Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಬದಲಾವಣೆ, ಮೂವರು ಡಿಸಿಎಂ ಸೃಷ್ಠಿಯ ವಿವಾದ ರಾಜ್ಯದಲ್ಲಿ ತಾರಕಕ್ಕೇರಿದೆ. ಈ ವಿಚಾರವನ್ನು ಮಾತನಾಡದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದರು. ಆದ್ರೇ ಸಚಿವ ಕೆ.ಎನ್ ರಾಜಣ್ಣ ಮಾತ್ರ ಡಿಕೆಶಿ ವಾರ್ನಿಂಗ್ ನಾನು ಕೇಳ್ತೀನಾ? ನೋಟಿಸ್ ಕೊಡಲಿ ಆಮೇಲೆ ಮಾತಾಡ್ತೀನಿ ಅಂತ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಡಿದಂತ ಅವರು, ಡಿಕೆ ಶಿವಕುಮಾರ್ ನೋಡಿಸ್ ಕೊಟ್ಟ ಮೇಲೆ ನಾನು ಮಾತಾಡುತ್ತೇನೆ. ಸಲಹೆ ನೀಡುವಾಗ ಸಾರ್ವಜನಿಕವಾಗಿ ವಿವಾದ ಆಗಬಾರದು ಎಂದರು. ನಾನು ವಿವಾದ ಆಗಬಾರದು ಎನ್ನುವ ಮಾತನ್ನು ಒಪ್ಪುತ್ತೇನೆ. ನಾನು ಡಿಸಿಎಂ ಬಗ್ಗೆ ತಪ್ಪಾಗಿ ಏನು ಹೇಳಿಲ್ಲ. ನಾವು ಕೇಳಬಾರದಾ ಅಂತ ಪ್ರಶ್ನಿಸಿದಂತ ಅವರು, ನಾವು ಕೇಳಿದ್ದೇ ತಪ್ಪಾಗುತ್ತದೆಯೇ? ಕೇಳಿದ್ದೇ ತಪ್ಪು ಅಂದ್ರೆ ಯಾವುದೇ ಕ್ರಮ ತೆಗೆದುಕೊಂಡರು ಎದುರಿಸೋದಕ್ಕೆ ನಾನು ತಯಾರಿದ್ದೇನೆ ಅಂತ ಹೇಳಿದರು. ನಾನು ಡಿಕೆಶಿ ವಾರ್ನಿಂಗ್ ಕೇಳ್ತೀನಾ? ನಾನು ನಾನೇ,. ರಾಜಣ್ಣ, ರಾಜಣ್ಣನೇ. ಅಧಿಕಾರಕ್ಕೆ ನಾನು ಅಂಟಿಕೊಂಡಿಲ್ಲ. ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್…
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದರು. ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದರು. ಒಂದು ಕುಟುಂಬಕ್ಕೆ…
ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪತ್ರಕರ್ತನನ್ನು ಬಂಧಿಸಿದೆ. ಶಂಕಿತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಅವರು ‘ಪ್ರಭಾತ್ ಖಬರ್’ ಎಂಬ ಹಿಂದಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಂಧಿಸಲ್ಪಟ್ಟ ಹಜಾರಿ ಬಾಗ್ನ ಒಯಾಸಿಸ್ ಶಾಲೆಯ ಇಬ್ಬರು ಆರೋಪಿಗಳ ಸಹಚರ ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ನಿನ್ನೆಯಷ್ಟೇ ಜಾರ್ಖಂಡ್ ನ ಹಜಾರಿಬಾಗ್ನ ಒಯಾಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿತ್ತು. ಆರೋಪಿ ಪ್ರಾಂಶುಪಾಲ ಡಾ.ಎಹ್ಸಾನುಲ್ ಹಕ್ ಹಜಾರಿಬಾಗ್ನಲ್ಲಿ ನೀಟ್ ಪರೀಕ್ಷೆಯ ಜಿಲ್ಲಾ ಸಂಯೋಜಕರಾಗಿದ್ದರು ಮತ್ತು ಅವರ ಡೆಪ್ಯೂಟಿ ಇಮ್ತಿಯಾಜ್ ಆಲಂ ಎನ್ಟಿಎ ವೀಕ್ಷಕರಾಗಿರುವುದರ ಜೊತೆಗೆ ಒಯಾಸಿಸ್ ಶಾಲೆಯಲ್ಲಿ ಕೇಂದ್ರದ ಅಧೀಕ್ಷಕರಾಗಿದ್ದರು. https://kannadanewsnow.com/kannada/sda-accepts-bribe-through-phonepe-in-education-ministers-constituency/ https://kannadanewsnow.com/kannada/india-us-balanced-tax-treaty-extended-till-june-30/
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಕ್ಷೇತ್ರದಲ್ಲೇ ಲಂಚಾವತಾರ ತಾಂಡವವಾಡುತ್ತಿದೆ. ಇಲ್ಲೊಬ್ಬ ತಹಶೀಲ್ದಾರ್ ಕಚೇರಿಯ ಎಸ್ ಡಿಎ ಸಿಬ್ಬಂದಿಯೊಬ್ಬರು ಪೋನ್ ಪೇ ಮೂಲಕವೇ ಲಂಚದ ಹಣವನ್ನು ಸ್ವೀಕರಿಸಿರೋ ಗಂಭೀರ ಆರೋಪ ಕೇಳಿ ಬಂದಿದೆ. ಮಾಹಿತಿ ಹಕ್ಕು ಕಾಯ್ದೆ 2005ರ ಅನುಸಾರವಾಗಿ ಶಿವಮೊಗ್ಗದ ಗಾಡಿ ಕೊಪ್ಪದ ಎಲ್.ಅಭಿಷೇಕ್ ಎಂಬುವರು, ಗಾಡಿಕೊಪ್ಪ ಗ್ರಾಮ ಸರ್ವೇ ನಂಬರ್ 13, 14, 10 ಹಾಗೂ 11ರ ಮೈಲಾರಪ್ಪ, ಯಶವಂತ ಪವಾರ್ ಅವರಿಗೆ ಸೇರಿದಂತೆ ಸಂಪೂರ್ಣ ದಾಖಲೆ, ಪಹಣಿ, ಎಂ ಆರ್ ಮತ್ತು ಮ್ಯುಟೇಷನ್ ಗಳ ಪ್ರತಿಯನ್ನು ದೃಢೀಕರಿಸಿ ನೀಡುವಂತೆ ಕೋರಿದ್ದರು. ಮೇ.13ರಂದು ಆರ್ ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಂತ ಅಭಿಷೇಕ್ ಗೆ ತಹಶೀಲ್ದಾರ್ ಕಚೇರಿಯ ಎಸ್ ಡಿಎ ಅಭಿನಂದನ್ ಕಳಿಸಿರಲಿಲ್ಲ. ಅಲ್ಲದೇ ಇಂದು, ನಾಳೆ ಅಂತ ಸುಳ್ಳು ಹೇಳುತ್ತಾ ಬಂದಿದ್ದಾರೆ. ಕೊನೆಗೆ ಮತ್ತೊಂದು ಅರ್ಜಿ ಸಲ್ಲಿಸುವಂತೆ ಸೂಚಿಸಿದಾಗ ಮೇ.31ರಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಎಸ್ ಡಿಎ ಅಭಿನಂದನ್ ಜುಲಾಕಿ ಅವರು…
ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿಯನ್ನು ಹೊಗಳಿದರು. ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು. ಗ್ರಾಮೀಣ ಪ್ರದೇಶದ ಉದ್ಯಮಿಗಳಿಗೆ ಬೆಂಬಲ ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು.…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿ.ಎಂ. ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ನುಡಿದರು. ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ ಎಂದು ಆಕ್ಷೇಪಿಸಿದರು. ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್, ಅಷ್ಟೇ ಅಲ್ಲ; ಮಾನ್ಯ ಮುಖ್ಯಮಂತ್ರಿಗಳೂ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿದೆ ಎಂದು ಆಗ್ರಹಿಸಿದರು. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ…
ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಜೆಡಿಯು ಕೇಂದ್ರ ಸರ್ಕಾರವನ್ನು ಕೋರಿದೆ. ಇದಕ್ಕೂ ಮುನ್ನ ಶುಕ್ರವಾರ, ಜೆಡಿಯು ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಜಲಸಂಪನ್ಮೂಲ ಮತ್ತು ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರ ವೀಡಿಯೊವನ್ನು ಪೋಸ್ಟ್ ಮಾಡಿ, “ಪ್ರಸ್ತುತ ರಾಜಕೀಯ ಸನ್ನಿವೇಶ ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ -2025 ರ ಸಿದ್ಧತೆಗಳನ್ನು ಪರಿಶೀಲಿಸಲು ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ” ಎಂದು ಉಲ್ಲೇಖಿಸಿದೆ. ಬಿಹಾರದಲ್ಲಿ ಉತ್ತಮ ಆಡಳಿತಕ್ಕಾಗಿ ಜೆಡಿಯು ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಹಿಂದೆ ಹೇಳಿದ್ದರು. ದೆಹಲಿಯಲ್ಲಿ ಗುರುವಾರ ಜೆಡಿಯು ಸಂಸದರೊಂದಿಗೆ ಸಭೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಈ ವಿಷಯ ತಿಳಿಸಿದರು. JDU ಸಂಸದರೊಂದಿಗೆ ಉತ್ತಮ ಸಭೆ ನಡೆಸಿದ್ದೇನೆ. ನಮ್ಮ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವ ಮತ್ತು ಬಿಹಾರದಲ್ಲಿ ಕಳಪೆ ಆಡಳಿತ, ಭ್ರಷ್ಟಾಚಾರ ಮತ್ತು ಅಪರಾಧೀಕರಣದ…
ಬೆಂಗಳೂರು: ಇಂದು ರಾಜ್ಯ ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್ ಸಂಗ್ರೇಶಿ ಅವರನ್ನು ನೇಮಕವನ್ನು ಹಿಂಪಡೆದಿರುವಂತ ಸರ್ಕಾರವು, ಅವರನ್ನು ಕರ್ನಾಟಕ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (ಕರ್ನಾಟಕ ಕಾಯ್ದೆ, 1993) ರ ಸೆಕ್ಷನ್ 308 ರ ಉಪ ವಿಭಾಗ (1) ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು, ಗೌರವಾನ್ವಿತ ರಾಜ್ಯಪಾಲರು ಈ ಮೂಲಕ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಅಂತ ತಿಳಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ (ರಾಜ್ಯ ಚುನಾವಣಾ ಆಯುಕ್ತರ ಸೇವಾ ಷರತ್ತುಗಳು) ನಿಯಮಗಳು, 2006 ರ ನಿಯಮ 4 ರ ಅಡಿಯಲ್ಲಿ ಆಯುಕ್ತರ ಅಧಿಕಾರಾವಧಿ ಆಯುಕ್ತರಾಗಿ ನೇಮಕಗೊಂಡ ದಿನಾಂಕದಿಂದ ಐದು…
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ಹಜಾರಿಬಾಗ್ನ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಒಯಾಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಅವರನ್ನು ಹಜಾರಿಬಾಗ್ನ ನಗರ ಸಂಯೋಜಕರನ್ನಾಗಿ ಮಾಡಲಾಗಿದೆ ಎಂದು ಅವರು ಹೇಳಿದರು. ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಅವರನ್ನು ಎನ್ಟಿಎ ವೀಕ್ಷಕ ಮತ್ತು ಒಯಾಸಿಸ್ ಶಾಲೆಯಲ್ಲಿ ಕೇಂದ್ರದ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಜಿಲ್ಲೆಯ ಇನ್ನೂ ಐದು ಜನರನ್ನು ಪ್ರಶ್ನಿಸುತ್ತಿದೆ. ವಿವರವಾದ ವಿಚಾರಣೆಯ ನಂತರ ಫೆಡರಲ್ ತನಿಖಾ ಸಂಸ್ಥೆ ಹಕ್ ಮತ್ತು ಆಲಂ ಅವರನ್ನು ಬಂಧಿಸಿದೆ ಎಂದು ಅವರು ಹೇಳಿದರು. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕ (ಇಒಯು) ತನಿಖೆಯ ಸಮಯದಲ್ಲಿ ಇಬ್ಬರೂ ಆರೋಪಿಗಳನ್ನು…
ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಗಾಜಿನ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಶಾದ್ ನಗರದಲ್ಲಿರುವ ಕಾರ್ಖಾನೆಯ ಟ್ಯಾಂಕ್ ಸಂಜೆ 4.30 ರ ಸುಮಾರಿಗೆ ಸ್ಫೋಟಗೊಂಡಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗಿದೆ. ಈ ದುರ್ಘಟನೆ ಸಂಜೆ 4.30 ರ ಸುಮಾರಿಗೆ ಶಾದ್ ನಗರದಲ್ಲಿರುವ ಕಾರ್ಖಾನೆಯ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/two-die-of-dengue-fever-in-bengaluru/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/














