Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮರಣ ನೋಂದಣಿಯನ್ನು ಬಲಪಡಿಸುವ ಸಲುವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನನ ಅಥವಾ ಮರಣ ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬದಲಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ತಿದ್ದುಪಡಿ ಮಾಡಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜನನ ಮರಣ ನೊಂದಣಿಯನ್ನು ಸುವ್ಯವಸ್ಥಿತವಾಗಿ ಹಾಗೂ ಉತ್ತಮವಾಗಿ ಅನುಷ್ಠಾನಗೊಳಿಸಲು ಎಲ್ಲಾ ಅವಶ್ಯಕ ಸೌಕರ್ಯ ಹೊಂದಿರುವ ಗ್ರಾಮ ಪಂಚಾಯತಿ ಕಛೇರಿಗಳು ಸಾರ್ವಜನಿಕರಿಗೆ ಹತ್ತಿರವಿರುವ ಜನಸ್ನೇಹಿ ಕೇಂದ್ರವಾಗಿರುತ್ತದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳು ಸೇವಾನಿರತವಾಗಿದ್ದು, ಈಗಾಗಲೇ 72 ಸೇವೆಗಳನ್ನು ಒದಗಿಸುತ್ತಿವೆ. ಜನನ, ಮರಣ ನೋಂದಣಿಯ 73ನೇ ಸೇವೆಯಾಗಲಿದ್ದು, ಸಾರ್ವಜನಿಕರಿಗೆ ತ್ವರಿತ ಸೇವೆ ದೊರೆಯಲಿದೆ ಇದರಿಂದಾಗಿ ಗ್ರಾಮೀಣ ಭಾಗಗಳಲ್ಲಿ ಶೇಕಡ 100ರಷ್ಟು ಜನನ, ಮರಣ ನೋಂದಣಿಯ ಗುರಿಯನ್ನು ಸಾಧಿಸಲು ಮತ್ತು ಕಾಯ್ದೆಯಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ಎಲ್ಲಾ ಜನನ…
ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಏನಿದು ಪುನೀತ್ ರಾಜಕುಮಾರ್…
ಬೆಂಗಳೂರು: ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರಾಗಿ ವೆಂಕಟೇಶ್ ಅಡಿಗ ನೇಮಕ ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದೂ, ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ಈ ಕೆಳಕಂಡ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರುಗಳನ್ನೊಳಗೊಂಡಂತೆ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ. ನಾಮ ನಿರ್ದೇಶಿತ ಮಹನೀಯರನ್ನಾಗಿ ವೇದಶಾಸ್ತ್ರ ವರ್ಗದಲ್ಲಿ ವೆಂಕಟೇಶ್ವರ ಅಡಿಗ, ಅರ್ಚಕರು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರು ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ. https://kannadanewsnow.com/kannada/i-have-not-cheated-eshwarappa-i-have-followed-orders-of-high-command-bommai/ https://kannadanewsnow.com/kannada/bihar-cabinet-expansion-former-deputy-cm-renu-devi-21-other-leaders-join-nitish-kumars-camp/
ಹಾವೇರಿ: ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಪುತ್ರನಿಗೆ ಟಿಕೇಟ್ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಅಸಮಾಧಾನಗೊಂಡಿರುವ ಕುರಿತು ಮಾತನಾಡಿದ ಅವರು, ಈಶ್ವರಪ್ಪ ಅವರ ಸಭೆ ಬಗ್ಗೆ ಮಾಹಿತಿ ಇಲ್ಲ. ಈಶ್ವರಪ್ಪ ಅವರಿಗೆ ಎಲ್ಲಾ ಗೊತ್ತಿದೆ. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಏನ್ ಹೇಳಿದ್ದೆ ಎಂದು ಎಲ್ಲಾ ಅವರಿಗೆ ಗೊತ್ತಿದೆ ಎಂದರು. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಡ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ನಿರೀಕ್ಷೆ ಮಾಡುತ್ತಿರುವಂತ 7ನೇ ವೇತನ ಆಯೋಗದ ಜಾರಿಗೆ ದಿನಗಣನೆ ಆರಂಭಗೊಂಡಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಲಾಗುತ್ತಿದೆ. ಆ ನಂತ್ರ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ಹೆಚ್ಚಳದ ನಿರ್ಧಾರ ಪ್ರಕಟಿಸೋ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ ಸಿಹಿಸುದ್ದಿ ನೀಡಿತ್ತು. ಅದಕ್ಕೂ ಮುನ್ನಾ ಹಳೇ ಪಿಂಚಣಿ ಯೋಜನೆಯನ್ನು ಕೆಲ ನೌಕರರಿಗೆ ಜಾರಿಗೊಳಿಸಿ ಗುಡ್ ನ್ಯೂಸ್ ನೀಡಲಾಗಿತ್ತು. ಇನ್ನೂ 7ನೇ ವೇತನ ಆಯೋಗದ ಜಾರಿಯೊಂದು ಬಾಕಿ ಇದೆ. ಈ 7ನೇ ವೇತನ ಆಯೋಗದ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರು ಕಾತುರದಿಂದ ಕಾಯುತ್ತಿದ್ದಾರೆ. ಈ ಬೆನ್ನಲ್ಲೇ ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಂದ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಈ ಮೂಲಕ…
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರು- ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ…
ಬೆಂಗಳೂರು : “ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ಸಿಎಸ್ಆರ್ ನಿಧಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ರಾಮನಗರ ಜಿಲ್ಲೆಯಲ್ಲಿ 20 ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಎಸ್ ಶಾಲೆಗಳ ನಿರ್ಮಾಣ ಸಂಬಂಧ ರಾಮನಗರದಲ್ಲಿ ಖಾಸಗಿ ಸಂಸ್ಥೆಗಳ ಜತೆ ಶಿವಕುಮಾರ್ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಜಿಲ್ಲೆಯ ಶಾಸಕರು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು “ಇಂದು ರಾಮನಗರ ಜಿಲ್ಲೆ ಹಾಗೂ ನನ್ನ ರಾಜಕೀಯ ಬದುಕಿಗೆ ಅತಿ ಹೆಚ್ಚು ಸಂತೋಷ ತಂದ ದಿನ. ರಾಜ್ಯದಲ್ಲಿ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹಳ್ಳಿಗಳಿಂದ ಬೆಂಗಳೂರು ಹಾಗೂ ಇತರೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ನಮ್ಮ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಕಾರ್ಯಕ್ರಮ ರೂಪಿಸಿದೆ ಎಂದರು. ಈ ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಹಣವನ್ನು ಬಳಸದೇ, ಸಿಎಸ್ಆರ್ ನಿಧಿಯಿಂದ…
ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಹಾಗಾದ್ರೇ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ಮಾತನಾಡಿದ್ರು ಅಂತ ಮುಂದೆ ಓದಿ. ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈ ಮೋದಿ ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ದ ಇದ್ದವರು. ಮೋದಿ ವಿರೋಧಿ ನಾನಲ್ಲ. ಇವತ್ತು ಅವರು ವಿಶ್ವ ನಾಯಕ ಎಂದರು. ವಂಶ ಪಾರಂಪರ್ಯದ ಬಗ್ಗೆ ಹೆಚ್ಚು ಮಾತಾಡಲ್ಲ. ರಾಜ್ಯದ ಬಿಜೆಪಿ ಯಲ್ಲಿ ಕೂಡ ಕಾಂಗ್ರೆಸ್ ಸಂಸ್ಕ್ರತಿ ಬೆಳೆಯುತ್ತಿರುವುದು ದೌರ್ಭಾಗ್ಯ. ಕಳೆದ ವಿಧಾನಸಭೆ ಚುನಾವಣೆ ವೇಳೆ ನನಗಾದ ಅನ್ಯಾಯ ಸರಿಪಡಿಸುವ ಭರವಸೆ ಪಕ್ಷದ ನಾಯಕರಿಂದ ಸಿಕ್ಕಿತ್ತು. ಯಡಿಯೂರಪ್ಪ ಸಹ ಹಾವೇರಿಯಲ್ಲಿ ಕಾಂತೇಶ್ ಗೆ ಟಿಕೆಟ್ ಕೊಡಿಸಿ ಗೆಲ್ಲಿಸುವೆ ಎಂದಿದ್ದರು. ಆದರೆ ಅಲ್ಲಿ ಬೊಮ್ಮಾಯಿ ಮತ್ತು ಶೋಭಾ ಪರ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಹೈಕಮಾಂಡ್ ತೀರ್ಮಾನಕ್ಕೆ…
ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ. ಇದು ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆದರೇ ಮೋದಿ ವಿರುದ್ಧ ಹೋಗುವುದಿಲ್ಲ. ನಾನು ಗೆದ್ದರೇ ಮೋದಿಯನ್ನೇ ಬೆಂಬಲಿಸುವುದಾಗಿ ತಿಳಿಸಿದರು. ನಾನು ಪ್ರಾಣ ಹೋದರೂ ‘ಮೋದಿ ವಿರುದ್ಧ’ ಹೋಗುವುದಿಲ್ಲ – ‘ಕೆ.ಎಸ್.ಈಶ್ವರಪ್ಪ’ ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಶಾಕ್ ನೀಡಿತ್ತು. ಈ ಕಾರಣಕ್ಕೆ ಸಿಡಿದೆದ್ದಿದ್ದಂತ ಅವರು ಬಂಡಾಯ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸೋದಾಗಿ ಘೋಷಿಸಿದ್ದರು. ಆದ್ರೇ ಇಂದು ಯುಟರ್ನ್ ಹೊಡೆದಿರುವಂತ ಅವರು, ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ ಅಂತ ತಿಳಿಸಿದ್ದಾರೆ. ನಗರದ…
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಶಾಕ್ ನೀಡಿತ್ತು. ಈ ಕಾರಣಕ್ಕೆ ಸಿಡಿದೆದ್ದಿದ್ದಂತ ಅವರು ಬಂಡಾಯ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸೋದಾಗಿ ಘೋಷಿಸಿದ್ದರು. ಆದ್ರೇ ಇಂದು ಯುಟರ್ನ್ ಹೊಡೆದಿರುವಂತ ಅವರು, ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ ಅಂತ ತಿಳಿಸಿದ್ದಾರೆ. ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ. ಮೋದಿ ಪ್ರಧಾನಿ ಆಗುವ ಮೊದಲು ಎಲ್ಲಾ ದೇಶಗಳು ಪಾಕ್ ಆಗಿದ್ದವು. ಆದ್ರೇ ಮೋದಿ ಪ್ರಧಾನಿ ಆದ ನಂತ್ರ ಎಲ್ಲಾ ದೇಶಗಳು ಭಾರತದ ಜೊತೆಗಿವೆ ಎಂದರು. ಮುಸ್ಲೀಂ ರಾಷ್ಟ್ರಗಳು ಕೂಡ ಮೋದಿಗೆ ರತ್ನಗಂಬಳಿ ಹಾಸಿ ಕರೆಯುತ್ತಿವೆ. ನಮ್ಮ ದೇಶಕ್ಕೆ ಬನ್ನಿ ಎಂದು ಮೋದಿಗೆ ದುಂಬಾಲು ಬೀಳುತ್ತಿವೆ ಎಂದು ಹೇಳಿದರು. ವಂಶ ಪಾರಂಪರ್ಯ ವಿರುದ್ಧ ಮೋದಿ ಮಾತನಾಡಿದ್ದಾರೆ. ಹೀಗಾಗಿ ವಂಶ ಪಾರಂಪರ್ಯ…