Author: kannadanewsnow09

ಧಾರವಾಡ: ಜಿಲ್ಲೆಯ ನಾಗಲಾವಿಯ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಅಕ್ಟೋಬರ್ 3 ರಿಂದ 5, 2025ರವರೆಗೆ ನಡೆಯಲಿದೆ, ಭಕ್ತಾದಿಗಳ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ ರೈಲುಗಳಿಗೆ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆಗಳನ್ನು ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. 1. ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ-ಮಿರಜ್ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಿಗ್ಗೆ 11:33ಕ್ಕೆ ಆಗಮಿಸಿ, 11:35ಕ್ಕೆ ಹೊರಡಲಿದೆ. 2. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 7:58ಕ್ಕೆ ಬಂದು, 08:00ಕ್ಕೆ ಹೊರಡಲಿದೆ. 3. ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಾಯಂಕಾಲ 6:33ಕ್ಕೆ ಆಗಮಿಸಿ, 06:35ಕ್ಕೆ ಹೊರಡಲಿದೆ. 4. ರೈಲು ಸಂಖ್ಯೆ 17331 ಮಿರಜ್-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಮಧ್ಯಾಹ್ನ 12:25ಕ್ಕೆ ಆಗಮಿಸಿ, 12:27ಕ್ಕೆ ಹೊರಡಲಿದೆ. ಈ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ ಪ್ರಾರಂಭಿಸುವ ಪ್ರಯಾಣದಿಂದ…

Read More

ಮಂಡ್ಯ : ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ನಗರಸಭಾ ಕಛೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೆಲ್ದರ್ಜೆಗೆರಿಸಿದೆ. ಹೀಗಾಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಸರ್ಕಾರಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದ್ದು, ಇನ್ನು ಎರಡು ಮೂರು ತಿಂಗಳಲ್ಲಿ 50 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. ಸರ್ಕಾರವು ಇದು ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂಬುದಾಗಿ ವಾದಿಸಿತು. ಈ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರ ನಡೆಸುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದು ವಾದಿಸಿದರು. ಬಣಜಿಗ ಕ್ರಿಶ್ಚಿಯನ್, ಬೆಸ್ತರು ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಚೆರೋಡಿ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಗೊಲ್ಲ ಕ್ರಿಶ್ಚಿಯನ್ ಹೀಗೆ 35 ರಿಂದ 40 ಧರ್ಮ ಮಿಶ್ರಿತ ಜಾತಿಗಳನ್ನು ಗುರುತಿಸಿದ್ದಾರೆ. 2002ರ ಜಾತಿಗಳ ಅಧಿಸೂಚನೆಗೂ ಈಗಿನ ಜಾತಿಗಳ ಸಮೀಕ್ಷೆಗೂ…

Read More

ಬೆಂಗಳೂರು: ಬುದ್ದಿಮಾಂದ್ಯತೆ ಹೊಂದಿರುವ ಶೇ. 60ರಷ್ಟು ಜನರು ತಮ್ಮ ಇಳಿವಯಸ್ಸಿನಲ್ಲಿ ಅಲ್ಜೈಮರ್‌ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನರವಿಜ್ಞಾನ ಎಪಿಲೆಪ್ಟಾಲಜಿ ಮತ್ತು ಸ್ಲೀಪ್ ಮೆಡಿಸಿನ್‌ನ ಮುಖ್ಯಸ್ಥ ಮತ್ತು ಸಲಹೆಗಾರ ಡಾ. ಪ್ರಮೋದ್ ಕೃಷ್ಣನ್ ಹೇಳಿದ್ದಾರೆ. “ವಿಶ್ವ ಅಲ್ಜೈಮರ್ ದಿನ”ದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆ ಹಾಗೂ ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ #MemoryVault ಅಭಿಯಾನದ ಭಾಗವಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾವು ನೋಡಿದ ಎಲ್ಲಾ ಬುದ್ಧಿಮಾಂದ್ಯತೆಯ ರೋಗಿಗಳಲ್ಲಿ ಶೇ.60 ರಷ್ಟು ಜನರು ಆಲ್ಝೈಮರ್ ಕಾಯಿಲೆಗೆ ತುತ್ತಾಗಿದ್ದಾರೆ, ಇದರಲ್ಲಿ ಶೇ.70 ಕ್ಕಿಂತ ಹೆಚ್ಚು ಜನರು 2-3 ವರ್ಷಗಳ ರೋಗಲಕ್ಷಣದ ಕಂಡು ಬಂದ ಬಳಿಕ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಹೇಳಿದರು. “ಅಲ್ಜೈಮರ್ ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದರಿಂದ ಅದನ್ನು ಚಿಕಿತ್ಸೆಮಾಡಲು ಅವಕಾಶ ದೊರೆಯಲಿದೆ. CSF ಬಯೋಮಾರ್ಕರ್‌ಗಳಂತಹ ನಿಖರ ಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಧಾನಗೊಳಿಸುವ ಜೊತೆಗೆ ರೋಗಿಯ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು. ARDSI ಅಧ್ಯಕ್ಷೆ ರೇಣು ವೋಹ್ರಾ ಮಾತನಾಡಿ, ಅಲ್ಜೈಮರ್‌…

Read More

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು ಎಂದು ಟೀಕಿಸಿದರು. ಇದು ಹಿಂದುತ್ವ ವಿರೋಧ ನೀತಿ ಎಂದು ಆರೋಪಿಸಿದರು. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದು ಆಕ್ಷೇಪಿಸಿದರು. ಹೋರಾಟಗಳು ನಡೆದು ಪ್ರಭಾವಿ…

Read More

ದಕ್ಷಿಣ ಕನ್ನಡ: ಮಹೇಶ್ ಶೆಟ್ಟಿ ತಿಮರೋಡಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಎಸಿ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 32ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಿದ್ದಾರೆ.

Read More

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ರೈತರು ಬಳಕೆ ಮಾಡುವ ಟ್ರ್ಯಾಕ್ಟರ್‌, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು.…

Read More

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ಶೀಘ್ರವೇ ಗೃಹಲಕ್ಷ್ಮಿ ಹೆಸರಲ್ಲಿ ಸಹಕಾರ ಸಂಘಗಳ ಸ್ಥಾಪನೆ ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು…

Read More

ದೇಹದ ಪ್ರತಿಯೊಂದು ಜೀವಕೋಶಕ್ಕೂ ಪ್ರತಿಯೊಂದು ಅಂಗಕ್ಕೂ ಶಕ್ತಿ,ಪೋಷಕಾಂಶ, ಚೈತನ್ಯ ನೀಡುವುದು ಆಹಾರ.ಆಹಾರವು ವಿವಿಧ ಜೀವ ಕೋಶಗಳಿಗೆ ಪೋಷಕಾಂಶಗಳನ್ನು ನೀಡುವ ಮೊದಲು ಪೂರ್ವಭಾವಿಯಲ್ಲಿ ಜಾಠರಾಗ್ನಿಯ( Digestive fire) ಸಹಾಯದಿಂದ ಪಚನಗೊಂಡು,ಧಾತ್ವಗ್ನಿಯ ಸಹಕಾರದೊಂದಿಗೆ ಚಯಾಪಚಯನಗೊಳ್ಳುತ್ತದೆ(metabolism) ಮತ್ತು ಈ ಅಗ್ನಿಯು ಆಹಾರ ರಸವನ್ನು ಸಾರಭಾಗ ಅಂದರೆ ಪೋಷಣ ಭಾಗ ಮತ್ತು ಕಿಟ್ಟ ಭಾಗ (Waste) ವಾಗಿ ಬೇರ್ಪಡಿಸುತ್ತದೆ.ಸಾರಭಾಗವೂ ಜೀವಕೋಶಗಳಿಗೆ ಪೋಷಕಾಂಶ ನೀಡಿದರೇ, ಕಿಟ್ಟ ಭಾಗವು ಮಲಮೂತ್ರಾದಿಗಳ ಮುಖಾಂತರ ವಿಸರ್ಜನೆ ಆಗುತ್ತದೆ. ಆಯುರ್ವೇದದ ಪ್ರಕಾರ “ರೋಗಃ ಸರ್ವೇ ಅಪಿ ಮಂದಾಗ್ನೋ” ಅಂದರೆ ದುರ್ಬಲವಾದ ಅಗ್ನಿಯೇ ಎಲ್ಲಾ ರೋಗಗಳ ಉದ್ಭವಕ್ಕೆ ಕಾರಣ ಎಂದರ್ಥ. ಜಠರಾಗ್ನಿಯ ದುರ್ಬಲದಿಂದಾಗಿ ಸೇವಿಸಿದ ಆಹಾರ ಪರಿಪೂರ್ಣವಾಗಿ ಪಚನವಾಗದೆ ಅಪಕ್ವವಾದ ಆಹಾರ ರಸವು ಉತ್ಪತ್ತಿಯಾಗುತ್ತದೆ. ಈ ಅಪಕ್ವವಾದ ಆಹಾರ ರಸವನ್ನು “ಆಮ” ಎಂದು ಕರೆಯುತ್ತಾರೆ.ಈ ಆಮವು ತ್ರಿದೋಷಗಳಾದ ವಾತ,ಪಿತ್ತ, ಕಫ ದೋಷಗಳನ್ನು ಪ್ರಕೋಪಗೊಳಿಸಿ ರೋಗಗಳ ಉದ್ಭವಕ್ಕೆ ಕಾರಣವಾಗುತ್ತದೆ. ಅಗ್ನಿಯ ದುರ್ಬಲಕ್ಕೆ ಕಾರಣಗಳು : ಅತಿಯಾದ ತಣ್ಣನೆಯ ನೀರನ್ನು ಕುಡಿಯುವುದು. ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿಯನ್ನು…

Read More

ಬೆಂಗಳೂರು : ಜೈನ ಮಂದಿರಗಳ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ 1043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರುಗಳಿಗೆ 5 ಸಾವಿರ ರೂ. ವೇತನ ನೀಡಲಾಗುವುದು. ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆ ಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದರು.

Read More