Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಅಂತ ಹೇಳಿದ್ದರು. ಅವರ ಹೇಳಿಕೆಗೆ ಖಡಕ್ ತಿರುಗೇಟು ನೀಡಿರೋ ಸಿಎಂ ಸಿದ್ಧರಾಮಯ್ಯ, ಏನು ಹೇಳಿದ್ದಾರೆ ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ.…
ಕಲಬುರ್ಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಮಾನ್ಯ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು. ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಕೃತಿ, ಪರಿಸರ ಉಳಿಸುವ ಬಗ್ಗೆ ಮಾತನಾಡಬೇಕು. ಆದರೆ ಅವರು ಏಕೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯ ಅಕ್ರಮ ಮರಗಳ ಕಡಿತಲೆ ಮಾಡಿದವರ ಪರವಾಗಿ ಮಾತನಾಡಿದ್ದಾರೋ ನನಗೆ ತಿಳಿಯುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. 126 ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯಿಸಿರುವ ಖಂಡ್ರೆ, ಮಾಜಿ ಮುಖ್ಯಮಂತ್ರಿಯವರಿಗೆ ಮಾಹಿತಿಯ ಕೊರತೆ ಇದೆ ಎನಿಸುತ್ತದೆ. “ಮುಖ್ಯಮಂತ್ರಿಗಳೇ ಮರ ಕಡಿಸಿ ಪ್ರತಾಪಸಿಂಹ ಸೋದರನ ಜಾಗದಲ್ಲಿ ಹಾಕುವಂತೆ ಹೇಳಿದ್ದಾರೆ’’ ಎಂದು ಆರೋಪಿಸಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಡಿ.16ರಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮಹಜರ್ ಮಾಡಿದ್ದ ಬೇಲೂರು ತಹಶೀಲ್ದಾರ್ ಅವರು 300ಕ್ಕೂ ಹೆಚ್ಚು ಮರಗಳನ್ನು ಅನುಮತಿ ಇಲ್ಲದೆ ಅಕ್ರಮವಾಗಿ ಕಡಿಯಲಾಗಿದೆ. ಸರ್ಕಾರಿ ಜಾಗದಲ್ಲಿದ್ದ ಮರಗಳನ್ನೂ ಕಡಿದಿದ್ದಾರೆ. ಇದರಲ್ಲಿ ಬೀಟೆ, ಸಾಗುವಾನಿ, ಮಹಾಗನಿ ಮೊದಲಾದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮರ…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನರಾಗಿದ್ದಾರೆ. ಈ ಮೂಲಕ ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ್ ಇನ್ನಿಲ್ಲವಾಗಿದ್ದಾರೆ. ಅವರ ನಿಧನ ಕುರಿತಂತೆ ಸಂತಾಪ ಸೂಚಿಸಿ ಟ್ವಿಟ್ ಮಾಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು ಎಂದಿದ್ದಾರೆ. ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿದ್ದ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರ ಅಗಲಿಕೆಯು ನಾಡಿಗೆ ತುಂಬಲಾರದ ನಷ್ಟ. ಮೃತರ ಕುಟುಂಬ, ಶಿಷ್ಯ ವೃಂದಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಹೇಳಿದ್ದಾರೆ. https://twitter.com/dineshgrao/status/1743518664006242343?t=wNqYSJbj7TlqSZShw3R8uA&s=08 https://kannadanewsnow.com/kannada/brand-bemgaluru-republic-day/ https://kannadanewsnow.com/kannada/there-is-not-even-the-slightest-difference-of-opinion-between-me-and-ashok-former-minister-v-somanna/
ಬೆಂಗಳೂರು : ಬೆಂಗಳೂರು ನಗರದ ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಕ್ಕೆ ಪಡೆಯಲಾಗಿದೆ. 2017ರಲ್ಲೇ ಸದರಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೀರ್ಪು ನೀಡಲಾಗಿತ್ತು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರು ಸುತ್ತಮುತ್ತ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿಸಬೇಕು ಎಂದು ನಿರ್ದೇಶನ ಕೊಟ್ಟ ತರುವಾಯ ನಡೆದ ಎರಡನೇ ಒತ್ತುವರಿ ತೆರವು ಕಾರ್ಯಾಚರಣೆ ಇದಾಗಿದೆ. 1932ರ ಆಗಸ್ಟ್ 10ರಂದು ಸಂಖ್ಯೆನಂ. ಜಿ 1053-ಎಫ್.ಟಿ 42-32-2ರಂತೆ 444 ಎಕರೆ 12 ಗುಂಟೆ ಪ್ರದೇಶ ಜಾರಕಬಂಡೆ ಶ್ರೀಗಂಧ ಮೀಸಲು – ಕಾಯ್ದಿಟ್ಟ ಅರಣ್ಯ ಪ್ರದೇಶ ಎಂದು ಅಧಿಸೂಚಿಸಲಾಗಿತ್ತು. ಆದರೆ ಸದರಿ ಜಮೀನನ್ನು 1987ರಲ್ಲಿ ಕಾನೂನು ಬಾಹೀರವಾಗಿ ಭಾರತೀಯ ವಾಯುಪಡೆಗೆ ಹಂಚಿಕೆ ಮಾಡಿತ್ತು, ಆದರೆ ಸದರಿ ಜಮೀನು ಎಚ್.ಎಂ.ಟಿ. ವಶದಲ್ಲಿತ್ತು. ಆದರೆ, ಅರಣ್ಯ ಭೂಮಿಯನ್ನು ಯಾವುದೇ ವ್ಯಕ್ತಿಗೆ, ಸಂಸ್ಥೆಗೆ ಮಂಜೂರು…
ಬೆಂಗಳೂರು : ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ, ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು. ಅಕ್ರಮವ ಸಂರಕ್ಷಣಾ ಅಧಿನಿಯಮ 1972 ಮತ್ತು ಇತ್ತೀಚೆಗೆ ಅಂದರೆ 2022ರಲ್ಲಿ ಕೇಂದ್ರ ಸರ್ಕಾರ ಈ ಕಾಯಿದೆಗೆ ಮಾಡಿರುವ ತಿದ್ದುಪಡಿಯನ್ವಯ ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಮನೆಯಲ್ಲಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ಧರಿಸುವುದು, ವನ್ಯಜೀವಿಗಳ ಮಾಂಸ ಭಕ್ಷಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ವನ್ಯಜೀವಿ (ಸಂರಕ್ಷಣಾ) (ಕರ್ನಾಟಕ ನಿಯಮಗಳು) 1973 ರ ನಿಯಮ 34 (1) ರಡಿಯಲ್ಲಿ ನಿಯಮ ಜಾರಿಯಾದ ಸಂದರ್ಭದಲ್ಲಿ 1973ರಲ್ಲಿ 30 ದಿನಗಳ ಕಾಲ ನಂತರ 2003 ರಲ್ಲಿ ಮತ್ತೊಮ್ಮೆ 180 ದಿನಗಳ ಕಾಲಾವಕಾಶ ನೀಡಿ ತಲತಲಾಂತರದಿಂದ ತಮ್ಮಲ್ಲಿರುವ ವನ್ಯಜೀವಿ/ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು,…
ಬೆಂಗಳೂರು: ಎಲ್ಲ ಐಎಲ್ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಶುಕ್ರವಾರ ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು. ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ…
ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿತ್ತು. ಈ ಘಟನೆಯ ಕುರಿತಂತೆ ಬಿಎಂಆರ್ ಸಿಎಲ್ ಏನು ಹೇಳಿದೆ ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ BMRCL, ಇಂದು ರಾತ್ರಿ 07.12 ಗಂಟೆಗೆ ಪ್ಲಾಟ್ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಬರುವ ರೈಲಿನ ಮುಂದೆ ಜಿಗಿದಿದ್ದಾರೆ. ತಕ್ಷಣ ಬಿಎಂಆರ್ಸಿಎಲ್ ಸಿಬ್ಬಂದಿ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದೆ. ಮೇಲಿನ ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರ ನಿಲ್ದಾಣದ ಪ್ಲಾಟ್ಫಾರ್ಮ್ಗಳಲ್ಲಿ ಸ್ಥಗಿತಗೊಂಡ ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರತರಲಾಯಿತು . ಮೇಲಿನ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು ಎಂದಿದೆ. ರಾತ್ರಿ 8 .00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂಬುದಾಗಿ…
ಶಿವಮೊಗ್ಗ: ರಾಜ್ಯ ಸರ್ಕಾರದ ಕ್ರಮ ಸೇರಿದಂತೆ ರೈತ ವಿರೋಧಿ ನೀತಿಗಳ ವಿರುದ್ಧ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈತರಿಂದ ಕಪ್ಪು ದಿನವನ್ನು ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಬಸ್ ನಿಲ್ದಾಣದ ಬಳಿಯಲ್ಲಿ, ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ಥರು, ಚಕ್ರಾ, ವರಾಹಿ, ಸಾವೆಹಕ್ಕು, ಸಂತ್ರಸ್ಥರು, ಬಗರ್ ಹುಕುಂ ಸಂತ್ರಸ್ಥರು, ಅರಣ್ಯ ಭೂಮಿ ಸಂತ್ರಸ್ಥರ ವಿಚಾರದಲ್ಲಿ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲೆಯ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಈ ವಿಚಾರದಲಿ 1973 ರಲ್ಲಿ ರದ್ದಾಗಿದ್ದ ಟಾಸ್ಕ್ ಪೋರ್ಸ್ ಅನ್ನು ರಚನೆ ಮಾಡುವಂತೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಮುಂದಾಗದ ಸರ್ಕಾರದ ನಡೆ ಖಂಡಿಸಲಾಯಿತು. ಇದಲ್ಲದೇ ಅಧಿಕಾರಿಗಳ ಅಸಹಕಾರ ಮತ್ತು ದೌರ್ಜನ್ಯದಿಂದ ಬೇಸತ್ತು ಹಾಗೂ ಸಾಗರ ತಾಲ್ಲೂಕಿನ ಕಂದಾಯ ಇಲಾಖೆಯ ಕಚೇರಿಗಳಲ್ಲಿ ರೈತರ ಭೂಮಿಗೆ ಸಂಬಂಧಿಸಿದ ದಾಖಲಾತಿ ಕಡತಗಳು ನಾಪತ್ತೆಯಾಗುತ್ತಿರುವುದನ್ನು ಖಂಡಿಸಲಾಯಿತು. ರಾಜ್ಯ ಸರ್ಕಾರದ ಆದೇಶವಿದ್ದರೂ ಆದೇಶದ ಪ್ರಕಾರ ರೈತರ ಕೆಲಸಗಳನ್ನು ಮಾಡದ ಅಧಿಕಾರಿಗಳ ನಡೆಯನ್ನು ಖಂಡಿಸಿ ದಿನಾಂಕ…
ಬೆಂಗಳೂರು: ನಮ್ಮ ಮೆಟ್ರೋ ಹಳಿಯ ಮೇಲೆ ಧುಮುಕಿ ಆತ್ಮಹತ್ಯೆಗೆ ವ್ಯಕ್ತಿಯೊಬ್ಬ ಯತ್ನಿಸಿದ್ದರಿಂದ, ಕೆಲ ಕಾಲ ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳಿಸಿರುವಂತ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತಗೊಂಡ ಪರಿಣಾಮ, ಪ್ರಯಾಣಿಕರು ಪರದಾಡಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕಾರಣದಿಂದ ಕೆಲ ಕಾಲ ರೈಲು ಹಳಿಗಳ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದರಿಂದ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಮೆಟ್ರೋ ವಿಳಂಬದಿಂದಾಗಿ ಪರದಾಡುವಂತೆ ಆಗಿದೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಮನವೊಲಿಸಿದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ksrtc-releases-provisional-selection-list-for-technical-assistant-post/ https://kannadanewsnow.com/kannada/breaking-navy-seizes-hijacked-cargo-ship-warning-to-pirates/