Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಅವ್ಯವಹಾರದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಕೂಡಲೇ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ತಿಳಿಸಿದರು. ಇದೇ 24ರಂದು ಇದರ ಕುರಿತು ನಾವು ಲೋಕಾಯುಕ್ತರಿಗೆ ದೂರು ಕೊಡಲಿದ್ದೇವೆ. ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ಮಾನ್ಯ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಗುಲ್ಬರ್ಗ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114…
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹಬ್ಬದ ಋತುವಿನಲ್ಲಿ ಹೆಚ್ಚಿದ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ರೈಲ್ವೆ ಎರ್ನಾಕುಲಂ ಮತ್ತು ಯಲಹಂಕ ನಿಲ್ದಾಣಗಳ ನಡುವೆ ವಿಶೇಷ ರೈಲು ಸೇವೆಯನ್ನು ನಾಲ್ಕು ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲು ಅಧಿಸೂಚನೆ ಹೊರಡಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06101 ಎರ್ನಾಕುಲಂ-ಯಲಹಂಕ ತ್ರಿವಳಿ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಈ ಹಿಂದೆ ಸೆಪ್ಟೆಂಬರ್ 18, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು, ಈಗ ಅದನ್ನು ನಾಲ್ಕು ಹೆಚ್ಚುವರಿ ಟ್ರಿಪ್ಗಳೊಂದಿಗೆ ಸೆಪ್ಟೆಂಬರ್ 22 ರಿಂದ 29, 2024 ರವರೆಗೆ ವಿಸ್ತರಿಸಲಾಗಿದೆ. 2. ರೈಲು ಸಂಖ್ಯೆ 06102 ಯಲಹಂಕ-ಎರ್ನಾಕುಲಂ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ಈ ಹಿಂದೆ ಸೆಪ್ಟೆಂಬರ್ 19, 2024 ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು, ಈಗ ನಾಲ್ಕು ಹೆಚ್ಚುವರಿ ಟ್ರಿಪ್ಗಳಿಗಾಗಿ ಸೆಪ್ಟೆಂಬರ್ 23 ರಿಂದ 30, 2024 ರವರೆಗೆ ವಿಸ್ತರಿಸಲಾಗಿದೆ. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳ ಪ್ರಕಾರ ಚಲಿಸುವುದನ್ನು ಮುಂದುವರಿಸುತ್ತವೆ ಎಂಬುದಾಗಿ ನೈರುತ್ಯ ರೈಲ್ವೆ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ…
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಪತ್ತೆಯ ಬೆನ್ನಲ್ಲೇ, ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ತುಪ್ಪ ಉದ್ಪಾದನೆಯ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ನಂದಿನಿ ತುಪ್ಪ ಹೊರತಿಪಡಿಸಿ ಉಳಿದ ತುಪ್ಪಗಳ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು. ರಾಜ್ಯದಲ್ಲಿ ತುಪ್ಪದ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಈ ಕರಮ ವಹಿಸಲಾಗಿದೆ. ಪ್ರಸಾದ ಪರಿಶೀಲನೆಗಿಂತ ನೇರವಾಗಿ ತುಪ್ಪದ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿರುವುದಾಗಿ ತಿಳಿಸಿದರು. ಈಗಾಗಲೇ ಆರೋಗ್ಯ ಇಲಾಖೆಯಿಂದ ತುಪ್ಪದ ಸ್ಯಾಂಪಲ್ ಸಂಗ್ರಹವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಗ್ರಹಿಸುವುದಕ್ಕೆ ಪ್ರಾರಂಭಿಸಿದ್ದಾರೆ. ಪ್ರಾಣಿಗಳ ಕೊಬ್ಬಿನ ಅಂಶ ಬೆರೆಕೆಯಾಗಿದ್ಯಾ ಎನ್ನುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು. https://kannadanewsnow.com/kannada/cm-siddaramaiah-dedicates-to-tungabhadra-dam/ https://kannadanewsnow.com/kannada/iran-coal-mine-blast-kills-30-says-state-media/
ವಿಜಯನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು. ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು. ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/eagles-eye-on-administrative-machinery-state-govt-plans-to-issue-gate-passes-to-unnecessary-staff/ https://kannadanewsnow.com/kannada/iran-coal-mine-blast-kills-30-says-state-media/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು ನೆಡಲಾಗಿದೆ. ವಿವಿಧ ಇಲಾಖೆಯಲ್ಲಿನ ಅನಗತ್ಯ ಸಿಬ್ಬಂದಿಗೆ ಗೇಟ್ ಪಾಸ್ ಕೊಡೋದಕ್ಕೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಅದರಲ್ಲೂ ಸರ್ಕಾರದ ಮಾಹಿತಿ ಸೋರಿಕೆ, ಕಡತ ಸೋರಿಕೆ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೂ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ, ಸಚಿವರ ಕಚೇರಿಯಲ್ಲಿ ಬೇಕಾಬಿಟ್ಟಿ ಸಿಬ್ಬಂದಿ ಇದ್ದರೇ ಅವರನ್ನ ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳಲು ಪ್ಲಾನ್ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವರದಿ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ರಾಜ್ಯ ಸರ್ಕಾರದ ಕಡತಗಳ ಸೋರಿಕೆಗಳಿಗೂ ಬ್ರೇಕ್ ಹಾಕುವ ತಂತ್ರಗಾರಿಕೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿ ಎಂದು ಹೇಳಲಾಗುತ್ತಿದೆ. ಆಡಳಿತ ಯಂತ್ರವನ್ನು ಬಿಗಿಗೊಳಿಸಲು ಅನಗತ್ಯವಾಗಿರೋರಿಗೆ ಗೇಟ್ ಪಾಸ್ ಕೊಡಬೇಕು ಎಂಬಂತ ಕಟ್ಟು ನಿಟ್ಟಿನ ತೀರ್ಮಾನಕ್ಕೂ ಸರ್ಕಾರ ಬಂದಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಸಿಎಂ, ಸಚಿವರ ಕಚೇರಿಯಲ್ಲಿ ಅನಗತ್ಯವಾಗಿ ಇರುವಂತ…
ಇರಾನ್: ಇರಾನ್ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ ಎಂದು ಇರಾನ್ನ ಸರ್ಕಾರಿ ಮಾಧ್ಯಮ ಭಾನುವಾರ ತಿಳಿಸಿದೆ. ಮದಂಜೂ ಕಂಪನಿ ನಡೆಸುತ್ತಿರುವ ಗಣಿಯ ಬಿ ಮತ್ತು ಸಿ ಎಂಬ ಎರಡು ಬ್ಲಾಕ್ಗಳಲ್ಲಿ ಮೀಥೇನ್ ಅನಿಲ ಸ್ಫೋಟದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ. “ದೇಶದ ಶೇಕಡಾ 76 ರಷ್ಟು ಕಲ್ಲಿದ್ದಲನ್ನು ಈ ಪ್ರದೇಶದಿಂದ ಒದಗಿಸಲಾಗುತ್ತದೆ ಮತ್ತು ಮದನ್ಜೂ ಕಂಪನಿ ಸೇರಿದಂತೆ ಸುಮಾರು 8 ರಿಂದ 10 ದೊಡ್ಡ ಕಂಪನಿಗಳು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ದಕ್ಷಿಣ ಖೊರಾಸನ್ ಪ್ರಾಂತ್ಯದ ಗವರ್ನರ್ ಅಲಿ ಅಕ್ಬರ್ ರಹೀಮಿ ಭಾನುವಾರ ರಾಜ್ಯ ಟಿವಿಗೆ ತಿಳಿಸಿದರು. ಬಿ ಬ್ಲಾಕ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಬ್ಲಾಕ್ನಲ್ಲಿದ್ದ 47 ಕಾರ್ಮಿಕರಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ರಹೀಮಿ ಈ ಹಿಂದೆ ತಿಳಿಸಿದ್ದರು. ಸಿ ಬ್ಲಾಕ್…
ಬೆಂಗಳೂರು: ಯಾದಗಿರಿಯಲ್ಲಿ ಮೃತ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರವನ್ನು ನೀಡಿ. ಅಲ್ಲದೇ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಮಾನ್ಯ ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭಕದಲ್ಲಿ ಅವರ ಕುಟುಂಬಕ್ಕೆ ರೂ. 50 ಲಕ್ಷ ಪರಿಹಾರ ಹಾಗೂ ಅವರ ಪತ್ನಿಯಾದ ಶ್ರೀಮತಿ ಶ್ವೇತಾ ರವರಿಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ ಸುಮಾರು 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇಧಕರ ವಿಷಯವಾಗಿದೆ ಎಂದಿದ್ದಾರೆ. ಮೃತ ಪಿಎಸ್ಐ…
ಆಹಾರ ಸೇವನೆಯಲ್ಲೂ ಕೆಲವೊಂದು ನಿಯಮಗಳು ಇವೆ.ಈ 5 ಆಹಾರ ಪದ್ಧತಿಯನ್ನು ಪಾಲಿಸಿದರೆ ಮನೆಯಲ್ಲಿ ಬಡತನ ತಾಂಡವಾಡುತ್ತದೆ. ಭೀಷ್ಮರು ಅರ್ಜುನನಿಗೆ ಹೇಳಿದ ಆ 5 ಆಹಾರ ಗುಟ್ಟೇನು ಕೂದಲು ಬಿದ್ದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…
ಟೆಹ್ರಾನ್: ಪೂರ್ವ ಇರಾನ್ ನ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಭಾನುವಾರ ತಿಳಿಸಿದೆ. “ತಬಾಸ್ ಗಣಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30 ಕ್ಕೆ ಏರಿದೆ” ಎಂದು ಅಧಿಕೃತ ಐಆರ್ಎನ್ಎ ಸುದ್ದಿ ಸಂಸ್ಥೆ ತಿಳಿಸಿದೆ. ಗಣಿ ಇರುವ ದಕ್ಷಿಣ ಖೊರಾಸನ್ ಪ್ರಾಂತ್ಯದ ಗವರ್ನರ್ ಜಾವೇದ್ ಘೇನಾತ್, ಸಿಕ್ಕಿಬಿದ್ದ 22 ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ರಾಜ್ಯ ಟಿವಿಗೆ ತಿಳಿಸಿದ್ದಾರೆ. ಐಆರ್ಎನ್ಎ ಪ್ರಕಾರ, ಶನಿವಾರ ರಾತ್ರಿ 9:00 ರ ಸುಮಾರಿಗೆ (1730 ಜಿಎಂಟಿ) ಸ್ಫೋಟದಲ್ಲಿ “ಇತರ 17 ಜನರು ಗಾಯಗೊಂಡಿದ್ದಾರೆ”, ಅಲ್ಲಿ 69 ಕಾರ್ಮಿಕರು ಇದ್ದರು. ಮೀಥೇನ್ ಅನಿಲದ ಸೋರಿಕೆಯು ಗಣಿಯ ಎರಡು ಬ್ಲಾಕ್ ಗಳಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಅದು ಹೇಳಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಮತ್ತು ಹೆಲಿಕಾಪ್ಟರ್ಗಳು ಘಟನಾ ಸ್ಥಳಕ್ಕೆ ಆಗಮಿಸುವ ತುಣುಕನ್ನು ರಾಜ್ಯ ಟಿವಿ ಪ್ರಸಾರ…
ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹಪ್ಪಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆಯ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ 10 ದಿನಗಳ ಕಾಲ ಉಚಿತ ಹಬ್ಬಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ. ದಿನಾಂಕ 15-10-2024ರಿಂದ 24-10-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದರೇ 6364561982ಗೆ ಕಳುಹಿಸಬಹುದಾಗಿದೆ. ಇಲ್ಲವೇ www.rudsetujire.com ಗೆ ಭೇಟಿ ನೀಡಿಯೂ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900 ಹಾಗೂ 9902594791 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.













