Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಸಂಘದಿಂದ ಕಷ್ಟದಲ್ಲಿದ್ದಂತ ಕೆಲ ಸಮುದಾಯದ ಜನರಿಗೆ ಆರ್ಥಿಕವಾಗಿ ನೆರವು ನೀಡಲಾಗಿದೆ. ಹೀಗೆ ಕಷ್ಟದಲ್ಲಿ ಸಹಾಯ ಮಾಡಿದಂತ ಸಂಘಕ್ಕೆ ಅಷ್ಟೇ ವಿನಮ್ರವಾಗಿ ಸಹಾಯ ಪಡೆದವರು ಧನ್ಯವಾದವನ್ನು ಅರ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮೊಗವೀರ ಸಮಾಜದ ಜನತೆ ಕಡಿಮೆ ಇದ್ದರು ಸಹ, ಸಾಗರ ತಾಲೂಕಿನಲ್ಲಿ ತನ್ನದೆ ಆದ ಚಾಪು ಮುಡಿಸಿದೆ. ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು. ಪ್ರತಿವರ್ಷ ನೋಟ್ ಬುಕ್ ವಿತರಣೆ. ವಿದ್ಯಾರ್ಥಿ ವೇತನ. ಸಮಾಜದವರು ತೀರಿಕೊಂಡಾಗ ಶವ ಸಂಸ್ಕಾರಕ್ಕೆ ಧನ ಸಹಾಯ ಮಾಡುವುದು ಮೊಗವೀರ ಸಮಾಜದ ಗುರಿಯಾಗಿದೆ ಹಾಗೂ ಮಾಡುತ್ತಾ ಬರುತ್ತಿದೆ. ಮತ್ತೆ ಮುಂದೆ ಒಂದು ಹೆಜ್ಜೆ ಇಟ್ಟ ಮೊಗವೀರ ಸಮಾಜ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೆಲವರು ಭೀಕರ ಕಾಯಿಲೆಯಿಂದ ಬಳಲುತ್ತಿರುವುದನ್ನು ಗಮನಿಸಿ, ಸಂಘದ ವತಿಯಿಂದ ಧನ ಸಹಾಯ ಮಾಡಲಾಗುತ್ತಿದೆ. ದೊಡ್ಡ ಪ್ರಮಾಣದ ಖಾಯಿಲೆ ಇದ್ದಾಗ ತುಂಬಾ ಹಣ ಖರ್ಚಾಗಿ, ಆಸ್ಪತ್ರೆ ಬಿಲ್ ನೋಡಿ ಅಲ್ಪ ಪ್ರಮಾಣದ ಸಹಾಯ ಧನ ನೀಡಲಾಗುತ್ತಿದೆ. ಕಡುಬಡತನದಲ್ಲಿ ಇದ್ದವರಿಗೆ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ. ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಸಂದೀಪ್ ಅವರು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಸಂಬಂಧ ಸಮರವನ್ನ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಮರಸೆ ಗ್ರಾಮದಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯ ತಿಳಿದು, ದಾಳಿ ನಡೆಸಿ, ಎಣ್ಣೆ ಸೀಜ್ ಮಾಡಿದ್ದರು. ಈಗ ತಾಲ್ಲೂಕಿನಲ್ಲಿ ಮತ್ತೊಂದೆಡೆ ದಾಳಿಯನ್ನು ನಡೆಸಿದ್ದಾರೆ. ಸಾಗರದಲ್ಲಿ ಅಬಕಾರಿ ಇಲಾಖೆಯಿಂದ ಮುಂದುವರೆದ ದಾಳಿ ಸೋಮವಾರದಂದು ಸಾಗರ ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರದ ಆಲಹಳ್ಳಿಯ ಮನೆಯೊಂದರಲ್ಲಿ…

Read More

ಲೆಬನಾನ್ : ಇಲ್ಲಿನ ಪೇಜರ್ಸ್ ನಲ್ಲಿ ಭೀಕರ ಬಾಂಬ್ ಸ್ಪೋಟಗೊಂಡಿದ್ದು, ದೇಶಾದ್ಯಂತ ನಡೆದಂತ ಸ್ಪೋಟದಲ್ಲಿ ಈವರೆಗೆ 8 ಮಂದಿ ಸಾವನ್ನಪ್ಪಿ, 2750 ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಲೆಬನಾನ್ ಆರೋಗ್ಯ ಸಚಿವರ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದ್ದು, ಲೆಬನಾನ್ ದೇಶಾದ್ಯಂತ ನಡೆದ ಸ್ಫೋಟದಲ್ಲಿ 2750 ಜನರು ಗಾಯಗೊಂಡಿದ್ದಾರೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಲೆಬನಾನ್ ಬೈರೋತ್ ನಲ್ಲಿ ಇರುವಂತ ಇಸ್ರೇಲ್ ರಾಯಭಾರ ಕಚೇರಿ ಕೂಡ ಸ್ಪೋಟಿಸಿ ಧ್ವಂಸಗೊಳಿಸಲಾಗಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1836067866489286952 https://kannadanewsnow.com/kannada/kpsc-approves-3-years-relaxation-in-age-limit-for-applying-for-pdo-post/ https://kannadanewsnow.com/kannada/cabinet-approves-setting-up-of-womens-pre-university-colleges-in-15-districts-by-waqf-board-minister-zameer-ahmed/

Read More

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು…

Read More

ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇಂದು ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ…

Read More

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು “ಸಾಮಾನ್ಯ ಅರ್ಹತ- 35 ವರ್ಷಗಳು, ಪವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. “ರಾಜ್ಯ…

Read More

ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ ನೀರು ತಂದು, ಕುಡಿಯುವ ನೀರು ಒದಗಿಸಿ ಕೊಡುವಂತ ಯೋಜನೆಯಾಗಿದೆ. ರಾಜ್ಯ ಸರ್ಕಾರ ಅರ್ಧ, ಕೇಂದ್ರ ಸರ್ಕಾರ ಅರ್ಧ ಹಣವನ್ನು ಭರಿಸಲಿದೆ. 7200 ಕೋಟಿಯಲ್ಲಿ ಬೀದರ್, ಗುಲಬರ್ಗ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವಂತ ಕಾರ್ಯ ಮಾಡಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಸಚಿವಾಲಯ ಮಾಡಬೇಕು ಎನ್ನುವಂತ ಒತ್ತಾಯವಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ…

Read More

ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. https://kannadanewsnow.com/kannada/rs-2-crore-allocated-for-shivpura-memorial-renovation-mla-dinesh-gooligowda-congratulates-cm-for-ordering-his-release/ https://kannadanewsnow.com/kannada/breaking-sc-stays-bulldozer-operation-across-the-country/

Read More

ಹಣದ ಅಧಿಪತಿಯಾಗಬಲ್ಲ ಮಾತೆ ಮಹಾಲಕ್ಷ್ಮಿಯು ನಮ್ಮ ಮನೆಯಲ್ಲಿ ಶಾಶ್ವತವಾಗಿ ನೆಲೆಸುವಂತೆ ನಾವು ಅನೇಕ ಪರಿಹಾರಗಳನ್ನು ಮತ್ತು ಅನೇಕ ಪೂಜೆಗಳನ್ನು ಮಾಡುತ್ತಿದ್ದೇವೆ. ತಾಯಿ ಮಹಾಲಕ್ಷ್ಮಿ ನಮ್ಮ ಮನೆಯಲ್ಲಿ ಖಾಯಂ ಆಗಿ ನೆಲೆಸಿದರೆ ಆದಾಯ ಹೆಚ್ಚುತ್ತದೆ, ಸಾಲದ ಬಾಧೆಯಿಂದ ಪಾರಾಗುತ್ತದೆ, ದುಂದು ವೆಚ್ಚ ತಡೆಯುತ್ತದೆ ಎಂದು ಹೇಳಲಾಗುತ್ತದೆ. ಶುಕ್ರವಾರದಂದು ಉಪ್ಪನ್ನು ಖರೀದಿಸುವುದು ನಾವು ಮಾಡುವ ಪರಿಹಾರಗಳಲ್ಲಿ ಒಂದಾಗಿದೆ. ನೀವು ಈ ರೀತಿ ಉಪ್ಪನ್ನು ಖರೀದಿಸಿದರೆ, ಆಧ್ಯಾತ್ಮಿಕತೆಯ ಬಗ್ಗೆ ನಾವು ಈ ಪೋಸ್ಟ್‌ನಲ್ಲಿ ನೋಡಲಿದ್ದೇವೆ , ಆ ಉಪ್ಪಿನೊಂದಿಗೆ ನೀವು ಖರೀದಿಸುವ ಮೂರು ವಸ್ತುಗಳು ನಿಮಗೆ ಅನಿರೀಕ್ಷಿತ ಅದೃಷ್ಟವನ್ನು ತರುತ್ತವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು…

Read More

ಶಿವಮೊಗ್ಗ: ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 15ನೇ ಸಹ್ಯಾದ್ರಿ ಚಲನಚಿತ್ರೋತ್ಸವವನ್ನು “ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಸೆಪ್ಟೆಂಬರ್ 17-21ರ ವರೆಗೆ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಕನೇ ಖಳನಾಯಕ ಆಗಿರುವ, ಅತೀ ಹಿಂಸೆ, ಕೊಳ್ಳೆ ಹೊಡೆಯುವಿಕೆ ಅಂತಹ ಪಾತ್ರಗಳನ್ನು, ಸಿನಿಮಾಗಳನ್ನು ನಾವಿಂದು ಕಾಣುತ್ತಿದ್ದೇವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಎಂದು ಹೇಳಿಕೊಂಡು ಬರುತ್ತಿರುವ ಎಲ್ಲವುಗಳಲ್ಲಿಯೂ ಇದೆ ಕಥಾನಕವಿದೆ. ಯುವಜನರು ಇವುಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕೆ, ಮಾದರಿ ಎಂದುಕೊಳ್ಳಬೇಕೆ ಎಂದು ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆಯ ಸಂಚಾಲಕ ಮತ್ತು ಪತ್ರಕರ್ತ ವೈದ್ಯನಾಥ ಹೆಚ್ ಯು ಅವರು ಚಿತ್ರೋತ್ಸವಉದ್ಘಾಟಿಸಿ ಮಾತನಾಡುತ್ತ, ಇಂದಿನ ಸಿನಿಮಾಗಳಲ್ಲಿ ನಾಯಕ – ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ…

Read More