Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ದಾವಣಗೆರೆ : ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು. ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು. ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ,…
ಮಂಡ್ಯ: ಬೆಂಗಳೂರಿನ ನವರತ್ನ ಜ್ಯೂವೆಲ್ಲರಿ ಮಾಲೀಕರಿಗೆ, ಶಿವಮೊಗ್ಗದ ಸಾಗರದ ಪ್ರಗತಿ ಜ್ಯೂವೆಲ್ಲರಿ ಮಾಲೀಕರಿಗೆ ಐಶ್ವರ್ಯ ಗೌಡ ಲಕ್ಷ, ಕೋಟಿ ಬೆಲೆ ಬಾಳುವ ಚಿನ್ನಾಭರಣ ಪಡೆದು, ವಂಚಿಸಿತ್ತದ್ದರು. ಈ ಬಳಿಕ ಮಂಡ್ಯದ ಚಿನ್ನದ ವ್ಯಾಪಾರಿಗೂ 55 ಲಕ್ಷ ವಂಚನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರೇ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹಣ ವಾಪಾಸ್ಸು ಕೊಡಿಸುವಂತೆ ಮನವಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪೂರ್ವ ಠಾಣೆಯ ಪೊಲೀಸರಿಗೆ ಈ ಸಂಬಂಧ ಮಾಲೀಕರಾದಂತ ರವಿಕುಮಾರ್ ಹಾಗೂ ಪೂರ್ಣಿಮಾ ಎಂಬುವರು ಕಳೆದ 8 ವರ್ಷಗಳ ಹಿಂದೆ 55 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಐಶ್ವರ್ಯ ಗೌಡ ಹಣ ನೀಡದೇ ವಂಚಿಸಿರೋದಾಗಿ ದೂರು ನೀಡಲಾಗಿದೆ. ಇನ್ನೂ ಮಂಡ್ಯದ ಕೆ ಎಂ ದೊಡ್ಡಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಜ್ಯೂವೆಲ್ಲರಿ ಮಾಲೀಕರು ನಮ್ಮ ಹಣವನ್ನು ವಾಪಾಸ್ಸು ಕೊಡಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಆಲಿಸಿದಂತ ಹೆಚ್ ಡಿಕೆ, ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ,…
ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಆದರೇ ಕುಟುಂಬಸ್ಥರು ಪತಿ, ಅತ್ತೆಯೇ ಕೊಲೆ ಮಾಡಿರೋದಾಗಿ ಆರೋಪಿಸಿದ್ದಾರೆ. ಮೃತ ಗೃಹಿಣಿಯನ್ನು ಶೈಲಜಾ(28) ಎಂಬುದಾಗಿ ಗುರುತಿಸಲಾಗಿದೆ. ಶೈಲಜಾಳನ್ನು ಪತಿ ಹಾಗೂ ಅತ್ತೆ ಸೇರಿಕೊಂಡು ಹೊಡೆದು ಹತ್ಯೆಗೈದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಮೃತ ಶೈಲಜಾ ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/6-most-wanted-naxals-to-surrender/ https://kannadanewsnow.com/kannada/breaking-yuvanidhi-special-registration-drive-in-all-colleges-in-the-state-govt/
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಂಡ್ ನಕ್ಸಲರು ಎಂಬುದಾಗಿಯೇ ಹೇಳಲಾಗುತ್ತಿದ್ದಂತ ಆರು ನಕ್ಸಲರು ಶರಣಾಗತಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಕಾಡು ತೊರೆದು, ನಾಡಿಗೆ ಬರಲು ನಿರ್ಧರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಶಾಂತಿಗಾಗಿ ನಾಕರಿಕ ವೇದಿಗೆಕೆ ಪತ್ರವನ್ನು ಕೂಡ ನಕ್ಸರು ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ಹೊರಟಿರುವಂತ ಆರು ನಕ್ಸಲರು ಕರ್ನಾಟಕ, ಕೇರಳ, ಆಂಧ್ರಪ್ರದೇಶದಲ್ಲಿನ ಮೋಸ್ಟ್ ವಾಂಟೆಂಡ್ ನಕ್ಸಲರಾಗಿದ್ದಾರೆ. ಯಾರು ಯಾರು ನಕ್ಸಲರು ಶರಣಾಗಲು ನಿರ್ಧಾರ.? ಕರ್ನಾಟಕದಲ್ಲಿ ಮೋಸ್ಟ್ ವಾಂಟೆಂಡ್ ನಕ್ಸಲ್ ಎಂದೇ ಕರೆಸಿಕೊಳ್ಳುವಂತ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ನತಾಕಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಂಡ್ ನಕ್ಸಲ್ ಜೀಶಾ, ಆಂಧ್ರಪ್ರದೇಶದ ಕೆ. ವಸಂತ, ಮಾರೆಪ್ಪ ಆರೋಲಿ ಎಂಬುವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿದ್ದಾರೆ. https://kannadanewsnow.com/kannada/kolar-youth-murder-case-four-accused-arrested/ https://kannadanewsnow.com/kannada/breaking-yuvanidhi-special-registration-drive-in-all-colleges-in-the-state-govt/
ಕೋಲಾರ: ಜಿಲ್ಲೆಯ ನೂರ್ ನಗರದಲ್ಲಿ ಯುವಕ ಉಸ್ಮಾನ್ ಎಂಬಾತನನ್ನು ಕುಟುಂಬಸ್ಥರು, ಸಂಬಂಧಿಕರೇ ಅಟ್ಟಾಡಿಸಿಕೊಂಡು ಏರಿಯಾದಲ್ಲಿ ಮರ್ಡರ್ ಮಾಡಿದ್ದರು. ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಕೋಲಾರದ ಗಲ್ ಪೇಟೆ ಠಾಣೆಯ ಪೊಲೀಸರು, ಉಸ್ಮಾನ್ ಎಂಬಾತನನ್ನು ಕಳೆದ ರಾತ್ರಿ ಅಟ್ಟಾಡಿಸಿಕೊಂಡು ಮರ್ಡರ್ ಮಾಡಿದ್ದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಫ್ರೀದ್, ಜಮೀರ್, ನಜೀರ್, ಸಲ್ಮಾನ್ ಪಾಷಾ ಎಂಬುದಾಗಿ ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಜಬೀನಾ ಎಂಬಾಕೆಯನ್ನು ವಿವಾಹವಾಗಿದ್ದನು. ಕೆಲ ವರ್ಷಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಂತ ಜಬೀನಾ ಆರೋಗ್ಯ ವಿಚಾರಿಸಲು ಬಂದಿದ್ದಂತ ಸಿಮ್ರಾನ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಗಿ ಉಸ್ಮಾನ್ ಆರೋಪಿಸಿದ್ದನು. ಇದೇ ಕಾರಣದಿಂದಾಗಿ ಗಂಡನ ಮನೆಯನ್ನು ತೊರಿದ್ದಂತ ಜಬೀನಾ, ತವರು ಮನೆಗೆ ತೆರಳಿದ್ದಳು. ನಿನ್ನೆ ಪತ್ನಿಯನ್ನು ಮಾತನಾಡಿಸಿಕೊಂಡು ಬರೋದಕ್ಕೆ ತೆರಳಿದ್ದಾಗ ಜಬೀನಾ ಸಂಬಂಧಿಕರು, ಕುಟುಂಬಸ್ಥರು ಏರಿಯಾದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ, ಉಸ್ಮಾನ್ ಕೊಲೆಗೈದಿದ್ದರು. https://kannadanewsnow.com/kannada/opposition-should-not-make-baseless-allegations-siddaramaiah/ https://kannadanewsnow.com/kannada/breaking-yuvanidhi-special-registration-drive-in-all-colleges-in-the-state-govt/
ದಾವಣಗೆರೆ : ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ…
ಮೈಸೂರು: ಕಾಂಗ್ರೆಸ್ ಸರಕಾರದಲ್ಲಿ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60 ರಷ್ಟು ಲಂಚ, ಕಮೀಶನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದರು. ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವ ಜಯತೇ ಎಂದರೆ ಇದೇನಾ? ಇವರ ಸತ್ಯಮೇವ ಜಯತೆ ಬರೀ ಜಾಹೀರಾತಿಗೆ ಸೀಮಿತವಾಗಿದೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು. ಗಾಂಧೀಜಿ ಅವರ ಸತ್ಯಮೇವ ಜಯತೆ ಮಾತಿನಂತೆ ಸಿದ್ದರಾಮಯ್ಯ ಅವರು ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರೇ ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ಲವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ರಾಜ್ಯದ…
ಬೆಂಗಳೂರು: ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ. ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸಾರಿಗೆ ಬಸ್ ಪ್ರಯಾಣದ ದರ ಶೇ.15ರಷ್ಟು ಹೆಚ್ಚಾಗಿದೆ. ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇದರ ನಡುವೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದಿದ್ದಾರೆ. ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ…
ಮೈಸೂರು: ಆತ್ಮವಿಶ್ವಾಸ, ಶ್ರಮ ಇದ್ದಲ್ಲಿ ಯಶಸ್ಸು ದೊರೆಯುತ್ತದೆ. ಹಾಗಾಗಿ ಕೆಲಸದಲ್ಲಿ ಬದ್ಧತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಗೆರೆ ಗೋಪಾಲ್ ಅವರು ಹೇಳಿದರು. ಪರಿಷತ್ ಸಭಾಂಗಣದಲ್ಲಿಂದು ಎಸ್.ಎಸ್. ಕಲಾ ಸಂಗಮ ಟ್ರಸ್ಟ್ ವತಿಯಿಂದ ನಡೆದ ಅಮ್ಮ ಪ್ರಶಸ್ತಿ ಪ್ರದಾನ ಮತ್ತು ಸಂಕ್ರಾಂತಿ ಸಂಭ್ರಮ ಸಮಾರಂಭದಲ್ಲಿ ಅಮ್ಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಗುರಿ ನಮ್ಮ ಬೆನ್ನ ಹಿಂದೆ ಇರುತ್ತದೆ ಅದನ್ನು ತಲುಪುವ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷರಾದ ಡಾ. ನಾಗರಾಜ್ ವಿ. ಬೈರಿ ಅವರು ಮಾತನಾಡಿ, ಇಂದು ಮೊಬೈಲ್ ಯುಗ ಆಗಿದ್ದು, ಅತಿಯಾದ ಬಳಕೆಯಿಂದ ಕ್ರಿಯಾಶೀಲತೆ ಕ್ಷೀಣಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಹಿತಿ ಗೊರೂರು ಪಂಕಜ ಸೇರಿದಂತೆ ಹತ್ತು ಮಂದಿ ಸಾಧಕರಿಗೆ ಅಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೇಖಕಿ ಕಮಲಾ ಅನಂತರಾವ್, ಸಾಹಿತಿ ಮಹೇಂದ್ರ ಕುಡ್ರಿ, ಕಂದಾಯ ಪರಿವೀಕ್ಷರಾದ ಹೆಚ್.ನಂಜಪ್ಪ, ಅಧಿಕ ರಕ್ತದಾನಿ ತ್ಯಾಗರಾಜ್,…










