Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನವೆಂಬರ್.18ರ ನಾಳೆ, ನವೆಂಬರ್.19ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ನಾಳೆ ಬೆಂಗಳೂರಿನ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಬೆಂಗಳೂರು: ಆಡುಗೋಡಿ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 18 ರಂದು (ಮಂಗಳವಾರ) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್ , ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ನಾಡಿದ್ದು…
ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಯನ್ನು ಸರ್ಕಾರ ರಚಿಸಿದೆ. ಈ ಅಕ್ಕ ಪಡೆಯು ನವೆಂಬರ್.19ರಿಂದ ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ. ಹೌದು.. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ʼಅಕ್ಕ ಪಡೆʼ ರೂಪಿಸಲಾಗಿದ್ದು, ನವೆಂಬರ್ 19 ರಿಂದ ಕಾರ್ಯಾರಂಭವಾಗಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆ ಕೂಡ ಸರ್ಕಾರ ಆರಂಭಿಸಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ 1098, 181 ಅಥವಾ 112ಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ. “ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಶಾಲಾ – ಕಾಲೇಜು, ಹಾಸ್ಟೆಲ್, ಮಾಲ್ಗಳು, ಜನನಿಬಿಡ ಪ್ರದೇಶಗಳಲ್ಲಿ ಅಕ್ಕ ಪಡೆ ವಾಹನ ಗಸ್ತು ತಿರುಗಲಿದೆ. ಮನೆಯಲ್ಲಿ, ನೆರೆ ಹೊರೆಯವರಿಂದ ತೊಂದರೆ ಅನುಭವಿಸುವ ಮಹಿಳೆಯರು ಸಹಾಯವಾಣಿ ಮೂಲಕ ಅಕ್ಕ ಪಡೆಯನ್ನು ಸಂಪರ್ಕಿಸಬಹುದು. ಪೊಲೀಸ್ ಇಲಾಖೆ ಹಾಗೂ ಎನ್ಸಿಸಿ ಸಹಯೋಗದಲ್ಲಿ ಈ ಪಡೆ ಕಾರ್ಯನಿರ್ವಹಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1990385915127361975 https://kannadanewsnow.com/kannada/here-is-the-official-complete-list-of-state-universal-limited-holidays-for-the-year-2026/ https://kannadanewsnow.com/kannada/shivamogga-minority-relatives-should-provide-good-education-to-their-children-mla-gopalakrishna-belur/
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕಟ್ಟಡದ ಮೇಲಿನಿಂದ ಪತಿಯನ್ನು ತಳ್ಳಿ, ಪತ್ನಿಯೊಬ್ಬರು ಕೊಲೆಗೈದ ಘಟನೆ ನಡೆದಿದೆ. ಬೆಂಗಳೂರಿನ ಆಂಧ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ವೆಂಕಟೇಶ್(65) ಎಂಬಾತನನ್ನು ಪತ್ನಿಯೇ ಕಟ್ಟಡದ ಮೇಲಿನಿಂದ ತಳ್ಳಿ ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಸೋದರ ಮಾವ ರಂಗಸ್ವಾಮಿ, ಮಗಳು ಪಾರ್ವತಿ ಸೇರಿ ಈ ಕೃತ್ಯವೆಸಗಿದ್ದಾರೆ. ಈ ಮೂಲಕ ಸೋದರ ಮಾವನ ಜೊತೆ ಸೇರಿ ಗಂಡನನ್ನೇ ಹೆಂಡ್ತಿ ಹತ್ಯೆ ಮಾಡಿದ್ದಾರೆ. 10 ವರ್ಷದ ಹಿಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದಂತ ವೆಂಕಟೇಶ್ ಮೊದಲ ಪತ್ನಿಯನ್ನು ಬಿಟ್ಟಿದ್ದನು. 6 ವರ್ಷಗಳ ಹಿಂದೆ ಪಾರ್ವತಿಯನ್ನು ಮದುವೆಯಾಗಿದ್ದನು. ಮನೆಯನ್ನು ತನ್ನ ಹೆಸರಿಗೆ ಬರೆಯುವಂತೆ ಪಾರ್ವತಿ ಗಲಾಟೆ ಮಾಡುತ್ತಿದ್ದರಂತೆ. ಮನೆಯಿಲ್ಲ ಅಂದ್ರೆ 6 ಲಕ್ಷ ಹಣ ಕೊಡುವಂತೆಯೂ ವೆಂಕಟೇಶ್ ಪತ್ನಿ ಪಾರ್ವತಿ ಪಟ್ಟು ಹಿಡಿದಿದ್ದರಂತೆ. ಆದರೇ ವೆಂಕಟೇಶ್ 2.5 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದನಂತೆ. ಇದೇ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಸೋದರ ಮಾವನ ಜೊತೆಗೆ ಸೇರಿಕೊಂಡು ಪತಿಯನ್ನೇ ಪತ್ನಿ ಕಟ್ಟಡದ ಮೇಲಿನಿಂದ…
ಪಾಟ್ನಾ: ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ಮತ್ತು ರಾಘೋಪುರದಿಂದ ಹೊಸದಾಗಿ ಆಯ್ಕೆಯಾದ ಶಾಸಕ ತೇಜಸ್ವಿ ಯಾದವ್ ಅವರು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. https://twitter.com/ANI/status/1990368342243508240 ರಾಘೋಪುರದ ಆರ್ಜೆಡಿ ಶಾಸಕ ತೇಜಸ್ವಿ ಯಾದವ್ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಹೀನಾಯ ಸೋಲು ಕಂಡಿತ್ತು. ಎನ್ ಡಿ ಎ ಭರ್ಜರಿ ಗೆಲುವು ಸಾಧಿಸಿ, ಸರ್ಕಾರ ರಚನೆಯ ತಯಾರಿಯಲ್ಲಿದೆ. https://kannadanewsnow.com/kannada/shivamogga-minority-relatives-should-provide-good-education-to-their-children-mla-gopalakrishna-belur/ https://kannadanewsnow.com/kannada/if-the-cabinet-is-expanded-d-k-shivakumar-will-be-punished-opposition-leader-r-ashoka/
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ? ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು. ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ…
ಶಿವಮೊಗ್ಗ : ಅಲ್ಪಸಂಖ್ಯಾತ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳು ಇಂಜಿನಿಯರ್, ವೈದ್ಯರು ಅಗಿ ಸಮಾಜದ ಉನ್ನತ ಸ್ಥಾನಕ್ಕೆ ತಲುಪುವ ವಾತಾವರಣ ಸೃಷ್ಟಿಸಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ಕರೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗ್ರೀನ್ ಎಂಬೆಸ್ಸಿ ಕಟ್ಟಡದಲ್ಲಿ ಸೋಮವಾರ ಅಂಜುಮನ್ ಎ ಸಾಗರ ಸಂಸ್ಥೆ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರ ಅನುದಾನ ಕೊಡುವುದು ಸ್ವಲ್ಪ ವಿಳಂಬವಾಗಬಹುದು. ಆದರೆ ನಿಮ್ಮ ಸಮಾಜದಲ್ಲಿ ಆರ್ಥಿಕವಾಗಿ ಸದೃಢರಾಗಿರುವವರು ಇಂತಹ ತರಬೇತಿ ಸಂಸ್ಥೆಗಳಿಗೆ ಸಹಕಾರ ನೀಡಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿ ಸಂಸ್ಥೆಗಳು ಶೇ.100ರಷ್ಟು ಫಲಿತಾಂಶ ಪಡೆಯುತ್ತಿರುವುದು ಗಮನಾರ್ಹ ಸಂಗತಿ ಎಂದರು. ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಮೊಟಕುಗೊಳಿಸಬೇಡಿ. ನಾನು ಜಾತಿಮತ ಪಂಥ ನೋಡಿ ರಾಜಕೀಯ ಮಾಡುವವನಲ್ಲ. ನನ್ನದು ಮಾನವ ಧರ್ಮಕ್ಕೆ ಆದ್ಯತೆ. ನಿಮ್ಮ ಸಂಸ್ಥೆಗೆ, ಶೈಕ್ಷಣಿಕ ಅಭಿವೃದ್ದಿಗೆ ಬೇಕಾದ ಅಗತ್ಯ ಸಹಕಾರ…
ನವದೆಹಲಿ: ಖಗೋಳ ಛಾಯಾಗ್ರಾಹಕ ಆಂಡ್ರ್ಯೂ ಮೆಕಾರ್ಥಿ ಅವರು ಸೂರ್ಯನನ್ನು ಮೀರಿ ಸ್ಕೈಡೈವರ್ ಬೀಳುತ್ತಿರುವಂತೆ ಕಾಣುವ ಕಾಸ್ಮಿಕ್ ಭ್ರಮೆಯನ್ನು ಚಿತ್ರಿಸಿದ್ದಾರೆ. ವೈಜ್ಞಾನಿಕ ಕಾಲ್ಪನಿಕ ಚಲನಚಿತ್ರವನ್ನು ಹೋಲುವ ಈ ಅತಿವಾಸ್ತವಿಕ ದೃಶ್ಯವನ್ನು ಅರಿಜೋನಾ ಮೂಲದ ಛಾಯಾಗ್ರಾಹಕ ಸೆರೆಹಿಡಿದಿದ್ದಾರೆ. ಅವರು ತಮ್ಮ ನಾಟಕೀಯ ಸೌರ ಚಿತ್ರಣಕ್ಕೆ ಹೆಸರುವಾಸಿಯಾಗಿದ್ದಾರೆ. ನವೆಂಬರ್ 8 ರ ಶನಿವಾರ, ಬೆಳಿಗ್ಗೆ 9 ಗಂಟೆಗೆ MST (ಬೆಳಿಗ್ಗೆ 11 ಗಂಟೆಗೆ EST), ಮೆಕಾರ್ಥಿ ಬೀಳುವ ಸ್ಕೈಡೈವರ್ ಅನ್ನು ಸೂರ್ಯನ ಉರಿಯುತ್ತಿರುವ ಡಿಸ್ಕ್ ವಿರುದ್ಧ ಸಂಪೂರ್ಣವಾಗಿ ಫ್ರೇಮ್ ಮಾಡುವಲ್ಲಿ ಯಶಸ್ವಿಯಾದರು. ನಂತರ ಅವರು ಬಹಿರಂಗಪಡಿಸಿದರು – ಅವರು “ದಿ ಫಾಲ್ ಆಫ್ ಇಕಾರ್ಸ್” ಎಂದು ಸೂಕ್ತವಾಗಿ ಹೆಸರಿಸಿದ ಈ ಶಾಟ್ “ಸಂಪೂರ್ಣವಾಗಿ ಅಸಂಬದ್ಧ” ಪ್ರಮಾಣದ ಯೋಜನೆಯನ್ನು ಬಯಸುತ್ತದೆ ಮತ್ತು ಅವರ ಮಾತಿನಲ್ಲಿ ಹೇಳುವುದಾದರೆ, “ಈ ರೀತಿಯ ಮೊದಲ ಫೋಟೋ ಆಗಿರಬಹುದು”. ಫ್ರೇಮ್ನಲ್ಲಿರುವ ಸ್ಕೈಡೈವರ್ ಯೂಟ್ಯೂಬರ್ ಮತ್ತು ಸಂಗೀತಗಾರ ಗೇಬ್ರಿಯಲ್ ಸಿ. ಬ್ರೌನ್, ಅವರು ಸುಮಾರು 3,500 ಅಡಿ (1,070 ಮೀಟರ್) ಎತ್ತರದಲ್ಲಿ ಸಣ್ಣ ಪ್ರೊಪೆಲ್ಲರ್…
ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹಿತರಕ್ಷಣಾ ಸಮಿತಿ ಭರ್ಜರಿ ತಯಾರಿ: 33 ಅಭ್ಯರ್ಥಿಗಳು ಕಣಕ್ಕೆ
ಶಿವಮೊಗ್ಗ : ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ನಮ್ಮ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಒಟ್ಟು 33 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ಸಮಿತಿ ಸಂಚಾಲಕ ಎಂ.ಡಿ.ಆನoದ್ ತಿಳಿಸಿದ್ದಾರೆ. ಈ ಮೂಲಕ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಕಣಕ್ಕೆ ಹಿತರಕ್ಷಣಾ ಸಮಿತಿ ಧುಮುಕೋದನ್ನು ಖಚಿತ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾರದರ್ಶಕ ಹಾಗೂ ದೇವಸ್ಥಾನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಲು ಆಸಕ್ತಿ ಇರುವ ನಮ್ಮ ತಂಡಕ್ಕೆ ಮತದಾರರು ಬೆಂಬಲ ನೀಡಬೇಕು. ಹಾಲಿ ಸಮಿತಿ 13 ವರ್ಷಗಳಿಂದ ಅನಧಿಕೃತವಾಗಿ ಆಡಳಿತ ನಡೆಸಿಕೊಂಡು ಬರುತ್ತಿದೆ. ಲೆಕ್ಕಪತ್ರವನ್ನು ಪಾರದರ್ಶಕವಾಗಿ ಇರಿಸಿರಲಿಲ್ಲ. ಇದೀಗ ಮತ್ತೆ ಚುನಾವಣೆ ನಿಲ್ಲಲು ಹಾಲಿ ಅಧ್ಯಕ್ಷ ನಾಗೇಂದ್ರ ಕೆ.ಎನ್. ಮತದಾರರಿಗೆ ಫೋನ್ ಮೂಲಕ ಬೆಂಬಲ ಯಾಚನೆ ಮಾಡುತ್ತಿದ್ದಾರೆ ಎಂಬುದಾಗಿ ಹೇಳಿದರು. 13 ವರ್ಷ ಆಡಳಿತ ನಡೆಸಿ, ನಾಲ್ಕು ಜಾತ್ರೆ ಮಾಡಿದರೂ ಮತ್ತೆ ನಾಗೇಂದ್ರ ಮತ್ತವರ ತಂಡ…
ತುಮಕೂರು: ಮಧುಗಿರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥದ ಶಂಕು ಸ್ಥಾಪನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಈ ಬಳಿಕ ಮಾತನಾಡಿದ ಅವರು, ದೇಶದಲ್ಲಿಯೇ ಅತೀ ಹೆಚ್ಚು ಸ್ವಯಂ ಚಾಲಿತ ಚಾಲನಾ ಪಥವನ್ನು ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ 7 ಟ್ರ್ಯಾಕ್ ಚಾಲನೆಯಲ್ಲಿವೆ. ಈ ವರ್ಷ 10 ಟ್ರ್ಯಾಕ್ ಪ್ರಾರಂಭವಾಗಿದೆ. 28 ಟ್ರ್ಯಾಕ್ ಗಳ ಕಾರ್ಯ ಮುಗಿಯುವ ಹಂತದಲ್ಲಿದೆ. ಒಟ್ಟು 45 ಟ್ರ್ಯಾಕ್ ಗಳು ರಾಜ್ಯದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದರು. ಮಧುಗಿರಿಯಲ್ಲಿ 3.14 ಎಕರೆ ವಿಸ್ತೀರ್ಣ ದಲ್ಲಿ ರೂ.11.50 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥ ಮತ್ತು ಸಾರಿಗೆ ಅಧಿಕಾರಿಗಳ ಕಛೇರಿ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಸಾರಿಗೆ ಬಸ್ ನಿಲ್ದಾಣ ನವೀಕರಣಕ್ಕೆ ಆದ್ಯತೆ ಹಾಗೂ ತಾಲ್ಲೂಕಿಗೆ ಮತ್ತಷ್ಟು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು…
ಬೆಂಗಳೂರು: ಡಿಸೇಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಸೌದಿ ಅರೇಬಿಯಾದಲ್ಲಿ ಕನ್ನಡಿಗ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಡೀಸೆಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಧಗಧಗಿಸಿ ಹೊತ್ತಿ ಬಸ್ ಉರಿದಿತ್ತು. ಈ ಅಪಘಾತದಲ್ಲಿ 45 ಭಾರತೀಯರು ಸಜೀವ ದಹನವಾಗಿದ್ದರು. ಡೀಸೆಲ್ ಟ್ಯಾಂಕರ್, ಬಸ್ ನಡುವಿನ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಪಾಸ್ ಪೋರ್ಟ್ ನಲ್ಲಿ ಕರ್ನಾಟಕದ ಹುಬ್ಬಳ್ಳಿಯ ವಿಳಾಸವಿರುವುದಾಗಿ ಹೇಳಲಾಗುತ್ತಿದೆ. ಸೌದಿ ಅರೇಬಿಯಾ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ವ್ಯಕ್ತಿಯ ಮೂಲ ಪತ್ತೆಗೆ ಹೈದರಾಬಾದ್ ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/power-outages-in-these-areas-of-sagar-nagar-tomorrow-due-to-road-widening-work/ https://kannadanewsnow.com/kannada/high-court-quashes-deportation-order-against-mahesh-shetty-timarodi/














