Author: kannadanewsnow09

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535) ಮತ್ತು ಅಕ್ಟೋಬರ್ 3…

Read More

ಚನ್ನಪಟ್ಟಣ : 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ ಅಭಿವೃದ್ಧಿಯ ಅಭಿಯಾನ ಪ್ರಾರಂಭ ಮಾಡಿದರು. ನಂತರ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ರಹೀಮ್ ಖಾನ್ ಅವರೊಡಗೂಡಿ ಹಜರತ್ ಸೈಯದ್ ಮೊಹಮ್ಮದ್ ಆಖೀಲ್ ಶಾ ಖಾದ್ರಿ ಅಲ್- ಬಾಗ್ದಾದಿ ದರ್ಗಾಕ್ಕೆ ಭೇಟಿ ನೀಡಿ ಚಾದರ ಹೊದಿಸಿ ಪ್ರಾರ್ಥನೆ ಮಾಡಿದರು. ಜನ ಪ್ರತಿನಿಧಿಯೇ ಇಲ್ಲದೇ ಅನಾಥವಾಗಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಭಗೀರಥನಂತೆ ಬಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು. ಅಭಿವೃದ್ಧಿಯನ್ನೇ ಕಾಣದ ಕ್ಷೇತ್ರದಲ್ಲಿ ಸಂಚಾರ ಮಾಡಿ “ಮನೆಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆ ತಂಡದ ಮೂಲಕ ತನಿಖೆಗೆ ವಹಿಸಿ ಆದೇಶಿಸಿದೆ. ಈ ಸಂಬಂಧ ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದೂರುದಾರರು ತಮಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ ಹಾಗೂ ಲಂಚಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಶ್ರೀ ಮುನಿರತ್ನ, ಶಾಸಕರು, ಹಾಗೂ ಇತರರ ವಿರುದ್ಧ ಬೆಂಗಳೂರು ನಗರ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 121/2024, ಕಲಂ 506, 504, 385, 420, 323 ರೆ/ವಿ 34 ಐಪಿಸಿ ಹಾಗೂ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 122/2024, ಕಲಂ 153(ಎ)(1)(ಎ)(ಬಿ), 509, 504, 153 ಐಪಿಸಿ ಹಾಗೂ ಕಲಂ 3(1)(ಆರ್)(ಎಸ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ರಡಿ ದಿನಾಂಕ:13.09.2024 ರಂದು ಪ್ರಕರಣಗಳು ದಾಖಲಾಗಿರುತ್ತದೆ ಎಂದಿದೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಶ್ರೀ ಮುನಿರತ್ನ, ಶಾಸಕರು, ಹಾಗೂ ಇತರರ…

Read More

ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಮೆಸ್ಕಾಂನಿಂದ ( MESCOM ) ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆ.24ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಪವರ್ ಕಟ್ ಆಗಲಿದೆ. ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು ಕರೆಂಟ್ ಇರೋದಿಲ್ಲ. ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ…

Read More

ರಾಮನಗರ: “ಕುಮಾರಣ್ಣನ ಆಡಳಿತ ಸ್ವಂತಕ್ಕೆ, ನನ್ನ ಆಡಳಿತ ತಾಲ್ಲೂಕು ಹಾಗೂ ಜನರಿಗಾಗಿ. ನನ್ನ ಆಡಳಿತವೇ ಬೇರೆ, ಕುಮಾರಣ್ಣನ ಆಡಳಿತವೇ ಬೇರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದ ಆದಿಲ್ ಷಾ (ಟಿಪ್ಪು) ಮೈದಾನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; “ಕಳೆದ ಮೂರು ತಿಂಗಳಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲಿ ₹500 ಕೋಟಿ ಮೊತ್ತದ ಯೋಜನೆಗಳ ಗುದ್ದಲಿ ಪೂಜೆ ಮಾಡಲಾಗಿದೆ. ಈ ತಾಲ್ಲೂಕಿನಲ್ಲಿ ಆಗುತ್ತಿರುವ ಬದಲಾವಣೆಯನ್ನು ನೀವು ಕಿವಿಯಲ್ಲಿ ಕೇಳುವುದು ಮಾತ್ರವಲ್ಲ, ಕಣ್ಣಾರೆ ನೋಡುತ್ತಿದ್ದೀರಿ. ಕಳೆದ ಮೂರು ತಿಂಗಳಲ್ಲಿ ಸಚಿವರು, ಅಧಿಕಾರಿಗಳು ನಿಮ್ಮ ಬಳಿ ಬಂದು ನಿಮಗೆ ಏನು ಬೇಕು ಎಂದು ಕೇಳುತ್ತಿದ್ದಾರೆ. ಹಳೆ ಶಾಸಕರು ನಿಮ್ಮನ್ನು ಬಿಟ್ಟು ಹೋಗಿದ್ದಾರೆ. ಅವರಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ. ನನ್ನ ಮತ್ತು ಚನ್ನಪಟ್ಟಣ ನಡುವಣ ಸಂಬಂಧ ಭಕ್ತ ಹಾಗೂ ಭಗವಂತ ನಡುವಿನ ಸಂಬಂಧ. ಈ ಭಾಗದವರು…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆ.23ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಸ್ಕಾಂ(BESCOM), ದಿನಾಂಕ 23.09.2024 (ಸೋಮವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 04:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗುವುದಾಗಿ ತಿಳಿಸಿದೆ. ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್…

Read More

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿ ದೆಹಲಿಯ ಶ್ರದ್ಧಾ ವಾಕರ್ ಕೊಲೆ ಮಾದರಿಯಲ್ಲೇ 26 ವರ್ಷದ ಮಹಿಳೆಯನ್ನು ಕೊಲೆ ಮಾಡಿ, ದೇಹವನ್ನು 30 ಪೀಸ್ ಪೀಸ್ ಮಾಡಿ ಪ್ರಿಡ್ಜ್ ನಲ್ಲಿ ಇಟ್ಟಿರುವಂತ ಬರ್ಬರ ಕೊಲೆ ಪ್ರಕರಣ ನಡೆದಿದೆ. ಬೆಂಗಳೂರಿನ ವೈಯಾಲಿಕಾವಲ್ ನಲ್ಲಿರುವಂತ ಪೈಪ್ ಲೈನ್ ರಸ್ತೆಯ ವೀರಣ್ಣ ಭವನದ ಬಳಿಯಲ್ಲಿದ್ದಂತ ಮನೆಯೊಂದರಲ್ಲಿ ಗಂಡನಿಂದ ದೂರವಾಗಿ ಒಬ್ಬಳೇ ವಾಸವಾಗಿದ್ದಂತ 26 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಮೊದಲು ನೆಲಮಂಗಲದಲ್ಲಿ ವಾಸವಾಗಿದ್ದಂತ 26 ವರ್ಷದ ಮಹಿಳೆ ಮಹಾಲಕ್ಷ್ಮಿ ವೈಯಾಲಿಕಾವಲ್ ನಲ್ಲಿನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನದ ಬಳಿಯಲ್ಲಿನ ನಿವಾಸದಲ್ಲಿ ಪತಿಯಿಂದ ದೂರವಾಗಿ ಒಬ್ಬಳೇ 6 ರಿಂದ 7 ತಿಂಗಳಿಂದ ವಾಸವಾಗಿದ್ದಳು. ಮಲ್ಲೇಶ್ವರಂನ ಮಂತ್ರಿ ಮಾಲ್ ನಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದಾಗಿ ತಿಳಿದು ಬಂದಿದೆ. ಕಳೆದ ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿರುವಂತ ಹಂತಕರು, ಪ್ರಿಡ್ಜ್ ನಲ್ಲಿ ಆಕೆಯ ಮೃತ ದೇಹವನ್ನು 30 ಪೀಸ್ ಪೀಸ್ ಮಾಡಿ ತುಂಬಿಟ್ಟು…

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಎಎಪಿ ನಾಯಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪದಗ್ರಹಣ ಮಾಡಿದ್ದಾರೆ. ದೆಹಲಿಯ ರಾಜಭವನ ಕಚೇರಿಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಿದರು. https://twitter.com/ANI/status/1837448438306558271 ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಂಜೆ 4.30ಕ್ಕೆ ರಾಜ್ ನಿವಾಸದಲ್ಲಿ ಅತಿಶಿ ಮತ್ತು ಅವರ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಿದರು. ಸಿಸೋಡಿಯಾ ಮತ್ತು ಕೇಜ್ರಿವಾಲ್ (ಹಿಂದೂಸ್ತಾನ್ ಟೈಮ್ಸ್) ಬಂಧನದ ಸಮಯದಲ್ಲಿ ಅತಿಶಿ ದೆಹಲಿ ಸರ್ಕಾರದ ಮುಖವಾಗಿ ಹೊರಹೊಮ್ಮಿದ್ದಾರೆ. https://twitter.com/ANI/status/1837448448821678183 ದೆಹಲಿ ಮುಖ್ಯ ಕಾರ್ಯದರ್ಶಿ ಧರ್ಮೇಂದ್ರ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ ನಿವಾಸದಲ್ಲಿ ಸ್ವಾಗತಿಸಿದರು. ಹಾಲಿ ಸಚಿವರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದು, ದಲಿತ ಶಾಸಕ ಮುಖೇಶ್ ಅಹ್ಲಾವತ್ ಸಂಪುಟದಲ್ಲಿ ಹೊಸ ಮುಖವಾಗಲಿದ್ದಾರೆ. ಇನ್ನೂ…

Read More