Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಭೂ ಒಡೆತನ ಯೋಜನೆಯ ಅಡಿಯಲ್ಲಿ ಕೃಷಿ ಭೂಮಿ ಇಲ್ಲದಂತ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಿ, ಸ್ವಾವಲಂಬಿ ಜೀವನ ನಡೆಸೋದಕ್ಕೆ ಸಾಲಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಭೂ ಒಡೆತನ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಿದಂತ ಯೋಜನೆಯಾಗಿದೆ. ಕೃಷಿ ಭೂಮಿ ಇಲ್ಲದಂತ ಮಹಿಳೆಯರಿಗೆ ಜಮೀನು ಖರೀದಿಗೆ ಸಬ್ಸಿಡಿ ದರದಲ್ಲಿ ಸಹಾಯ ಧನ ಸೌಲಭ್ಯವನ್ನು ಕಲ್ಪಿಸುವಂತ ಯೋಜನೆಯಾಗಿದೆ. ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಭೂ ರಹಿತ ಕೃಷಿ ಕಾರ್ಮಿಕರ ಪ್ರಮಾಣಪತ್ರ ರೇಷನ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ ಪೋಟೋ ಈ ಹಂತ ಅನುಸರಿಸಿ, ಅರ್ಜಿ ಸಲ್ಲಿಸಿ 2023-24ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೇ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ – 2023ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅನುಮೋದನೆ ನೀಡಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ-2023ಕ್ಕೆ ರಾಜ್ಯಪಾಲರು ಅಂಕಿತ ಮುದ್ರೆ ಒತ್ತಿದ್ದಾರೆ. ಈ ಮಸೂದೆಯಂತೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗುವವರಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.? ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ…

Read More

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಾಗಿತ್ತು. ಈಗ ಮುಂದುವರೆದ ಭಾಗವಾಗಿ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಸಚಿವರನ್ನ ಒಳಗೊಂಡ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ವಿವಿಧ ಹಗರಣಗಳ ಪ್ರಗತಿ, ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಸಚಿವ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ. ಈ ಸಚಿವರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿದ್ದಾರೆ. https://kannadanewsnow.com/kannada/jr-ntr-janhvi-kapoor-starrer-devara-trailer-out/…

Read More

ಮುಂಬೈ : ಭಾರತದ ಮುಂಚೂಣಿ ರೀಟೇಲರ್ ಆದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಹಾಗೂ ಇಸ್ರೇಲ್ ನ ಡೆಲ್ಟಾ ಗಲಿಲ್ ಇಂಡಸ್ಟ್ರೀಸ್ ಸಂಬಂಧಿಸಿದಂತೆ ಮಂಗಳವಾರದಂದು ಪ್ರಮುಖ ಘೋಷಣೆ ಹೊರಬಿದ್ದಿದೆ. ಇದರೊಂದಿಗೆ ಭಾರತದಲ್ಲಿ ಈ ಎರಡೂ ಕಂಪನಿಗಳು ಕಾರ್ಯತಂತ್ರ ಪಾಲುದಾರಿಕೆಯನ್ನು ಪ್ರಕಟಿಸಿವೆ. ಶೇಕಡಾ 50/50ರ ಜಂಟಿ ಉದ್ಯಮ ಇದಾಗಿದೆ. ಡೆಲ್ಟಾ ಗಲಿಲ್ ಟೆಲ್ ಅವಿವ್ ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಆಗಿದೆ. ಈ ಸಂಸ್ಥೆಯು ಜಾಗತಿಕ ದಿರಿಸು ಉತ್ಪಾದಕರಾಗಿ ಗುರುತಿಸಿಕೊಂಡಿದ್ದು, ಜತೆಗೆ ಮಾರ್ಕೆಟಿಂಗ್ ಸಹ ಮಾಡುತ್ತದೆ. ಬ್ರ್ಯಾಂಡೆಡ್ ಬಟ್ಟೆಗಳು, ಖಾಸಗಿ ಲೇಬಲ್ ಗಳನ್ನು ಒಳಗೊಂಡ ದಿರಿಸುಗಳನ್ನು ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗಾಗಿ ತಯಾರಿಸುತ್ತದೆ. ಇದರಲ್ಲಿ ಡೆನಿಮ್ ಬಟ್ಟೆಗಳು ಸೇರಿವೆ. ಇನ್ನು ಈಗ ರಿಲಯನ್ಸ್ ರೀಟೇಲ್ ಹಾಗೂ ಡೆಲ್ಟಾ ಗಲಿಲ್ ಒಟ್ಟಾಗಿ ಭಾರತದ ಬಟ್ಟೆ ಮಾರುಕಟ್ಟೆಯನ್ನು ಪುನರ್ ವ್ಯಾಖ್ಯಾನಿಸುವ ಗುರಿಯನ್ನು ಇರಿಸಿಕೊಂಡಿವೆ. ಈ ಪಾಲುದಾರಿಕೆ ಉದ್ದೇಶ ಏನೆಂದರೆ, ಭಾರತೀಯ ಗ್ರಾಹಕರ ವಿಶಿಷ್ಟ ಬೇಡಿಕೆಗಳನ್ನು ಪೂರೈಸುವ ದಿರಿಸುಗಳ ನವೀನ ರೀತಿಯ ವೇದಿಕೆಯನ್ನು ಆರಂಭಿಸುವುದಾಗಿದೆ. ಡೆಲ್ಟಾ ಗಲಿಲ್ ತನ್ನ…

Read More

ಬೆಂಗಳೂರು: ನಗರದಲ್ಲಿ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಿಕೊಳ್ಳುವುದಾಗಿ ಸರ್ಕಾರ ಘೋಷಣೆ ಮಾಡಲಾಗಿತ್ತು. ಇಂತಹ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ: ವಸಂತನಗರ 6ನೇ ಮುಖ್ಯ ರಸ್ತೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿ, ಗುಣಮಟ್ಟವನ್ನು ಕಾಪಾಡಿಕೊಂಡು ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಲಮಿತಿಯೊಳಾಗಿ ರಸ್ತೆ ಗುಂಡಿ ಮುಚ್ಚದಿದ್ದರೆ ಅಮಾನತು: ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು. ಇಲ್ಲವಾದಲ್ಲಿ ಸಂಬಂಧ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. https://kannadanewsnow.com/kannada/fir-lodged-against-iaf-wing-commander-for-allegedly-raping-woman-flying-officer/ https://kannadanewsnow.com/kannada/governor-gives-assent-to-bill-for-hefty-fine-10-year-jail-term-for-irregularities-in-recruitment-exams/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/

Read More

ನವದೆಹಲಿ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫೀಸರ್ ವಿಂಗ್ ಕಮಾಂಡರ್ ಶ್ರೇಣಿಯ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು, ಇದರ ಪರಿಣಾಮವಾಗಿ ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಬ್ಬರೂ ಐಎಎಫ್ ಅಧಿಕಾರಿಗಳು ಪ್ರಸ್ತುತ ಶ್ರೀನಗರದಲ್ಲಿ ಬೀಡುಬಿಟ್ಟಿದ್ದಾರೆ. ದೂರಿನ ನಂತರ, ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಶನಿವಾರ “ಕಾನೂನಿನ ಸಂಬಂಧಿತ ವಿಭಾಗಗಳ” ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ನಮಗೆ ತಿಳಿದಿದೆ. ಈ ವಿಷಯದ ಬಗ್ಗೆ ಸ್ಥಳೀಯ ಬುಡ್ಗಾಮ್ ಪೊಲೀಸ್ ಠಾಣೆಯು ಶ್ರೀನಗರದ ವಾಯುಪಡೆ ನಿಲ್ದಾಣವನ್ನು ಸಂಪರ್ಕಿಸಿತು. ಈ ಪ್ರಕರಣಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ಹಿರಿಯ ಐಎಎಫ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಎನ್ಡಿಟಿವಿ ವರದಿಯ ಪ್ರಕಾರ, ಮಹಿಳಾ ಅಧಿಕಾರಿ ಕಳೆದ ಎರಡು ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 31 ರಂದು…

Read More

ಬೆಂಗಳೂರು: ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ಎನ್ನುವಂತೆ, ರಾಜ್ಯ ಸರ್ಕಾರದಿಂದ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪ್ರಾಥಮಿಕ)ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ “ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ” ಎಂದು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ “ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ…

Read More

ಒಂದು ವೇಳೆ ಯಾರಾದರೂ ನಿಮಗೆ ತಿಳಿಯದೆ ಮೋಸವನ್ನು ಮಾಡಿ ಆಸ್ತಿಯನ್ನು ತೆಗೆದುಕೊಂಡಿದ್ದರೆ, ಯಾರಾದರೂ ನಿಮ್ಮ ವಿರುದ್ಧ ಆಸ್ತಿಯ ವಿಚಾರವಾಗಿ ಕೋರ್ಟ್ ಅಲ್ಲಿ ಕೇಸ್ ಹಾಕಿದ್ದರೆ ಹಾಗೂ ಅದರಿಂದ ನಿಮಗೆ ಏನಾದರೂ ನ್ಯಾಯ ದೊರಕುತ್ತಿಲ್ಲ ಎಂದರೆ ಕಾರ್ತವೀರ್ಯಾರ್ಜುನ ಮಂತ್ರದಿಂದ ನೀವು ಕಳೆದುಕೊಂಡ ಆಸ್ತಿಯನ್ನು ಮತ್ತೆ ಪಡೆದುಕೊಳ್ಳಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಕಾರ್ತವೀರ್ಯಾರ್ಜುನ…

Read More

ನವದೆಹಲಿ: ಪ್ಯಾರಿಸ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 75 ಲಕ್ಷ ರೂ., ಬೆಳ್ಳಿ ವಿಜೇತರಿಗೆ 50 ಲಕ್ಷ ರೂ., ಮತ್ತು ಕಂಚಿನ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ 30 ಲಕ್ಷ ರೂ.ಗಳ ನಗದು ಬಹುಮಾನವನ್ನು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಪ್ರಕಟಿಸಿದ್ದಾರೆ. ಮಿಶ್ರ ತಂಡಗಳ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಬಿಲ್ಲುಗಾರ್ತಿ ಶೀತಲ್ ದೇವಿ 22.5 ಲಕ್ಷ ರೂ.ಗಳಷ್ಟು ಶ್ರೀಮಂತರಾಗಲಿದ್ದಾರೆ. ಮೆಗಾ ಈವೆಂಟ್ ನಲ್ಲಿ ಪದಕ ವಿಜೇತರನ್ನು ಸನ್ಮಾನಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಇದನ್ನು ಘೋಷಿಸಿದರು. 2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿ ಹೊಂದಿರುವ ಪ್ಯಾರಾ-ಅಥ್ಲೀಟ್ಗಳಿಗೆ ಸಂಪೂರ್ಣ ಬೆಂಬಲ ಮತ್ತು ಸೌಲಭ್ಯಗಳನ್ನು ಮಾಂಡವಿಯಾ ಭರವಸೆ ನೀಡಿದರು. “ಪ್ಯಾರಾಲಿಂಪಿಕ್ಸ್ ಮತ್ತು ಪ್ಯಾರಾ ಸ್ಪೋರ್ಟ್ಸ್ನಲ್ಲಿ ದೇಶವು ಬೆಳೆಯುತ್ತಿದೆ. 2016ರಲ್ಲಿ ಟೋಕಿಯೊದಲ್ಲಿ 4 ಪದಕಗಳನ್ನು ಗೆದ್ದಿದ್ದ ಭಾರತ, ಟೋಕಿಯೊದಲ್ಲಿ 19 ಪದಕಗಳನ್ನು ಗೆದ್ದಿದ್ದರೆ, ಪ್ಯಾರಿಸ್ನಲ್ಲಿ 29 ಪದಕಗಳನ್ನು ಗೆದ್ದು 18ನೇ ಸ್ಥಾನದಲ್ಲಿದೆ. 2028ರ ಲಾಸ್ ಏಂಜಲೀಸ್ ಪ್ಯಾರಾಲಿಂಪಿಕ್ಸ್ನಲ್ಲಿ…

Read More