Author: kannadanewsnow09

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ, ಭಾರತದಲ್ಲಿ ಬಡತನವು 2011-12 ರಲ್ಲಿ ಶೇಕಡಾ 21.2 ರಿಂದ 2022-24 ರಲ್ಲಿ ಶೇಕಡಾ 8.5 ಕ್ಕೆ ಇಳಿಯುವ ನಿರೀಕ್ಷೆಯಿದೆ ಎಂದು ಆರ್ಥಿಕ ವ್ಯವಹಾರಗಳ ಥಿಂಕ್ ಟ್ಯಾಂಕ್ ಎನ್ಸಿಎಇಆರ್ನ ಸಂಶೋಧನಾ ಪ್ರಬಂಧ ತಿಳಿಸಿದೆ. ಎನ್ಸಿಎಇಆರ್ (ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್) ನ ಸೋನಾಲ್ಡೆ ದೇಸಾಯಿ ಬರೆದ ‘ಬದಲಾಗುತ್ತಿರುವ ಸಮಾಜದಲ್ಲಿ ಸಾಮಾಜಿಕ ಸುರಕ್ಷತಾ ಜಾಲಗಳ ಮರುಚಿಂತನೆ’ ಎಂಬ ಪ್ರಬಂಧವು ಭಾರತ ಮಾನವ ಅಭಿವೃದ್ಧಿ ಸಮೀಕ್ಷೆಯ (ಐಎಚ್ಡಿಎಸ್) ವೇವ್ 3 ಡೇಟಾ ಮತ್ತು ಐಎಚ್ಡಿಎಸ್ನ ಅಲೆ 1 ಮತ್ತು ಅಲೆ 2 ರ ಡೇಟಾವನ್ನು ಬಳಸುತ್ತದೆ. ಐಎಚ್ಡಿಎಸ್ನ ಸಂಶೋಧನೆಗಳ ಪ್ರಕಾರ… 2004-2005 ಮತ್ತು 2011-12ರ ನಡುವೆ ಬಡತನವು ಗಮನಾರ್ಹವಾಗಿ ಕಡಿಮೆಯಾಗಿದೆ (ತಲಾ ಅನುಪಾತ 38.6 ರಿಂದ 21.2 ಕ್ಕೆ) ಮತ್ತು ಸಾಂಕ್ರಾಮಿಕ ರೋಗದ ಸವಾಲುಗಳ ಹೊರತಾಗಿಯೂ 2011-12 ಮತ್ತು 2022-24 ರ ನಡುವೆ…

Read More

ನವದೆಹಲಿ: ಆರೋಪಗಳ ಗಂಭೀರತೆಯ ಹೊರತಾಗಿಯೂ ಪ್ರತಿಯೊಬ್ಬ ಆರೋಪಿಗೂ ತ್ವರಿತ ವಿಚಾರಣೆ ನಡೆಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪ ಹೊರಿಸಿ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು ವಿರೋಧಿಸಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency – NIA) ಯನ್ನು ತರಾಟೆಗೆ ತೆಗೆದುಕೊಂಡಿದೆ. “ನ್ಯಾಯವನ್ನು ಅಪಹಾಸ್ಯ ಮಾಡಬೇಡಿ… ನೀವು ರಾಜ್ಯ; ನೀವು ಎನ್ಐಎ… ಅವನು (ಆರೋಪಿ) ತಾನು ಮಾಡಿದ ಯಾವುದೇ ಅಪರಾಧವನ್ನು ತ್ವರಿತವಾಗಿ ವಿಚಾರಣೆ ನಡೆಸುವ ಹಕ್ಕನ್ನು ಹೊಂದಿದ್ದಾನೆ. ಅವನು ಗಂಭೀರ ಅಪರಾಧವನ್ನು ಮಾಡಿರಬಹುದು, ಆದರೆ ವಿಚಾರಣೆಯನ್ನು ಪ್ರಾರಂಭಿಸುವ ಬಾಧ್ಯತೆ ನಿಮ್ಮ ಮೇಲಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇಲ್ಲಿಯವರೆಗೆ, ಆರೋಪವನ್ನು ರೂಪಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಜೆ ಬಿ ಪರ್ಡಿವಾಲಾ ಅವರು ಆರೋಪಿ ಜಾವೇದ್ ಗುಲಾಮ್ ನಬಿ ಶೇಖ್ ಅವರಿಗೆ ಜಾಮೀನು ನೀಡುವಾಗ ಹೇಳಿದರು. 80 ಸಾಕ್ಷಿಗಳ ವಿಚಾರಣೆ ನಡೆಸಲು ಕೇಂದ್ರ ಸಂಸ್ಥೆ ಪ್ರಸ್ತಾಪಿಸಿದ್ದನ್ನು ಗಮನಿಸಿದ ನ್ಯಾಯಮೂರ್ತಿ…

Read More

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಮರಳಲು ವೇದಿಕೆ ಕಲ್ಪಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿ ಜೈಲು ಪಾಲಾದ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅಧಿಕಾರ ಗದ್ದುಗೆಗೆ ಏರಿದರು. ಇದೀಗ ಹೇಮಂತ್ ಸೊರೆನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಜೈಲಿನಿಂದ ಬಿಡುಗಡೆ ಕೂಡ ಆಗಿದ್ದಾರೆ. ಈ ಬೆನ್ನಲ್ಲೇ ಮತ್ತೆ ಜಾರ್ಖಂಡ್ ಸಿಎಂ ಸ್ಥಾನಕ್ಕೇರುವ ತಯಾರಿ ನಡೆಯುತ್ತಿದೆ. ಹಾಲಿ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಬುಧವಾರದಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಆ ಬಳಿಕ ಮತ್ತೆ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಸಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/guidelines-for-recruitment-under-article-371j-to-be-issued-soon/

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 ಜೆ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌…

Read More

ಶಿವಮೊಗ್ಗ: 2024-25 ನೇ ಸಾಲಿಗೆ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‍ಡಬ್ಲ್ಯುಬಿಸಿಐಎಸ್)ಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರು ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ. ರೈತರು ನೋಂದಾವಣೆಗೆ ಅವಶ್ಯ ದಾಖಲೆಯಾದ ಪ್ರಸ್ತುತ ಸಾಲಿನ ಪಹಣಿ (ಆರ್‍ಟಿಸಿ), ಬ್ಯಾಂಕ್ ಪಾಸ್‍ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್‍ಗಳಿಗೆ ಅಥವಾ ಸಮೀಪದ ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಗಳನ್ನು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ತಾಲ್ಲೂಕು ದೂರವಾಣಿ ಸಂಖ್ಯೆಗಳಾದ ಶಿವಮೊಗ್ಗ 08182-270415, ಭದ್ರಾವತಿ 08282-26239, ಶಿಕಾರಿಪುರ 08187-223544, ಸೊರಬ 08184-272112, ಸಾಗರ 08183-226193, ತೀರ್ಥಹಳ್ಳಿ 08181-228151, ಹೊಸನಗರ 08185-221364 ನ್ನು ಸಂಪರ್ಕಿಸುವುದು. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/update-mangaluru-landslide-one-worker-rescued/

Read More

ಶಿವಮೊಗ್ಗ: ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌ, ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ  ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬಗ್ಗೆ ಸಾಗರ ನಗರಸಭೆ ಆಯುಕ್ತ ನಾಗಪ್ಪ ಅವರು, ಅವರವರು ಹಲ್ಲೆ ಮಾಡ್ಕೊಂಡಿದ್ದಾರೆ. ಅವರೇ ಬಗೆ ಹರಿಸಿಕೊಳ್ಳುತ್ತಾರೆ ಅಂತ ಮಹಿಳಾ ಪೌರ ಕಾರ್ಮಿಕರ ಮೇಲೆ ಮೆಸ್ತ್ರಿ ನಾಗರಾಜ ಹಲ್ಲೆ ನಡೆಸಿದ್ರೂ ಕ್ರಮ ಕೈಗೊಳ್ಳದೇ ಉಡಾಫೆ ಉತ್ತರವನ್ನು ನೀಡಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ಕನ್ನಡ ನ್ಯೂಸ್ ನೌ ಸಂಪಾದಕರಾದಂತ ವಸಂತ ಬಿ ಈಶ್ವರಗೆರೆ ಅವರು, ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಆಯುಕ್ತರಾದಂತ ಹೆಚ್.ಕೆ.ನಾಗಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಪ್ರತಿಕ್ರಿಯೆ ಕೇಳಿದರು. ಅದಕ್ಕೆ ಉತ್ತರಿಸಿದಂತ ಅವರು, ಮೇಸ್ತ್ರಿ ನಾಗರಾಜ ಹಾಗೂ ಮಹಿಳಾ ಪೌರ ಕಾರ್ಮಿಕರಾದಂತ ಪಣಿಯಮ್ಮ ಅವರನ್ನು ಕರೆಸಿ ಕೇಳಲಾಗಿದೆ ಎಂದರು. ಇನ್ನೂ ಮುಂದುವರೆದು ಮಾತನಾಡಿದಂತ ಅವರು, ನಾನು ಕೇಳಿದಂತ ಸಂದರ್ಭದಲ್ಲಿ ನಾವು ನಾವೇ ಮಾಡಿಕೊಂಡಿದ್ದೇವೆ. ನಮ್ಮ ಜಗಳ ನಾವೇ ಪರಿಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. ನನಗೆ ಯಾರು…

Read More

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬುಧವಾರ (ಜೂನ್ 03, 2024) ಮನವಿ ಸಲ್ಲಿಸಿದ್ದಾರೆ. ಜಿಂದಾಲ್ ಭೂ ಅಕ್ರಮದಲ್ಲಿ ಸಾರ್ವಜನಿಕ ಹಿತಾಸಕ್ತಿ ಧಾವೆ ಹೂಡಿ, ಆಗಿನ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಕಾರಣರಾಗಿದ್ದ ಕೆ.ಎ.ಪಾಲ್ ನೇತೃತ್ವದ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಇದೀಗ ಈಗಿನ ಸಿ.ಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮೂಡಾ ಹಗರಣದ ಬಗ್ಗೆಯೂ ಕಾನೂನು ಸಮರಕ್ಕೆ ಮುನ್ನುಡಿ ಬರೆದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ…

Read More

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರ ವಿರುದ್ಧ ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಈ ಅರ್ಜಿಯ ವಿಚಾರಣೆ ನಡೆಸಿದರು. ಈ ವೇಳೆ ಶ್ರೀಕಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ನ್ಯಾಯಪೀಠಕ್ಕೆ ಶ್ರೀಕೃಷ್ಣ ವಿರುದ್ಧ ಸಂಘಟಿತ ಅಪರಾಧಗಳ ಕಾಯ್ದೆ ಅನ್ವಯವಾಗದೇ ಇದ್ದರೂ ಜಾಮೀನು ಸಿಗಬಾರದು ಅಂತ ದಾಖಲಿಸಿದ್ದಾರೆ ಪೊಲೀಸರು ಎಂಬುದಾಗಿ ಗಮನಕ್ಕೆ ತಂದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಶ್ರೀಕಿ ವಿರುದ್ಧ ದಾಖಲಿಸಲಾಗಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆ(KCOC) ಯಾಕೆ ದಾಖಲಿಸಿದ್ದಾರೆ ಅಂತ ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ. ಹೀಗಾಗಿ ಕೆಸಿಓಸಿ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೇ ಜಾಮೀನಿಗಾಗಿ ಸಂಬಂಧಿಸಿದಂತ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. https://kannadanewsnow.com/kannada/update-mangaluru-landslide-one-worker-rescued/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ನಿಯಂತ್ರಣಕ್ಕೆ ಮಹತ್ವದ ಕ್ರಮ ಎನ್ನುವಂತೆ ಡೆಂಗ್ಯೂ ಪರೀಕ್ಷೆಗೆ 300 ರೂ ದರ ನಿಗದಿ ಪಡಿಸಿ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ನಂತ್ರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳ ಜೊತೆಗೆ ನಡೆದಂತ ಸಭೆಯಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮವಾಗಿ ಪರೀಕ್ಷೆಗೆ ದರ ನಿಗದಿ ಪಡಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ಬಂದವರಿಗೆ ಎರಡು ಮಾದರಿಯ ಪರೀಕ್ಷೆ ಮಾಡಬೇಕಿದ್ದು, ಪ್ರತಿ ಟೆಸ್ಟ್ ಗೆ ರೂ.300 ನಿಗದಿ ಪಡಿಸೋದಕ್ಕೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಡೆಂಗ್ಯೂ ಪ್ರತಿ ಪರೀಕ್ಷೆಗೆ 300 ರೂ ನಿಗದಿ ಮಾಡಿ, ರಾಜ್ಯ ಸರ್ಕಾರ ಇಂದೇ ಅಧಿಕೃತ ಅಧಿಸೂಚನೆ ಪ್ರಕಟಿಸೋ ಸಾಧ್ಯತೆ ಇದೆ. ಆ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಅಧಿಸೀಚನೆ ಹೊರಡಿಸಲಿದೆ. https://kannadanewsnow.com/kannada/19-students-hospitalised-after-consuming-milk-mixed-with-malt-in-kolar/ https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/

Read More

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಲ್ಲದೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು. ಅವರ ನ್ಯಾಯಾಂಗ ಬಂಧನವನ್ನು ಜುಲೈ.18ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇನ್ನೂ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಂದಹಾಗೇ ಜೂನ್.22, 2024ರಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದೂರು ನೀಡಿದ್ದನು. ಆ ಬಳಿಕ ಜೂನ್.23ರಂದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು. https://kannadanewsnow.com/kannada/19-students-hospitalised-after-consuming-milk-mixed-with-malt-in-kolar/ https://kannadanewsnow.com/kannada/arvind-kejriwal-moves-delhi-high-court-for-bail-in-liquor-policy-scam-case/

Read More