Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದಂತ ನವ ಜೋಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಹೊರ ಭಾಗದಲ್ಲಿರುವಂತ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಂತ ಮನೋಜ್ ಕುಮಾರ್ ಪೋಳ(30) ಹಾಗೂ ರಾಖಿ(23) ನೇಣಿಗೆ ಶರಣಾಗಿದ್ದಾರೆ. ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಮನೋಜ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಊರಿಗೆ ಹೋಗಿದ್ದಂತ ಮನೋಜ್ ಕುಮಾರ್ ತಾಯಿ ಇಂದು ಮನೆಗೆ ವಾಪಾಸ್ ಆದಾಗ ಈ ಘಟನೆ ಬೆಳಕಿಗೆ ಬಂದಿದೆ. ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಸಂಬಂಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/school-students-note-heres-a-lesson-app-with-a-game-for-easy-math-learning/ https://kannadanewsnow.com/kannada/transport-minister-ramalinga-reddy-warns-of-disruption-in-operation-of-bmtc-electric-buses/
ಬೆಳಗಾವಿ: ಹುಬ್ಬಳ್ಳಿಯ ವೀರಾಪುರ ಓಣಿಯ ಯುವತಿ ಕೊಲೆ ಪ್ರಕರಣದ ಕುರಿತು ದಿಗ್ಭ್ರಮೆ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆರೋಪಿಯ ಬಂಧನ ಸೇರಿದಂತೆ ತುರ್ತು ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಹೇಯ ಕೃತ್ಯ ನಡೆದಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವ ಜನಾಂಗ ಇಂತಹ ದುಷ್ಕೃತ್ಯಕ್ಕಿಳಿಯುತ್ತಿರುವುದು ತೀವ್ರ ನೋವುಂಟು ಮಾಡಿದೆ ಎಂದರು. ಈ ಪ್ರಕರಣದ ಸುದ್ದಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ, ಘಟನೆ ಕುರಿತು ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಆರೋಪಿಯ ಬಂಧನದ ಜೊತೆಗೆ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಯುವತಿಯ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ. https://kannadanewsnow.com/kannada/school-students-note-heres-a-lesson-app-with-a-game-for-easy-math-learning/ https://kannadanewsnow.com/kannada/transport-minister-ramalinga-reddy-warns-of-disruption-in-operation-of-bmtc-electric-buses/
ಶಿವಮೊಗ್ಗ : ಇಂದಿನ ಶೈಕ್ಷಣಿಕ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಗಣಿತದ ಮೂಲಭೂತ ಪಾಠಗಳನ್ನು ಕಲಿಯಲು ತೀರಾ ಕಡಿಮೆ ಅವಕಾಶವಿದ್ದು ಈ ಹಿನ್ನೆಲೆಯಲ್ಲಿ ಗಣಿತ ಕೌಶಲ್ಯವನ್ನು ಉತ್ತಮಪಡಿಸಲು ಅಕ್ಷರ ಫೌಂಡೇಶನ್ ತಯಾರಿಸಿರುವ ‘ಬಿಲ್ಡಿಂಗ್ ಬ್ಲಾಕ್ಸ್ ಆ್ಯಪ್’ ನ್ನು ಮಕ್ಕಳಿಗಾಗಿ ತರಲಾಗಿದೆ. ಈ ಚಟುವಟಿಕೆ ಆಧಾರಿತ ತಂತ್ರಾಂಶದಲ್ಲಿ ಪಠ್ಯಾಧಾರಿತ 1 ರಿಂದ 5 ಮತ್ತು 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳ ಗಣಿತ ಕಲಿಕೆಗೆ 2 ವಿಭಾಗಗಳಲ್ಲಿ ಅವಕಾಶ ನೀಡಲಾಗಿದೆ. ಆಟದ ಮೂಲಕ ಅಭ್ಯಾಸ ಮಾಡುವುದರಿಂದ ಶಾಶ್ವತ ಕಲಿಕೆ ಉಂಟಾಗುತ್ತದೆ. ಮಕ್ಕಳಿಗೆ ಗಣಿತದಲ್ಲಿ ಪರಿಣಿತಿ ಪಡೆಯಲು ಬೇಕಾದ ಕೌಶಲ್ಯ ಮತ್ತು ಆತ್ಮಸ್ಥೈರ್ಯ ಮೂಡಿಸಲು ಸಾಂಪ್ರದಾಯಿಕ ಕಲಿಕೆಗೆ ವಿಭಿನ್ನವಾಗಿ ಈ ಆ್ಯಪ್ ಸಿದ್ದಪಡಿಸಲಾಗಿದೆ. ಗಣಿತ ಕಲಿಕೆಯನ್ನು ಎಲ್ಲ ಮಕ್ಕಳಿಗೂ ದೊರೆಯುವಂತೆ ಮಾಡುವುದೇ ಇದರ ಉದ್ದೇಶವಾಗಿದೆ. ಇದು 400 ಕ್ಕೂ ಹೆಚ್ಚು ಸಂವಾದಾತ್ಮಕ ಆಟಳಗಳನ್ನು ಒಳಗೊಂಡಿದ್ದು ಎಲ್ಲ ಆಟಗಳನ್ನು ಎನ್ಸಿಇಆರ್ಟಿ ಪಠ್ಯಕ್ರಮಕ್ಕೆ ಮ್ಯಾಪ್ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕಲಿಕೆಯಲ್ಲಿ ಅಭಿವೃದ್ದಿ ಹೊಂದಬೇಕು. ಈ ಆ್ಯಪ್…
ಬೆಂಗಳೂರು: ವಿವಿಧ ರೈಲ್ವೆ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆಯಿಂದ ಹುಬ್ಬಳ್ಳಿ-ವಿಜಯವಾಡ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಹುಬ್ಬಳ್ಳಿ ವಿಭಾಗದ ನೈರುತ್ಯ ರೈಲ್ವೆ ಇಲಾಖೆಯಿಂದ ( South Western Railway ) ಮಾಹಿತಿ ನೀಡಲಾಗಿದ್ದು, ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮವಾಗಿ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದಿದೆ. ರೈಲು ಸಂಖ್ಯೆ 17329, 17330 ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು ನಾಳೆಯಿಂದ ತಾತ್ಕಾಲಿಕವಾಗಿ ರದ್ದುಪಡಿಸಲಾಗುತ್ತಿದೆ ಎಂಬುದಾಗಿ ದಕ್ಷಿಣ ಮಧ್ಯ ರೈಲ್ವೆಯು ತಿಳಿಸಿದೆ. ರೈಲು ಸಂಖ್ಯೆ 17329 ಎಸ್ ಎಸ್ ಎಸ್ ಹುಬ್ಬಳ್ಳಿ – ವಿಜಯವಾಡ ಡೈಲಿ ಎಕ್ಸ್ ಪ್ರೆಸ್ ರೈಲನ್ನು ಮೇ.16ರಿಂದ 31, 2024ರವರೆಗೆ ರದ್ದುಗೊಳಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ರೈಲು ಸಂಖ್ಯೆ 17330 ವಿಜಯವಾಡ-ಎಸ್ ಎಸ್ ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲನ್ನು ಮೇ.17ರಿಂದ ಜೂನ್.1, 2024ರವರೆಗೆ ರದ್ದುಗೊಳಿಸಲಾಗಿರುತ್ತದೆ ಎಂದಿದೆ. https://kannadanewsnow.com/kannada/bangaloreans-should-note-dont-kill-snakes-call-this-helpline/…
ಬೆಂಗಳೂರು: ನಗರದಲ್ಲಿ ಮಳೆ ಜಾಸ್ತಿ ಆದಂತೆ, ಅವಾಂತರಗಳು ಹೆಚ್ಚಾಗುತ್ತಿವೆ. ಮಳೆ ನೀರಿನ ಜೊತೆಗೆ ಅಲ್ಲಲ್ಲಿ ಹಾವು ಕೂಡ ಕಾಣಿಸಿಕೊಳ್ಳುತ್ತಿವೆ. ಇಂತಹ ಹಾವುಗಳನ್ನು ಕೊಲ್ಲಬೇಡಿ. ಕಂಡ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅಂತ ಬಿಬಿಎಂಪಿ ಮನವಿ ಮಾಡಿದೆ. ಬಿಬಿಎಂಪಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹಾವುಗಳು ಕಾಣಿಸಿಕೊಂಡರೇ ಗಾಬರಿಗೊಳ್ಳಬೇಡಿ. ಬಡಿದು ಕೊಲ್ಲೋದು ಮಾಡಬೇಡಿ ಅಂತ ಮನವಿ ಮಾಡಿದೆ. ಮೇ ತಿಂಗಳು ಹಾವುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಮಾಸಾಂತ್ಯವು ಉರಗಗಳ ಸಂತಾನೋತ್ಪತ್ತಿ ಸಮಯ. ಮುಖ್ಯವಾಗಿ ಸರ್ಪಗಳ ಮೊಟ್ಟೆಗಳು ಒಡೆದು ಮರಿಗಳು ಹೊರಬರುವ ಕಾಲವಾಗಿದೆ ಎಂದಿದೆ. ಹಾವುಗಳು ಕಂಡ್ರೆ ಕೊಲ್ಲದೇ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆ 9902794711ಗೆ ಕರೆ ಮಾಡಿ, ಹಾವುಗಳ ರಕ್ಷಣೆಗೆ ನೆರವಾಗಿ ಅಂತ ಕೋರಿದೆ. https://twitter.com/KarnatakaVarthe/status/1790692441139659028 https://kannadanewsnow.com/kannada/kodagu-operation-to-capture-wild-elephants-and-install-radio-collars/ https://kannadanewsnow.com/kannada/sachin-tendulkars-security-guard-prakash-kapade-commits-suicide-by-shooting-himself/
ಮಡಿಕೇರಿ : ವಿರಾಜಪೇಟೆ ವಿಭಾಗದ ತಿತಿಮತಿ ವಲಯದ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಎಲಿಕಲ್ ಎಸ್ಟೇಟ್ಗೆ (ಬಿಬಿಟಿಸಿ) ಒಳಪಡುವ ಬಾಡಗ ಬಾಣಂಗಾಲ ಕಾಫಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ತೋಟಗಳಲ್ಲಿ ಇರುವ 3 ಕಾಡಾನೆಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಮೇ, 14 ರಿಂದ ಪ್ರಾರಂಭವಾಗುತ್ತಿರುವುದರಿಂದ ಬಾಡಗ ಬಾಣಂಗಾಲ, ಕೊಡಗು ಶ್ರೀರಂಗಪಟ್ಟಣ, ಮೇಕೂರು ಹೊಸ್ಕೇರಿ, ಮಾಲ್ದಾರೆ, ಚೆನ್ನಯ್ಯನಕೋಟೆ, ಕರಡಿಗೋಡು, ಪುಲಿಯೇರಿ, ಹೊಸೂರು ಮತ್ತು ಇಂಜಿಲಗೆರೆ ಗ್ರಾಮಗಳ ಸಾರ್ವಜನಿಕರು, ತೋಟದ ಮಾಲಿಕರು, ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಜಾಗರೂಕತೆಯಿಂದ ಇರಬೇಕಾಗಿ ಹಾಗೂ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾರ್ಯಾಚರಣೆ ಪೂರ್ಣಗೊಳಿಸಲು ಸಹಕಾರ ನೀಡುವಂತೆ ಕೋರಿದೆ. ವಲಯ ಅರಣ್ಯಾಧಿಕಾರಿ ತಿತಿಮತಿ ವಲಯ ದೂ.ಸಂ. 7483920018, ಉಪ ವಲಯ ಅರಣ್ಯಾಧಿಕಾರಿ, ಚೆನ್ನಂಗಿ ಉಪ ವಲಯ 9901242528 ನ್ನು ಸಂಪರ್ಕಿಸಬಹುದು ಎಂದು ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ. https://kannadanewsnow.com/kannada/sslc-puc-students-note-employees-association-invites-applications-for-pratibha-puraskar/ https://kannadanewsnow.com/kannada/sachin-tendulkars-security-guard-prakash-kapade-commits-suicide-by-shooting-himself/
ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ., (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಮೇ 31 ರೊಳಗಾಗಿ bit.ly/empsouhardashimoga ಮೂಲಕ ಅರ್ಜಿ ಸಲ್ಲಿಸುವಂತೆ ಸಂಘದ ಗೌರವ ಕಾರ್ಯದರ್ಶಿ ಎನ್.ಎಂ.ರಂಗನಾಥ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸುನಿಲ್-7259618767, ಎನ್.ಎಂ.ರಂಗನಾಥ-9916278470 ಇವರುಗಳನ್ನು ಸಂಪರ್ಕಿಸುವುದು. ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳ ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಟೊಯೋಟಾ ಕಿರ್ಲೊಸ್ಕರ್ ಪ್ರೈ.ಲಿ. ಬಿಡದಿ ಇವರು ಮೇ-17 ಮತ್ತು 18 ರಂದು ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಎಲೆಕ್ಟ್ರಿಶಿಯನ್, ಎಂ.ಎಂ.ಎ., ಡಿ.ಎಂ., ಟಿ.ಡಿ.ಎಮ್., ವೆಲ್ಡರ್, ಇ.ಎಂ. ಮತ್ತು ಮೆಶಿನಿಸ್ಟ್ ವೃತ್ತಿಗಳಿಗೆ 18 ರಿಂದ 25 ವರ್ಷದೊಳಗಿನವರಿಗೆ ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳವನ್ನು ಆಯೋಜಿಸಿದ್ದು, ಮೇಳಕ್ಕೆ ಭಾಗವಹಿಸಲು ಇಚ್ಛಿಸುವವರು ಎಸ್.ಎಸ್.ಎಲ್.ಸಿ/ಐಟಿಐ ಅಂಕಪಟ್ಟಿ, ಆಧಾರ್…
ಬೆಂಗಳೂರು: ಸಂಸದ ಪ್ರಜ್ವರ್ ರೇವಣ್ಣ ಅವರನ್ನು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧಿಸೋದಕ್ಕೆ ಎಸ್ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಆದ್ರೇ ವಿದೇಶಕ್ಕೆ ತೆರಳಿರುವಂತ ಅವರು ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುವಂತೆ ಬ್ಲೂ ಕಾರ್ನರ್ ನೋಟಿಸ್ ನೀಡಿದ್ರೂ, ಬೆಂಗಳೂರಿಗೆ ವಾಪಾಸ್ ಆಗದೇ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದಾರೆ. ಇಂದು ಬೆಳಿಗ್ಗೆ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಹೊರಡುವಂತ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಬರಲಿದ್ದಾರೆ ಎಂಬುದಾಗಿ ಟಿಕೆಟ್ ಬುಕ್ ಆಗಿರೋ ಮಾಹಿತಿ ಸಿಕ್ಕಿತ್ತು. ಜರ್ಮನಿಯಿಂದ ಬೆಂಗಳೂರಿಗೆ ಭಾರತೀಯ ಕಾಲಮಾನ ಮಧ್ಯಾಹ್ನ 12.20ಕ್ಕೆ ಟೇಕ್ ಆಫ್ ಆದಂತ ವಿಮಾನದ ಬೋರ್ಡಿಂಗ್ ಲೀಸ್ಟ್ ನಲ್ಲಿ ಪ್ರಜ್ವಲ್ ಹೆಸರೇ ಇಲ್ಲ. ಜರ್ಮನಿಯಿಂದ ಬೆಂಗಳೂರಿಗೆ ಬರೋದಕ್ಕಾಗಿ ವಿಮಾನದ ಟಿಕೆಟ್ ಬುಕ್ ಮಾಡಿದ್ದಂತ ಪ್ರಜ್ವಲ್ ರೇವಣ್ಣ ಮಾತ್ರ, ಆ ವಿಮಾನವನ್ನು ಹತ್ತಲೇ ಇಲ್ಲ. ಟೇಕ್ ಆಫ್ ಆದಂತ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಇರಲಿಲ್ಲ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಇಂದು ಕೂಡ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿಲ್ಲ. ಅವರು ಎಸ್ಐಟಿ ಅಧಿಕಾರಿಗಳ ಜೊತೆಗೆ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದಾರೆ.…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಯಾರ ಸಂಪರ್ಕದಲ್ಲೂ ಇಲ್ಲ ಎಂಬುದಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅವರು ಎಲ್ಲಿಗೆ ಹೋದರು, ಏಕೆ ಹೋದ್ರು, ಯಾವಾಗ ಬರ್ತಾರೆ ಎಂಬುದು ಯಾರಿಗೂ ಮಾಹಿತಿ ಇಲ್ಲ ಎಂದರು. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಅಂತ ಮನೆಯವರಿಗೂ ಮಾಹಿತಿ ಇಲ್ವಂತೆ. ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದು, ಪತ್ತೆ ಹಚ್ಚೋ ಕೆಲಸ ಸರ್ಕಾರ ಮಾಡುತ್ತಿದ್ದರೂ ಅವರಿಗೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದರು. ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ತಂಡ ರಚಿಸಿದೆ. ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತ್ರ ಸತ್ಯಾಸತ್ಯದೆ ಹೊರ ಬರಲಿದೆ ಎಂದು ಹೇಳಿದರು. https://kannadanewsnow.com/kannada/sachin-tendulkars-security-guard-prakash-kapade-commits-suicide-by-shooting-himself/ https://kannadanewsnow.com/kannada/if-hd-kumaraswamy-tells-us-who-the-whale-is-the-case-will-be-over-dr-g-parameshwara/
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಮಿಂಗಿಲ ಯಾರೆಂದು ಹೇಳಿದ್ರೇ, ಪ್ರಕರಮವೇ ಮುಗಿಯುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ರೇವಣ್ಣ ಪ್ರಕರಣ ರಾಜಕೀಯ ಪ್ರೇರಿತ, ಇದರ ಹಿಂದೆ ದೊಡ್ಡ ತಿಮಿಂಗಿಲ ಇದೆ ಅನ್ನೋ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದಂತ ಅವರು, ಕುಮಾರಸ್ವಾಮಿ ಆ ತಿಮಿಂಗಿಲ ಯಾರು ಅಂತ ಹೇಳಿದ್ರೆ ಒಳ್ಳೇದು. ಅವರು ಪ್ರತಿ ದಿನ ಒಂದೊಂದು ಹೇಳಿಕೆ ಕೊಡೋದು ಬಿಟ್ಟು, ದಾಖಲೆ ಕೊಟ್ಟು ತನಿಖೆ ಮಾಡಲಿಲ್ಲ ಅಂತ ಹೇಳಲಿ ಎಂದರು. ಇದೇ ಸಂದರ್ಭದಲ್ಲಿ ಸಾಹಿತಿಗಳು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದಂತ ಅವರು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾಹಿತಿಗಳು ಸಮಾಜದ ಬಗ್ಗೆ ಕಳಕಳಿ ಇರೋರು. ಅನೇಕ ವಿಷಯಗಳನ್ನು ನಿತ್ಯ ಗಮನಿಸುತ್ತಿರುತ್ತಾರೆ. ಅವರು ಬರೆದಿರುವಂತ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಎಸ್ಐಟಿ ಪರಿಶೀಲಿಸುತ್ತಿದೆ ಎಂದು ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ…












