Author: kannadanewsnow09

ಬೆಂಗಳೂರು : “ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ,‌ ಎರಡನೇ ಹಂತಕ್ಕೆ 23 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿ ಸಂಸ್ಥೆಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದ ವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ” ಎಂದರು. “130 ಕಿ.ಮೀ ಮೇಲ್ಸೆತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು. ರಾಜಕಾಲುವೆಗಳ ಪಕ್ಕದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣವೂ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತ್ರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ, ತಿಳಿಸಿದ್ದಾರೆ. https://kannadanewsnow.com/kannada/actress-ranya-rao-gold-smuggling-case-ed-seizes-property-worth-rs-34-12-crore/ https://kannadanewsnow.com/kannada/applications-invited-for-free-coaching-for-upsc-prelims-mains-exams/

Read More

ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಈ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಗೆ ಸೇರಿದಂತ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಮಾಹಿತಿ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ನಟಿ ರನ್ಯಾ ರಾವ್ ಅವರಿಗೆ ಸೇರಿದಂತ 34.12 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿಯಲ್ಲಿ ನಟಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದಂತ ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಲ್ಲಿರುವಂತ ಮನೆ, ಅರ್ಕಾವತಿ ಬಡಾವಣೆಯ ನಿವೇಶನ, ತುಮಕೂರಿನ ಕೈಗಾರಿಕಾ ನಿವೇಶನ, ಆನೇಕಲ್ ತಾಲ್ಲೂಕಿನಲ್ಲಿರುವಂತ ಕೃಷಿ ಜಮೀನನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಂದಹಾಗೇ ನಟಿ ರನ್ಯಾ ರಾವ್ ಮಾರ್ಚ್.3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದಾ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ 12.56…

Read More

ನವಮಿ ತಿಥಿಯು ಶ್ರೀರಾಮನನ್ನು ಪೂಜಿಸಲು ಶುಭ ದಿನ. ಏಕೆಂದರೆ ಶ್ರೀರಾಮನು ನವಮಿ ತಿಥಿಯಂದು ಅವತರಿಸಿದ್ದನು. ಅಂತಹ ನವಮಿ ತಿಥಿ ಶುಕ್ರವಾರದೊಂದಿಗೆ ಹೊಂದಿಕೆಯಾಗುತ್ತದೆ. ಶುಕ್ರವಾರವನ್ನು ಮಹಾಲಕ್ಷ್ಮಿಗೆ ಶುಭ ದಿನವೆಂದು ಪರಿಗಣಿಸಲಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಎರಡೂ ಒಟ್ಟಿಗೆ ಬರುವ ಈ ಅದ್ಭುತ ದಿನವನ್ನು ನಾವು ಸರಿಯಾಗಿ ಬಳಸಿಕೊಂಡರೆ, ನಮ್ಮ ಜೀವನದಲ್ಲಿನ ಎಲ್ಲಾ ದುರದೃಷ್ಟಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತವೆ ಮತ್ತು ಅದೃಷ್ಟವು ಮೇಲುಗೈ ಸಾಧಿಸುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಆ ಪೂಜಾ ವಿಧಾನವನ್ನು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ,…

Read More

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನೇ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮದಂತು ಇಡುವುದನ್ನು ಮರೆಯಲಾಗಿತ್ತು. ಇದು ವ್ಯಾಪಕ ಟೀಕೆಗೆ ಗುರಿಯಾಗಿ ಸರ್ಕಾರಕ್ಕೂ ಮುಜುಗರ ಉಂಟು ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ನವೆಂಬರ್.26ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಂದೇ ಡಾ.ಬಿಆರ್ ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ಮರೆಯಲಾಗಿತ್ತು. ಈ ಹಿನ್ನಲೆಯಲ್ಲಿ 7 ತಿಂಗಳ ನಂತ್ರ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿಯನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ನೆನಪಿಸಿದ್ದರೂ ಕಡೆಗಣಿಸಿದ ಆರೋಪದಡಿ ಅಮಾನತುಗೊಳಿಸಲಾಗಿದೆ. https://kannadanewsnow.com/kannada/applications-invited-for-free-coaching-for-upsc-prelims-mains-exams/ https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/

Read More

ಸ್ನಾಯು ಉಳುಕು ಮತ್ತು ಅತಿಯಾಗಿ ಹಿಗ್ಗಿಸುವುದು ಬೆನ್ನುನೋವಿಗೆ ಸಾಮಾನ್ಯ ಕಾರಣಗಳಾಗಿವೆ. ಭಾರವಾದ ವಸ್ತುಗಳನ್ನು ತಪ್ಪಾಗಿ ಎತ್ತುವುದು, ಹಠಾತ್ತನೆ ಸೊಂಟವನ್ನು ಬಾಗಿಸುವುದು ಅಥವಾ ತಿರುಚುವುದು ಅಥವಾ ಅತಿಯಾದ ಶ್ರಮ ವಹಿಸುವುದರಿಂದ ಸೊಂಟದಲ್ಲಿರುವ ಸ್ನಾಯುಗಳು ಅಥವಾ ಅಸ್ಥಿರಜ್ಜುಗಳು (ಮೂಳೆಗಳನ್ನು ಸಂಪರ್ಕಿಸುವ ಅಂಗಾಂಶಗಳು) ಹಿಗ್ಗಬಹುದು ಅಥವಾ ಉಳುಕಬಹುದು. ಇದು ನೋವಿಗೆ ಕಾರಣ ಕುಳಿತುಕೊಳ್ಳುವ ಭಂಗಿ: ದೀರ್ಘಕಾಲದವರೆಗೆ ಬಾಗಿಕೊಂಡು ಕುಳಿತುಕೊಳ್ಳುವುದು (ಉದಾಹರಣೆಗೆ, ಕಂಪ್ಯೂಟರ್ ಮುಂದೆ), ತಪ್ಪಾಗಿ ನಿಲ್ಲುವುದು ಅಥವಾ ಕಳಪೆ ಭಂಗಿಯಲ್ಲಿ ಮಲಗುವುದು ಬೆನ್ನುಮೂಳೆಯ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡಬಹುದು ಮತ್ತು ನೋವನ್ನು ಉಂಟುಮಾಡಬಹುದು. ಡಿಸ್ಕ್ ಸಮಸ್ಯೆಗಳು:  ಬೆನ್ನುಮೂಳೆಯ ಮೂಳೆಗಳ (ಕಶೇರುಖಂಡಗಳು) ನಡುವಿನ ಕುಶನ್‌ಗಳಾಗಿರುವ ಡಿಸ್ಕ್‌ಗಳು ಉಬ್ಬಬಹುದು (ಉಬ್ಬಬಹುದು) ಅಥವಾ ಸಂಪೂರ್ಣವಾಗಿ ಛಿದ್ರವಾಗಬಹುದು (ಹರ್ನಿಯೇಟೆಡ್), ಹತ್ತಿರದ ನರಗಳ ಮೇಲೆ ಒತ್ತಡ ಹೇರಬಹುದು. ಇದು ತೀವ್ರವಾದ ಬೆನ್ನು ನೋವು, ಕಾಲು ಸೆಳೆತ, ದೌರ್ಬಲ್ಯ ಅಥವಾ ಜುಮ್ಮೆನಿಸುವಿಕೆಗೆ ಕಾರಣವಾಗಬಹುದು. ಸಿಯಾಟಿಕಾ:  ಈ ನೋವು ಸಿಯಾಟಿಕ್ ನರದ ಮೇಲಿನ ಒತ್ತಡದಿಂದ ಉಂಟಾಗುತ್ತದೆ. ಸಿಯಾಟಿಕ್ ನರವು ಕೆಳಗಿನ ಬೆನ್ನಿನಿಂದ ಪೃಷ್ಠದ ಮೂಲಕ, ಕಾಲಿನ…

Read More

ಬೆಂಗಳೂರು: ಜುಲೈ.6ರಂದು ನಿಗದಿತ ನಿರ್ವಹಣಾ ಕಾಮಗಾರಿಗಾಗಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಆಗಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಿಗ್ಗೆ 08:00 ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ ಎಂದಿದೆ. ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 07:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದೆ.…

Read More

ಬೆಂಗಳೂರು: ನೈಋತ್ಯ ರೈಲ್ವೆಯ ಮಹಾಪ್ರಬಂಧಕ ಮುಕುಲ್ ಸರಣ್ ಮಾಥುರ್ ಅವರು ಬೀರೂರು ಮತ್ತು ತಾಳಗುಪ್ಪ ನಡುವಿನ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿ ಮುಖ್ಯ ಸುರಕ್ಷತೆ ಹಾಗೂ ಕಾರ್ಯಚರಣೆ ಸಂಬಂಧಿತ ಅಂಶಗಳನ್ನು ಪರಿಶೀಲಿಸಿದರು. ಈ ತಪಾಸಣೆಯ ಉದ್ದೇಶ ನಿಲ್ದಾಣಗಳ ಪುನರಾಭಿವೃದ್ಧಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಪರಿಶೀಲಿಸುವುದಾಗಿದೆ. ತಪಾಸಣೆಯ ಸಮಯದಲ್ಲಿ, ಶಿವಮೊಗ್ಗ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆ (ABSS) ಅಡಿಯಲ್ಲಿ ನಡೆಯುತ್ತಿರುವ ಪುನರಾಭಿವೃದ್ಧಿಯನ್ನು ಪರಿಶೀಲಿಸಿದರು. ನಿಲ್ದಾಣದ ಸೌಂದರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳಲ್ಲಿ ಆಗುತ್ತಿರುವ ಸುಧಾರಣೆಗಳನ್ನು ಪರಿಶೀಲಿಸಿದರು. ನಿಲ್ದಾಣದಲ್ಲಿ, ಮಾಥುರ್ ಅವರು ಹಳಿ ನಿರ್ವಹಣಾಕಾರರೊಂದಿಗೆ ಸಂವಹನ ನಡೆಸಿದರು, ದಿನನಿತ್ಯದ ಕೆಲಸಗಳಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಪರಿಷೀಲನಾ ವೇಳೆ ಕೋಟೆಗಂಗೂರು ಕೋಚಿಂಗ್ ಡಿಪೋಗೆ ಭೇಟಿ ನೀಡಿ, ವಿಸ್ತರಿಸಲಾಗುತ್ತಿರುವ ಕೋಚಿಂಗ್ ಮೂಲಸೌಕರ್ಯದ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಅವರು ಅರಸಾಳು ನಿಲ್ದಾಣವನ್ನು ಪರಿಶೀಲಿಸಿ, ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.…

Read More

ಬೆಂಗಳೂರು: ಬಿಡದಿ ಯಾರ್ಡ್’ನಲ್ಲಿ ಸುರಕ್ಷತೆ ಮತ್ತು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ರದ್ದು: ಜುಲೈ 10, 2025 ರಂದು ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್, ಮತ್ತು ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್ ಸ್ಪೆಷಲ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ ರೈಲು ಸಂಖ್ಯೆ 56266 ಮೈಸೂರು – ಅರಸೀಕೆರೆ ಪ್ಯಾಸೆಂಜರ್ ರೈಲನ್ನು ಸಹ ಜುಲೈ 11ರಂದು ರದ್ದುಗೊಳಿಸಲಾಗಿದೆ. ಭಾಗಶಃ ರದ್ದು: ಜುಲೈ 10, 2025 ರಂದು ಪ್ರಯಾಣ ಆರಂಭಿಸಲಿರುವ ರೈಲು ಸಂಖ್ಯೆ 66580 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮೆಮು ರೈಲು ರಾಮನಗರಂ-ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ರಾಮನಗರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ಜುಲೈ 11ರಂದು ಪ್ರಯಾಣ ಆರಂಭಿಸಲಿರುವ ರೈಲು ಸಂಖ್ಯೆ 66579 ಕೆಎಸ್ಆರ್ ಬೆಂಗಳೂರು- ಅಶೋಕಪುರಂ ಮೆಮು ರೈಲು ಕೆಎಸ್ಆರ್ ಬೆಂಗಳೂರು-ರಾಮನಗರಂ ನಡುವೆ ಭಾಗಶಃ…

Read More

ಮೈಸೂರು: ನಗರದ ಜನರು ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಅದೇ ಹಾಡಹಗಲೇ ಮಹಿಳೆಗೆ ಯುವಕನೊಬ್ಬ ಚಾಕುವಿನಿಂದ ಮನಬಂದಂತೆ ಇರಿದಿರುವಂತ ಘಟನೆ ನಡೆದಿದೆ. ಮೈಸೂರಿನ ಕೃಷ್ಣಮೂರ್ತಿಪುರಂನ ಅಂಬೇಡ್ಕರ್ ಪಾರ್ಕ್ ಮುಂದೆ ಯುವಕನೊಬ್ಬ ಮಹಿಳೆಗೆ ಚಾಕುವಿನಿಂದ ಇರಿದಿರುವಂತ ಬೆಟ್ಟಿ ಬೀಳಿಸುವಂತ ಘಟನೆ ನಡೆದಿದೆ. ಪಾರ್ಕ್ ಮುಂಭಾಗ ಇಬ್ಬರೂ ಒಟ್ಟಿಗೆ ಕುಳಿತು ಮದ್ಯ ಸೇವನೆ ಮಾಡಿದ್ದಾರೆ. ಮದ್ಯ ಸೇವನೆ ಬಳಿಕ ಗಲಾಟೆ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಚಾಕುವಿನಿಂದ ಮಹಿಳೆಗೆ ಹಲ್ಲೆ ಮಾಡಿದ್ದಾನೆ. ಯುವಕ ಏಕಾಏಕಿ ಮಹಿಳೆಯ ತಲೆ, ಕುತ್ತಿಗೆ, ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಚಾಕುವಿನಿಂದ ಇರಿದ ಯುವಕನೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಪರಾರಿಯಾಗಿದ್ದಾನೆ. ಇದೀಗ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/tired-of-asi-harassment-in-chikkamagaluru-man-attempts-suicide-by-consuming-poison-in-front-of-sp-office/ https://kannadanewsnow.com/kannada/applications-invited-for-free-coaching-for-upsc-prelims-mains-exams/

Read More