Author: kannadanewsnow09

ನವದೆಹಲಿ: ಕೇಂದ್ರ ಸರ್ಕಾರದಿಂದ 1989ರ ಬ್ಯಾಚ್ ನ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. 1989ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿಯಾಗಿರುವ ಅವರು, ಮೂವರು ಪ್ರಧಾನ ಮಂತ್ರಿಗಳ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಿಸ್ರಿ ಅವರು 1997ರಲ್ಲಿ ಇಂದರ್ ಕುಮಾರ್ ಗುಜ್ರಾಲ್, 2012ರಲ್ಲಿ ಮನಮೋಹನ್ ಸಿಂಗ್ ಮತ್ತು 2014ರಲ್ಲಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1964 ರಲ್ಲಿ ಶ್ರೀನಗರದಲ್ಲಿ ಜನಿಸಿದ ಮಿಸ್ರಿ ತಮ್ಮ ಆರಂಭಿಕ ಶಿಕ್ಷಣವನ್ನು ಗ್ವಾಲಿಯರ್ನಲ್ಲಿ ಪೂರ್ಣಗೊಳಿಸಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನಿಂದ ಇತಿಹಾಸದಲ್ಲಿ ಪದವಿ ಪದವಿ ಮತ್ತು ಎಕ್ಸ್ಎಲ್ಆರ್ಐನಿಂದ ಎಂಬಿಎ ಪದವಿ ಪಡೆದಿದ್ದಾರೆ. ಮಿಸ್ರಿ ಅವರು ಭಾರತೀಯ ವಿದೇಶಾಂಗ ಸೇವೆಯ 1989 ರ ಬ್ಯಾಚ್ನಿಂದ ರಾಜತಾಂತ್ರಿಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ತಮ್ಮ ಆರಂಭಿಕ ವರ್ಷಗಳಲ್ಲಿ, ಅವರು ಬ್ರಸೆಲ್ಸ್ ಮತ್ತು ಟ್ಯುನಿಸ್ನಲ್ಲಿನ ಭಾರತೀಯ ಮಿಷನ್ಗಳಲ್ಲಿ ಸೇವೆ ಸಲ್ಲಿಸಿದರು.…

Read More

ನವದೆಹಲಿ: ಮನಿ ಲಾಂಡರಿಂಗ್ ಆರೋಪದ ಮೇಲೆ ಬಂಧಿಸಲ್ಪಟ್ಟ ಆರು ತಿಂಗಳ ನಂತರ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದ ನಂತರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸೊರೆನ್ ಅವರು 8.36 ಎಕರೆ ಭೂಮಿಯನ್ನು ಅಕ್ರಮವಾಗಿ ಹೊಂದಿರುವುದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸೊರೆನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಜನವರಿ 31 ರಂದು ಅವರನ್ನು ಬಂಧಿಸಲಾಯಿತು. ನೀಟ್ ಸೋಲಿನಿಂದ ದೇಶವು ತಲ್ಲಣಗೊಂಡಿರುವ ಸಮಯದಲ್ಲಿ, ಪ್ರತಿಪಕ್ಷಗಳು ಇಂದು ಈ ವಿಷಯದ ಬಗ್ಗೆ ಚರ್ಚೆಯ ಬೇಡಿಕೆಯನ್ನು ಎತ್ತುವ ನಿರೀಕ್ಷೆಯಿತ್ತು. ಆದಾಗ್ಯೂ, ಲೋಕಸಭೆಯನ್ನು ಸೋಮವಾರಕ್ಕೆ ಮತ್ತು ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ವಿರೋಧ ಪಕ್ಷದ ಸಂಸದರು ಇಂದು ಉಭಯ ಸದನಗಳಲ್ಲಿ ಮುಂದೂಡಿಕೆ ನಿರ್ಣಯಗಳನ್ನು ಮಂಡಿಸಲು ನಿರ್ಧರಿಸಿದ್ದರು. ಗುರುವಾರ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮುರ್ಮು, ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆಯನ್ನು ಖಚಿತಪಡಿಸಿದ್ದರು. ಏತನ್ಮಧ್ಯೆ, ಇಂದು ಬೆಳಿಗ್ಗೆ ದೆಹಲಿಯಲ್ಲಿ ಭಾರಿ ಮಳೆಯಾಗಿದ್ದು, ದೆಹಲಿ…

Read More

ಬೆಂಗಳೂರು: ಬಹುರಾಜ್ಯಗಳಿಗೆ ವಿಸ್ತರಿಸಿರುವ ಬೃಹತ್ ಮೊತ್ತದ ವಾಲ್ಮೀಕಿ ನಿಗಮದ ಹಗರಣದ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಹಾಗೂ ಇದರ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಇಲಾಖೆ ವ್ಯಾಪ್ತಿಯಲ್ಲಿ ನಡೆದ ಬಹುದೊಡ್ಡ ಹಗರಣ ಇದಾಗಿದೆ. 100ಕ್ಕೆ ನೂರರಷ್ಟು ಹಣ ವರ್ಗಾಯಿಸಿ ಲೂಟಿ ಮಾಡಿದ ಹಗರಣ. ಈ ಹಗರಣದಲ್ಲಿ ಸಿಎಂ ನೈತಿಕತೆ ಪ್ರಶ್ನೆ ಬರುವ ಕಾರಣ ಹೊಣೆ ಹೊರಲು ಕೇಳಿದ್ದೆವು. ಆದರೆ, ಅವರು ವಿಷಯಾಂತರ ಮಾಡುತ್ತಾರೆ ಎಂದು ಆಕ್ಷೇಪಿಸಿದರು. ಈ ಸಂಬಂಧ ಇವತ್ತು ಚಳವಳಿ ನಡೆಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದೇವೆ ಎಂದರು. ಸರಕಾರದ ತನಿಖೆಯ ಬಗ್ಗೆ ನಮಗೆ ಸಂಶಯ ಇದೆ. ಇದು ಬಹುರಾಜ್ಯಗಳಿಗೆ ಸಂಬಂಧಿಸಿದ ಹಗರಣ. ಆಪಾದಿತರು ಆಂಧ್ರ, ತೆಲಂಗಾಣಕ್ಕೂ ಸೇರಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಸಿಬಿಐ ತನಿಖೆ ಕೋರಿ ಪತ್ರ…

Read More

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಪರಮೇಶ್ವರ್ ರೀತಿಯಲ್ಲೇ ಡಿ.ಕೆ ಸುರೇಶ್ ಅವರನ್ನು ಸಿಎಂ ಸಿದ್ಧರಾಮಯ್ಯ ಸೋಲಿಸಿದ್ದಾರೆ ಎಂಬುದಾಗಿ ಗಂಭೀರ್ ಆರೋಪ ಮಾಡಿದರು. ಡಿ.ಕೆ ಶಿವಕುಮಾರ್ ಅವರು ಸಿಎಂ ಸ್ಥಾನ ಕೇಳ್ತಾರೆ ಎಂದೇ ಡಿ.ಕೆ ಸುರೇಶ್ ಅವರನ್ನು ಸೋಲಿಸಲಾಗಿದೆ. ಆದರೇ ಡಿ.ಕೆ ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಸ್ವಾಮೀಜಿಗಳ ಮೂಲಕ ಸಿಎಂ ಸ್ಥಾನಕ್ಕೆ ಬೇಡಿಕೆ ಇಡಿಸಿದ್ದಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು, ಹಣ ದುರುಪಯೋಗ ಆಗಿದೆ ಎಂದು ಆರೋಪಿಸಿದರು. ಬಾರ್‍ನಲ್ಲಿ ಕುಳಿತು ಕುಡಿದ ಬಿಲ್ ಅನ್ನು ವಾಲ್ಮೀಕಿ ನಿಗಮದಿಂದ ಪಡೆದು ದುರುಪಯೋಗ ಮಾಡಿದ್ದಾರೆ. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ ಅನೇಕ ಅಭಿವೃದ್ಧಿ ನಿಗಮಗಳನ್ನು ಮಾಡಿದ್ದಾರೆ. ಅದೇರೀತಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪಿಸಿ, ನೂರಾರು ಕೋಟಿ ರೂಪಾಯಿ ಕೊಟ್ಟು ವಾಲ್ಮೀಕಿ ಸಮುದಾಯ, ಬಡ ಮಕ್ಕಳಿಗೆ ನ್ಯಾಯ ದೊರಕಿಸಲು ಶ್ರಮಿಸಿದ್ದರು ಎಂದರು. ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ತನಿಖೆಗೆ ಕರೆದಿಲ್ಲ ಎಂದು ಆಕ್ಷೇಪಿಸಿದರು. ಇದು ಕೇವಲ…

Read More

ನವದೆಹಲಿ: ಕಾಂಗ್ರೆಸ್ ಸಂಸದೆ ಫುಲೋ ದೇವಿ ನೇತಮ್ ಅವರು ಶುಕ್ರವಾರ ಸಂಸತ್ತಿನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಮೂರ್ಛೆ ಹೋದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನೀಟ್ ವಿಷಯದ ಬಗ್ಗೆ ಅವರು ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅವರಿಗೆ ತಲೆತಿರುಗಲು ಪ್ರಾರಂಭಿಸಿತು. ಆಕೆಯನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/

Read More

ಬೆಂಗಳೂರು: ವಿದ್ಯುತ್ ನಿರ್ವಹಣ ಕಾಮಗಾರಿ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.06.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut “ಜೈ ಭೂವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋq, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ,…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತರಾವರಿ ಕಾಮೆಂಟ್ ಗಳು ತೋರಿ ಬರುತ್ತಿವೆ. ಹೀಗಾಗಿ ದಯವಿಟ್ಟು ಕೆಟ್ಟದಾಗಿ ನಟ ದರ್ಶನ್ ಬಗ್ಗೆ ಕಾಮೆಂಟ್ ಮಾಡದಂತೆ ನಟಿ ಸೋನುಗೌಡ ಮನವಿ ಮಾಡಿದ್ದಾರೆ. ಈ ಬಗ್ಗೆ ರೀಲ್ಸ್ ಮಾಡಿರುವಂತ ಅವರು ದಯವಿಟ್ಟು ನಟ ದರ್ಶನ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಬೇಡಿ. ದರ್ಶನ್ ಬಗ್ಗೆ ಮಾತಾಡುವಷ್ಟು ದೊಡ್ಡವಳು ನಾನು ಅಲ್ಲ ಎಂಬುದಾಗಿ ರೀಲ್ಸ್ ಮಾಡಿ ದರ್ಶನ್ ಕುಟುಂಬಕ್ಕೆ ಸೋನುಗೌಡ ಧೈರ್ಯ ಹೇಳಿದ್ದಾಳೆ. ಇನ್ನೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಕಾನೂನು ತೀರ್ಪು ಬರುವವರೆಗೂ ಕಾಯಿರಿ. ದಯವಿಟ್ಟು ನಟ ದರ್ಶನ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಬೇಡಿ ಎಂಬುದಾಗಿ ಮನವಿ ಮಾಡಿದ್ದಾರೆ. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/

Read More

ಶಿವಮೊಗ್ಗ : ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತವು ಆಯೋಜಿಸಲಾಗಿದ್ದ ಜನ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಆಲಿಸುವ ಜನರ ಸಮಸ್ಯೆಗಳಿಗೆ ಸರ್ಕಾರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಲಿದ್ದಾರೆ. ಜನಪರವಾಗಿರುವ ಈ ಕಾರ್ಯಕ್ರಮ ಜನಸ್ನೇಹಿಯಾಗಿದೆ ಎಂದವರು ನುಡಿದರು. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವಂತೆ ಸೂಚಿಸಿದ ಅವರು ಇಲಾಖೆಗಳು ಜನಸ್ನೇಹಿಯಾಗಿರಬೇಕು ಎಂದರು. ಕೆಲವು ಜಟಿಲವಾದ ಹಾಗೂ ಇತ್ಯರ್ಥವಾಗದ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಹಿರಿಯ…

Read More

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ…

Read More