Author: kannadanewsnow09

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲಾ ಮತ್ತು ಸಹಾಯಧನ), ಜೀಜಾವುಜಲಭಾಗ್ಯ ಯೋಜನೆ (ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶಿಕ್ಷಣ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಡಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಒಕ್ಕಲಿಗ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-3ಬಿ ಅಡಿಯಲ್ಲಿ 2(ಎ)ಯಿಂದ 2(ಎಫ್)ರವರೆಗೆ ಬರುವ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ…

Read More

ಬೆಂಗಳೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ,…

Read More

ಮಂಡ್ಯ: ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಯಜಮಾನಿ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ ಎಂದರು. ತನ್ನ…

Read More

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ( BJP veteran LK Advani ) ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರು ಈ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗೆ ಮರಳಿದ್ದರು. ಇಂದು ಮತ್ತೆ ಎಲ್.ಕೆ ಅಡ್ವಾನಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ಕುಟುಂಬಸ್ಥರು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-government-bus-catches-fire-in-sagar-passengers-escape-unhurt/ https://kannadanewsnow.com/kannada/breaking-another-complaint-filed-with-governor-against-cm-siddaramaiah/

Read More

ಬೆಂಗಳೂರು: ವಯನಾಡು ಭೂ ಕುಸಿತ ದುರಂತದಲ್ಲಿ ಸಂತ್ರಸ್ತರಾದಂತ ಜನರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ಮನ ಮಿಡಿದಿದ್ದಾರೆ. ಬರೋಬ್ಬರಿ 9 ಅಗತ್ಯ ಪರಿಹಾರದ ಸಾಮಗ್ರಿಗಳ ಟ್ರಕ್ ಗಳ ಮೂಲಕ ರವಾನಿಸುತ್ತಿದ್ದಾರೆ. ಈ 9 ಪರಿಹಾರದ ಸಾಮಗ್ರಿಗಳನ್ನು ಹೊತ್ತು ತೆರಳುವಂತ ಟ್ರಕ್ ಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳ 9 ಟ್ರಕ್ ಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ವಯನಾಡು ಭೂಕುಸಿತ ಸ್ಥಳಕ್ಕೆ ಸ್ವತಃ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಪಯಣ, ಪರಿಹಾರ ಸಾಮಗ್ರಿ ವಿತರಣೆ ಇನ್ನೂ ಟ್ರಕ್ ಗಳೊಂದಿಗೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಮತ್ತು ಬಿಬಿಎಂಪಿ ಮಾಜಿ ಮಹಾಪೌರರಾದಂತ ಮಂಜುನಾಥ್ ರೆಡ್ಡಿ ಮತ್ತು ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌…

Read More

ಮದ್ದೂರು:  ಕುಮಾರಸ್ವಾಮಿ ಬ್ಲಾಕ್ ಮೇಲ್ ರಾಜಕಾರಣಿ. ಪಾದಯಾತ್ರೆಗೆ ಜೆಡಿಎಸ್ ಬರುವುದಿಲ್ಲ ಎಂದು ಬಿಜೆಪಿಗೆ ಬೆದರಿಸಿದರು. ನಂತರ ಜೊತೆಯಲ್ಲಿ ಹೋದರು. ನನ್ನ ಮೇಲೆ ಆರೋಪ ಮಾಡುತ್ತಿರುವ ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.. ವಾಲ್ಮೀಕಿ ನಿಗಮದ ಹಗರಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ ಎನ್ನುವ ವಿಜಯೇಂದ್ರ ಅವರ ಆರೋಪದ ಬಗ್ಗೆ ಕೇಳಿದಾಗ “ಅವರ ತಂದೆ ರಾಜಿನಾಮೆಗೆ ಕಾರಣನಾದ ವ್ಯಕ್ತಿ ಆತ. ಮೊದಲ ಬಾರಿಗೆ ಶಾಸಕರಾಗಿ, ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಅದನ್ನು ಖುಷಿಯಾಗಿ ಅನುಭವಿಸಲಿ” ಎಂದರು. ಜನಾಂದೋಲನ ಯಾತ್ರೆಯನ್ನು ಬಿಜೆಪಿ ಪಶ್ಚತ್ತಾಪ ಯಾತ್ರೆ ಎಂದು ಕರೆದಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ “ಅವರದ್ದು ನಿಜವಾದ ಪಶ್ಚತ್ತಾಪ ಯಾತ್ರೆ. ಕರ್ನಾಟಕದ ಹೆಸರು ಹಾಳು ಮಾಡಿದರು. ಭ್ರಷ್ಟರಾಜ್ಯವೆಂದು ಕೆಟ್ಟ ಹೆಸರು ತಂದರು. ನಾವೀಗ ಅದನ್ನು ಶುದ್ದೀಕರಣ ಮಾಡುತ್ತಿದ್ದೇವೆ” ಎಂದು ಹೇಳಿದರು. ರಾಜ್ಯಪಾಲರ ತೀರ್ಮಾನ ಹಾಗೂ ಅವರ ಮುಂದಿನ ನಡೆ ಬಗ್ಗೆ ಕೇಳಿದಾಗ “ನೆಲದ ಕಾನೂನಿಗೆ ರಾಜ್ಯಪಾಲರು ಗೌರವ ನೀಡುತ್ತಾರೆ ಎಂದು ಭಾವಿಸಿರುವೆ. ಸಿಎಂ ಅವರಿಗೆ ನೋಟಿಸ್ ನೀಡುವ ಕೆಲಸಕ್ಕೆ ಕೈ…

Read More

ಬೆಂಗಳೂರು/ ಮದ್ದೂರು : “ಆಸ್ತಿ ವಿಚಾರವಾಗಿ ಚರ್ಚೆ ನಡೆಸಲು ಕುಮಾರಸ್ವಾಮಿ ಶುಭ ಘಳಿಗೆ ಹುಡುಕಿ ತಡ ಮಾಡದೆ ಶುಭ ಮುಹೂರ್ತ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯ ನಂತರ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಅವರು “ಕಳೆದ 20 ವರ್ಷಗಳಿಂದ ನನ್ನ ಮೇಲೆ ಕುತಂತ್ರ ಮಾಡುತ್ತಲೇ ಇದ್ದಾರೆ. ಇಡಿ, ಸಿಬಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳು ನನ್ನ ಜಾಲಾಡುತ್ತಿವೆ. ಇವರೂ ಅದನ್ನೇ ತೆಗೆದುಕೊಂಡು ಮಾತನಾಡುತ್ತಿದ್ದಾರೆ, ಮಾತನಾಡಲಿ. ನಾನು ತೆರೆದ ಪುಸ್ತಕ” ಎಂದರು. “ಕುಮಾರಸ್ವಾಮಿ ಅವರ ಸವಾಲನ್ನು ಸ್ವೀಕರಿಸಿ ವಿಧಾನಸಭೆ ಅಥವಾ ಚಾಮುಂಡಿ ಬೆಟ್ಟ ಎಲ್ಲಿಗೆ ಬರುವಿರಾ ಎಂದು ಕೇಳಿದಾಗ “ವಿಧಾಸಭೆಗೆ ಬರಲಿ. ಆದರೆ ಅವರು ಅಲ್ಲಿಗೆ ಬರಲು ಆಗುವುದಿಲ್ಲ. ಅವರ ಬದಲು ಅಣ್ಣನನ್ನು ಕಳುಹಿಸಲಿ. ಎಲ್ಲಾ ಮಾಧ್ಯಮಗಳು ಬರಲಿ” ಎಂದು ಮರು ಸವಾಲು ಹಾಕಿದರು. ಮೈಸೂರು ಚಲೋ ಪಾದಯಾತ್ರೆ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಎನ್ನುವಂತೆ ಆಗಿದೆ ಎಂದು ಕೇಳಿದಾಗ “ನನಗೆ ಈ ಪಾದಯಾತ್ರೆಯ…

Read More

ಬೆಂಗಳೂರು: ಕೆಪಿಎಸ್ಸಿಯಿಂದ ಆಗಸ್ಟ್.25ರಂದು ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವುದಾಗಿ ನಿಗದಿ ಪಡಿಸಲಾಗಿತ್ತು. ಈ ಪರೀಕ್ಷಾ ದಿನಾಂಕವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಅಂತನೂ ಕೆಪಿಎಸ್ಸಿ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದರು. ಇದರ ನಡುವೆಯೂ ಆಗಸ್ಟ್.25ರಂದು ನಡೆಯಬೇಕಿದ್ದಂತ KAS ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ KPSCಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 25-08-2024ರಂದು  2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಅಂದೇ ಬೇರೆ ಪರೀಕ್ಷೆಗಳು ನಿಗದಿಯಾಗಿದ್ದರಿಂದ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು ಎಂದಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಆಗಸ್ಟ್.25, 2024ರಂದು ನಡೆಸಲು ನಿಗದಿ ಪಡಿಸಿದ್ದಂತ ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಆಗಸ್ಟ್.25ರ ಬದಲಾಗಿ ಆಗಸ್ಟ್.27ರ ಮಂಗಳವಾರದಂದು ನಡೆಸಲು ಮರು ನಿಗದಿ ಪಡಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/ https://kannadanewsnow.com/kannada/belagavi-two-electrocuted-while-cleaning-temple/

Read More

ಬೆಳಗಾವಿ: ಜಿಲ್ಲೆಯಲ್ಲಿ ದೇವಸ್ಥಾನವೊಂದನ್ನು ಸ್ವಚ್ಛಗೊಳಿಸುತ್ತಿದ್ದಂತ ಸಂದರ್ಭದಲ್ಲಿ, ವಿದ್ಯುತ್ ಸ್ಪರ್ಶಿಸಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲ್ಲೂಕಿನ ಸುಳೇಬಾವಿ ಗ್ರಾಮದಲ್ಲಿರುವಂತ ವಾಲ್ಮೀಕಿ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿದ್ದಂತ ವೇಳೆಯಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಈ ದುರ್ಘಟನೆಯಲ್ಲಿ ಕಲಾವತಿ ಬೀರವಾಡಿ(37) ಹಾಗೂ ಸವಿತಾ ಒಂಟಿ(36) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮೃತ ಕಲಾವತಿ ಬೀರವಾಡಿ ಅವರ ಪತಿ ಮಾರುತಿ ಬೀರವಾಡಿ ಅವರು ಗಂಭೀರವಾಗಿ ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿಯ ವೈದ್ಯಕೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಂದಹಾಗೇ ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ, ಶೆಟರ್ ಎಳೆಯುವಾಗ ವಿದ್ಯುತ್ ಸ್ಪರ್ಶಿಸಿ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/1-year-since-griha-jyoti-yojana-was-launched-today-1-65-crore-families-exempted-from-electricity-bills/ https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/

Read More

ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾಗಿ ಇಂದಿಗೆ ಒಂದು ವರ್ಷಕ್ಕೆ ಕಾಲಿಟ್ಟಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯಾಧ್ಯಂತ 1.65 ಕೋಟಿ ಕುಟುಂಬಗಳು ವಿದ್ಯುತ್ ಬಿಲ್ ಹೊರೆಯಿಂದ ಮುಕ್ತಿಯಾಗಿದ್ದಾವೆ. ರಾಜ್ಯ ಸರ್ಕಾರದಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಜ್ಯೋತಿʼಯು ವರ್ಷ ಪೂರೈಸಿದೆ ಅಂತ ಹೇಳಿದೆ. ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಈ ಯೋಜನೆಯು ಬಡವರ ಮನೆಗೆ ನೆಮ್ಮದಿಯ ಬೆಳಕಾಗಿದೆ. 1.65 ಕೋಟಿ ಕುಟುಂಬಗಳು ವಿದ್ಯುತ್‌ ಬಿಲ್‌ ಹೊರೆಯಿಂದ ಮುಕ್ತರಾಗಿದ್ದಾರೆ ಅಂತ ತಿಳಿಸಿದೆ. https://twitter.com/KarnatakaVarthe/status/1820458034281267449 https://kannadanewsnow.com/kannada/69-acres-of-forest-encroachments-cleared-in-western-ghats-following-ministers-order/ https://kannadanewsnow.com/kannada/7-locations-identified-for-construction-of-second-airport-in-bengaluru-dk-shivakumar/

Read More