Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಯನಾಡು ಭೂ ಕುಸಿತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತದಂತ ಘಟನೆ ನಡೆಯೋ ಮುನ್ನವೇ ಎಚ್ಚೆತ್ತುಕೊಂಡು, ತಡೆಯುವ ಸಲುವಾಗಿ ಗುಡ್ಡ ಕುಸಿತ ತಡೆಗೆ 300 ಕೋಟಿ ವ್ಯಯಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ರಾಜ್ಯದ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಲಾಗಿದೆ. ಅದನ್ನು ತಡೆಯಲು ಮುಂದಿನ ಎರಡು ವರ್ಷಗಳಲ್ಲಿ ₹300 ಕೋಟಿ ವ್ಯಯಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಶಿರೂರು ಬಳಿಯಲ್ಲಿ ಗುಡ್ಡ ಕುಸಿತದಿಂದಾಗಿ 13 ಮಂದಿ ಸಾವನ್ನಪ್ಪಿದ್ದರು. ಕೆಲವರ ಮೃತದೇಹ ಪತ್ತೆಯಾದ್ರೇ, ಮತ್ತೆ ಕೆಲವರ ಮೃತದೇಹ ಈವರೆಗೆ ಪತ್ತೆಯಾಗಿಲ್ಲ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ಡ ಕುಸಿತ ತಡೆಗೆ 300 ಕೋಟಿ ವ್ಯಯಿಸಲು ನಿರ್ಧರಿಸಲಾಗಿದೆ. https://twitter.com/KarnatakaVarthe/status/1820765692280394188 https://kannadanewsnow.com/kannada/beware-of-school-vehicle-drivers-fir-lodged-against-72-drivers-for-consuming-liquor/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/
ಬೆಂಗಳೂರು: ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ಸಮರವನ್ನೇ ಸಾರಿದ್ದಾರೆ. ನಗರದಲ್ಲಿ ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ ಸಂಬಂಧ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದು, ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ 72 ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳನ್ನು ತಪಾಸಣೆ ಮಾಡಿರುವುದಾಗಿ ತಿಳಿಸಿದೆ. ಒಟ್ಟಾರೆಯಾಗಿ ಮದ್ಯ ಸೇವಿಸಿ ಬಸ್ ಸೇರಿದಂತೆ ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1820773177812767066 https://kannadanewsnow.com/kannada/tj-abraham-complainant-against-cm-visits-raj-bhavan-after-muda-padayatra/ https://kannadanewsnow.com/kannada/we-did-not-take-out-padayatra-out-of-greed-for-power-by-vijayendra/
ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು. ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ.…
ನಾವೆಲ್ಲರೂ ಕಷ್ಟಪಟ್ಟು ದುಡಿದು ಸಂಪಾದಿಸುತ್ತೇವೆ. ಗಳಿಸಿದ ಹಣವೆಲ್ಲ ಒಂದಲ್ಲ ಒಂದು ರೂಪದಲ್ಲಿ ಖರ್ಚಾಗುತ್ತದೆ. ಶುಭ ಖರ್ಚುಗಳಾಗಿದ್ದರೆ ಅದರಿಂದ ನಮಗೆ ಸಂತೋಷವಾಗುತ್ತದೆ. ಆದರೆ ಅನೇಕವು ವ್ಯರ್ಥವಾಗುತ್ತವೆ. ತಿಂಗಳ ಆರಂಭದಲ್ಲಿ ಬರುವ ಸಂಬಳದಲ್ಲಿ ಅದೂ ಇದೂ ಮಾಡಬಹುದು ಎಂದು ಲೆಕ್ಕ ಇಡುತ್ತೇವೆ. ಆದರೆ ಇದ್ದಕ್ಕಿದ್ದಂತೆ ಕೆಲವು ಅನಿರೀಕ್ಷಿತ ವೆಚ್ಚಗಳು ಬಂದು ನಮ್ಮ ಎಲ್ಲಾ ಯೋಜನೆಗಳನ್ನು ಹಾಳುಮಾಡುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರಿಂದ ಮೈಸೂರು ಪಾದಯಾತ್ರೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ರಾಜಭವನಕ್ಕೆ ಮುಡಾ ಹಗರಣ ಸಂಬಂಧ ದೂರುದಾರ ಟಿಜೆ ಅಬ್ರಾಹಂ ಅವರು ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಾಹಂ ದೂರು ನೀಡಿದ್ದರು. ಈ ದೂರಿನ ಬಳಿಕ ಇಂದು ರಾಜಭವನಕ್ಕೆ ಭೇಟಿಯಾಗಿದ್ದಾರೆ. ಸಿಎಂ ವಿರುದ್ಧದ ದೂರುದಾರ ಟಿಜೆ ಅಬ್ರಾಹಂ ಅವರು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ, ಮುಡಾ ಹಗರಣದ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ ಮುಡಾ ಪಾದಯಾತ್ರೆಯನ್ನು ನಡೆಸುತ್ತಿದ್ದರೇ, ಮತ್ತೊಂದೆಡೆ ದೂರು ದಾರ ಅಬ್ರಾಹಂ ರಾಜಭವನಕ್ಕೆ ಭೇಟಿ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೇ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೆ ಮುಡಾ ಹಗರಣ ಸಂಬಂಧ ಯಾವ ಕ್ರಮ ವಹಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/in-a-shocking-incident-four-men-arrested-for-attempting-to-rape-a-woman-in-a-pub/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/ https://kannadanewsnow.com/kannada/breaking-another-complaint-filed-with-governor-against-cm-siddaramaiah/
ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಪಬ್ ಗೆ ತೆರಳಿದ್ದಂತ ಯುವತಿಯ ಮೇಲೆ ಮಾನಭಂಗಕ್ಕೆ ಯುವಕರು ಯತ್ನಿಸಿದ್ದಾರೆ. ಇಂತಹ ಕೀಚಕ ಕೃತ್ಯ ವೆಸಗಲು ಮುಂದಾದಂತ ನಾಲ್ವರು ಕಾಮುಕರನ್ನು ಪೊಲೀಸರು ಬಂಧಿಸಿರುವಂತ ಘಟನೆ ಮಂಗಳೂರಿನ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಾಲ್ ಒಂದರ ಪಬ್ ಗೆ ಸ್ನೇಹಿತೆಯರೊಂದಿಗೆ ಯುವತಿಯೊಬ್ಬಳು ತೆರಳಿದ್ದಳು. ಈ ವೇಳೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂತಿಸಿದಂತ ಪುಂಡರು, ಬೈದು ಯುವತಿಗೆ ಬಿಯರ್ ಬಾಟಲಿಯಿಂದಲೂ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಇದಷ್ಟೇ ಅಲ್ಲದೇ ಯುವತಿಯ ಮಾನಭಂಗಕ್ಕೆ ಯತ್ನಿಸಲಾಗಿದೆ. ಜೊತೆಗೆ ಯುವತಿಗೆ ಕಿರುಕುಳ ಕೂಡ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಯುವತಿಯು ಪಾಂಡೇಶ್ವರ ಪೊಲೀಸ್ ಠಾಮೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು, ಪುತ್ತೂರಿನ ವಿನಯ್, ಮಹೇಶ್, ಪ್ರೀತೇಶ್ ಹಾಗೂ ನಿತೇಶ್ ಎಂಬ ನಾಲ್ವರು ಕಾಮಕುರನ್ನು ಬಂಧಿಸಿದ್ದಾರೆ. https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/ https://kannadanewsnow.com/kannada/breaking-another-complaint-filed-with-governor-against-cm-siddaramaiah/
ಪ್ಯಾರಿಸ್: ಭಾರತದ ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಂಪಿಕ್ಸ್ 2024ರ ಸ್ಪರ್ಧೆಯಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸುವ ಮೂಲಕ, ಹೊಸ ದಾಖಲೆಯನ್ನು ಬರೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರ ಅದ್ಭುತ ಪ್ರದರ್ಶನದಿಂದಾಗಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ಗೆ ಪ್ರವೇಶಿಸಿದರು. ಅವರು ತಮ್ಮ ಮೊದಲ ಪ್ರಯತ್ನದಲ್ಲಿ 89.34 ಮೀಟರ್ ದೂರವನ್ನು ಎಸೆದು ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಿದರು. ಅವರು ಆಗಸ್ಟ್ 8 ರಂದು ರಾತ್ರಿ 11:55 ಕ್ಕೆ ಫೈನಲ್ನಲ್ಲಿ ಸ್ಪರ್ಧಿಸಲಿದ್ದಾರೆ. ಒಟ್ಟಾರೆಯಾಗಿ ಭಾರತದ ನೀರಜ್ ಚೋಪ್ರಾ ಅವರು, ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಹೀಗಾಗಿ ಪದಕದ ನಿರೀಕ್ಷೆಯನ್ನು ಮೂಡಿಸಿದ್ದಾರೆ. https://twitter.com/sportwalkmedia/status/1820759989650354402 https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/indian-womens-wrestler-vinesh-phogat-wins-bronze-medal-at-paris-olympics/
ಪ್ಯಾರಿಸ್: ವಿಶ್ವದ ನಂ.1 ಕುಸ್ತಿ ಪಟುವಾಗಿದ್ದಂತ ಯಿ ಸುಸಾಕಿ ವಿರುದ್ಧ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕುಸ್ತಿ ಪಂದ್ಯಾವಳಿಯಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ. ಇಂದು ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಹಾಗೂ ಜಪಾನ್ ನ ನಂಬರ್.1 ಕುಸ್ತಿ ಪಟು ಯಿ ಸುಸಾಕಿ ನಡುವೆ ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 3-2 ಅಂತರದಿಂದ ಭಾರತದ ವಿನೇಶ್ ಪೋಗಟ್ ಅವರು ಜಪಾನ್ ನ ಯಿ ಸುಸಾಕಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕ್ವಾಟರ್ ಫೈನಲ್ ಪ್ರವೇಶಿಸಿರುವಂತ ಅವರು ಭಾರತಕ್ಕೆ ಮತ್ತೊಂದು ಪದಕ ತಂದುಕೊಡುವುದು ಫಿಕ್ಸ್ ಆದಂತೆ ಆಗಿದೆ. https://twitter.com/sportwalkmedia/status/1820756004935438771 https://kannadanewsnow.com/kannada/bangladesh-cricketer-mashrafe-mortazas-house-set-on-fire/ https://kannadanewsnow.com/kannada/tollywood-producer-director-komari-janaiah-naidu-commits-suicide-by-hanging-himself/
ಢಾಕಾ: ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದ ನಂತರ ದೇಶದಲ್ಲಿ ಹಿಂಸಾಚಾರ ಮತ್ತು ಗೊಂದಲ ಮುಂದುವರೆದಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದಿಂದ ಸಂಸತ್ ಸದಸ್ಯರಾಗಿರುವ ಮೊರ್ತಾಜಾ, ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಈ ಸ್ಥಾನವನ್ನು ಗೆದ್ದಿದ್ದರು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದುಷ್ಕರ್ಮಿಗಳು ಮೊರ್ತಾಜಾ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೊರ್ತಾಜಾ 117 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಮುನ್ನಡೆಸಿದ್ದಾರೆ. 36 ಟೆಸ್ಟ್, 220 ಏಕದಿನ ಮತ್ತು 54 ಟಿ 20 ಪಂದ್ಯಗಳಲ್ಲಿ 390 ಅಂತರರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿದ್ದಾರೆ ಮತ್ತು 2,955 ರನ್ ಗಳಿಸಿದ್ದಾರೆ. ಆಟವನ್ನು ತೊರೆದ ನಂತರ, ಅವರು…
ಹೈದರಾಬಾದ್: ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು (44) ಇನ್ನಿಲ್ಲ. ಅವರು ಮಂಗಳವಾರ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ನಲ್ಲಿ ನೇಣುಬಿದಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದೆ. ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿಬ್ಬಂದಿಯೊಬ್ಬರು ಮೃತಪಟ್ಟಿರುವುದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು. ಅದರಲ್ಲಿ ಅವರು ಕೆಲವು ವರ್ಷಗಳ ಹಿಂದೆ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು. ಈ ಚಿತ್ರವು ವಿಫಲವಾಯಿತು. https://kannadanewsnow.com/kannada/good-news-for-maratha-community-in-the-state-applications-invited-for-loan-facility-under-various-schemes/ https://kannadanewsnow.com/kannada/new-company-to-be-set-up-in-mysuru-with-rs-600-crore-investment-5000-jobs-priyank-kharge/