Author: kannadanewsnow09

ನವದೆಹಲಿ: ಮಾನ್ಯತೆ ನಿಯಮಗಳನ್ನು ಉಲ್ಲಂಘಿಸಿ ನಕಲಿ ವಿದ್ಯಾರ್ಥಿಗಳನ್ನು ದಾಖಲಿಸಿದ್ದಕ್ಕಾಗಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ರಾಜಸ್ಥಾನದ 27 ಶಾಲೆಗಳು ಮತ್ತು ದೆಹಲಿಯ ಎನ್ಸಿಟಿಗೆ ಶೋಕೇಸ್ ನೋಟಿಸ್ ನೀಡಿದೆ. ಸಿಬಿಎಸ್ಇ ಕಾರ್ಯದರ್ಶಿ ಈ ಮಾಹಿತಿಯನ್ನು ನೀಡಿದ್ದಾರೆ. ‘ನಕಲಿ ಶಾಲೆ’ ಭೀತಿಯನ್ನು ಪರಿಶೀಲಿಸಲು ಮಂಡಳಿಯು ಸೆಪ್ಟೆಂಬರ್ 3 ರಂದು ಈ ಶಾಲೆಗಳಲ್ಲಿ ಹಠಾತ್ ತಪಾಸಣೆ ನಡೆಸಿತು. ಈ ತಪಾಸಣೆಗಳು ಮಂಡಳಿಯ ಸಂಯೋಜನೆ ಬೈಲಾಗಳನ್ನು ಎತ್ತಿ ತೋರಿಸಿವೆ, ಶಿಕ್ಷಣ ವ್ಯವಸ್ಥೆಯ ಸಮಗ್ರತೆಗೆ ಬೆದರಿಕೆಯೊಡ್ಡುವ ಗಂಭೀರ ಅಕ್ರಮಗಳನ್ನು ಬಹಿರಂಗಪಡಿಸಿವೆ. ಈ ತಪಾಸಣೆಗಳು ಶಾಲೆಗಳು ಮಂಡಳಿಯ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುತ್ತಿವೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಲಾಗಿತ್ತು. ‘ಪರಿಶೀಲಿಸಲಾದ ಹೆಚ್ಚಿನ ಶಾಲೆಗಳು ತಮ್ಮ ನೈಜ ಹಾಜರಾತಿ ದಾಖಲೆಗಳನ್ನು ಮೀರಿ ವಿದ್ಯಾರ್ಥಿಗಳನ್ನು ದಾಖಲಿಸುವ ಮೂಲಕ ಮಂಡಳಿಯ ಸಂಯೋಜನೆಯ ಉಪ-ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ, ಪರಿಣಾಮಕಾರಿಯಾಗಿ ‘ನಕಲಿ’ ದಾಖಲಾತಿಗಳನ್ನು ರಚಿಸಿದೆ. ಹೆಚ್ಚುವರಿಯಾಗಿ, ಶಾಲೆಗಳು ಮಂಡಳಿಯ ಮೂಲಸೌಕರ್ಯ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ ಎಂದು ಸಿಬಿಎಸ್ಇ…

Read More

ಬೆಂಗಳೂರು: ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಉಂಟಾಗಿತ್ತು. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿತ್ತು. ಅಲ್ಲದೇ ಹಲವರು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ದಾರೆ. https://twitter.com/CMofKarnataka/status/1831637786526396709 https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/strict-action-will-be-taken-if-casting-couch-cases-are-found-in-kannada-film-industry-minister-laxmi-hebbalkar/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/

Read More

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. https://kannadanewsnow.com/kannada/good-news-for-anganwadi-workers-pending-salaries-to-be-paid-soon-minister-laxmi-hebbalkar/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/

Read More

ಬೆಂಗಳೂರು: ನಾಲ್ಕು ತಿಂಗಳ ಗೌರವಧನ ಅಂಗನವಾಡಿ ಕಾರ್ಯಕರ್ತೆಯರಿಗೆ ಪಾವತಿ ಆಗಿರಲಿಲ್ಲ. ಹೀಗಾಗಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದರು. ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ ಪಾವತಿ ಮಾಡಲಾಗುತ್ತದೆ ಎಂಬುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ‌ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ,‌ ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ‌ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದುಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ. https://kannadanewsnow.com/kannada/mlc-chalavadi-narayanaswamy-demands-immediate-payment-of-honorarium-to-anganwadi-workers/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ನಾಲ್ಕು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ ಎಂಬುದಾಗಿ ಸುದ್ದಿ ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಅವರಿಗೆ ಕೂಡಲೇ ಗೌರವಧನ ಪಾವತಿ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಪತ್ರ ಬರೆದು ಬಿಜೆಪಿಯ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ಬರೆದಿರುವಂತ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ನಾಲ್ಕು ತಿಂಗಳನಿಂದ ಗೌರವ ಧನ ಪಾವತಿಯಾಗದೇ ಇರುವ ವಿಷಯವು ವಾರ್ತಾ ಮತ್ತು ಪತ್ರಿಕಾ ಮಾಧ್ಯಮದಲ್ಲಿ ಪ್ರಸಾರವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಇದೊಂದು ವಿಷಾದನೀಯ ಸಂಗತಿಯಾಗಿದೆ. ಪುಟ್ಟ ಮಕ್ಕಳನ್ನು ಪಾಲನೆ ಮಾಡುತ್ತಾ ಅವರಿಗೆ ವಿದ್ಯೆಯನ್ನು ಕಲಿಸುವ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಕೂಲಿ ಕೆಲಸ ಮಾಡಿಕೊಂಡು ಬದುಕು ದೂಡುವಂತಾಗಿರುವುದು ಮಾತ್ರ ವಿಪರ್ಯಾಸವೇ ಸರಿ ಎಂದಿದ್ದಾರೆ. ಗೌರವಧನವನ್ನೇ ನಂಬಿಕೊಂಡು ಜೀವನ ಮಾಡುತ್ತಾ ಬಂದಿರುವ…

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಮುಂದಿನ ವಾರ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಎರಡೂ ಕಡೆಯ ವಾದವನ್ನು ಮುಕ್ತಾಯಗೊಳಿಸಿದ ನಂತರ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತು. ಕೇಜ್ರಿವಾಲ್ ಪರ ಹಾಜರಾದ ಎಎಸ್ಜಿ ರಾಜು ಸೋಮವಾರದವರೆಗೆ ಟಿಪ್ಪಣಿ ಸಲ್ಲಿಸಲು ಸಮಯ ಕೋರಿದರು. ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕರಣದ ಬಗ್ಗೆ ಹಿಂತಿರುಗುವುದಾಗಿ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ದೆಹಲಿ ಸಿಎಂ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಇಂದು ಪುನರಾರಂಭಿಸಿತು. ಸಿಎಂ ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಪ್ರಕರಣದ ಸುದೀರ್ಘ ವಿಚಾರಣೆಯ ಹೊರತಾಗಿಯೂ ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯ ಬಗ್ಗೆ ಆದೇಶವನ್ನು ಹೊರಡಿಸಿಲ್ಲ ಎಂದು ಸುಪ್ರೀಂ…

Read More

ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತ ಸಮೂದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ 1 ರಿಂದ 8 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಯನ್ನು ಅಟೋ ರಿನಿವಲ್ ಎಂದು ಪರಿಗಣಿಸಲಾಗುವುದರಿಂದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಸಲ್ಲಿಸಕ್ಕದ್ದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಪಾಲಕರ/ಪೋಷಕರ ವಾರ್ಷಿಕ ಆದಾಯ 1 ಲಕ್ಷ ಮೀರಿರಬಾರದು. ಆಸಕ್ತ…

Read More

ಸಿಕ್ಕಂ: ಸಿಕ್ಕಿಂನಲ್ಲಿ ವಾಹನವೊಂದು ರಸ್ತೆಯಿಂದ ಜಾರಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಸಿಕ್ಕಿಂನ ಪಕ್ಯೋಂಗ್ ಜಿಲ್ಲೆಯ ಸಿಲ್ಕ್ ಮಾರ್ಗದಲ್ಲಿ ಪಶ್ಚಿಮ ಬಂಗಾಳದ ಪೆಡಾಂಗ್ನಿಂದ ಜುಲುಕ್ಗೆ ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸಿಕ್ಕಿಂನ ರೆನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್ಚಂದ್ ದಾರಾ ಬಳಿ ಈ ಘಟನೆ ನಡೆದಿದೆ. ಎಲ್ಲಾ ಸಿಬ್ಬಂದಿ ಪಶ್ಚಿಮ ಬಂಗಾಳದ ಬಿನಾಗುರಿಯ ಎನ್ರೂಟ್ ಮಿಷನ್ ಕಮಾಂಡ್ ಘಟಕಕ್ಕೆ ಸೇರಿದವರು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applications-invited-for-online-counselling-of-guest-lecturers/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/

Read More

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ.6ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/hc-arrested-for-trying-to-sell-stolen-gold-jewellery/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/

Read More

ಮೈಸೂರು: ಕಳ್ಳರು ಮನೆಗಳ್ಳತನ ಮಾಡಿ, ಕದ್ದಿದ್ದಂತ ಚಿನ್ನಾಭರಣದಲ್ಲಿ ಪಾಲು ಪಡೆದಿದ್ದಂತ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು, ಮಾರಾಟ ಮಾಡಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವಂತ ಘಟನೆ ಮೈಸೂರಿನ ಮಂಡಿ ಠಾಣೆಯಲ್ಲಿ ನಡೆದಿದೆ. ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಕಳ್ಳತನ ಪ್ರಕರಣದಲ್ಲಿ ಕಳ್ಳರಾದಂತ ನಜರುಲ್ಲಾ ಬಾಬು, ಆಲಿ ಎಂಬುವರು ಭಾಗಿಯಾಗಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರು ಬಂಧಿಸಿದ್ದಂತ ಮನೆಗಳ್ಳರಾದಂತ ನಜರುಲ್ಲಾ ಬಾಬು ಹಾಗೂ ಆಲಿ ತಾವು ಕದ್ದಿದ್ದಂತ 400 ಗ್ರಾಂ ಚಿನ್ನಾಭರಣದಲ್ಲಿ 300 ಗ್ರಾಂ ಅನ್ನು ಅಶೋಕಪುರಂ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಜು ಎಂಬುವರಿಗೆ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಅಶೋಕಪುರಂ ಹೆಡ್ ಕಾನ್ ಸ್ಟೇಬಲ್ ರಾಜು ಅವರ ಮೇಲೆ ಮಂಡಿ ಠಾಣೆಯ ಪೊಲೀಸರು ಕಣ್ಣಿಟ್ಟಿದ್ದರು. ಇಂದು ಮನೆಗಳ್ಳರಿಂದ ಪಡೆದಿದ್ದಂತ 100 ಗ್ರಾಂ ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದಂತ ವೇಳೆಯಲ್ಲಿ ಹೆಡ್ ಕಾನ್ ಸ್ಟೇಬಲ್ ರಾಜುನನ್ನು…

Read More