Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ನಗರದಲ್ಲಿನ ಫ್ರೀಡಂ ಪಾರ್ಕ್ ಗೆ ಈವರೆಗೆ ಯಾವುದೇ ಹೆಸರಿಟ್ಟಿರಲಿಲ್ಲ. ಇಂತಹ ಪಾರ್ಕಿಗೆ ಅಲ್ಲಮ ಪ್ರಭು ಅವರ ಹೆಸರಿಡೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಅಲ್ಲಮಪ್ರಭು ಅವರಿಂದಲೇ ಇಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು: ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು ಇಡೋದಾಗಿ ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು. ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು. https://kannadanewsnow.com/kannada/ksrtc-bus-bike-collision-in-kalaburagi-two-riders-killed-on-the-spot/ https://kannadanewsnow.com/kannada/pm-modi-cleans-kalaram-temple-premises-in-nashik/
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಂತ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಏನಿದು ಯುವನಿಧಿ ಯೋಜನೆ.? ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ…
ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2000 ನೀಡುತ್ತಿರುವುದು ಸತ್ಯವಲ್ಲವೇ ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಬೇಧವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವಾದುದನ್ನು ಬರೆಯಬೇಕು ಎಂದರು. ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬ ಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ…
ಶಿವಮೊಗ್ಗ : ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ಮಾಡುತ್ತಿರುವ ರಾಜಕೀಯವನ್ನು ವಿರೋಧಿಸುತ್ತೇನೆ. ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದರು. ಮೂವರು ಡಿಸಿಎಂ: ಚರ್ಚಿಸುವುದಿಲ್ಲ ಮೂರು ಡಿಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು. ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ ಗ್ಯಾರಂಟಿ…
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿಯಾಗಿರುವಂತ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಬಳಿಕ ರಾಜ್ಯದ ಡಿಪ್ಲೋಮಾ, ಪದವೀಧರ ನಿರುದ್ಯೋಗಿ ಫಲಾನುಭವಿಗಳಿಗೆ ಇಂದೇ ಬ್ಯಾಂಕ್ ಖಾತೆಗೆ ಯೋಜನೆ ಹಣ ಜಮಾ ಆಗಲಿದೆ. ಯುವನಿಧಿಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆಯನ್ನು ಬಿಡಿಸುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಅಲ್ಲದೇ ರಾಷ್ಟ್ರೀಯ ಯುವದಿನವಾದಂತ ಇಂದು ಸ್ವಾಮಿ ವಿವೇಕಾನಂದ ಅವರ ಪೋಟೋಗೆ ಪುಷ್ಪಾರ್ಚನೆ ಮಾಡುವ ಮೂಲಕ ಯುವನಿಧಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡೋದಕ್ಕೆ ಚಾಲನೆಗೊಳಿಸಿದರು. ಏನಿದು ಯುವನಿಧಿ.? ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗಿದೆ. ಇದು ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು…
ಕೊಲ್ಲಾಪುರ: ಶಿವಸೇನೆ ಪುಂಡರ ಪುಂಡಾಟ ಮತ್ತೆ ಕರ್ನಾಟಕದ ಗಡಿ ಭಾಗವಾದಂತ ಬೆಳಗಾವಿಯಲ್ಲಿ ಮುಂದುವರೆದಿದೆ. ಕನ್ನಡ ಬೋರ್ಡ್ ಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಶಿವಸೇನೆ ಪುಂಡರು ಪುಂಡಾಟ ಮೆರೆದಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಬೆಳಗಾವಿ ಮಹಾರಾಷ್ಟ್ರ ಸೇರಲಿದೆ. ಆಗ ಕನ್ನಡ ಬೋರ್ಡ್ ತೆಗೆದು ಹಾಕಿ ಮರಾಠಿ ಬೋರ್ಡ್ ಹಾಕೋದಾಗಿ ಶಿವಸೇನೆ ಮುಖಂಡ ಸಂಜಯ್ ಪರಾವ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಜ್ಯಾಧ್ಯಂತ ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಕಾರಣ, ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ತೆಗೆದು ಕನ್ನಡ ಬೋರ್ಡ್ ಗಳನ್ನು ಹಾಕುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಶೇ.60ರಷ್ಟು ಕನ್ನಡವಿರುವಂತ ಬೋರ್ಡ್ ಗಳನ್ನು ಬೆಳಗಾವಿಯಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಅಳವಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇಂತಹ ಕ್ರಮದ ವಿರುದ್ಧ ಸಿಡಿದೆದ್ದಿರುವಂತ ಶಿವಸೇನೆಯ ಉದ್ಧವ್ ಠಾಕ್ರೆ ಬಣವು, ಬೆಳಗಾವಿ ಗಡಿಯಾದಂತ ಕೊಲ್ಲಾಪುರದಲ್ಲಿ ಕನ್ನಡ ಬೋರ್ಡ್, ನಾಮಫಲಕವನ್ನು ಕಿತ್ತು ಹಾಕಿ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿರೋದಾಗಿ ತಿಳಿದು ಬಂದಿದೆ. ಕನ್ನಡ ಬೋರ್ಡ್, ಫಲಕಗಳನ್ನು ಧ್ವಂಸಗೊಳಿಸಿರುವಂತ ಶಿವಸೇನೆಯ…
ಬೆಂಗಳೂರು: ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಸಿಸಿಬಿ ಅಧಿಕಾರಿಗಳಿಂದ ಎನ್.ಡಿ.ಪಿ.ಎಸ್ ಕಾಯ್ದೆಯ ಅಧ್ಯಾಯ 5(ಎ) ಕಲಂ. 68(ಇ) & (ಎಫ್) ರಲ್ಲಿನ ಅಧಿಕಾರವನ್ನು ಚಲಾಯಿಸಿ ವಿದೇಶಿ ಡ್ರಗ್ ಪೆಡ್ಲರ್ನು ಅಕ್ರಮವಾಗಿ ಗಳಿಸಿದ್ದ ಕೆ 12 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023ನೇ ಸಾಲಿನ ನವೆಂಬರ್ ತಿಂಗಳಲ್ಲಿ ಬೆಂಗಳೂರು ನಗರ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದರು. ಈತನು ರೂಢಿಗತ ವಿದೇಶಿ ಡಗ್ ಪೆಡ್ಲರ್ ಆಗಿರುತ್ತಾನೆ. ಈತನ ಬಳಿ ನಗದು ಹಣ ಮತ್ತು ವಿವಿಧ ಬ್ಯಾಂಕ್ಗಳ ಪಾಸ್ುಕ್, ಡೆಬಿಟ್ ಕಾರ್ಡ್ಗಳು ಇರುವ ಬಗ್ಗೆ ಮಾಹಿತಿಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಂಗ್ರಹಿಸಿದ್ದರು. ಈ ಕುರಿತು ಪ್ರಕರಣದ ತನಿಖೆಯನ್ನು ಮುಂದುವರಿಸಿರುತ್ತಾರೆ ಎಂದಿದ್ದಾರೆ. ತನಿಖಾ ಕಾಲದಲ್ಲಿ ಈ ವಿದೇಶಿ ಡಗ್ ಪೆಡ್ಲರ್ನ ಪತ್ನಿಯ ಎರಡು ಬ್ಯಾಂಕ್ ಖಾತೆಯಿಂದ ಕ 2,55,050/- ಎರಡು ಲಕ್ಷದ ಐವತ್ತೈದು ಸಾವಿರದ ಐವತ್ತು ರೂಪಾಯಿಗಳು) ಹಾಗೂ ಇತರೆ ಹೆಸರಿನಲ್ಲಿದ್ದ 05 ಬ್ಯಾಂಕ್…
ಬೆಂಗಳೂರು: ದಿನೇ ದಿನೇ ವಾಟ್ಸಾಪ್ ಬಳಕೆ ಹೆಚ್ಚುತ್ತಿದ್ದಂತೆ, ಅದರೊಟ್ಟಿಗೆ ಕ್ರೈಂಗಳು ಕೂಡ ಹೆಚ್ಚಾಗುತ್ತಿವೆ. ನೀವು ವಾಟ್ಸಾಪ್ ಬಳಕೆ ಮಾಡ್ತಿದ್ದರೇ, ಏನಾದ್ರೂ ಲೈಂಗಿಕ ವಂಚನೆ ಕೃತ್ಯ ಎಸಗಿದ್ರೇ ನಿಮ್ಮನ್ನು ಬಂಧಿಸೋದು ಗ್ಯಾರಂಟಿ. ಸೋ ಎಚ್ಚರಿಕೆ ವಹಿಸೋದು ಮರೆಯಬೇಡಿ. ಅದ್ಯಾಕೆ.? ಹೇಗೆ ಅಂತ ಮುಂದೆ ಸುದ್ದಿ ಓದಿ. ಬೆಂಗಳೂರು ನಗರ ಉತ್ತರ ವಿಭಾಗ, ಸಿ.ಇ.ಎನ್. ಕ್ರೈಂ ಪೊಲೀಸ್ ಠಾಣೆಗೆ ಪಿರಾದುದಾರರು ದಿನಾಂಕ: 01-11-2023 ರಂದು ಹಾಜರಾಗಿ ದೂರನ್ನು ನೀಡಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಕೆನರಾ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಯಾರೋ ಅಪರಿಚಿತರು ಅನಿತಾ ಎಂಬ ಹುಡುಗಿ ಹೆಸರಿನಲ್ಲಿ ಒಂದು ಮೊಬೈಲ್ ನಂಬರಿನ ಮೂಲಕ ದೂರುದಾರರನ್ನು ಸಂಪರ್ಕಿಸಿರುತ್ತಾರೆ. ಈ ರೀತಿ ಒಂದು ತಿಂಗಳಿನಿಂದ ದೂರುದಾರರಿಗೆ ಕರೆ ಮಾಡಿ ಅನೈತಿಕ ಸಂಬಂಧದ ಸಂದೇಶವನ್ನು ಕಳುಹಿಸಿರುತ್ತಾರೆ. ನಂತರ ಅನೈತಿಕ ಸಂಬಂಧದಲ್ಲಿರುವ ಸಂದೇಶಗಳನ್ನು ವೈರಲ್ ಮಾಡುವುದಾಗಿ ದೂರುದಾರರಿಗೆ ಬೆದರಿಸಿ, ಹಂತ ಹಂತವಾಗಿ ಒಟ್ಟು 1,10,000/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆಂದು ನೀಡಿದ ದೂರನ್ನು ಪಡೆದು ಐ.ಟಿ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ…
ಬೆಂಗಳೂರು: ನಗರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು, ರೀ ಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಬರೋಬ್ಬರಿ 33 ಲಕ್ಷ ಮೌಲ್ಯದ 290 ಸಿಲಿಂಡರ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ಸಿಟಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರದ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ಸರಹದ್ದಿನಲ್ಲಿರುವ ನಂ. 20. ಶ್ರೀ. ಮಂಜುನಾಥ ಎಂಟರ್ಪ್ರೈಸೆಸ್ ಅಂಗಡಿಯ ಮಾಲಿಕ, ಮತ್ತು ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನ ಅಣ್ಣಯ್ಯರೆಡ್ಡಿ ಲೇಔಟ್ನ ಮತ್ತೋರ್ವನ ಮನೆಯ ಹಿಂಭಾಗದಲ್ಲಿ ಗೃಹಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡಿರುವ ಬಗ್ಗೆ ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸಿ, ದಾಳಿ ನಡೆಸಿರುತ್ತಾರೆ ಎಂದು ತಿಳಿಸಿದೆ. ದಾಳಿಯ ಸಮಯದಲ್ಲಿ ಪರವಾನಗಿ ಇಲ್ಲದೆ ಜನವಾಸದ ಸ್ಥಳದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಅನುಸರಿಸದೇ ರೀಫಿಲ್ಲಿಂಗ್ ಮಾಡುತ್ತಿರುತ್ತಾರೆ. ಈ ರೀತಿ ರೀಫಿಲ್ಲಿಂಗ್ ಮಾಡುವುದರಿಂದ, ಅಗ್ನಿ…
ಬೆಂಗಳೂರು: ನಗರದ ಟಿ-20 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್ಚಿನ ಸಾರಿಗೆ ಸೌಲಭ್ಯಗಳನ್ನು BMTC ಕಲ್ಪಿಸಿದೆ. ಈ ಮೂಲಕ ಬೆಂಗಳೂರಿನ ಟಿ20 ಪ್ರಿಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 17.01.2024 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ-20 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಮೇಲ್ಕಂಡ ದಿನಾಂಕದಂದು ಬೆಂ.ಮ.ಸಾ.ಸಂಸ್ಥೆಯು ಹೆಚ್ಚುವರಿ ಸಾರಿಗೆ ಸೇವೆಗಳನ್ನು ಕಾರ್ಯಾಚರಿಸಲಿದ್ದು, ವಿವರ ಕೆಳಕಂಡಂತಿದೆ ಎಂದು ಹೇಳಿದೆ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ SBS-1K ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಕಾಡುಗೋಡಿ ಬಸ್ ನಿಲ್ದಾಣ ಹೆಚ್.ಎ.ಎಲ್ ರಸ್ತೆ SBS-13K ಕಾಡುಗೋಡಿ ಬಸ್ ನಿಲ್ದಾಣ ಹೂಡಿ ರಸ್ತೆ G-2 ಸರ್ಜಾಪುರ ಅಗರ, ದೊಮ್ಮಸಂದ್ರ…