Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ದರ ನಿಗದಿ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಮಸ್ಯೆ ಬಗ್ಗೆ ಚರ್ಚಿಸೋದಕ್ಕೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಕಬ್ಬಿಗೆ ದರ ನಿಗದಿಗೆ ಕೋರಿ ಪತ್ರದಲ್ಲಿ ಪ್ರಧಾನಿ ಮೋದಿಯವರನ್ನು ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದರು. ನಾಳೆ ಈ ವಿಷಯವಾಗಿ ಚರ್ಚಿಸೋದಕ್ಕೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆ ಪ್ರಧಾನಿ ಮೋದಿಯನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಗೆ ಪ್ರಯಾಣವನ್ನು ಸಿಎಂ ಸಿದ್ಧರಾಮಯ್ಯ ಬೆಳೆಸಲಿದ್ದಾರೆ. ಪ್ರಧಾನಿ ಮೋದಿ ಬೇಡಿಯಾಗಿ ಕಬ್ಬು ಬೆಳಎಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. https://kannadanewsnow.com/kannada/pm-modi-to-attend-nda-oath-taking-ceremony-at-gandhi-maidan-in-bihar-on-nov-20/ https://kannadanewsnow.com/kannada/follow-these-steps-to-grow-mushrooms-in-a-bucket-at-home/
ನವದೆಹಲಿ: ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಎನ್ಡಿಎ ನಾಯಕರು ಅದ್ಧೂರಿ ಸಂಜೆಗೆ ಹಾಜರಾಗುವ ನಿರೀಕ್ಷೆಯಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಭರ್ಜರಿ ಜಯ ಸಾಧಿಸಿದ್ದು, ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿದೆ. ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿ (ಯು) ಕ್ರಮವಾಗಿ 89 ಮತ್ತು 85 ಸ್ಥಾನಗಳನ್ನು ಗೆದ್ದಿವೆ. ಇದಕ್ಕೆ ವ್ಯತಿರಿಕ್ತವಾಗಿ, ಮಹಾಘಟಬಂಧನ್ ಅಲೆಯ ಪ್ರಭಾವದಿಂದ ಕುಸಿದು ಬಿತ್ತು. ಆರ್ಜೆಡಿ ಕೇವಲ 25 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ 6 ಸ್ಥಾನಗಳಿಗೆ ಕುಸಿಯಿತು ಮತ್ತು ಎಡಪಕ್ಷಗಳು ಒಟ್ಟಾಗಿ ಕೇವಲ 3 ಸ್ಥಾನಗಳನ್ನು ಗಳಿಸಿದವು. ಬಿಎಸ್ಪಿ ಮತ್ತು ಐಐಪಿ ತಲಾ ಒಂದು ಸ್ಥಾನವನ್ನು ಪಡೆದುಕೊಂಡವು. ಬಿಹಾರ ಫಲಿತಾಂಶಗಳು ಹೊರಬಂದ ನಂತರ, ಗಮನವು ಈಗ ಬಿಹಾರದಲ್ಲಿ ಸರ್ಕಾರ ರಚನೆಯತ್ತ ತಿರುಗಿದೆ. ಜೆಡಿ…
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ನವದೆಹಲಿ: ಕೆಂಪು ಕೋಟೆ ಪ್ರದೇಶದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪ್ರಗತಿಯಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency -NIA) ಆತ್ಮಹತ್ಯಾ ಬಾಂಬರ್ ಜೊತೆ ಸೇರಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಕಾಶ್ಮೀರಿ ನಿವಾಸಿಯನ್ನು ಬಂಧಿಸಿದೆ. ಈ ದಾಳಿಯಲ್ಲಿ 10 ಅಮಾಯಕರ ಜೀವಗಳು ಬಲಿಯಾಗಿ, ಇತರ 32 ಜನರು ಗಾಯಗೊಂಡರು. ದಾಳಿಯಲ್ಲಿ ಭಾಗಿಯಾಗಿದ್ದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿಯನ್ನು ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದ ಎನ್ಐಎ, ದೆಹಲಿಯಲ್ಲಿ ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ನ ಸಂಬೂರಾದ ನಿವಾಸಿಯಾಗಿರುವ ಆರೋಪಿ, ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿ ಜೊತೆ ಸೇರಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಸ್ಫೋಟವನ್ನು ಪ್ರಚೋದಿಸಲು ವಾಹನದಲ್ಲಿ ಸಾಗಿಸಬಹುದಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಆಗಿ ಬಳಸಲಾಗುತ್ತಿದ್ದ ಕಾರನ್ನು ಖರೀದಿಸಲು ಅನುಕೂಲವಾಗುವಂತೆ ಅಮೀರ್ ದೆಹಲಿಗೆ ಬಂದಿದ್ದರು. ವಾಹನದ ಐಇಡಿ ಸ್ಫೋಟದ…
ನವದೆಹಲಿ: ಕೆಂಪು ಕೋಟೆ ಪ್ರದೇಶದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆತ್ಮಹತ್ಯಾ ಬಾಂಬರ್ನೊಂದಿಗೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಕಾಶ್ಮೀರಿ ನಿವಾಸಿಯನ್ನು ಬಂಧಿಸಿದೆ. ಈ ದಾಳಿಯಲ್ಲಿ 10 ಅಮಾಯಕರ ಜೀವಗಳು ಬಲಿಯಾಗಿ ಸುಮಾರು 25 ಜನರು ಗಾಯಗೊಂಡರು. ದಾಳಿಯಲ್ಲಿ ಭಾಗಿಯಾಗಿದ್ದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿಯನ್ನು ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದ ಎನ್ಐಎ, ದೆಹಲಿಯಿಂದ ಬಂಧಿಸಿತು. ದಾಳಿಯಲ್ಲಿ ಭಾಗಿಯಾಗಿದ್ದ ಕಾರನ್ನು ಹೆಸರಿಸಲಾಗಿದ್ದ ಅಲಿಯನ್ನು ದೆಹಲಿಯಿಂದ ಬಂಧಿಸಲಾಯಿತು. https://twitter.com/NIA_India/status/1990051171546153320 ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ನ ಸಂಬೂರಾದ ನಿವಾಸಿಯಾಗಿರುವ ಆರೋಪಿಯು ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಯೊಂದಿಗೆ ಭಯೋತ್ಪಾದಕ ದಾಳಿಯನ್ನು ನಡೆಸಲು ಸಂಚು ರೂಪಿಸಿದ್ದ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಸ್ಫೋಟವನ್ನು ಪ್ರಚೋದಿಸಲು ವಾಹನದಲ್ಲಿ ಸಾಗಿಸುವ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಆಗಿ ಬಳಸಲಾದ ಕಾರನ್ನು ಖರೀದಿಸಲು ಅನುಕೂಲವಾಗುವಂತೆ ಅಮೀರ್ ದೆಹಲಿಗೆ ಬಂದಿದ್ದರು. ಐಇಡಿ ಸ್ಫೋಟದಲ್ಲಿ…
ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರವಾಗಿದೆ. ನಾಯಕತ್ವ ಬದಲಾವಣೆ ಬಗ್ಗೆ ನಾನಾಗಲೀ, ಸಿಎಂ ಸಿದ್ಧರಾಮಯ್ಯ ಆಗಲೀ ಕಾಂಗ್ರೆಸ್ ಹೈಕಮಾಂಡ್ ಬಳಿಯಲ್ಲಿ ಚರ್ಚಿಸಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನ್ಯಾಕೆ ರಾಜೀನಾಮೆ ಕೊಡಲಿ? ನಾನು ಪಕ್ಷಕ್ಕೆ ಯಾವತ್ತೂ ಬ್ಲ್ಯಾಕ್ ಮೇಲ್ ಮಾಡುವವನಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂಬುದಾಗಿ ಹೇಳಿದರು. ಪಕ್ಷ ವಹಿಸಿರುವ ಕೆಲಸವನ್ನು ಮಾಡುತ್ತೇನೆ. ಪಕ್ಷ ಹೇಳುವವರೆಗೂ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರವಾಗಿದೆ. ನನ್ನನ್ನು ಕರೆದ್ರೆ ಹೋಗ್ತೇನೆ ಎಂಬುದಾಗಿ ತಿಳಿಸಿದರು.
ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಈವರೆಗೆ 10 ಮಂದಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಎಸ್ ಪಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದು, ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿದ ಕೃತ್ಯವು ರೈತರದ್ದಲ್ಲ. ಬದಲಾಗಿ ಕಿಡಿಗೇಡಿಗಳದ್ದಾಗಿದೆ. ಈ ಕೃತ್ಯ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕವಾಗಿ ಎಫ್ಐಆರ್ ದಾಖಲಾಗಿದೆ ಎಂದರು. ನಮ್ಮ ಪಿಎಸ್ಐಗಳ ದೂರು ಆಧರಿಸಿ ಎರಡು ಎಫ್ಐಆರ್, ಕಾರ್ಖಾನೆಯವರ ದೂರಿನಡಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಘಟನೆಯ ಬಗ್ಗೆ ವೀಡಿಯೋ ದೃಶ್ಯಾವಳಿ ಸಂಗ್ರಹ ಮಾಡಿದ್ದೇವೆ. ಪ್ರತ್ಯಕ್ಷ ಸಾಕ್ಷಿ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎವಿಡೆನ್ಸ್ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂಬುದಾಗಿ ತಿಳಿಸಿದರು. ಇದು ರೈತರು ಮಾಡಿರುವ ಕೃತ್ಯವಲ್ಲ. ಕಿಡಿಗೇಡಿಗಳ ಕೃತ್ಯವಾಗಿದೆ. ಈ ಸಂಬಂಧ ಈವರೆಗೆ 10…
ಪಾಟ್ನಾ: ನವೆಂಬರ್ 22 ರ ಮೊದಲು ಬಿಹಾರದಲ್ಲಿ ಮುಂದಿನ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಹೇಳಿದ್ದಾರೆ. ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಶೀಘ್ರದಲ್ಲೇ ಸರ್ಕಾರ ರಚನೆಗೆ ನೀಲನಕ್ಷೆಯನ್ನು ಅಂತಿಮಗೊಳಿಸಲಿದೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಅದರ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಹೇಳಿದರು. “ಇದು ಶೀಘ್ರದಲ್ಲೇ ನಡೆಯಲಿದೆ. ಚರ್ಚೆಗಳು ನಡೆಯುತ್ತಿವೆ” ಎಂದು ಬಿಹಾರದಲ್ಲಿ ಸರ್ಕಾರ ರಚನೆಯ ಬಗ್ಗೆ ಕೇಳಿದಾಗ ಪಾಸ್ವಾನ್ ಹೇಳಿದರು. “ಸರ್ಕಾರದ ನೀಲನಕ್ಷೆಯ ಬಗ್ಗೆ ಸ್ಪಷ್ಟತೆಯ ಅರಿವು ಬರುತ್ತದೆ. ಇಂದು ರಾತ್ರಿಯೊಳಗೆ, ನಾನು ಹಿರಿಯ ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ಇಂದು ಅಥವಾ ನಾಳೆಯೊಳಗೆ ನೀಲನಕ್ಷೆ ಸಿದ್ಧವಾಗಲಿದೆ. ನವೆಂಬರ್ 22 ರ ಮೊದಲು ನಾವು ಸರ್ಕಾರ ರಚಿಸಬೇಕು. ಅದು ಪೂರ್ಣಗೊಳ್ಳುತ್ತದೆ.” 43 ವರ್ಷದ ಅವರ ಹೇಳಿಕೆಯು ಜನತಾದಳ ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರನ್ನು…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ಹಸುವೊಂದು ಬಲಿಯಾಗಿದ್ದು, ಕೂದಲೆಳೆಯ ಅಂತರದಲ್ಲಿ ರೈತನೊಬ್ಬ ಪಾರಾಗಿದ್ದಾನೆ. ಮೈಸೂರು ಜಿಲ್ಲೆಯ ಬೆಣ್ಣೆಗೆರೆ ಬಳಿ 1 ಲಕ್ಷ ಮೌಲ್ಯದ ಹೆಚ್ ಎಫ್ ತಳಿಯ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿ, ಕೊಂದು ಹಾಕಿದೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಸು ಮೇಲೆ ಹುಲಿ ದಾಳಿ ವೇಳೆ ಅಲ್ಲೇ ಇದ್ದಂತ ರೈತ ರಾಜಶೇಖರ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ. ರೈತ ಜಯಪ್ಪ ಎಂಬುವರಿಗೆ ಸೇರಿದಂತ ಹೆಚ್ ಎಫ್ ತಳಿಯ ಹಸು ಹುಲಿದಾಳಿಗೆ ಬಲಿಯಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದನ್ನು ಕಂಡಂತ ರೈತ ಜಯಪ್ಪ, ಬಿಡಿಸಲಾಗದೇ ತಾನು ಬದುಕಿದರೆ ಸಾಕು ಎಂಬುದಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ಹಿಡಿಯದಂತ ಅರಣ್ಯ ಇಲಾಖೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/hospitals-must-provide-immediate-first-aid-for-animal-bites-without-asking-for-advance-payment-state-government-orders/ https://kannadanewsnow.com/kannada/shocking-under-the-pretext-of-petting-a-dog-a-pervert-sexually-harassed-a-young-woman-by-touching-her-body/
ಬೆಂಗಳೂರು : ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು. ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ.…














