Subscribe to Updates
Get the latest creative news from FooBar about art, design and business.
Author: kannadanewsnow09
ಶಿಗ್ಗಾವ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಯವರು ಪಿತೂರಿ ಮಾಡಿ ಸಿದ್ದರಾಮಯ್ಯ ಅವರನ್ನು ಇಳಿಸಲು ಸಂಚು ರೂಪಿಸಿದ್ದಾರೆ. ಉಪ ಚುನಾವಣೆ ಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು. ಬಿಜೆಪಿ ಯವರು ಚುನಾವಣೆ ಇದೆ ಎಂದು ಜನರನ್ನು ದಿಕ್ಕು ತಪ್ಪಿಸಿ ಅನಗತ್ಯ ವಿವಾದ ಸೃಷ್ಠಿ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದು ಅವರಿಗೆ ಸೂಕ್ತ ಪಾಠ ಕಲಿಸಿ ಎಂದು ಹೇಳಿದರು. ಅಜ್ಜಂ ಪೀರ್ ಖಾದ್ರಿ ಅವರಿಗೆ ಟಿಕೆಟ್ ತಪ್ಪಿರಬಹುದು. ಆದರೆ ದೊಡ್ಡ ಅವಕಾಶ ಅವರಿಗೆ ಸಿಗಲಿದೆ. ಯಾಸೀರ್ ಪಟಾಣ್ ಅವರ ಶಿಷ್ಯ ರಾಗಿದ್ದು ಎಲ್ಲರೂ ಜತೆಗೂಡಿ ಕೆಲಸ ಮಾಡಿ ಗೆಲ್ಲಿಸಿ…
ನವದೆಹಲಿ: ಪಡಿತರ ತೆಗೆದುಕೊಳ್ಳುವವರಿಗೆ ಒಂದು ಪ್ರಮುಖ ಸುದ್ದಿ ಇದೆ. ಪಡಿತರ ಚೀಟಿ ಮೂಲಕ ಪಡಿತರ ಪಡೆಯುವವರಿಗೆ ನವೆಂಬರ್ 1ರ ಇಂದಿನಿಂದ ನಿಯಮಗಳು ಬದಲಾಗಲಿವೆ. ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ನವೆಂಬರ್ 1ರ ಇಂದಿನಿಂದ ಪಡಿತರ ಪಡೆಯುವ ಪ್ರಕ್ರಿಯೆಯಲ್ಲಿ ಬದಲಾವಣೆಗಳಾಗಲಿವೆ. ಇದು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಪಡಿತರ ಚೀಟಿಯ ಸಹಾಯದಿಂದ, ಭಾರತದ ಬಡ ಮತ್ತು ನಿರ್ಗತಿಕ ಜನರಿಗೆ ಪಡಿತರ ಅಂಗಡಿಯಿಂದ ಅಗ್ಗದ ದರದಲ್ಲಿ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತದೆ. ಈಗ, ಈ ಧಾನ್ಯವು ಉಚಿತವಾಗಿ ಲಭ್ಯವಿದೆ. ನೀವು ಇ ಕೆವೈಸಿ ಹೊಂದಿಲ್ಲದಿದ್ದರೆ, ನೀವು ಪಡಿತರದಲ್ಲಿ ಧಾನ್ಯವನ್ನು ಪಡೆಯುವುದಿಲ್ಲ. ನೀವು ಇಕೆವೈಸಿ ಮಾಡಲು ಬದ್ಧರಾಗಿದ್ದೀರಿ. ಅನೇಕರು ಇನ್ನೂ ಈ ಕೆವೈಸಿ ಮಾಡಿಲ್ಲ. ಅವರಿಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಲಿದೆ. ಅದರ ನಂತರ ಇ-ಕೆವೈಸಿ ಮಾಡಲಾಗುವುದಿಲ್ಲ. ಅಕ್ಟೋಬರ್ 31 ರೊಳಗೆ ಇ-ಕೆವೈಸಿ ಮಾಡದಿದ್ದರೆ, ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ಹೊರಗಿಡಲಾಗುತ್ತದೆ. ಅಂತಹ ವ್ಯಕ್ತಿಗಳಿಗೆ ನವೆಂಬರ್ 1ರ ಇಂದಿನಿಂದ ಪಡಿತರ ಧಾನ್ಯಗಳು ಸಿಗುವುದಿಲ್ಲ. ಅವರ ಹೆಸರುಗಳನ್ನು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಂತ ನಟ ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ದಾಖಲಾಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ನಟ ದರ್ಶನ್ ಅವರು ತೆರಳಿದರು. ಬಿಜಿಎಸ್ ಆಸ್ಪತ್ರೆಗೆ ಬೆನ್ನುನೋವಿನ ಚಿಕಿತ್ಸೆಗಾಗಿ ದಾಖಲಾಗಿರುವಂತ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಲಿರುವಂತ ವೈದ್ಯರು, ಆ ಬಳಿಕ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/dr-cn-ashwathnarayan-demands-dismissal-of-zameer-ahmed-as-minister/ https://kannadanewsnow.com/kannada/big-news-isro-launched-indias-first-analog-space-mission/
ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರದ ಪ್ರಯತ್ನ ಖಂಡನೀಯ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಕ್ಫ್ ಆಸ್ತಿ ಎಂಬ ಗಜೆಟ್ ಪ್ರಕಟಣೆಯನ್ನೂ ರದ್ದು ಪಡಿಸಬೇಕು; ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ಜಮೀರ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಇದರ ವಿರುದ್ಧ ರಾಜ್ಯದ ಉದ್ದಗಲದಲ್ಲಿ ನವೆಂಬರ್ 4ರಂದು ಹೋರಾಟ ನಡೆಯಲಿದೆ. ಸರಕಾರವು ಈ ತಕ್ಷಣ ಎಲ್ಲೆಲ್ಲಿ ಪಹಣಿಯಲ್ಲಿ ವಕ್ಫ್ ಎಂದು ಘೋಷಿಸಿದ್ದಾರೋ ಅದನ್ನೆಲ್ಲ ಸಂಪೂರ್ಣ ಹಿಂದಕ್ಕೆ ಪಡೆಯಬೇಕು. ಕೇವಲ ನೋಟಿಸ್ ಹಿಂಪಡೆದರೆ ಸಾಲದು ಎಂದು ಎಚ್ಚರಿಸಿದರು. ವಿಜಯಪುರ ಜಿಲ್ಲೆಯಲ್ಲಿ ರೈತರ ಹೆಸರಿನಲ್ಲಿದ್ದ ಪಹಣಿಗಳನ್ನು ವಕ್ಫ್ ಹೆಸರಿಗೆ…
ಬೆಂಗಳೂರು: ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ.ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ” ಎಂದರು. ಹಿರಿಯರ ಬುದ್ಧಿ ಮಾತು ಕೇಳಬೇಕು “ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ನಾನು ಶಕ್ತಿ ಯೋಜನೆ ವಿಚಾರವಾಗಿ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಕೇಳಿಸಿಕೊಂಡು…
ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂಪಾಯಿ ಎಂದು ಘೋಷಿಸಲು ಹರ್ಷಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಹ ಅವರು ತಿಳಿಸಿದ್ದಾರೆ.
ಕಲಬುರಗಿ : ವಕ್ಫ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ ಈ ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯಲು ರಾಜ್ಯ ಸರ್ಕಾರ ಹೊರಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ನಿಂದ ರೈತರ ಭೂಮಿಗಳನ್ನು ಕಬಳಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಕಿಡಿಕಾರಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ತರಾತುರಿಯಲ್ಲಿ ನೀಡಲಾಗಿರುವ ವಕ್ಫ್ ಬೋರ್ಡ್ನ ನೋಟಿಸ್ನಿಂದ ರಾಜ್ಯದ ಸಾವಿರಾರು ರೈತರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ ಕಲಬುರಗಿ ಜಿಲ್ಲೆಯ ಸೇರಿದಂತೆ ಸೇಡಂ ಮತಕ್ಷೇತ್ರದ ರೈತರಿಗೂ ವಕ್ಫ್ ತನ್ನ ಆಸ್ತಿ ಎಂದು ನೋಟಿಸ್ ಜಾರಿಗೊಳಿಸಿದೆ. ದೇಶದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಜಾರಿಯಾಗುವುದಕ್ಕೂ ಮುಂಚಿತವಾಗಿ ಕರ್ನಾಟಕದಲ್ಲಿ ಈ ವಕ್ಫ್ ಕಾನೂನು ಬದಲಾಗುವುದಕ್ಕೂ ಸಾಧ್ಯವಾದಷ್ಟು ಜಾಗವನ್ನು ವಕ್ಫ್ ಹೆಸರಿಗೆ ನೋಂದಣಿಗೊಳಿಸಬೇಕು ಎನ್ನುವ ಹುನ್ನಾರದಲ್ಲಿ ಪ್ರಯತ್ನ ನಡೆಸುತ್ತಿರುವುದು ಅಕ್ಷ್ಯಮ್ಯ ಎಂದರು. ಕಳೆದ 2-3 ವಾರದ ಹಿಂದೆ ಜಮೀರ್ ಅಹ್ಮದ್ ರಾಜ್ಯದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ…
ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದಲ್ಲಿ ಖಾಸಗಿ ಬಸ್ ಒಂದು ಅಪಘಾತಗೊಂಡಿದ್ದು, ಅದರಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಐಗಿನ ಬೈಲು ಬಳಿಯಲ್ಲಿ ಸಾಗರದಿಂದ ಶಿವಮೊಗ್ಗ ತೆರಳುತ್ತಿದ್ದಂತ ಎಸ್ ಟಿ ಎಂ ಟಿ ಬಸ್ ಅಪಘಾತಗೊಂಡಿದೆ. ಈ ಬಸ್ಸಿನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಇವರಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬಸ್ಸು ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: 1974ರಲ್ಲಿ ಒಂದು ಗಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಆಗ ಕಾಂಗ್ರೆಸ್ ಸರಕಾರವೇ ಅಧಿಕಾರದಲ್ಲಿತ್ತು. ಆ ಗಜೆಟ್ ಅಧಿಸೂಚನೆಯನ್ನು ವಾಪಸ್ ಪಡೆಯದಿದ್ದರೆ, ಮುಖ್ಯಮಂತ್ರಿಗಳ ವಕ್ಫ್ ಕುರಿತ ನೋಟಿಸ್ ವಾಪಸ್ ಪಡೆಯುವ ಬೊಗಳೆ ಭಾಷಣದಿಂದ ಯಾವುದೇ ಪ್ರಯೋಜನ ಆಗದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬ್ಯಾಂಕಿನಿಂದ ಹಣ ಕೋರಿ ಒಂದು ನೋಟಿಸ್ ಬರುತ್ತದೆ. ಬಡ್ಡಿ ಸಮೇತ ಕಟ್ಟಲು ಸೂಚಿಸುತ್ತಾರೆ. ಯಾರದೋ ಪ್ರಭಾವದಿಂದ ನೋಟಿಸ್ ಹಿಂಪಡೆದರೆ ಹಣ ಕಟ್ಟದೆ ಇರಲು ಸಾಧ್ಯವೇ? ನೋಟಿಸ್ ವಾಪಸ್ ಪಡೆದರೆ ಏನೂ ಆಗದು. ಇದು ರೈತರನ್ನು ದಾರಿ ತಪ್ಪಿಸುವ ಕೆಲಸ ಎಂದು ಟೀಕಿಸಿದರು. ಜಮೀರ್ ಅಹ್ಮದ್ ಅವರಂತೆ ಪ್ರಚೋದನಕಾರಿ ಭಾಷಣ ಮಾಡಿದರೆ ಯಾರಿಗೆ ತಾನೇ ಕೋಪ ಬರುವುದಿಲ್ಲ? ಒಂದೆಡೆ ಭೂಮಿ ಕಳಕೊಳ್ಳುವ ಆತಂಕ, ಮತ್ತೊಂದು ಕಡೆ ಈ ರೀತಿ ಬೆಂಕಿ ಹಚ್ಚುವ ಕೆಲಸವನ್ನು ಸರಕಾರವೇ ಮಾಡುತ್ತಿದೆ. ಇಂಥವರು ಸರಕಾರದಲ್ಲಿ ಸಚಿವರಾಗಿ ಮುಂದುವರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದನ್ನು ಪ್ರಶ್ನೆ…
ರಾಮನಗರ: “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ…













