Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದ ಕೆ ಎಸ್ ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇಂದು ಅಧಿಕೃತವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು, (06.01.2025) ವಿಧಾನಸೌಧದ, ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು “ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಈ ಯೋಜನೆಯು ಉತ್ತಮವಾಗಿದ್ದು, ನೌಕರರು ಮತ್ತು ಅವರ ಅವಲಂಬಿತ ಕುಟಂಬದ ಸದಸ್ಯರುಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ನಮ್ಮ ಸರ್ಕಾರವು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಒಳ್ಳೆಯ ಕಾರ್ಯ ಮಾಡುತ್ತಿದೆ. ಶಕ್ತಿ ಯೋಜನೆಯು ಜಾರಿಯಾದ ನಂತರ ಲಿಂಗ ತಾರತಮ್ಮ ಹೋಗಲಾಡಿಸಿ, ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಿದೆ. ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯರು, ಈ ಯೋಜನೆಯ ಫಲನಾಭವಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಮನೋಭಾವದಿಂದ ನೋಡಬಾರದು, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಂತೆ ಪರಿಗಣಿಸುವಂತೆ ಸೂಚಿಸಿದರು.…
ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಫಿಜಿಷಿಯನ್-02, ಶಸ್ತ್ರಚಿಕಿತ್ಸ ತಜ್ಞರು-01, ಸ್ತ್ರೀರೋಗ ತಜ್ಞ-03, ಅರಿವಳಿಕೆ-09, ಇಎನ್ಟಿ-02, ನೇತ್ರ ತಜ್ಞರು-02, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-01, ರೇಡಿಯಾಲಜಿಸ್ಟ್ -01, ನೆಫ್ರೊಲಜಿಸ್ಟ್-01 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು . ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು…
ಬೆಂಗಳೂರು: ಚಿನ್ನಾಭರಣ ಪಡೆದು ಹಣ ನೀಡದೇ ವಂಚಿಸಿದಂತ ಆರೋಪದಲ್ಲಿ ಈಗಾಗಲೇ ಐಶ್ವರ್ಯಾಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಶಿಲ್ವಾಗೌಡ ಎಂಬುವರಿಗೆ ವಂಚಿಸಿದಂತ ಸಂಬಂಧ ದಾಖಲಾಗಿದ್ದಂತ ದೂರು ಹಿನ್ನಲೆಯಲ್ಲಿ ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಶಿಲ್ಪಾಗೌಡ ಎಂಬುವರಿಂದ 430 ಗ್ರಾಂ ಚಿನ್ನ ಪಡೆದಿದ್ದಂತ ಐಶ್ವರ್ಯಾಗೌಡ ಅದರ ಹಣವನ್ನು ನೀಡದೇ ವಂಚಿಸಿದ್ದರು. 430 ಗ್ರಾಂ ಚಿನ್ನದ ಬೆಲೆ 3.50 ಕೋಟಿಯಾಗಿತ್ತು. ಈ ಸಂಬಂಧ ಶಿಲ್ಪಾಗೌಡ ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಐಶ್ವರ್ಯಾಗೌಡ ಅವರು ಚಿನ್ನಪಡೆದು ಹಣ ವಂಚಿಸಿದ ಸಂಬಂಧ ಶಿಲ್ಪಾಗೌಡ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಐಶ್ವರ್ಯಾಗೌಡ ಹಾಗೂ ಪತಿಯನ್ನು ಮತ್ತೆ ಬಂಧಿಸಿದ್ದಾರೆ. https://kannadanewsnow.com/kannada/actor-darshan-moves-sc-seeking-cancellation-of-bail/ https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/
ನವದೆಹಲಿ: ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಜಾಗತಿಕವಾಗಿ ಗುರುತಿಸಲ್ಪಟ್ಟ ಉಸಿರಾಟದ ವೈರಸ್ ಆಗಿದ್ದು, ಚೀನಾದಲ್ಲಿ ಏಕಾಏಕಿ ವರದಿಯಾದ ನಂತರ ಇತ್ತೀಚೆಗೆ ಗಮನ ಸೆಳೆಯಿತು. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ವಾಡಿಕೆಯ ಕಣ್ಗಾವಲಿನ ಭಾಗವಾಗಿ ಕರ್ನಾಟಕದಲ್ಲಿ ಇತ್ತೀಚೆಗೆ ಎರಡು ಎಚ್ಎಂಪಿವಿ ಪ್ರಕರಣಗಳು ವರದಿಯಾಗಿವೆ. HMPV ಎಂದರೇನು? ಎಚ್ಎಂಪಿವಿ ಒಂದು ವೈರಲ್ ರೋಗಕಾರಕವಾಗಿದ್ದು, ಇದು ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಸೋಂಕುಗಳನ್ನು ಉಂಟುಮಾಡುತ್ತದೆ. 2001 ರಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾದ ಇದು ಪ್ಯಾರಾಮೈಕ್ಸೊವಿರಿಡೇ ಕುಟುಂಬಕ್ಕೆ ಸೇರಿದೆ ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್ಎಸ್ವಿ) ಗೆ ನಿಕಟ ಸಂಬಂಧ ಹೊಂದಿದೆ. ಕೆಮ್ಮು ಅಥವಾ ಸೀನುವಿಕೆಯಿಂದ ಉಸಿರಾಟದ ಹನಿಗಳ ಮೂಲಕ ಎಚ್ಎಂಪಿವಿ ಹರಡುತ್ತದೆ, ಜೊತೆಗೆ ಕಲುಷಿತ ಮೇಲ್ಮೈಗಳನ್ನು ಸ್ಪರ್ಶಿಸುವ ಮೂಲಕ ಅಥವಾ ಸೋಂಕಿತ ವ್ಯಕ್ತಿಗಳೊಂದಿಗೆ ನೇರ ಸಂಪರ್ಕಕ್ಕೆ ಬರುವ ಮೂಲಕವಾಗಿದೆ. ಈ ವೈರಸ್ ಸೌಮ್ಯ ಉಸಿರಾಟದ ಅಸ್ವಸ್ಥತೆಯಿಂದ ಹಿಡಿದು ತೀವ್ರವಾದ ತೊಡಕುಗಳವರೆಗೆ ಕಾಯಿಲೆಗಳನ್ನು ಉಂಟುಮಾಡುತ್ತದೆ, ವಿಶೇಷವಾಗಿ ಶಿಶುಗಳು, ವಯಸ್ಸಾದ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುವ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಇದೀಗ ಅದರಂತೆ ಸುಪ್ರೀಂ ಕೋರ್ಟ್ ಗೆ ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ. ಇಂದು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ನೀಡಿರುವಂತ ಜಾಮೀನು ರದ್ದು ಕೋರಿಗೆ ರಾಜ್ಯ ಸರ್ಕಾರದ ಪರವಾಗಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯನ್ನು ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಂದಹಾಗೇ ಪೊಲೀಸ್ ಇಲಾಖೆಯಿಂದ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಿರುವುದಾಗಿ ತಿಳಿದು ಬಂದಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದು, ಯಾವ ತೀರ್ಪು…
ಕೋಲ್ಕತ್ತಾ : ಚೀನಾದಲ್ಲಿ ಕಾಣಿಸಿಕೊಂಡಿದ್ದಂತ ಹೆಚ್ ಎಂ ಪಿ ವಿ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಸೇರಿದಂತೆ ದೇಶದ ಇತರೆಡೆ ಒಂದು ಕೇಸ್ ಪತ್ತೆಯಾಗಿದ್ದವು. ಇದೀಗ ಕೋಲ್ಕತ್ತಾದಲ್ಲಿ 5 ತಿಂಗಳ ಹಸುಗೂಸಿಗೆ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನವೆಂಬರ್.12ರಂದು ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ನ್ಯೂಮೋನಿಯಾದಿಂದ ಬಳಲುತ್ತಿದ್ದಂತ 5 ತಿಂಗಳ ಹಸುಳೆ ಚಿಕಿತ್ಸೆ ಕೊಡಿಸಿಕೊಂಡು ಮನೆಗೆ ಕರೆದೊಯ್ಯಲಾಗಿತ್ತು. ಈ ಮಗುವಿಗೂ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿರುವುದಾಗಿ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಅಂದಹಾಗೇ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಸ್ ದೃಢಪಟ್ಟಿತ್ತು. ಆ ನಂತ್ರ ಗುಜರಾತ್ ನ ಅಹಮಾದಾಬಾದ್ ನಲ್ಲಿನ ಮಗುವೊಂದಕ್ಕೂ ಹೆಚ್ ಎಂ ಪಿ ವಿ ಪತ್ತೆಯಾಗಿತ್ತು. ಈಗ ಕೋಲ್ಕತ್ತಾದಲ್ಲಿ 5 ತಿಂಗಳ ಹಸುಳೆಗೆ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/big-update-2-hmpv-confirmed-in-karnataka-icmr-hmpv-virus/ https://kannadanewsnow.com/kannada/what-is-hmpv-virus-what-are-its-symptoms-heres-the-information/
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದು, ಈ ಪೈಕಿ 52,80,287 ಪುರುಷರು, 49,82,589 ಮಹಿಳೆಯರು ಹಾಗೂ 1,838 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಹೇಳಿದರು. ಮತದಾರರ ಅಂತಿಮ ಪ್ರತಿಯನ್ನು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಅಂತಿಮ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಅವರ ವೆಬ್ಸೈಟ್ www.ceokarnataka.kar.nic.inಮತ್ತು ಬಿಬಿಎಂಪಿ ವೆಬ್ಸೈಟ್ www.bbmp.gov.in ನಲ್ಲಿ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ…
ಬೆಂಗಳೂರು: ರಾಜ್ಯದಲ್ಲಿ ದೇಗುಲಗಳ ಆಸ್ತಿ ರಕ್ಷಣೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ವಹಿಸಿದ್ದರು. ಈ ಪರಿಣಾಮ ದೇಗುಲಗಳಿಗೆ 11,499 ಎಕರೆ ಮರು ಸೇರ್ಪಡೆಯಾದಂತೆ ಆಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಜರಾಯಿ ಇಲಾಖೆ ವತಿಯಿಂದ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಲಾಯಿತು. ಈ ಸಂದರ್ಭ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ ಬಂತು. ಕೂಡಲೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ ಎರಡು ವರ್ಷಗಳಲ್ಲಿ 11,499 ಎಕರೆ ವಿಸ್ತೀರ್ಣದ ದಾಖಲೆಗಳನ್ನು ಸರಿಪಡಿಸಲಾಗಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪ್ರತಿ ತಿಂಗಳೂ ಮುಜರಾಯಿ ಆಸ್ತಿಗಳ ಭೂಮಾಪನ, ದಾಖಲೆ ಪರಿಶೀಲನೆ, ತಿದ್ದುಪಡಿ, ಇಂಡೀಕರಣಕ್ಕೆ ಗುರಿ ನಿಗದಿಪಡಿಸಲಾಗಿದೆ. ಎಲ್ಲ ದೇವಾಲಯಗಳ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಿ, ದೇವಸ್ಥಾನಗಳ ಹೆಸರಿಗೆ ಸರಿಯಾದ ಕ್ರಮದಲ್ಲಿ ದಾಖಲಿಸಲು ಇನ್ನೂ ಎರಡು ವರ್ಷ ಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1876219309959393716 https://kannadanewsnow.com/kannada/pyaari-didi-yojana-on-the-lines-of-grihalakshmi-dk-shivakumar-announces-congress-first-guarantee-for-delhi-polls/ https://kannadanewsnow.com/kannada/bjp-fact-finding-committee-visits-victims-house-in-koppal-district-objects-to-poor-supply-of-medicines/
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು. “ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ…
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ ಎಂಬ ಸಂತ್ರಸ್ತೆ ಮನೆಗೆ ರಾಜ್ಯ ಸತ್ಯ ಶೋಧನಾ ಸಮಿತಿಯ ತಂಡ ಭೇಟಿ ಮಾಡಿ ಸಂತ್ರಸ್ತೆಯ ಗಂಡ ಹಾಗೂ ಕುಟುಂಬಸ್ಥರಿಂದ ಮನೆಯ ವಿವರ ಪಡೆಯಿತು. ಇದೇವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರು, ಸಚಿವರು ಮನೆಗೆ ಭೇಟಿ ನೀಡಲಿಲ್ಲ ಎಂದು ಆಕ್ಷೇಪಿಸಿದರು. ಕಲ್ಯಾಣ ಕರ್ನಾಟಕದಲ್ಲಿ 2 ವರ್ಷದಲ್ಲಿ 300 ಬಾಣಂತಿಯರ ಸಾವು ಸಂಭವಿಸಿದೆ. 2,500- 3 ಸಾವಿರ ಶಿಶುಗಳು ಸಾವನ್ನಪ್ಪಿವೆ. ಇದಕ್ಕೆಲ್ಲ ರಾಜ್ಯ ಸರಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆಕ್ಷೇಪಿಸಿದರು. ಕಳಪೆ ಔಷಧಿಯೂ ಇನ್ನೊಂದು ಕಾರಣ ಎಂದು ಟೀಕಿಸಿದರು. ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ ಅವರು ಮಾತನಾಡಿ, ಪಿಎಚ್ಸಿಗಳಲ್ಲಿ ಶೇ 50ಕ್ಕೂ ಹೆಚ್ಚು ಸಿಬ್ಬಂದಿಗಳ ಕೊರತೆ ಇದೆ. ವೈದ್ಯಕೀಯ…













