Author: kannadanewsnow09

ನವದೆಹಲಿ: ದೆಹಲಿಯಿಂದ ಚಿಕಾಗೋಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ. ಸಂಭಾವ್ಯ ಬೆದರಿಕೆಯ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ನಂತರ ಯುನೈಟೆಡ್ ಸ್ಟೇಟ್ಸ್ಗೆ ತೆರಳುತ್ತಿದ್ದ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲು ಒತ್ತಾಯಿಸಲಾಯಿತು ಎಂದು ವಿಮಾನಯಾನ ಅಧಿಕಾರಿಯೊಬ್ಬರು ಘಟನೆಯನ್ನು ದೃಢಪಡಿಸಿದ್ದಾರೆ. “ಅಕ್ಟೋಬರ್ 15 ರಂದು ದೆಹಲಿಯಿಂದ ಚಿಕಾಗೋಗೆ ಕಾರ್ಯನಿರ್ವಹಿಸುತ್ತಿರುವ ಏರ್ ಇಂಡಿಯಾ ವಿಮಾನ ಎಐ 127 ಆನ್ಲೈನ್ನಲ್ಲಿ ಭದ್ರತಾ ಬೆದರಿಕೆಗೆ ಒಳಗಾಯಿತು ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣದಲ್ಲಿ ಇಳಿದಿದೆ” ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. https://kannadanewsnow.com/kannada/air-india-express-flight-from-ayodhya-to-bengaluru-delayed-due-to-bomb-threat/ https://kannadanewsnow.com/kannada/kodimatha-sris-explosive-prediction-on-state-politics/

Read More

ನವದೆಹಲಿ: ಅಯೋಧ್ಯೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಮಂಗಳವಾರ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಯೋಧ್ಯೆ ಧಾಮದ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ದೃಢಪಡಿಸಿದರು, ವಿಮಾನವು ಜೈಪುರದಿಂದ ಬಂದಿದೆ ಎಂದು ಹೇಳಿದ್ದಾರೆ. ಪರಿಶೀಲಿಸದ ಸಾಮಾಜಿಕ ಮಾಧ್ಯಮ ಖಾತೆಯಿಂದ ಬೆದರಿಕೆ ಬಂದಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಅಧಿಕಾರಿಗಳು ತಿಳಿಸಿದ್ದಾರೆ. “ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇತರ ಕೆಲವು ಆಪರೇಟರ್ಗಳಿಗೆ ಪರಿಶೀಲಿಸದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಿಂದ ನಿರ್ದಿಷ್ಟ ಭದ್ರತಾ ಬೆದರಿಕೆ ಬಂದಿದೆ” ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸರ್ಕಾರ ನೇಮಿಸಿದ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಯ ನಿರ್ದೇಶನದಂತೆ ಭದ್ರತಾ ಪ್ರೋಟೋಕಾಲ್ಗಳನ್ನು ತ್ವರಿತವಾಗಿ ಸಕ್ರಿಯಗೊಳಿಸಲಾಯಿತು. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಕಡ್ಡಾಯ ಭದ್ರತಾ ಕಾರ್ಯವಿಧಾನಗಳನ್ನು ಅನುಸರಿಸಿ ವಿಮಾನವನ್ನು ಕಾರ್ಯಾಚರಣೆಗಾಗಿ ಬಿಡುಗಡೆ ಮಾಡಲಾಗುವುದು” ಎಂದು ವಕ್ತಾರರು…

Read More

ಚಿಕ್ಕಬಳ್ಳಾಪುರ: ಮುಡಾ ಹಗರಣ, ಹುಬ್ಬಳ್ಳಿಯ ಗಲಭೆ ಕೇಸ್ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಹಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿವೆ. ಈ ನಡುವೆ ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಇನ್ನೂ ಸ್ವಲ್ಪ ದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತಾ ಇರಲಿವೆ ಎಂಬುದಾಗಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇನ್ನೂ ಮುಖ್ಯಮಂತ್ರಿಯವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಗೆಲ್ಲೋದು ರಾಜನೇ ಆಗಿದ್ದಾನೆ. ಆದೇ ಈಗ ದೈವಬಲ ಇಲ್ಲ. ಇನ್ನೂ ಸ್ವಲ್ಪದಿನ ರಾಜ್ಯ ರಾಜಕಾರಣದಲ್ಲಿ ಏರುಪೇರು ಮುಂದುವರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-those-who-are-going-on-a-pilgrimage-to-karnataka-bharat-gaurav-south-constituencies-from-the-state-government/ https://kannadanewsnow.com/kannada/complete-ban-on-plastic-near-kalyani-holy-brahmakundike/

Read More

ಮಡಿಕೇರಿ: ಇಲ್ಲಿನ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಲಿದೆ. ಈ ಸಂದರ್ಭದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ʼತೀರ್ಥೋದ್ಭವವಾಯಿತುʼ ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಸಾಮಾನ್ಯವಾಗಿ ಕಲ್ಯಾಣಿಗೆ ಪ್ಲಾಸ್ಟಿಕ್‌ ಬಿಂದಿಗೆ, ಕ್ಯಾನ್‌, ಬಾಟಲಿಗಳನ್ನು ಹಿಡಿದು ಧುಮುಕುವ ಭಕ್ತರು ಬ್ರಹ್ಮಕುಂಡಿಕೆ ಬಳಿ ತೀರ್ಥವನ್ನು ಅದರಲ್ಲೇ ತುಂಬಿಸಿಕೊಳ್ಳುತ್ತಾರೆ. ಹಾಗಾಗಿ ತೀರ್ಥ ತುಂಬಿಸಿಕೊಳ್ಳಲು ಪ್ಲಾಸ್ಟಿಕ್‌ ಪರಿಕರಗಳನ್ನು ನಿಷೇಧಿಸಲಾಗಿದೆ. https://twitter.com/KarnatakaVarthe/status/1846153349923557421 https://kannadanewsnow.com/kannada/good-news-for-those-who-are-going-on-a-pilgrimage-to-karnataka-bharat-gaurav-south-constituencies-from-the-state-government/ https://kannadanewsnow.com/kannada/people-of-bengaluru-call-this-helpline-number-for-complaints-related-to-rain-havoc/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷಏತ್ರಗಳ ಯಾತ್ರೆಗೆ ತೆರಳೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇನೆಂದರೇ ಇದಕ್ಕೆ ತಗಲುವಂತ ಮೊತ್ತದಲ್ಲಿ ಸರ್ಕಾರವೇ 15,000 ಪಾವತಿಸಲಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹25,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹10,000 ಭರಿಸಲಾಗುತ್ತದೆ. ಹಾಗೂ ಸಹಾಯಧನ ₹5,000 ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ. ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. 3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ಟಿಕೆಟ್‌ ಬುಕ್ಕಿಂಗ್‌ಗಾಗಿ https://irctctourism.com/Karnatakbgaurav?searchKey=&tagType=&travelType=Domestic&sector=All&bdar=6… ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292,…

Read More

ಸ್ವೀಡನ್: ಸ್ವೀಡನ್ ನಲ್ಲಿ ಕೈಲಿಯನ್ ಎಂಬಪೆ ವಿರುದ್ಧ ಅತ್ಯಾಚಾರದ ತನಿಖೆ ನಡೆಯುತ್ತಿದೆ ಎಂದು ಸ್ವೀಡನ್ ಮಾಧ್ಯಮ ವರದಿಯೊಂದು ಹೇಳಿದೆ. ಆದಾಗ್ಯೂ, ಫ್ರೆಂಚ್ ಫುಟ್ಬಾಲ್ ತಾರೆ ತಾನು ‘ನಕಲಿ ಸುದ್ದಿ’ಗೆ ಬಲಿಯಾಗಿದ್ದೇನೆ ಎಂದು ಹೇಳಿದ್ದಾರೆ, ಈ ವರದಿಯಲ್ಲಿ ಮಾಡಿದ ಹೇಳಿಕೆಗಳ ಬಗ್ಗೆ ಯಾವುದೇ ಸತ್ಯಾಸತ್ಯತೆಯನ್ನು ನಿರಾಕರಿಸಿದ್ದಾರೆ. ವಿಶೇಷವೆಂದರೆ, ಈ ಸುದ್ದಿಯನ್ನು ಮೊದಲು ಸ್ವೀಡಿಷ್ ಪತ್ರಿಕೆ ಅಫ್ಟಾನ್ಬ್ಲಾಡೆಟ್ ಬಿಚ್ಚಿಟ್ಟಿತು ಆದರೆ ಆರೋಪಿಗಳ ಹೆಸರನ್ನು ಹೇಳಲಿಲ್ಲ. ನಂತರ, ಎಕ್ಸ್ಪ್ರೆಸೆನ್ ಎಂಬಪೆಯನ್ನು ಪ್ರಮುಖ ಶಂಕಿತ ಎಂದು ಹೆಸರಿಸಿದನು. “ಎಕ್ಸ್ಪ್ರೆಸ್ಸೆನ್ ಪಡೆದ ಮಾಹಿತಿಯ ಪ್ರಕಾರ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಸಮಂಜಸವಾಗಿ ಶಂಕಿಸಲಾಗಿರುವ ತಾರೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಪತ್ರಿಕೆ ಬರೆದಿದೆ. ಸ್ವೀಡಿಷ್ ಕಾನೂನು ಜಾರಿದಾರರು ಅನುಮಾನದ ಮಟ್ಟವನ್ನು ಸಮಂಜಸ ಅಥವಾ ಸಂಭವನೀಯ ಎಂದು ವರ್ಗೀಕರಿಸಿದ್ದಾರೆ. ಎಮ್ಬಾಪೆಯನ್ನು ‘ಸಮಂಜಸವಾದ ಶಂಕಿತ’ ಎಂದು ಹೆಸರಿಸಿರುವುದರಿಂದ ಅವನು ಕಡಿಮೆ ಮಟ್ಟದ ಅನುಮಾನದ ಶಂಕಿತನಾಗಿದ್ದಾನೆ ಎಂದರ್ಥ. ಆದಾಗ್ಯೂ, ತಾನು “ನಕಲಿ ಸುದ್ದಿ”ಗೆ ಬಲಿಯಾಗಿದ್ದೇನೆ ಎಂದು ಎಮ್ಬಾಪೆ ಹೇಳಿದ್ದಾರೆ. https://twitter.com/KMbappe/status/1845840989878980885…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತಿಳಿಸಿದ್ದು, ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿದೆ. https://kannadanewsnow.com/kannada/those-who-set-bombs-and-fires-in-the-state-are-patriots-chalavadi-narayanasamy/ https://kannadanewsnow.com/kannada/raichur-three-children-killed-as-boulder-falls-on-them/

Read More

ರಾಯಚೂರು: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ಜರುಗಿದೆ. ಹೊಲದ ಬದುವಿನಲ್ಲಿ ಹಾಕಿದ್ದಂತ ಕಲ್ಲಿನ ಬಂಡೆಯೊಂದು ಉಳುರಿ ಬಿದ್ದು ಇಬ್ಬರು ಮಕ್ಕಳು ದುರ್ಮರಣಹೊಂದಿದ್ದರೇ, ಓರ್ವ ಮಗುವಿನ ಕಾಲು ಮುರಿದಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಗೌಡಹಳ್ಳಿಯ ತಾಂಡಾದಲ್ಲಿ ಇಂದು ಈ ದುರ್ಘಟನೆ ನಡೆದಿದೆ. ಶಾಲೆಗಳಿಗೆ ರಜೆಯಿದ್ದ ಕಾರಣ, ಮಕ್ಕಳನ್ನು ತಮ್ಮ ಹೊಲಕ್ಕೆ ಲಚ್ಚಪ್ಪ ಎಂಬುವರು ಕರೆದೊಯ್ದಿದ್ದರು. ಜಮೀನಿನಲ್ಲಿದ್ದಂತ ಕಲ್ಲುಗಳನ್ನು ಕೀಳಿಸಿ ಬದುವಿನ ಮೇಲೆ ಹಾಕಲಾಗಿತ್ತು. ಇಂತಹ ಕಲ್ಲುಗಳನ್ನು ಸುತ್ತುವರೆಯುವಂತ ಆಟ ಆಡುತ್ತಿದ್ದಂತ ವೇಳೆಯಲ್ಲಿ ಕಲ್ಲು ಬಂಡೆ ಉರುಳಿ ಸ್ಥಳದಲ್ಲೇ ಮಂಜುನಾಥ್(9) ಹಾಗೂ ವೈಶಾಲಿ(8) ಎಂಬ ಮಕ್ಕಳು ಸಾವನ್ನಪ್ಪಿದ್ದಾವೆ. ಮತ್ತೊಂದು ಮಗು 7 ವರ್ಷದ ರಘು ಕಾಲು ಮುರಿದಿದೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/those-who-set-bombs-and-fires-in-the-state-are-patriots-chalavadi-narayanasamy/ https://kannadanewsnow.com/kannada/bjp-mla-munirathna-granted-bail-in-rape-case/

Read More

ದಕ್ಷಿಣ ಕನ್ನಡ: ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು. ಪಾಕಿಸ್ತಾನ್ ಜಿಂದಾಬಾದ್ ಅಂದವರು ದೇಶಪ್ರೇಮಿಗಳು, ಭಾರತ್ ಮಾತಕೀ ಜೈ ಎಂದವರು ದೇಶದ್ರೋಹಿಗಳು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶಪ್ರೇಮಿಗಳು; ಭಾರತ್ ಮಾತಾಕಿ ಜೈ ಎನ್ನುವವರು ದೇಶದ್ರೋಹಿಗಳು ಎಂಬ ಸ್ಥಿತಿ ಇದೆ. ಯಾರು ಬಾಂಬ್ ಹಾಕುತ್ತಾರೋ, ಬೆಂಕಿ ಹಾಕುತ್ತಾರೋ, ಕಾನೂನು ಕೈಗೆ ತೆಗೆದುಕೊಳ್ಳುವವರು ದೇಶಪ್ರೇಮಿಗಳು ಎಂಬಂತಾಗಿದೆ ಎಂದು ಟೀಕಿಸಿದರು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ನೀತಿ ತುತ್ತತುದಿಗೆ ಮುಟ್ಟಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಇಂಥ ಆಡಳಿತದ ವಿರುದ್ಧ ಸೆಟೆದು ನಿಲ್ಲಬೇಕಿದೆ ಎಂದು ತಿಳಿಸಿದರು. ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ, ಇದು ಕಾರ್ಯಕರ್ತರಿಗೆ ಹುಮ್ಮಸ್ಸು…

Read More

ಬೆಂಗಳೂರು: ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಿಜೆಪಿ ಸಿಡಿದೆದ್ದಿತ್ತು. ಈ ಪ್ರಕರಣದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಹೌದು ರಾಜ್ಯ ಸರ್ಕಾರವು ಹಳೇ ಹುಬ್ಬಳ್ಳಿ ಕಲಭೆ ಪ್ರಕರಣಗಳನ್ನು ಹಿಂಪಡೆದ ನಿರ್ಧಾರವನ್ನು ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಪತ್ರ ಬರೆದಿದ್ದಾರೆ. ಅವರು ಬರೆದಿರುವಂತ ಪತ್ರದಲ್ಲಿ ಹಳೇ ಹುಬ್ಬಳ್ಳಿ ಗಲಭೆ ಸಂಬಂಧ ಕೇಸ್ ಹಿಂಪಡೆದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮರು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ. ಇದರ ನಡುವೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಕೇಸ್ ಹಿಂಪಡೆಯುವ…

Read More