Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ‘ಪೇ ಸಿಎಂ ಸೇ ಸಿಎಂ’ ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ‘ಹಂದಿಗುಂದ ಪ್ರಕರಣ’ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ. ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ ಮಾಡಿರುವ ಹಾಗೂ ಪರಿಹಾರ ಹಂಚಿಕೆಯಲ್ಲಿನ ಅಕ್ರಮಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಈ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ (Citizen Rights Foundation) ಅಧ್ಯಕ್ಷ ಕೆ.ಎ.ಪಾಲ್ (K.A. Paul)…

Read More

ಬೆಂಗಳೂರು: ನಮ್ಮ ನಡುವೆ ಬಾಂಧವ್ಯ ಬೆಸೆಯಲು ಉತ್ತರ ಕರ್ನಾಟಕ ಭಾಗದ ಸಂಸ್ಕೃತಿಕ ಕಾರ್ಯಕ್ರಮ ಮತ್ತು ನಮ್ಮ ಭಾಗದ ಗ್ರಾಮೀಣ ಕ್ರೀಡೆಗಳನ್ನು ನಡೆಸಿಕೊಂಡು ಹೋಗಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ಹೇಳಿದರು. ಅವರು ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಲಹಂಕದ ನಮ್ಮ ಉತ್ತರ ಕರ್ನಾಟಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ್ದ ಕ್ರೀಡಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿರುವ ನಾವು ನಮ್ಮವರು ಒಂದಾಗಿ ಸೇರಲು ನಮ್ಮಲ್ಲೇ ಭಾಂದವ್ಯ ಬೆಸೆಯಲು ಈ ರೀತಿಯ ಕಾರ್ಯಕ್ರಮ ಆಯೋಜನೆ ಮುಖ್ಯವಾಗಿದೆ ಎಂದು ಹೇಳಿದರು. ನಮ್ಮ ನಮ್ಮಲ್ಲೇ ಭೇದ ಭಾವ ಮಾಡದೇ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸೋಣ ಎಂದು ಹೇಳಿದರು. ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಬೆಂಗಳೂರಿನಲ್ಲಿ ಎಲ್ಲ ಪ್ರದೇಶಗಳಲ್ಲಿಯೂ ಉತ್ತರ ಕರ್ನಾಟಕ ಸಂಘಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಭಾಗದ ಸಂಸ್ಕೃತಿ ಉಳಿಸಿ…

Read More

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League – IPL) ನ ಮುಂಬರುವ ಋತುವು ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಭಾನುವಾರ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯ ನಂತರ ಶುಕ್ಲಾ ಈ ಘೋಷಣೆ ಮಾಡಿದ್ದಾರೆ. ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಹಾಗೂ ಖಜಾಂಚಿಯಾಗಿ ಪ್ರಭ್ತೇಜ್ ಸಿಂಗ್ ಭಾಟಿಯಾ ಆಯ್ಕೆಯಾಗಿದ್ದಾರೆ. ಜಯ್ ಶಾ ಮತ್ತು ಆಶಿಶ್ ಶೆಲಾರ್ ಅವರಿಂದ ತೆರವಾದ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ನಂತರ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಟಿ 20 ಪಂದ್ಯಾವಳಿಯ 18 ನೇ ಋತುವಿಗೆ ಮುಂಚಿತವಾಗಿ ಎರಡು ದಿನಗಳ ಮೆಗಾ ಹರಾಜು ನಡೆಯಿತು. ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ.ಗೆ ಹರಾಜಿನಲ್ಲಿ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾದಾಗ ಐಪಿಎಲ್ ಹರಾಜಿನ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕಳೆದ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಆಹ್ವಾನಿಸಲಾಗಿದ್ದು, 4ನೇ ಫೆಬ್ರವರಿ 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. ಪಾಲಿಕೆಯ ಕಲ್ಯಾಣ ಇಲಾಖೆಯಲ್ಲಿ 2024-25 ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ. ಅದರಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವರ್ಗಗಳ ಪೌರಕಾರ್ಮಿಕರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗ, ವಿಶೇಷ ಚೇತನರ ವರ್ಗ, ತೃತೀಯ ಲಿಂಗಿಗಳು ಮತ್ತು ಮಹಿಳಾ ವರ್ಗದ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಅಂತರ್ಜಾಲ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ: Online ನಲ್ಲಿ ಸಂಪೂರ್ಣ ಮಾಹಿತಿ 1. ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ. 2. ಶೈಕ್ಷಣಿಕ ಕಾರ್ಯಕ್ರಮದಡಿಯಲ್ಲಿ ಶಾಲಾ ಶುಲ್ಕ ಮರುಪಾವತಿ / ಉನ್ನತ ವ್ಯಾಸಂಗಕ್ಕೆ / ವಿದೇಶ ವ್ಯಾಸಂಗಕ್ಕಾಗಿ ಸಹಾಯಧನ.…

Read More

ವಿಜಯನಗರ : ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು. ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು. https://kannadanewsnow.com/kannada/three-naxals-killed-in-encounter-with-security-forces-in-chhattisgarh-adds/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/

Read More

ಛತ್ತೀಸ್ ಗಢ: ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಿಜಾಪುರ ಪೊಲೀಸರು ತಿಳಿಸಿದ್ದಾರೆ. ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನ ಪ್ರದೇಶದ ಕಾಡುಗಳಿಂದ ಭದ್ರತಾ ಸಿಬ್ಬಂದಿ ಹಲವಾರು ಸ್ವಯಂಚಾಲಿತ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ, ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಭದ್ರತಾ ಸಿಬ್ಬಂದಿ ಮೃತ ನಕ್ಸಲರನ್ನು ಗುರುತಿಸುತ್ತಿದ್ದಾರೆ. ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನ ಪ್ರದೇಶದ ಅರಣ್ಯಗಳಲ್ಲಿ ಮಾವೋವಾದಿಗಳು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಸಿಬ್ಬಂದಿಯ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು. ಮಾಹಿತಿಯ ಮೇರೆಗೆ ಭದ್ರತಾ ಪಡೆಗಳ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ತೆರಳಿತು. ಕಾರ್ಯಾಚರಣೆ ಪೂರ್ಣಗೊಂಡ ನಂತರ ವಿವರವಾದ ಮಾಹಿತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಜಾಪುರ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಶನಿವಾರ, ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಕೇಂದ್ರ ಮೀಸಲು ಪೊಲೀಸ್…

Read More

ಬೆಂಗಳೂರು: ಬೆಂಗಳೂರು ವಿವಿ ಬಿಕಾಂ ಪರೀಕ್ಷೆಗೆ ಏಕಸದಸ್ಯ ನ್ಯಾಯಪೀಠದಿಂದ ತಡೆಯಾಜ್ಞೆ ನೀಡಲಾಗಿತ್ತು. ಇಂದು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿಯ ಬಿಕಾಂ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೆಂಗಳೂರು ವಿಶ್ವ ವಿದ್ಯಾಲಯದ ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದಂತ ತಡೆಯನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂತಹ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿ 1, 3 ಹಾಗೂ 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ನಡೆಸಲು ಅನುಮತಿಸಿದೆ. ಅಂದಹಾಗೇ ಸಿಎ ಫೌಂಡೇಷನ್ ಕೋರ್ಸ್ ಪರೀಕ್ಷೆ ಮತ್ತು ಸಿಎ ಮಧ್ಯಂತರ ಪರೀಕ್ಷೆಗೆ ಅಡ್ಡಿಯಾಗಿದೆ ಎಂಬುದಾಗಿ ಸೋಮವಾರದಿಂದ ನಡೆಯಬೇಕಾಗಿದ್ದ ಬೆಂಗಳೂರು ವಿವಿ ಅಧೀನದ ಕಾಲೇಜುಗಳಲ್ಲಿ ಬಿಕಾಂ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಮರು ದಿನಾಂಕ ನಿಗದಿ ಪಡಿಸುವಂತೆಯೂ ಹೈಕೋರ್ಟ್ ಏಕ ಸದಸ್ಯ ಪೀಠವು ಆದೇಶಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠದ ತಡೆಯನ್ನು ಪ್ರಶ್ನಿಸಿ…

Read More

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೋಯ್ದ ದುರುಳರ ಕೃತ್ಯ ಅತ್ಯಂತ ಅಮಾನೀಯವಾಗಿದ್ದು, ಈ ಹೀನ ಕೃತ್ಯವನ್ನು ತೀರ್ವವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಗೋಮಾತೆಯನ್ನು ತಾಯಿಯಂತೆ ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸುಗ್ಗಿಯ ಹಬ್ಬ ಮಕರ ಸಂಕ್ರಾತಿಯ ಸಂದರ್ಭದಲ್ಲಿ ರಾಜ್ಯದ ರಾಜ್ಯಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದಲ್ಲಿ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಗೋವುಗಳಿಗೆ ಸರಿಯಾದ ರಕ್ಷಣೆ ನೀಡದಿರುವುದು, ಗೋಶಾಲೆಗಳಿಗೆ ಸರಿಯಾದ ಅನುದಾನ ನೀಡದೇ ನಿರ್ಲಕ್ಣ್ಯ ಮಾಡಿರುವುದರ ಪರಿಣಾಮ, ಇಂತಹ ಹೃದಯ ಹೀನ ಕೃತ್ಯಗಳು ನಡೆಯಲು ಪ್ರೇರಣೆ ನೀಡಿದಂತಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಮೂಕ ಪ್ರಾಣಿಗಳ ಮೇಲೆ ಮಾಡಿರುವ ಇಂತಹ ಕೃತ್ಯವನ್ನು ಅಂತಃಕರಣ ಇರುವವರು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ಸರ್ಕಾರಕ್ಕೆ ಗೋಮಾತೆಯ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ಇಂತಹ ಹೇಯ…

Read More

ಬೆಂಗಳೂರು: ನಗರದಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ತಾಯಿ ಹಾಗೂ ಮರಿ ಚಿರತೆ ಓಡಾಡುತ್ತಿರುವುದನ್ನು ಕಂಡಿರುವಂತ ಜನರು ಆತಂಕದಲ್ಲಿ, ಭಯ ಭೀತಿಯಲ್ಲಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಮೂರು ತಿಂಗಳಿನಿಂದ 10ಕ್ಕೂ ಹೆಚ್ಚು ನಾಯಿ, ಕುರಿ, ಮೇಕೆಗಳನ್ನು ಹೊತ್ತೊಯ್ದು ಚಿರತೆ ತಿಂದಿರುವುದಾಗಿ ಹೇಳಲಾಗುತ್ತಿದೆ. ಇನ್ನೂ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಕಂಡಿರುವಂತ ಜನರು ಸಂಜೆ ಹಾಗೂ ಬೆಳಗಿನ ವೇಳೆಯಲ್ಲಿ ಮನೆಯಿಂದ ಹೊರ ಬಾರದೇ ಭಯದಿಂದ ಬದುಕುತ್ತಿದ್ದಾರೆ. ಇನ್ನೂ ಶಾಲೆಗೆ ಮಕ್ಕಳನ್ನು ಕರೆದೊಯ್ಯಲು, ಕಳಿಸೋದಕ್ಕೂ ಯೋಚಿಸುವಂತ ಪರಿಸ್ಥಿತಿ ಉಂಟಾಗಿದೆ. ಈ ಹಿಂದೆ ಇದೇ ಏರಿಯಾದಲ್ಲಿ ಚಿರತೆಯೊಂದು ಬಿಎಂಟಿಸಿ ಬಸ್ ಚಾಲಕನ ಮೇಲೆ ದಾಳಿ ಮಾಡಿತ್ತು. ಈಗ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರು ಆಂತಕದಲ್ಲಿದ್ದಾರೆ. ಕೂಡಲೇ ಅರಣ್ಯ ಇಲಾಖೆಯವರು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/ https://kannadanewsnow.com/kannada/i-wanted-to-put-a-bullet-through-kapil-devs-head-yograj-singh/

Read More

ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಕಲಾವಿದ ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು. ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನೂ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಸರಿಗಮ ವಿಜಿ ಕುಟುಂಬ ಈಗ ಆರ್ಥಿಕವಾಗಿ ಕಷ್ಟದಲ್ಲಿ ಕೂಡ ಇದ್ದು, ಅವರ ಚಿಕಿತ್ಸೆಗೂ ನೆರವಾಗುವಂತೆ ಸರ್ಕಾರವನ್ನು ಕೋರಿದೆ. https://kannadanewsnow.com/kannada/bengaluru-fir-lodged-against-miscreants-for-brutally-chopping-off-cows-husk/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/

Read More