇದು ಬಾಬಾ ಸಾಹೇಬ ಡಾ. ಅಂಬೇಡ್ಕರರು ಬರೆದ ಸಂವಿಧಾನಕ್ಕೆ ಅಪಚಾರ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡುವಂಥ ಘಟನೆ. ಇದು ನ್ಯಾಯಾಂಗ ವ್ಯವಸ್ಥೆಗೆ ಆಗಿರುವ ಅಪಚಾರ ಎಂದು ಆಕ್ಷೇಪಿಸಿದರು. ಒಬ್ಬ ವಕೀಲರು ಇಂಥ ಪುಂಡಾಟಿಕೆ ಮಾಡಿದ್ದು, ಪ್ರಧಾನಿಯವರೂ ಸೇರಿ ಎಲ್ಲರೂ ಅದನ್ನು ವಿರೋಧಿಸಿದ್ದಾರೆ. ಇದು ದೇಶವೇ ತಲೆತಗ್ಗಿಸುವ ಕೃತ್ಯ. ನಾನೂ ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದು ಕ್ಷಮಾಪಣೆಗೆ ಅರ್ಹ ಕೃತ್ಯವಲ್ಲ; ಆ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಒತ್ತಾಯಿಸಿದರು. ಜಾತಿ ಜಾತಿಗಳನ್ನು ಒಡೆಯಲು ಗಣತಿ ಬಳಕೆ ಜಾತಿ ಜನಗಣತಿ ನಡೆಯಬೇಕಾದ ರೀತಿ…
ಮಂಡ್ಯ : ರಾಮಾಯಣದಂತ ಮಹಾಕಾವ್ಯ ರಚಿಸುವ ಮೂಲಕ ಭಾರತ ಪ್ರಾಚೀನ ಬದುಕು, ಸಂಸ್ಕೃತಿ ಹಾಗೂ ಸಂಬಂಧಗಳ ಮೌಲ್ಯಗಳನ್ನು ಶ್ರೀ ಮಹರ್ಷಿ ವಾಲ್ಮೀಕಿ ಅವರು ದಾಖಲಿಸಿದ್ದಾರೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅಭಿಪ್ರಾಯಪಟ್ಟರು. ಮದ್ದೂರು ನಗರದ ನಗರಸಭಾ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ರಾಮಾಯಣದಂತ ಮಹಾಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವ ಸಾರಿ ಮುಂದಿನ ಯುವ ಪೀಳಿಗೆಗೆ ಮೌಲ್ಯಯುತ, ನ್ಯಾಯ, ನಿಷ್ಟೆ, ಪ್ರಾಮಾಣಿಕ ಬದುಕಿನ ಮಾರ್ಗವನ್ನು ತೋರಿದ್ದಾರೆ. ಅವರು ತೋರಿದ ಬೆಳಕಿನ ದಾರಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದರು. ನಗರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಮಾತನಾಡಿ, ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಕೆಳ ಹಂತದ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ. ವಾಲ್ಮೀಕಿ…
ಮಂಡ್ಯ : ಹಕ್ಕು ಪತ್ರ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಚಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಬಡಾವಣೆಯ ನಿವಾಸಿಗಳು ಮದ್ದೂರು ಶಾಸಕ ಕೆ.ಎಂ.ಉದಯ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಶಾಸಕ ಉದಯ್ ಅವರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಮುಖಂಡ ರಾಜೇಶ್ ಮಾತನಾಡಿ, 50ಕ್ಕೂ ಹೆಚ್ಚು ವರ್ಷಗಳಿಂದ ಜಯಂತಿ ಬಡಾವಣೆಯ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಜಿಲ್ಲಾ ಮತ್ತು ತಾಲೂಕು ಆಡಳಿತಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಬಡಾವಣೆಯ ನಿವಾಸಿಗಳು ಪ್ರತಿನಿತ್ಯ ಯಾವುದೇ ಮೂಲ ಸೌಕರ್ಯಗಳು ಇಲ್ಲದೇ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಳಲು ತೋಡಿಕೊಂಡರು. ಗ್ರಾಮದ ಸರ್ಕಾರಿ ಜಾಗದಲ್ಲಿ 100 ಕ್ಕೂ ಹೆಚ್ಚು ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ, ಯಾವುದೇ ಸೌಕರ್ಯಗಳನ್ನು ನೀಡಿಲ್ಲ. ಆಗ ನಿರ್ಮಿಸಿರುವ ಮನೆಗಳು ಸಹ ಶಿಥಿಲಗೊಂಡು ವಾಸಕ್ಕೂ ಸಹ…
ಬೆಂಗಳೂರು: ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಕೊಂಡ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪಡೆದುಕೊಂಡ ಎಲ್ಲ ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಜಲಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971 ವಿಜಯಪುರ ಜಿಲ್ಲೆಯಲ್ಲಿ 11,453 , ಬೀದರ್ ಜಿಲ್ಲೆಯಲ್ಲಿ 10,297, ಕೋಲಾರ ಜಿಲ್ಲೆಯಾದ್ಯಂತ 8,470 ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ 9,885, ಮಂಡ್ಯ ಜಿಲ್ಲೆಯಲ್ಲಿ 7192 ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 7,815 ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸಚಿವರು ಹೇಳಿದ್ದು, ರಾಜ್ಯದ ಇತರ ಜಿಲ್ಲೆಗಳು ಜಲಸಂರಕ್ಷಣೆಯಲ್ಲಿ ತೊಡಗಿಕೊಳ್ಳುವಂತೆ ಪ್ರಶಸ್ತಿ ಪಡೆದ ಜಿಲ್ಲೆಗಳು ಪ್ರೇರಣೆ ನೀಡಲಿ ಎಂದು ಆಶಿಸಿದ್ದಾರೆ. ಈ ಅಭಿಯಾನದಡಿ ಅಂತರ್ಜಲವನ್ನು ಹೆಚ್ಚಿಸಲು ಕ್ರಮ, ಮಳೆ ನೀರು ಸಂರಕ್ಷಣೆ, ಜಲಸಂರಕ್ಷಣೆಯ ಸಂಸ್ಕೃತಿ ಬಗ್ಗೆ…
ಬೆಂಗಳೂರು: ಇ-ಕಾಮರ್ಸ್ಗಳಾದ ಅಮೆಜಾನ್ನಲ್ಲಿ ಇದೇ ಮೊದಲ ಬಾರಿಗೆ ಜಾವಾ ಯೆಜ್ಡಿ ಅವರ ಎಲ್ಲಾ ಮಾಡೆಲ್ನ ಬೈಕ್ಗಳು ಆನ್ಲೈನ್ನಲ್ಲಿಯೇ ಲಭ್ಯವಿದ್ದು, ಜನರು ಬೈಕ್ನನ್ನೂ ಸಹ ಆನ್ಲೈನ್ನಲ್ಲಿಯೇ ಖರೀದಿಸಹುದು. ಈ ಕುರಿತು ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್ನ ಮುಖ್ಯ ವ್ಯವಹಾರ ಅಧಿಕಾರಿ ಶರದ್ ಅಗರ್ವಾಲ್, ಕಳೆದ ವರ್ಷ ಫ್ಲಿಪ್ಕಾರ್ಟ್ನಲ್ಲಿ ಬೈಕ್ಗಳ ಖರೀದಿಗೆ ಲಭ್ಯತೆ ಕಲ್ಪಿಸಿಕೊಡಲಾಗಿತ್ತು.ಇದೀಗ ಅದೇ ಮಾದರಿಯಲ್ಲಿ ಅಮೆಜಾನ್ನಲ್ಲಿಯೂ ಲಭ್ಯವಾಗುವಂತೆ ವ್ಯವಸ್ಥೆ ನಿರ್ಮಿಸಲಾಗಿದ್ದು, ಜಾವಾ ಬೈಕ್ ಕುಳಿತಲ್ಲೇ ಖರೀದಿಸಬಹುದಾಗಿದೆ. ಸುಮಾರು 40 ಕ್ಕೂ ಹೆಚ್ಚು ನಗರಗಳಲ್ಲಿ ಲಭ್ಯವಿದ್ದು, ಈ ಹಬ್ಬದ ಋತುವಿನಲ್ಲಿ 100 ಕ್ಕೂ ಹೆಚ್ಚು ನಗರಗಳನ್ನು ತಲುಪುವ ಯೋಜನೆ ಹೊಂದಿದೆ. ನಮ್ಮ ಯುವ ಗ್ರಾಹಕರು ರಜಾದಿನಗಳನ್ನು ಬುಕ್ ಮಾಡಲು ಅಥವಾ ಆನ್ಲೈನ್ನಲ್ಲಿ ಕಾರು ಖರೀದಿಸಲು ಹಿಂಜರಿಯುತ್ತಿದ್ದರು, ಆನ್ಲೈನ್ನಲ್ಲಿ ತಮ್ಮ ಇಷ್ಟದ ಬೈಕ್ ಖರೀದಿ ಅಸಾಧ್ಯವೆಂದು ಭಾವಿಸಿದ್ದರು, ಆದರೆ, ಈಗ ಅವರ ಕನಸು ನನಸಾಗಿದೆ. ಒಂದು ವರ್ಷದ ಹಿಂದೆ ಇ-ಕಾಮರ್ಸ್ಗೆ ಹೋದೆವು. ಫ್ಲಿಪ್ಕಾರ್ಟ್ನಿಂದ ಪ್ರಾರಂಭಿಸಿ ಈಗ ಅಮೆಜಾನ್ಗೆ ವಿಸ್ತರಿಸುತ್ತಿರುವ ನಾವು, ಮೋಟಾರ್ಸೈಕ್ಲಿಂಗ್ನ ಆತ್ಮವನ್ನು ಹಾಗೆಯೇ ಉಳಿಸಿಕೊಂಡು…
ನಮ್ಮಲ್ಲಿ ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿಯುವ ಮತ್ತು ಹಣ ಸಂಪಾದಿಸುವ ಏಕೈಕ ಕಾರಣವೆಂದರೆ ನಮ್ಮ ಭವಿಷ್ಯದ ಪಾಲುದಾರರನ್ನು ಉತ್ತಮಗೊಳಿಸುವುದು. ಮುಂದಿನ ಪೀಳಿಗೆಯಾಗುವವರು ನಮ್ಮ ವಂಶಸ್ಥರು. ಅವರ ಬದುಕು ಹಸನಾಗಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ನಾವು ಯಾವ ಒಳ್ಳೆಯ ಶಾಲೆಗೆ ಸೇರಿಸಿದರೂ ಓದುವ ಹಂಬಲವಿದ್ದರೆ ಮಾತ್ರ ಅವರು ಓದಬಲ್ಲರು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ಆದಿ ಪೌರ್ಣಮಿಯ ದಿನದಂದು ಮಾಡಬೇಕಾದ ಹಯಗ್ರೀವರ ಪೂಜೆಯ ಬಗ್ಗೆ ನೋಡಲಿದ್ದೇವೆ . ಹಯಗ್ರೀವರು ಆದಿ ಪೌರ್ಣಮಿಯಂದು ಜನಿಸಿದರು ಎಂದು ಹೇಳಲಾಗುತ್ತದೆ. ಹಾಗಾದರೆ ಅವರ ಜನ್ಮದಿನವಾದ ಈ ಹಯಗ್ರೀವರ ಜಯಂತಿಯಂದು ನಾವು ಅವರನ್ನು ಹೇಗೆ ಪೂಜಿಸಬೇಕು? ಹಯಗ್ರೀವರು ಸರಸ್ವತಿಯ ಗುರು. ಶಿಕ್ಷಣದಲ್ಲಿ ಸರಸ್ವತಿಯೇ ಶ್ರೇಷ್ಠ ಎಂದು ಹೇಳುತ್ತೇವೆ. ಅವನ ಗುರು ಹಯಗ್ರೀವನಾಗಿದ್ದರೆ ಅವನು ಎಷ್ಟು ಶಕ್ತಿಶಾಲಿ? ಅವರನ್ನು ಮನಃಪೂರ್ವಕವಾಗಿ ಪೂಜಿಸಿದರೆ ನಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ…
ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06503 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 17, 2025 ರಂದು ಸಂಜೆ 5:30 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 5:30 ಗಂಟೆಗೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06504 ಬೆಳಗಾವಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 22, 2025 ರಂದು ಬೆಳಗಾವಿಯಿಂದ ಸಂಜೆ 5:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ವಿಶೇಷ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ ಮತ್ತು ಲೊಂಡಾ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.…
ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವಂತ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ. ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವಂತ ಜಾಲಿವುಡ್ ಸ್ಟುಡಿಯೋಸ್ ಗೆ ರಾಮನಗರ ತಹಶೀಲ್ದಾರ್, ಪೊಲೀಸರು ಭೇಟಿ ನೀಡಿದ್ದರು. ಜಾಲಿವುಡ್ ಸ್ಟುಡಿಯೋಸ್ ಒಳಗೆ ಪ್ರವೇಶಿಸಿದಂತ ತಹಶೀಲ್ದಾರ್, ಒಳಗೆ ಇರುವವರನ್ನು ಹೊರ ಕಳುಹಿಸುವಂತೆ ಸೂಚಿಸಿದ್ದರು. ಈ ಬಳಿಕ ರಾಮನಗರ ತಹಶೀಲ್ದಾರ್, ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ನಡೆಯುತ್ತಿರುವಂತ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗವನ್ನು ಜಡಿಯಲಾಗಿದೆ. ಜಾಲಿವುಡ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಟೆಡ್ ಗೆ ಬೀಗಮುದ್ರೆಯನ್ನು ಹಾಕಲಾಗಿದೆ. ಹೀಗಾಗಿ ಕನ್ನಡದ ಖ್ಯಾತ ಶೋ ಬಿಗ್ ಬಾಸ್ ಎರಡೇ ವಾರಕ್ಕೆ ಸ್ಥಗಿತಗೊಳ್ಳಲಿದ್ಯಾ ಎಂಬ ಅನುಮಾನವನ್ನು ಹುಟ್ಟು ಹಾಕಿದೆ. https://kannadanewsnow.com/kannada/10-day-holiday-for-government-and-aided-schools-on-request-of-teachers-association-dcm-d-k-shivakumar/ https://kannadanewsnow.com/kannada/holiday-for-all-schools-in-the-state-till-october-18-decision-taken-at-a-meeting-led-by-cm-siddaramaiah/