Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಗೂ ನಮ್ಮ ಕ್ಲೀನಿಕ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಹಾಗೂ ಟರ್ಮ್ ಇನ್ಸೂರೆನ್ಸ್ ನೀಡುವಂತೆ ಆರೋಗ್ಯ ಸಚಿವರಿಗೆ ಈ ಹಿಂದೆ KSHCOEA BMS ಸಂಘದಿಂದ ಒತ್ತಾಯಿಸಲಾಗಿತ್ತು ಎಂದಿದೆ. ಆದರೇ ರಾಜ್ಯಮಟ್ಟದಿಂದ ಜಾರಿ ಆಗದ ಕಾರಣ ಉಡುಪಿ ಜಿಲ್ಲಾ KSHCOEA ಸಂಘದಿಂದ ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ನವೀನ್ ಭಟ್ ವೈ IAS ಇವರನ್ನು ಗಿರೀಶ್ ಕಡ್ಡಿಪುಡಿ, ಪ್ರೀತಮ್ ಬಿ.ಎಸ್, ಗುರುರಾಜ್ ಗಂಗಾಣಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಗೂ ನಮ್ಮ ಕ್ಲೀನಿಕ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಹಾಗೂ ಟರ್ಮ್ ಇನ್ಸೂರೆನ್ಸ್ ನೀಡುವಂತೆ ಆರೋಗ್ಯ ಸಚಿವರಿಗೆ ಈ ಹಿಂದೆ KSHCOEA BMS ಸಂಘದಿಂದ ಒತ್ತಾಯಿಸಲಾಗಿತ್ತು ಎಂದಿದೆ. ಆದರೇ ರಾಜ್ಯಮಟ್ಟದಿಂದ ಜಾರಿ ಆಗದ ಕಾರಣ ಉಡುಪಿ ಜಿಲ್ಲಾ KSHCOEA ಸಂಘದಿಂದ ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ನವೀನ್ ಭಟ್ ವೈ IAS ಇವರನ್ನು ಗಿರೀಶ್ ಕಡ್ಡಿಪುಡಿ, ಪ್ರೀತಮ್ ಬಿ.ಎಸ್, ಗುರುರಾಜ್ ಗಂಗಾಣಿ…
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯ ಇರಬೇಕು. ಈ ನಿಯಮ ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರವು ತನ್ನ ಆರೋಗ್ಯ ನೀತಿ ಪ್ರಕಾರ ವಿವಿಧ ಹಂತಗಳಲ್ಲಿ ಅಂದರೆ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು/ಜಿಲ್ಲಾ ಆಸ್ಪತ್ರೆಗಳ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಈ ದಿಶೆಯಲ್ಲಿ ಆರೋಗ್ಯ ಸೇವೆಗಳ ಕನಿಷ್ಠ ಅವಶ್ಯಕ ಕಾರ್ಯಕ್ರಮಗಳಾದ ರೋಗನಿರೋಧಕ ಸೇವೆಗಳು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಸಾಂಕ್ರಾಮಿಕ/ಅಸಾಂಕ್ರಾಮಿಕ ರೋಗಗಳ ನಿವಾರಣೆ ಮತ್ತು ನಿರ್ಮೂಲನ ಕಾರ್ಯಕ್ರಮಗಳು, ಪರಿಸರ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಆರೋಗ್ಯ ಶಿಕ್ಷಣ ಮತ್ತು ಶಾಲಾ ಆರೋಗ್ಯ ಸೇವೆಗಳು, ಪ್ರಯೋಗಾಲಯ ಸೇವೆಗಳು ಹಾಗೂ ಇನ್ನೂ ಅನೇಕ ರಾಷ್ಟ್ರೀಯ ಕಾರ್ಯಕ್ರಮಗಳನ್ನು…
ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03ರ ಇಂದಿನಿಂದರಿ ಜನವರಿ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು. ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದುದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು. ಪರೀಕ್ಷಾ ಕೇಂದ್ರದೊಳಗೆ…
ಬೆಂಗಳೂರು: 2025ರಲ್ಲಿ ನಡೆಯಲಿರುವಂತ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೂ ಮುನ್ನವೇ, ಶಿಕ್ಷಣ ಇಲಾಖೆಯಿಂದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾರ್ಚ್, ಏಪ್ರಿಲ್ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ 02-04-2025ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 01-03-2025ರಿಂದ ಆರಂಭಗೊಂಡು ದಿನಾಂಕ 19-03-2025ರವರೆಗೆ ನಡೆಯಲಿದೆ ಎಂದಿದೆ. ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 20-03-2025ರ ಗುರುವಾರ- ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇಆರ್ ಟಿ, ಸಂಸ್ಕೃತ ದಿನಾಂಕ 22-03-2025ರ ಶನಿವಾರ – ಕೋರ್…
ಹುಬ್ಬಳ್ಳಿ: ವಂದೇ ಭಾರತ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 20670 ಪುಣೆ-ಹುಬ್ಬಳ್ಳಿ ವಿಬಿ ಘಟಪ್ರಭಾದಲ್ಲಿ ಹೆಚ್ಚುವರಿ ನಿಲುಗಡೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಮಿರಜ್ ಮತ್ತು ಬೆಳಗಾವಿ ನಡುವೆ ಇರುವ ಘಟಪ್ರಭಾ ಪಟ್ಟಣವು ತ್ವರಿತವಾದ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಹಾಗೂ ವಂದೇ ಭಾರತ್ ನಿಲುಗಡೆಯೊಂದಿಗೆ, ಈ ಪ್ರದೇಶವು ಮತ್ತಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಈಗಾಗಲೇ ಉತ್ತಮ ಸಂಖ್ಯೆಯ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ಜನರು ಈ ಸೇವೆಯನ್ನು ಉತ್ತಮವಾಗಿ ಬಳಸಿಕೊಳ್ಳಬೇಕು ಎಂದು ಅವರು ಉಲ್ಲೇಖಿಸಿದರು. ಸಂಸದರು ಘಟಪ್ರಭಾ ನಿಲ್ದಾಣವನ್ನು 18.15 ಕೋಟಿ ರೂ.ಗಳ ವೆಚ್ಚದಲ್ಲಿ ಅಮೃತ್ ಭಾರತ್ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು. ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು, ವಿಶಾಲವಾದ ರಾಷ್ಟ್ರೀಯ ಜಾಲದ ಮೂಲಕ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸುವಲ್ಲಿ ರೈಲ್ವೆಯ ಪ್ರಯತ್ನಗಳನ್ನು ಶ್ಲಾಘಿಸಿದರು. ಘಟಪ್ರಭಾ…
ಮಂಡ್ಯ: ಹೊರ ರಾಜ್ಯಗಳಿಂದ ಆಗಮಿಸುವಂತೆ ವಾಹನ ಸಾವರರನ್ನೇ ಗುರಿಯಾಗಿಸಿಕೊಂಡು, ವಿನಾ ಕಾರಣ ದಾಖಲೆ ಸೇರಿದಂತೆ ಇತರೆ ವಿಚಾರಗಳ ಕಾರಣ ಹಣ ವಸೂಲಿ ಮಾಡುತ್ತಿದ್ದಂತ ಕೆ ಆರ್ ಎಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಡ್ಯಾಂ, ಬೃಂದಾವನ ವೀಕ್ಷಣೆಗೆ ಬರುವಂತ ಹೊರ ರಾಜ್ಯದ ವಾಹನ ಸವಾರರಿಂದ ಹಣ ವಸೂಲಿಗೆ ಕೆ ಆರ್ ಎಸ್ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳು ಇಳಿದಿದ್ದರು. ಈ ಘಟನೆಯ ಸಂಬಂಧ ವಾಹನ ಚಾಲಕರೊಬ್ಬರು ವೀಡಿಯೋ ಸಹಿತ ಪೊಲೀಸರಿಗೆ ದೂರು ನೀಡಿದ್ದರು. ವೀಡಿಯೋ ಸಾಕ್ಷಿ ಸಹಿತ ದೂರಿನ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಪುರುಷೋತ್ತಮ್, ಕಾನ್ಸ್ ಸ್ಟೇಬಲ್ ಅನಿಲ್ ಕುಮಾರ್ ಹಾಗೂ ಪ್ರಭು ಸ್ವಾಮಿ ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. ಈ ಮೂಲಕ ಹೊರ ರಾಜ್ಯದ ವಾಹನ ಸವಾರರಿಂದ…
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ಸಿಲಿಂಡರ್ ಸ್ಪೋಟ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ 8 ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದ್ದಂತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ ಬರೆದಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟ 8 ಮಾಲಾಧಾರಿಗಳ ಕುಟುಂಬಕ್ಕೂ ಪರಿಹಾರ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು. ಸಚಿವ ಸಂತೋಷ್ ಲಾಡ್ ಪತ್ರಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ಹುಬ್ಬಳ್ಳಿಯ ಸಿಲಿಂಡರ್ ಸ್ಪೋಟ ದುರಂತದಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದಂತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೂ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಂದಹಾಗೆ ಡಿಸೆಂಬರ್.22ರಂದು ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡಿತ್ತು. ಈ ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ…
ಚಿತ್ರದುರ್ಗ : ಚಿತ್ರದುರ್ಗ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಪೂರ್ಣಗೊಳಿಸಲು 2025ರ ಜ.05 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಕೆ ಕಾಲಾವಧಿ ಮುಕ್ತಾಯಗೊಂಡಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 04 ಹಂತಗಳಿದ್ದು, ಮೊದಲನೇ ಹಂತದಲ್ಲಿ ಆನ್ಲೈನ್ ತಂತ್ರಾಂಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು. ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಸಹಿ ಅಪ್ಲೋಡ್ ಮಾಡುವುದು. ಮೂರನೇ ಹಂತ ತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ ತಮ್ಮ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಂಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ಇದರಲ್ಲಿ ಕೆಲವರು ಮೊದಲನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸಸ್ಪುಲ್ ಅಪ್ಲೋಡ್ ಎಂಬ ಸಂದೇಶ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ. ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ…
ಚಿತ್ರದುರ್ಗ : ಹಿರಿಯೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 07ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ “ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶುಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಕುರಿ ಮತ್ತು ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು. ಆಸಕ್ತ ರೈತ ಭಾಂದವರು ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ 8277931058ಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆಯಬಹುದು. ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ…











