Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಎರಡು ದಿನಗಳ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಸೋಲನ್ನು ಗೆಲುವು ಎಂದು ಬಿಂಬಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಅಣಕಿಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯ, ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿ ಭಾಷಣ ಮಾಡಿದಂತ ಅವರು, “ಇದು ಕಾಂಗ್ರೆಸ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಸೋಲು. ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡು ಜನರ ಆದೇಶವನ್ನು ಗೌರವಿಸಿದ್ದರೆ ಉತ್ತಮವಾಗಿತ್ತು, ಆದರೆ ಅವರು ಕೆಲವು ‘ಶೀರ್ಷಾಸನ’ ಮಾಡುವಲ್ಲಿ ನಿರತರಾಗಿದ್ದಾರೆ” ಎಂದು ಹೇಳಿದರು. “ಅವರು ಕೆಲವು ‘ಶೀರ್ಷಾಸನ’ ಮಾಡುವಲ್ಲಿ ನಿರತರಾಗಿದ್ದಾರೆ ಮತ್ತು ಕಾಂಗ್ರೆಸ್ ಮತ್ತು ಅದರ ಪರಿಸರ ವ್ಯವಸ್ಥೆಯು ನಮ್ಮನ್ನು ಸೋಲಿಸಿದ್ದೇವೆ ಎಂದು ಭಾರತದ ನಾಗರಿಕರ ಮನಸ್ಸಿನಲ್ಲಿ ಸ್ಥಾಪಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದರು. ಹೆಡ್ ಸ್ಟ್ಯಾಂಡ್ ಎಂದು ಕರೆಯಲ್ಪಡುವ ಯೋಗ ಭಂಗಿಯಾದ ‘ಶೀರ್ಷಾಸನ’ವು ರೂಪಕವಾಗಿ ತಲೆಕೆಳಗಾಗಿ ಅಥವಾ ವಿಕೃತ ಕ್ರಿಯೆಗಳನ್ನು ಸೂಚಿಸುತ್ತದೆ. ಈ ಕೃತ್ಯಗಳನ್ನು ಮಕ್ಕಳ ಗಮನವನ್ನು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜುಲೈ 2) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅವರನ್ನು “ಮಗು” ಎಂದು ಬಣ್ಣಿಸಿದರು. ರಾಹುಲ್ ಗಾಂಧಿಯನ್ನು ಗುರಿಯಾಗಿಸಲು ಶಾಲಾ ಮಗುವಿನ ಕಥೆಯನ್ನು ಉಲ್ಲೇಖಿಸಿದ ಅವರು, ವಿಫಲರಾಗುವ ಮೂಲಕ ಅವರು “ಹೊಸ ವಿಶ್ವ ದಾಖಲೆ” ಮಾಡಿದ್ದಾರೆ ಎಂದು ಹೇಳಿದರು. “1984ರ ಚುನಾವಣೆಯನ್ನು ನೆನಪಿಸಿಕೊಳ್ಳೋಣ. ಆ ಚುನಾವಣೆಗಳ ನಂತರ, ಈ ದೇಶದಲ್ಲಿ 10 ಲೋಕಸಭಾ ಚುನಾವಣೆಗಳು ನಡೆದವು, ಆದರೆ ಕಾಂಗ್ರೆಸ್ ಒಮ್ಮೆಯೂ 250 ರ ಗಡಿಯನ್ನು ದಾಟಲು ಸಾಧ್ಯವಾಗಲಿಲ್ಲ. ಈ ಬಾರಿ ಕಾಂಗ್ರೆಸ್ ಹೇಗೋ 99 ಸ್ಥಾನಗಳನ್ನು ಗಳಿಸಿದೆ. ಇದು ತಾನು 99 ಅಂಕಗಳನ್ನು ಪಡೆದಿದ್ದೇನೆ ಎಂದು ಎಲ್ಲರಿಗೂ ಹೇಳುತ್ತಿದ್ದ ಮಗುವನ್ನು ನೆನಪಿಸುತ್ತದೆ. ನಂತರ, ಆ ಮಗುವಿನ ಶಿಕ್ಷಕರು ಮಗುವಿಗೆ 543 ರಲ್ಲಿ 99 ಅಂಕಗಳನ್ನು ಪಡೆದಿದ್ದಾರೆ ಮತ್ತು 100 ರಲ್ಲಿ ಅಲ್ಲ ಎಂದು ಹೇಳಿದರು. ಆ ಮಗು ವಿಫಲವಾಗುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಅರ್ಥಮಾಡಿಕೊಳ್ಳಲು ಯಾರೂ…
ನವದೆಹಲಿ: ‘ವಿಕ್ಷಿತ ಭಾರತ’ಕ್ಕಾಗಿ ನಮ್ಮ ಸಂಕಲ್ಪವನ್ನು ಈಡೇರಿಸಲು ನಾವು ದಣಿವರಿಯದ, ಪ್ರಾಮಾಣಿಕ, ಬದ್ಧ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ನಾವು ಜನರಿಗೆ ಭರವಸೆ ನೀಡಲು ಬಯಸುತ್ತೇವೆ ಎಂಬುದಾಗಿ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದರು. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಮಾತನಾಡುತ್ತಾ ಸಂಸತ್ತಿನಲ್ಲಿ ಸಂವಿಧಾನದ ಪ್ರತಿಗಳನ್ನು ಪ್ರದರ್ಶಿಸಿದ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನವನ್ನು ಕೈಯಲ್ಲಿ ಹಿಡಿದಿರುವವರು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಲು ಅದನ್ನು ಬಳಸಲು ಸಾಧ್ಯವಿಲ್ಲ ಎಂದು ಹೇಳಿದರು. “ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯವನ್ನು ವಿವರಿಸಿದ್ದಾರೆ. ಗೌರವಾನ್ವಿತ ಮೇಡಂ ಅಧ್ಯಕ್ಷರು ಪ್ರಮುಖ ವಿಷಯಗಳನ್ನು ಎತ್ತಿದ್ದಾರೆ. ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಇದಕ್ಕಾಗಿ ನಾನು ರಾಷ್ಟ್ರಪತಿಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ…
ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಇಂದು, ನಾಳೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ತಿಳಿಸಿದೆ. ದಿನಾಂಕ 02-07-2024 ರಿಂದ ದಿನಾಂಕ 03-07-2024ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ರಾಜ್ಯದ ಜನರು ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದೆ. https://kannadanewsnow.com/kannada/several-feared-dead-in-stampede-at-religious-event-in-uttar-pradeshs-hathras/ https://kannadanewsnow.com/kannada/4000-crore-in-muda-golmaal-cm-r-ashoks-serious-allegations/
ಉತ್ತರ ಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಮತ್ತು ಅಪಘಾತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಂದು ಉತ್ತರ ಪ್ರದೇಶದ ಹತ್ರಾಸ್ ನ ರತಿಭಾನ್ಪುರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾದ ಪರಿಣಾಮ ಹಲವರು ಸಾವನ್ನಪ್ಪಿ, ಅನೇಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ನಂತರ ಮುಕ್ತಾಯದ ಸಮಯದಲ್ಲಿ ಕಾಲ್ತುಳಿತ ಉಂಟಾಯಿತು. ಈ ಘಟನೆಯಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ. ಈ ಮಕ್ಕಳು ಮತ್ತು ಮಹಿಳೆಯರನ್ನು ಚಿಕಿತ್ಸೆಗಾಗಿ ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. https://kannadanewsnow.com/kannada/white-topping-work-to-begin-soon-in-bbmp-limits-chief-commissioner-tushar-girinath/ https://kannadanewsnow.com/kannada/4000-crore-in-muda-golmaal-cm-r-ashoks-serious-allegations/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ ಭೂಮಿ ಪೂಜೆಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಅಂತರ್ ಇಲಾಖೆ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಟ್ ಟಾಪಿಂಗ್ ಅನ್ನು 15 ಪ್ಯಾಕೇಜ್ಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ಪೈಕಿ 13 ಪ್ಯಾಕೇಜ್ ಗಳು ಈಗಾಗಲೇ ಅಂತಿಮಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು ಪ್ಯಾಕೇಜ್ಗಳು ಸರ್ಕಾರದ ಹಂತದಲ್ಲಿದ್ದು, ಶೀಘ್ರ ಭೂಮಿ ಪೂಜೆ ನೆರವೇರಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಯಿತು. ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಸಂಬಂಧ ಜಲಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಕೇಬಲ್ಗಳು, ಗೇಲ್ ಗ್ಯಾಸ್ ಪೈಪ್ ಲೈನ್ ಗಳ ಬದಲವಾಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು. ಯಾವುದೇ ಇಲಾಖೆಯಾಗಲಿ ಈಗಲೇ ಸಮೀಕ್ಷೆ…
ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು ಎಂದರು. ಹಾಲಿನ ಸೊಸೈಟಿಗಳು ರೈತರ ಸಂಘಟನೆ ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು. ರೈತರಿಗೆ ನೆರವು ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ.…
ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು | Actor Darshan
ಬೆಂಗಳೂರು: ನನಗೆ ಜೈಲಿನಲ್ಲಿ ಇರೋಕೆ ಆಗ್ತಿಲ್ಲ. ನನಗೆ ಜಾಮೀನು ಕೊಡಿಸುವಂತೆ ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡುತ್ತಿರುವಂತ ನಟ ದರ್ಶನ್ ದುಂಬಾಲು ಬೀಳುತ್ತಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಟೆಲಿಪೋನ್ ಬೂತ್ ನಿಂದ ವಾರಕ್ಕೆ ಮೂರು ಬಾರಿ ಕರೆ ಮಾಡೋದಕ್ಕೆ ಜೈಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ತನ್ನ ಸರದಿಯಲ್ಲದೇ ಜೈಲಿನಲ್ಲಿರುವಂತ ಇತರೆ ಖೈದಿಗಳ ಪೋನ್ ಕರೆ ಮಾಡುವಂತ ಅವಕಾಶವನ್ನು ನಟ ದರ್ಶನ್ ಬಳಸಿಕೊಳ್ಳುತ್ತಿರೋದಾಗಿ ತಿಳಿದು ಬಂದಿದೆ. ಈವರೆಗೆ ತನ್ನ ಕುಟುಂಬಸ್ಥರಿಗೆ ಕರೆ ಮಾಡದಂತ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನ ಪೋನ್ ಬೂತ್ ನಿಂದ ಸ್ಯಾಂಡರ್ ವುಡ್ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡಿ, ನನಗೆ ಜಾಮೀನು ಕೊಡುವಂತೆ ದುಂಬಾಲು ಬೀಳುತ್ತಿದ್ದಾರೆ. ಹಗಲು-ರಾತ್ರಿ ನಿರ್ಮಾನಪಕರಿಗೆ ಕರೆ ಮಾಡಿ ನಟ ದರ್ಶನ್ ಜಾಮೀನಿಗೆ ಬೇಡಿಕೆ ಇಡುತ್ತಿರೋದಾಗಿ ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಅಕ್ಕ-ಪಕ್ಕದ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್.ಅಶೋಕ ಆರೋಪಿಸಿದ್ದಾರೆ. ದಲಿತರ…
ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು. ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು…












