Author: kannadanewsnow09

ಬೆಂಗಳೂರು: ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ. ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದರು. ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ…

Read More

ಬೆಂಗಳೂರು : “ಐದು ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಆರೋಗ್ಯ ಮತ್ತು ಶಿಕ್ಷಣದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಗ್ಯಾರಂಟಿಗಳನ್ನು ನೀಡಿದ್ದು ಚುನಾವಣೆಗಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕರ್ನಾಟಕವನ್ನು ಹಸಿವು, ಬಡತನ ಮತ್ತು ಅಸಮಾನತೆ ಮುಕ್ತ ರಾಜ್ಯ ಮಾಡಬೇಕೆಂಬುದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗುರಿ” ಎಂದರು. “ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಭಾವನೆಗೆ ಕೆಲಸ ಮಾಡುತ್ತಿಲ್ಲ. ಬದುಕಿಗಾಗಿ ಮಾಡುತ್ತಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ಹಣ ಉಳಿಸುತ್ತಿದ್ದೇವೆ” ಎಂದರು. ಹೆಲ್ತ್ ಟೂರಿಸಂಗೆ ಕರ್ನಾಟಕ ಹೆಸರಾಗುತ್ತಿದೆ “ನಮ್ಮ ರಾಜ್ಯದಲ್ಲಿ 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸುಮಾರು 1 ಸಾವಿರಕ್ಕೂ…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಓಣಂ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ದಕ್ಷಿಣ ರೈಲ್ವೆ ಎರ್ನಾಕುಲಂ ಮತ್ತು ಯಲಹಂಕ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.  ರೈಲು ಸಂ. 06101 ಎರ್ನಾಕುಲಂ – ಯಲಹಂಕ ವಿಶೇಷ ರೈಲು ಎರ್ನಾಕುಲಂನಿಂದ 04.09 2024 ಮತ್ತು 06.09.2024 ರಂದು ಮಧ್ಯಾಹ್ನ 12.40 ಕ್ಕೆ ಹೊರಟು ಅದೇ ದಿನ ರಾತ್ರಿ 11 ಗಂಟೆಗೆ ಯಲಹಂಕವನ್ನು ತಲುಪುತ್ತದೆ. ರೈಲು ಸಂ. 06102 ಯಲಹಂಕ – ಎರ್ನಾಕುಲಂ ವಿಶೇಷ ರೈಲು ಯಲಹಂಕದಿಂದ 05.09.2024 ಮತ್ತು 07.09.2024 ರಂದು ಬೆಳಿಗ್ಗೆ 05 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 02.20 ಕ್ಕೆ ಎರ್ನಾಕುಲಂ ತಲುಪುತ್ತದೆ. ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ತ್ರಿಶೂರ್, ಪಾಲಕ್ಕಾಡ್, ಪೋದನೂರ್, ತಿರುಪ್ಪೂರ್, ಈರೋಡ್, ಸೇಲಂ, ವೈಟ್‌ಫೀಲ್ಡ್ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. ಈ ವಿಶೇಷ ರೈಲು 09- ಎ.ಸಿ. 3ಟಯರ್ ಕೋಚ್‌ಗಳು, 02- ಎ.ಸಿ. ಚೇರ್ ಕಾರ್ ಮತ್ತು 02- ಎ.ಸಿ ಅಂಗವಿಕಲ…

Read More

ಇಂದು ನಾವು ಒಂದು ಪರಿಹಾರವನ್ನು ನೋಡಲಿದ್ದೇವೆ ಆದರೆ ನಿಮಗೆ ಸಾಧ್ಯವಾದಷ್ಟು ಬೇಗ ಉತ್ತಮ ಕೆಲಸವನ್ನು ಪಡೆಯಲು ಎರಡು ಶಕ್ತಿಶಾಲಿ ಪರಿಹಾರಗಳನ್ನು ನೋಡೋಣ. ಒಂದು ರೂಪಾಯಿ ಕೂಡ ಖರ್ಚು ಮಾಡಬೇಕಿಲ್ಲ. ಪ್ರತಿದಿನ ನಂಬಿಕೆಯಿಂದ ಒಂದು ಟಂಬ್ಲರ್ ನೀರನ್ನು ತೆಗೆದುಕೊಂಡು ಜಪಿಸುವ ಮಂತ್ರವನ್ನು ಪಠಿಸುವ ಮೂಲಕ ಭೂಮಿಗೆ ಸುರಿಯಿರಿ. ಸೋಮವಾರ ಮತ್ತು ಗುರುವಾರ ದುರ್ಗಾ ಅಮ್ಮನವರ ದೇಗುಲದಲ್ಲಿ ನಿಂತು ನನಗೆ ಕೆಲಸ ಕೊಡಿಸಿ ಎಂದು ನ್ಯಾಯವಾಗಿ ಕೇಳಿಕೊಳ್ಳಿ. ಅಷ್ಟೆ, ಈ ಎರಡು ಉಪಾಯಗಳನ್ನು ಸರಿಯಾಗಿ ಹೇಗೆ ಮಾಡಬೇಕು, ದಿನನಿತ್ಯ ಹೇಳಬೇಕಾದ ಮಂತ್ರವೇನು ಎಂಬ ವಿವರವಾದ ಮಾಹಿತಿಯನ್ನು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು…

Read More

ಬೆಂಗಳೂರು: ರಾಜ್ಯಾಧ್ಯಂತ ಮತ್ತೆ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆ. ಇದಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಹೋಂ ಸ್ಟೇ ಸೇರಿದಂತೆ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಸಚಿವ ಈಶ್ವರ್ ಖಂಡ್ರೆ, ಅದರಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆ ರಚಿಸಲಾಗಿದ್ದು, ಮೊದಲಿಗೆ ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳು, ಹೋಂಸ್ಟೇಗಳನ್ನು ಹಾಗೂ ಕರ್ನಾಟಕ ಅರಣ್ಯ ಕಾಯಿದೆ 19630 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ, ವಿಚಾರಣೆ ಬಾಕಿ ಇಲ್ಲದ ದೊಡ್ಡ ಒತ್ತುವರಿಗಳನ್ನು ತೆರವು ಮಾಡಲು ಸೂಚಿಸಲಾಗಿರುತ್ತದೆ. ಈ…

Read More

ಮಂಡ್ಯ: ‘ಆತಿಥ್ಯ’ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ಶಾಸಕರು ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ ಅಧ್ಯಕ್ಷ ದಿನೇಶ್ ಗೂಳಿಗೌಡ ಅಭಿಪ್ರಾಯಿಸಿದರು. ಡಿಸೆಂಬರ್ 20, 21 ಹಾಗೂ 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ನಗರದ ಹೊರ ವಲಯದಲ್ಲಿರುವ ಅಮರಾವತಿ ಹೋಟೇಲ್ ನಲ್ಲಿ ಆಯೋಜನೆಗೊಂಡಿದ್ದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡ ಭಾಷೆ ಕನ್ನಡದ ಹಬ್ಬ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಆಯೋಜನೆಗೊಳ್ಳುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಚಾರ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ಹರಡಬೇಕು. ಆ  ಮೂಲಕ ಮಂಡ್ಯ ಜಿಲ್ಲೆಯ ಸೊಗಡು ವಿಶ್ವವ್ಯಾಪಿ ಪಸರಿಸಲು ಶ್ರಮಿಸಬೇಕೆಂದು ಕರೆ ನೀಡಿದರು. ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ…

Read More

ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ, ಮುಂದೆ ನಡೆಯುವಂತಹ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್ ಮಾಡೆಲ್ ಆಗಬೇಕು. ಆ ನಿಟ್ಟಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು ಎಂದು ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. 87ನೇ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚನೆ ಮಾಡಿರುವ ಸಾಂಸ್ಕೃತಿಕ ಸಮನ್ವಯ ಸಮಿತಿಯ ಸದಸ್ಯರು, ಸಂಚಾಲಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಹೃದಯ ಶ್ರೀಮಂತಿಕೆಗೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಅತಿ ಹೆಚ್ಚು ಕಲಾಪ್ರಕಾರಗಳಿವೆ. ಸ್ಥಳೀಯ ಕಲಾವಿದರ ಜೊತೆಗೆ ಹೊರರಾಜ್ಯ, ವಿದೇಶದ ಕಲಾವಿದರಿಗೆ ಅವಕಾಶ ನೀಡುವ ಮೂಲಕ ಜಿಲ್ಲೆಯ ಜನತೆಗೆ ಕಲೆಯ ರಸದೌತಣ ನೀಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ಕರೆಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ. ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರೇ ಬೆನ್ನೆಲುಬು, ಅವರೇ ಶಕ್ತಿ. ಕಲಾವಿದರ ಆಯ್ಕೆ, ಕಾರ್ಯಚಟುವಟಿಕೆಗಳಿಗೆ ಸ್ಪಷ್ಟ ರೂಪ ಕೊಡಬೇಕು. ಈ ನೆಲ, ಜಲ, ಭಾಷೆ ಹೆಸರು ವಿಶ್ವಮಟ್ಟದಲ್ಲಿ…

Read More

ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ: ಈ ರೈಲುಗಳ ಸಂಚಾರ ಭಾಗಶಃ ರದ್ದು: 1. ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ. 2. ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ…

Read More

ಬೆಂಗಳೂರು: ನಗರದಲ್ಲಿ ಏಕಾಂತದಲ್ಲಿದ್ದಂತ ಪ್ರೇಮಿಗಳಿಗೆ ಯುವಕರು ಕಿರುಕುಳ ನೀಡಿರುವಂತ ಘಟನೆ ನಡೆದಿದೆ. ರೊಚ್ಚಿಗೆದ್ದಂತ ಪ್ರೇಮಿಯಿಂದ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳಿಬ್ಬರು ಏಕಾಂತದಲ್ಲಿದ್ದರು. ಇಲ್ಲಿಗೆ ತೆರಳಿದಂತ ಯುವಕರಿಬ್ಬರು ಕಿರಿಕ್ ತೆಗೆದಿದ್ದಾರೆ. ಅವರನ್ನು ಪ್ರಶ್ನಿಸಿ, ಜಗಳ ಮಾಡಿದ್ದಾರೆ. ಯುವಕರು ಹಾಗೂ ಪ್ರೇಮಿಯ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿ, ಕೈಕೈ ಮಿಲಾಯಿಸಿಕೊಂಡಿದ್ದಾರೆ. ಅಲ್ಲದೇ ಸಿಟ್ಟಿಗೆದ್ದಂತ ಪ್ರೇಮಿಯೊಬ್ಬ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ ನಡೆದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-those-going-home-for-gowri-ganesh-festival-1500-additional-ksrtc-buses-arranged/ https://kannadanewsnow.com/kannada/neither-i-nor-my-family-have-got-a-single-plot-from-the-government-m-b-patil-2/

Read More

ಬೆಂಗಳೂರು: ‘ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ. ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಕೂ ಈ ಸಂಸ್ಥೆಗಳು ಈ ರೀತಿ‌ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸಚಿವರು ತಿರುಗೇಟು ನೀಡಿದರು. ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ…

Read More